Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
  • *ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*
  • *ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಗೆ ಗೌರಮ್ಮ ದತ್ತಿನಿಧಿ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಗೆ ಗೌರಮ್ಮ ದತ್ತಿನಿಧಿ ಪ್ರಶಸ್ತಿ ಪ್ರದಾನ*

ಅಕ್ಟೋಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.27 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ 2022-23 ನೇ ಸಾಲಿನ 19 ನೇ ಗೌರಮ್ಮ ದತ್ತಿನಿಧಿ ಪ್ರಶಸ್ತಿಯನ್ನು ಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಮತ್ತು ಈರಮಂಡ ಹರಿಣ್ ವಿಜಯ್ ಅವರಿಗೆ ಗಣ್ಯರು ಪ್ರದಾನ ಮಾಡಿದರು. ಅಲ್ಲದೆ ಗೌರಮ್ಮ ದತ್ತಿನಿಧಿ ಕಥಾಸ್ಪರ್ಧೆ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕೊಡಗು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನಕಾವೇರಿ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ಮಾತನಾಡಿ ಕತೆಗಾರ್ತಿ ಕೊಡಗಿನ ಗೌರಮ್ಮ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ವರ್ಣಿಸಿದರು.
ಕೊಡಗಿನ ಗೌರಮ್ಮ ಸ್ವಾತಂತ್ರ್ಯ ಪೂರ್ವದಲ್ಲಿ ಸಣ್ಣ ಕತೆಗಳನ್ನು ಬರೆಯುವ ಮೂಲಕ ಮಹಿಳಾ ಸಬಲೀಕರಣ, ಸಮಾಜದಲ್ಲಿ ಸಮಾನತೆ ಹೀಗೆ ಹಲವು ವಿಚಾರಗಳ ಕುರಿತು ಕನ್ನಡ ಸಾಹಿತ್ಯದಲ್ಲಿ ಬೆಳಕು ಚೆಲ್ಲಿದ್ದಾರೆ ಎಂದು ಅವರು ನುಡಿದರು.
ಬದುಕಿದ 27 ವರ್ಷದಲ್ಲಿ ಸಾಮಾಜಿಕ ಕ್ರಾಂತಿಯನ್ನೇ ಉಂಟು ಮಾಡಿದ್ದರು. ಮಹಾತ್ಮ ಗಾಂಧೀಜಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಬಡ ವರ್ಗದವರು ಮುಖ್ಯವಾಹಿನಿಗೆ ಬರುವಂತಾಗಲು ತಮ್ಮಲ್ಲಿದ್ದ ಒಡವೆಗಳನ್ನು ಮಹಾತ್ಮ ಗಾಂಧೀಜಿಯವರಿಗೆ ನೀಡಿದ್ದರು ಎಂದು ಸ್ಮರಿಸಿದರು.
ಜೀವನದಲ್ಲಿ ಸರಳ ಸಜ್ಜನ ಬದುಕು ನಡೆಸಿದ್ದ ಗೌರಮ್ಮ ಅವರು ಸಂವೇದನಾಶೀಲ ಹಾಗೂ ಕ್ರೀಯಾಶೀಲ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜಮುಖಿ ಕಾರ್ಯಗಳಿಗಾಗಿ ಸದಾ ಮುಂಚೂಣಿಯಲ್ಲಿದ್ದರು ಎಂದು ಹೇಳಿದರು.
ಗೌರಮ್ಮನವರ ಸಣ್ಣ ಕತೆಗಳು ಪ್ರಸ್ತುತವಾಗಿದ್ದು ಸಮಾಜಮುಖಿಯಾಗಿ ಬೆಳಕು ಚೆಲ್ಲುತ್ತದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಉಪನ್ಯಾಸಕರು ವಿವರಿಸಿದರು.
ವೈಚಾರಿಕ, ವೈಜ್ಞಾನಿಕತೆ, ಜೀವನ ಮೌಲ್ಯವನ್ನು ಗೌರಮ್ಮನವರ ಸಾಹಿತ್ಯದಲ್ಲಿ ಕಾಣಬಹುದಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಗೌರಮ್ಮನವರ ಕೊಡುಗೆ ಅಪಾರ ಎಂದು ವಿವರಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಗೌರಮ್ಮ ದತ್ತಿನಿಧಿ ಪ್ರಶಸ್ತಿಯಿಂದ ಕೊಡಗು ಜಿಲ್ಲೆಯಲ್ಲಿ ಹಲವು ಮಹಿಳಾ ಬರಹಗಾರರನ್ನು ಗುರುತಿಸುವಂತಾಗಿದೆ ಎಂದು ಹೇಳಿದರು.

ಸಾಹಿತ್ಯ ಲೋಕದಲ್ಲಿ ಗೌರಮ್ಮ ದತ್ತಿನಿಧಿ ಪ್ರಶಸ್ತಿ ರಾಜ್ಯ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಗೌರಮ್ಮ ಅವರು ಬರೆದಿರುವ 21 ಸಣ್ಣ ಕತೆಗಳು ಸಾರ್ವಕಾಲೀಕವಾಗಿವೆ. ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧೆಯಿಂದ ವಿದ್ಯಾರ್ಥಿಗಳಿಗೆ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗಿದೆ ಎಂದು ಟಿ.ಪಿ.ರಮೇಶ್ ನುಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ.ವೆಂಕಟೇಶ್ ಪ್ರಸನ್ನ ಮಾತನಾಡಿ, ಹೃದಯದ ಬದುಕನ್ನು ಹತ್ತಿರಕ್ಕೆ ಬೆಸೆಯುವುದು ಸಾಹಿತ್ಯವಾಗಿದೆ. ಜಾತಿ, ಧರ್ಮವನ್ನು ಮೀರುವಂತದ್ದು ಸಾಹಿತ್ಯ. ಬದುಕನ್ನು ಅರ್ಥೈಸಿಕೊಳ್ಳಲು ಸಾಹಿತ್ಯ ಸಹಕಾರಿ. ಗೌರಮ್ಮ ಅವರು ಮಹಿಳಾ ಕಥೆ ಗಾರ್ತಿಯಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದರು.
ಗೌರಮ್ಮ ದತ್ತಿನಿಧಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕಟ್ರತನ ಲಲಿತ ಅಯ್ಯಣ್ಣ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಕುಟುಂಬದವರ ಪ್ರೇರಣೆ ಹೆಚ್ಚಿನದ್ದಾಗಿದೆ ಎಂದರು.
ಈರಮಂಡ ಹರಿಣಿ ವಿಜಯ್, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಮುನೀರ್ ಅಹ್ಮಮದ್ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎ.ಸಂಪತ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್(ಮಡಿಕೇರಿ), ಎಸ್.ಡಿ.ವಿಜೇತ(ಸೋಮವಾರಪೇಟೆ), ಬೈತಡ್ಕ ಜಾನಕಿ ಬೆಳ್ಯಪ್ಪ, ಸ್ಮಿತಾ ಅಮೃತರಾಜ್, ಸಂಗೀತ ರವಿರಾಜ್, ಡಾ. ಕೋರನ ಸರಸ್ವತಿ, ಡಾ.ಕಾವೇರಿ ಪ್ರಕಾಶ್, ಸುನಿತಾ ಲೋಕೇಶ್, ಸಹನ ಕಾಂತಬೈಲು, ಕೆ.ಟಿ.ಬೇಬಿ ಮ್ಯಾಥ್ಯೂ, ನವೀನ್ ಅಂಬೆಕಲ್ಲು, ಕುಡೆಕಲ್ ಸಂತೋಷ್ ಇತರರು ಇದ್ದರು.
ರೇವತಿ ರಮೇಶ್ ಸ್ವಾಗತಿಸಿದರು, ಸಾಹಿತ್ಯ ಪರಿಷತ್ತಿನ ನಿರ್ದೇಶಕಿ ಕೆ.ಜಿ.ರಮ್ಯಾ, ಪ್ರೇಮ ರಾಘವಯ್ಯ ಅವರ ತಂಡದವರು ನಾಡಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಭಾಗಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ…

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026

*ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.