Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀಕೋದಂಡರಾಮ ಪ್ರಥಮ, ಕೋಟೆ ಗಣಪತಿ, ಕೋಟೆ ಮಾರಿಯಮ್ಮ ದ್ವಿತೀಯ, ಕರವಲೆ ಭಗವತಿ ತೃತೀಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀಕೋದಂಡರಾಮ ಪ್ರಥಮ, ಕೋಟೆ ಗಣಪತಿ, ಕೋಟೆ ಮಾರಿಯಮ್ಮ ದ್ವಿತೀಯ, ಕರವಲೆ ಭಗವತಿ ತೃತೀಯ*

ಅಕ್ಟೋಬರ್ 25, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.25 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಹತ್ತು ದಿನಗಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಕರ್ಷಕ ದಶಮಂಟಪಗಳ ಶೋಭಾಯಾತ್ರೆಯೊಂದಿಗೆ ವರ್ಣರಂಜಿತ ತೆರೆ ಬಿದ್ದಿದೆ.
ಈ ಬಾರಿ ದಶಮಂಟಪಗಳಲ್ಲಿ “ಮಣಿಕಂಠನಿಂದ ಮಹಿಷಿಯ ಶಾಪ ವಿಮೋಚನೆ” ಕಥಾ ಸಾರಾಂಶ ಹೊಂದಿದ್ದ ಶ್ರೀಕೋದಂಡ ರಾಮ ದೇವಾಲಯದ ಮಂಟಪ ಪ್ರಥಮ ಬಹುಮಾನ ಗಳಿಸಿತು.
49ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡ ಈ ದೇವಾಯದ ಮಂಟಪದ ಅಧ್ಯಕ್ಷರಾಗಿ ಗೋಪಿನಾಥ್ ಕಾರ್ಯನಿರ್ವಹಿಸಿದರು. ಸುಮಾರು ರೂ.20 ಲಕ್ಷ ರೂ.ವೆಚ್ಚದ ಮಂಟಪ 25 ಕಲಾಕೃತಿಗಳನ್ನು ಹೊಂದಿತ್ತು.
“ಮಹಾಗಣಪತಿಯಿಂದ ಶತಮಾಹಿಷೆಯ ಸಂಹಾರ” ಕಥಾ ಸಾರಾಂಶವನ್ನು ಹೊಂದಿ 47ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡ ಶ್ರೀಕೋಟೆ ಮಹಾಗಣಪತಿ ದೇವಾಲಯದ ಮಂಟಪ ಹಾಗೂ 48ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡು “ಕೃತಿಬಾಸ ರಾಮಾಯಣದಿಂದ ಆಯ್ದ ಪಂಚಮುಖಿ ಆಂಜನೇಯನಿಂದ ಅಹಿರಾವಣ- ಮಹಿರಾವಣ ವಧೆ” ಕಥಾ ಸಾರಾಂಶವನ್ನು ಪ್ರದರ್ಶಿಸಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ದ್ವಿತೀಯ ಬಹುಮಾನವನ್ನು ಹಂಚಿಕೊಂಡವು.
ಶ್ರೀಕೋಟೆ ಮಹಾಗಣಪತಿ ಮಂಟಪಕ್ಕಾಗಿ ಸುಮಾರು ರೂ.31.5 ಲಕ್ಷ ವೆಚ್ಚ ಮಾಡಲಾಗಿದ್ದು, 30 ಕಲಾಕೃತಿಗಳಿದ್ದವು.. ಅಧ್ಯಕ್ಷರಾಗಿ ಹೆಚ್.ಪಿ.ಲೋಕೇಶ್ ಕಾರ್ಯನಿರ್ವಹಿಸಿದರು.
ಶ್ರೀಕೋಟೆ ಮಾರಿಯಮ್ಮ ದೇವಾಲಯ ಮಂಟಪದ ಅಧ್ಯಕ್ಷರುಗಳಾಗಿ ಪ್ರಭು ರೈ ಹಾಗೂ ರಾಜಾ ಸುಬ್ಬಯ್ಯ ಕಾರ್ಯನಿರ್ವಹಿಸಿದರು. ಸುಮಾರು 25 ಲಕ್ಷ ರೂ.ಗಳಲ್ಲಿ ನಿರ್ಮಾಣಗೊಂಡ ಮಂಟಪದಲ್ಲಿ 17 ಕಲಾಕೃತಿಗಳಿದ್ದವು.
28ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡು ಉಗ್ರನರಸಿಂಹನಿಂದ ಹಿರಣ್ಯಕಶ್ಯಪು ಸಂಹಾರ ಕಥಾ ಸಾರಾಂಶವನ್ನು ಪ್ರದರ್ಶಿಸಿದ ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯದ ಮಂಟಪ ತೃತೀಯ ಬಹುಮಾನ ಗಳಿಸಿತು. ಪಿ.ಜಿ. ಗಜೇಂದ್ರ (ಕುಶ) ಅವರ ಅಧ್ಯಕ್ಷತೆಯಲ್ಲಿ ನಿರ್ಮಿಸಲಾದ ಮಂಟಪಕ್ಕೆ ಸುಮಾರು 22 ಲಕ್ಷ ರೂ. ಖರ್ಚು ಮಾಡಲಾಗಿದ್ದು, 22 ಕಲಾಕೃತಿಗಳಿದ್ದವು.
ಉಳಿದ ಮಂಟಪಗಳು ಕೂಡ ಬಹುಮಾನಕ್ಕಾಗಿ ತೀವ್ರ ಪೈಪೋಟಿ ನೀಡಿ ಸಾವಿರಾರು ಜನರ ಮನಗೆದ್ದವು.
ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದಲ್ಲಿ ದಶಮಂಟಪಗಳ ಸಾರಥಿ ಎಂದೇ ಖ್ಯಾತಿ ಪಡೆದಿರುವ 150 ವರ್ಷಗಳ ಇತಿಹಾಸ ಹೊಂದಿರುವ ಪೇಟೆ ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿ ಮಂಟಪದಲ್ಲಿ ವೈಕುಂಠ ದರ್ಶನ ಕಥಾ ಸಾರಾಂಶವನ್ನು ಪ್ರದರ್ಶಿಸಿತು.
ನಗರದ ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ 105ನೇ ವರ್ಷದ ದಸರಾ ಉತ್ಸವದಲ್ಲಿ ವಿಷ್ಣುವಿನಿಂದ ಮಧು ಖೈಟಭರ ಸಂಹಾರ ಕಥಾ ಸಾರಾಂಶವನ್ನು ಪ್ರದರ್ಶಿಸಿ ಗಮನ ಸೆಳೆಯಿತು.
ಶ್ರೀ ಚೌಡೇಶ್ವರಿ ದೇವಾಲಯ ದಸರಾ ಮಂಟಪ ಸಮಿತಿ 61ನೇ ವರ್ಷದ ದಸರಾ ಉತ್ಸವದಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಕಥಾ ಸಾರಾಂಶವನ್ನು ಪ್ರದರ್ಶಿಸಿತು.
ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀಕಂಚಿಕಾಮಾಕ್ಷಿ ಮುತ್ತು ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ 60ನೇ ವರ್ಷದ ಉತ್ಸವದಲ್ಲಿ ಶಿವನಿಂದ ತ್ರಿಪುರಾಸುರರ ವಧೆ ಕಥಾ ಸಾರಾಂಶವನ್ನು ಪ್ರಸ್ತುತ ಪಡಿಸಿತು.
ನಾಲ್ಕು ಶಕ್ತಿ ದೇವತೆಗಳ ಹಿರಿಯ ಅಕ್ಕಳೆಂದೆ ಖ್ಯಾತಿ ಪಡೆದಿರುವ ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯ ದಸರಾ ಮಂಟಪ ಶ್ರೀ ದುರ್ಗಾ ಸಪ್ತಶತಿ ಪುರಾಣದಿಂದ ಅಧ್ಯಾಯ 6 ರಿಂದ 10ರವರೆಗಿನ ಕದಂಬ ಕೌಶಿಕೆ ಕಥಾ ಸಾರಾಂಶವನ್ನು ಪ್ರದರ್ಶಿಸಿತು.
ಶಕ್ತಿ ದೇವತೆಗಳಲ್ಲೊಂದಾದ ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಿಯಮ್ಮ ದೇವಾಲಯವರಾ ಮಂಟಪ ಸಮಿತಿ 93ನೇ ದಸರಾ ಉತ್ಸವದಲ್ಲಿ ಪರಶಿವನಿಂದ ಜಲಂಧರ ಸಂಹಾರ ಕಥಾ ಸಾರಾಂಶವನ್ನು ಪ್ರದರ್ಶಿಸಿ ಜನಮೆಚ್ಚುಗೆಗೆ ಪಾತ್ರವಾಯಿತು.
ಬಹುಮಾನ ವಿಜೇತ ಸಮಿತಿಗಳ ಪ್ರಮುಖರು ಗಣ್ಯರಿಂದ ಬಹುಮಾನ ಪಡೆದು ವಿಜೃಂಭಿಸಿದರು.
::: ಕರಗೋತ್ಸವಕ್ಕೆ ತೆರೆ :::
ಮಡಿಕೇರಿ ದಸರಾ ಜನೋತ್ಸವದಲ್ಲಿ ಪ್ರಮುಖ ಧಾರ್ಮಿಕ ಪಾತ್ರ ವಹಿಸುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವಕ್ಕೆ ಶ್ರದ್ಧಾಭಕ್ತಿಯ ತೆರೆ ಬಿತ್ತು. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ ಶ್ರೀಕೋಟೆ ಮಾರಿಯಮ್ಮ ಕರಗಗಳು ದಶಮಂಟಪಗಳಿಗೆ ಪೂಜೆ ಸಲ್ಲಿಸಿ ಮತ್ತು ಪೂಜೆ ಪಡೆದು ಬನ್ನಿ ಮಂಟಪಕ್ಕೆ ತೆರಳಿ ಬನ್ನಿ ಕಡಿಯುವ ಮೂಲಕ ಕರಗೋತ್ಸವವನ್ನು ಸಂಪನ್ನಗೊಳಿಸಿದವು.
::: ಕಿಕ್ಕಿರಿದ ಜನಸಂದಣಿ :::
ಪ್ರತಿವರ್ಷದಂತೆ ಈ ಬಾರಿ ಕೂಡ ವರ್ಣರಂಜಿತ ಮಡಿಕೇರಿ ದಸರಾ ಜನೋತ್ಸವಕ್ಕೆ ಜಿಲ್ಲೆ ಹಾಗೂ ಹೊರ ಜಿಲ್ಲೆಯ ಸಾವಿರಾರು ಜನರು ಸಾಕ್ಷಿಯಾದರು. ಕೆಲವು ಭಾಗಗಳಲ್ಲಿ ನೂಕುನುಗ್ಗಲು ಉಂಟಾಗಿ ಪೊಲೀಸರು ಮಧ್ಯ ಪ್ರವೇಶ ಮಾಡುವ ಅನಿವಾರ್ಯತೆಯೂ ಎದುರಾಯಿತು.
::: ಮಿತಿ ಮೀರದ ಡಿಜೆ ಅಬ್ಬರ :::
ಆಕರ್ಷಕ ದಸರಾ ಮಂಟಪಗಳಲ್ಲಿ ಬೃಹತ್ ಡಿಜೆ ವ್ಯವಸ್ಥೆಗಳನ್ನು ಅಳವಡಿಸಲಾಗಿತ್ತಾದರೂ ಅಬ್ಬರ ಮಿತಿ ಮೀರಲಿಲ್ಲ. ಇದು ಯುವ ಸಮೂಹಕ್ಕೆ ಕೊಂಚ ನಿರಾಶೆಯನ್ನು ಉಂಟು ಮಾಡಿತ್ತಲ್ಲದೆ, ಕಥಾ ಸಾರಾಂಶ ಪ್ರಸ್ತುತ ಪಡಿಸುವ ಸಂದರ್ಭ ನೆರೆದಿದ್ದ ಸಾವಿರಾರು ಜನರಿಗೆ ಪರಿಣಾಮಕಾರಿಯಾಗಿ ಧ್ವನಿ ತಲುಪಲಿಲ್ಲ. ಸಾಮಾಜಿಕ ಕಾರ್ಯಕರ್ತ ಹಾಗೂ ಹೈಕೋರ್ಟ್ ವಕೀಲ ಅಮೃತೇಶ್ ಅವರು ಅಬ್ಬರದ ಡಿಜೆ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದ ಕಾರಣದಿಂದ ನಿಯಮ ಉಲ್ಲಂಘಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆಯನ್ನು ದಶಮಂಟಪಗಳಿಗೆ ನೀಡಿತ್ತು.
::: ಗಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ :::
ವಿಜಯದಶಮಿಯ ದಿನವಾದ ಮಂಗಳವಾರ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆದ ವೈವಿಧ್ಯಮಯ ಕಾರ್ಯಕ್ರಮಗಳು ಸಾವಿರಾರು ಪ್ರೇಕ್ಷರರನ್ನು ಹಿಡಿದಿಡುವಲ್ಲಿ ಯಶಸ್ವಿಯಾಯಿತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಮುದ್ರ ಸ್ಕೂಲ್ ಆಫ್ ಡಾನ್ಸ್ ತಂಡದಿಂದ ನೃತ್ಯ ವೈವಿಧ್ಯ, ಉಡುಪಿಯ ಭಾಗಘವಿ ಡಾನ್ಸ್ ಟೀಮ್ ನಿಂದ ಗ್ರಾವಿಟಿ ಡಾನ್ಸ್, ಚಕ್ಕೇರ ಪಂಚಮ್ ತ್ಯಾಗರಾಜ್ ಮತ್ತು ತಂಡದಿಂದ ಗಾನಸುಧೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ಗಮನ ಸೆಳೆದವು.
ರಾಜ್ಯದ ಹೆಸರಾಂತ ಗಾಯಕ, ಗಾಯಕಿಯರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವೂ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಮಾ.7 : ವಿರಾಜಪೇಟೆ ಮೂಲದ ಪ್ರಸ್ತುತ ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನೆಲೆಸಿರುವ ಕೆ.ಎಲ್.ಸೂರಜ್ (29) ಅವರು…

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.