Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಬ್ಬಾಲೆಯಲ್ಲಿ‌ ‘ಕರ್ನಾಟಕ ಸುವರ್ಣ ಸಂಭ್ರಮ’ ಆಚರಣೆಗೆ ಕ.ಸಾ.ಪ ನಿರ್ಧಾರ  : ಗ್ರಾಮಸ್ಥರ ಸಹಭಾಗಿತ್ವದಲ್ಲಿ ಅರ್ಥಪೂರ್ಣ ಆಚರಣೆಗೆ ಟಿ.ಪಿ.ರಮೇಶ್ ಮನವಿ*
ಇತ್ತೀಚಿನ ಸುದ್ದಿಗಳು

*ಹೆಬ್ಬಾಲೆಯಲ್ಲಿ‌ ‘ಕರ್ನಾಟಕ ಸುವರ್ಣ ಸಂಭ್ರಮ’ ಆಚರಣೆಗೆ ಕ.ಸಾ.ಪ ನಿರ್ಧಾರ  : ಗ್ರಾಮಸ್ಥರ ಸಹಭಾಗಿತ್ವದಲ್ಲಿ ಅರ್ಥಪೂರ್ಣ ಆಚರಣೆಗೆ ಟಿ.ಪಿ.ರಮೇಶ್ ಮನವಿ*

ಅಕ್ಟೋಬರ್ 21, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಕುಶಾಲನಗರ, ಅ.21 : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ “ಕರ್ನಾಟಕ ಸುವರ್ಣ ಸಂಭ್ರಮ : 50, “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆದ ಜಿಲ್ಲಾ ಕ.ಸಾ.ಪ. ಸಲಹೆಗಾರ ಟಿ.ಪಿ.ರಮೇಶ್  ಹೇಳಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು( ಕ.ಸಾ.ಪ.) ಹಾಗೂ ಕುಶಾಲನಗರ ತಾಲ್ಲೂಕು ಕ.ಸಾ.ಪ. ವತಿಯಿಂದ ಕ.ಸಾ.ಪ.ಹೆಬ್ಬಾಲೆ ಘಟಕದ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಉತ್ತರ ಕೊಡಗಿನ ಗಡಿಭಾಗದ ಹೆಬ್ಬಾಲೆ ಗ್ರಾಮದಲ್ಲಿ ನವೆಂಬರ್ : 2023 ರಲ್ಲಿ ನಡೆಸಲುದ್ದೇಶಿಸಿರುವ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಸಂಘಟನೆ ಕುರಿತು ಹೆಬ್ಬಾಲೆ ಪ್ರೌಢಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಆಚರಣೆ ಕುರಿತು ರೂಪುರೇಷೆ ಕುರಿತು ಮಾಹಿತಿ ನೀಡಿದರು.

ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಜನಜನಿತವಾಗಿದ್ದು, ಆಧುನಿಕತೆಯ ಪರಾಕಾಷ್ಠೆಯಿಂದ ಸೊರಗುತ್ತಿರುವ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವ ಮೂಲಕ ಅವುಗಳನ್ನು ಪುನರುತ್ಥಾನಗೊಳಿಸುವ ದಿಸೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಯನ್ನು ಈ ಬಾರಿಯ ನವೆಂಬರ್ 1 ರಿಂದ ಮುಂದಿನ ವರ್ಷದ ನವೆಂಬರ್ 1 ರವರೆಗೆ ಇಡೀ ವರ್ಷ ಈ ಸಂಭ್ರಮವನ್ನು ಕರ್ನಾಟಕ ಸಂಭ್ರಮ-50 ಅನ್ನೋ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಲಾಗಿದೆ.

ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಸರ್ಕಾರದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತು ಕೂಡ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹೆಬ್ಬಾಲೆ ಗ್ರಾಮ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ರಮೇಶ್ ಹೇಳಿದರು.

ಈ ಸುವರ್ಣ ಸಂಭ್ರಮದ ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಸ್ವಾಗತ ಸಮಿತಿ ಸೇರಿದಂತೆ ವಿವಿಧ ಉಪ ಸಮಿತಿಗಳನ್ನು ರಚಿಸಿ ಸ್ಥಳೀಯರಿಗೆ ಜವಾಬ್ದಾರಿ ಹಂಚಿಕೆ ಜೊತೆಗೆ ಕಾರ್ಯಕ್ರಮದ ರೂಪುರೇಷೆಗಳನ್ನು ತಯಾರಿಸಬೇಕು. ಸಾಂಸ್ಕೃತಿಕ ಮೆರವಣಿಗೆ, ಸ್ಥಳೀಯ ಸಾಂಸ್ಕೃತಿಕ ವೈಭವ, ಜನಪದ ಕ್ರೀಡೆಗಳು, ಜನಪದ ವಸ್ತು ಪ್ರದರ್ಶನ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಈ ಕಾರ್ಯಕ್ರಮದ ನೈಜ ಸಂಭ್ರಮ ಹೆಚ್ಚಿಸಲು ಸಾರ್ವಜನಿಕರು, ಯುವಕರು, ಮಹಿಳೆಯರು, ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಳ್ಳುವಂತೆ ಅಗತ್ಯದ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಸಲಹೆ ನೀಡಿದರು.

ಹೆಬ್ಬಾಲೆ ಗ್ರಾಮದಲ್ಲಿ ನವೆಂಬರ್ ತಿಂಗಳಿನಲ್ಲಿ ಹೆಬ್ಬಾಲೆ ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರ ಸಹಕಾರದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಗೆ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಸುವರ್ಣ ಸಂಭ್ರಮ ಆಚರಣೆಗೆ ಹೆಬ್ಬಾಲೆ ಮತ್ತು ಸುತ್ತಮುತ್ತಲಿನ ತೊರೆನೂರು, ಶಿರಂಗಾಲ, ಮಣಜೂರು, ಕಣಿವೆ, ಅಳುವಾರ, ಹಳೇಗೋಟೆ, ಸಿದ್ಧಲಿಂಗಪುರ ಗ್ರಾಮಗಳ ಗ್ರಾಮಸ್ಥರನ್ನು ಒಟ್ಟುಗೂಡಿಸಿ ಕನ್ನಡ ಹಬ್ಬವನ್ನು ಆಚರಿಸಲು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಗ್ರಾ.ಪಂ  ಅಧ್ಯಕ್ಷೆ ಎಚ್.ಪಿ. ಅರುಣಕುಮಾರಿ ಮಾತನಾಡಿ, ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಗೆ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ನಾಡು- ನುಡಿ, ಕಲೆ ಹಾಗೂ ಜನಪದ ಸಂಸ್ಕೃತಿ ಬೆಳವಣಿಗೆಗೆ ಎಲ್ಲರೂ ಜತೆಗೂಡಿ ಗ್ರಾಮೀಣ ಜನಪದ ಸೊಗಡನ್ನು ಪ್ರತಿಬಿಂಬಿಸೋಣ ಎಂದರು.

ಕಸಾಪ ಹೆಬ್ಬಾಲೆ ಘಟಕದ ಅಧ್ಯಕ್ಷ ಮಣಜೂರು ಮೂರ್ತಿ, ಹೆಬ್ಬಾಲೆ ಸುತ್ತಮುತ್ತಲಿನ ಎಲ್ಲಾ ಜನತೆ ಸೇರಿ ಸುವರ್ಣ ಸಂಭ್ರಮ ಉತ್ಸವವನ್ನು ಯಶಸ್ವಿಗೊಳಿಸೋಣ ಎಂದರು.

ಹೆಬ್ಬಾಲೆ ಪ್ರೌಢಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಲ್.ರಮೇಶ್ ಮಾತನಾಡಿ, ಇಂತಹ ಕನ್ನಡಪರ ಚಟುವಟಿಕೆಗಳಿಗೆ ಎಲ್ಲರೂ ಸೇರಿ ಸಹಕಾರ ನೀಡುವುದಾಗಿ ತಿಳಿಸಿದರು.

ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಎನ್.ವೆಂಕಟನಾಯಕ್,  ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಸುವರ್ಣ ಸಂಭ್ರಮ: 50 ವನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಅಭಿಪ್ರಾಯ ತಿಳಿಸಿದರು.

ನಿವೃತ್ತ ಪ್ರಾಂಶುಪಾಲ ಎಚ್.ಬಿ.ಲಿಂಗಮೂರ್ತಿ, ಉದ್ಯಮಿ ಎಚ್.ಕೆ.ನಟೇಶ್ ಗೌಡ ಸುವರ್ಣ ಸಂಭ್ರಮ ಆಚರಣೆ ಕುರಿತು ಸಲಹೆ ನೀಡಿದರು.

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ನಾಗೇಂದ್ರ, ಕ.ಸಾ.ಪ.ತಾಲ್ಲೂಕು ಸಮಿತಿಯ ಗೌರವ ಕಾರ್ಯದರ್ಶಿ ಟಿ.ವಿ.ಶೈಲಾ, ಗೌರವ ಕೋಶಾಧಿಕಾರಿ ಕೆ.ವಿ.ಉಮೇಶ್, ಕ.ಸಾ.ಪ.ಸಮಿತಿ ಸದಸ್ಯರಾದ ಎಂ.ಎನ್.ಕಾಳಪ್ಪ,ಬಿ.ಬಿ.ಸಾವಿತ್ರಿ,  ಟಿ.ಬಿ.ಮಂಜುನಾಥ್, ಬಿ.ಬಿ.ಹೇಮಲತಾ, ಸೋಮಶೇಖರ್, ಎಚ್.ಬಿ.ದಿನೇಶಚಾರಿ,  ಕವಿತ ಪುಟ್ಟೇಗೌಡ, ಕೂಡಿಗೆ ಶ್ರೀನಿವಾಸ್, ತೊರೆನೂರು ಗ್ರಾಮದ ಟಿ.ಡಿ.ಸೋಮಣ್ಣ, ಟಿ.ಡಿ.ನರೇಂದ್ರ, ಟಿ.ಎಸ್.ಚಂದ್ರಶೇಖರ್, ಗ್ರಾಮ ಪಂಚಾಯತಿ ಪಿಡಿಓ ಬಿ. ಡಿ. ವೀಣಾ, ಶಿರಂಗಾಲದ ಎಸ್.ಎಸ್.ಚಂದ್ರಶೇಖರ್, ಎಸ್.ವಿ.ಧನೇಂದ್ರಕುಮಾರ್ ಇತರರು ಇದ್ದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಹಿಮಘನ ಪ್ರತಿಭಾ ಸಂಭ್ರಮ : ನ.5 ರಂದು ವಿವಿಧ ಸಾಂಸ್ಕೃತಿಕ ಸ್ಪರ್ಧೆ*
Next Article *ಹುತಾತ್ಮ ಪೊಲೀಸರ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.