ವಿರಾಜಪೇಟೆ ನ.1 : ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತೀ ಮುಖ್ಯವಾಗಿದೆ ಎಂದು ವಿರಾಜಪೇಟೆ ಉಪ ಖಜಾನೆಯ ಪ್ರಥಮ ದರ್ಜೆ ಸಹಾಯಕ ಬಲರಾಮೇಗೌಡ ಅಭಿಪ್ರಾಯಪಟ್ಟರು.
ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಆಚರಿಸಲಾದ ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿರು.
ಭ್ರಷ್ಟಾಚಾರದ ನಿಯಂತ್ರಣ ದೇಶದ ಯುವ ಜನರ ಕೈಯಲಿದ್ದು ಅದನ್ನು ಬುಡ ಸಮೇತ ತೊಡೆದು ಹಾಕಬೇಕು. ಭ್ರಷ್ಟಾಚಾರದಿಂದ ಅಭಿವೃದ್ಧಿ ಕುಂಠಿತವಾಗಿ ಸಮಾಜದ ಸ್ವಾಸ್ತ್ಯ ಕೆಡುತ್ತಿದೆ ಎಂದರು. ಭ್ರಷ್ಟಾಚಾರವು ಪ್ರಜಾಪ್ರಭುತ್ವಕ್ಕೆ ಸವಾಲಾಗಿದ್ದು, ಅದನ್ನು ನಿಯಂತ್ರಿಸದಿದ್ದರೆ ಭವ್ಯ ರಾಷ್ಟ್ರದ ನಿರ್ಮಾಣ ಸಾಧ್ಯವಿಲ್ಲ. ಭ್ರಷ್ಟಾಚಾರದ ಸ್ವರೂಪ, ನಿಯಂತ್ರಣ ಕಾಯಿದೆಗಳನ್ನು ಉದಾಹರಣೆ ಸಮೇತ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಭ್ರಷ್ಟಾಚಾರ ಜಾಗೃತಿ ಸಪ್ತಾಹದ ಪ್ರಯುಕ್ತ ಈ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದು,್ದ ಭ್ರಷ್ಟಾಚಾರ ನಿವಾರಣೆಯಲ್ಲಿ ಯುವ ಜನರ ಪಾತ್ರ ಅಪಾರವಾಗಿದೆ. ರಾಷ್ಟ್ರಕ್ಕೆ ಹಾಗೂ ರಾಷ್ಟ್ರದ ವ್ಯವಸ್ಥೆಗೆ ಭ್ರಷ್ಟಾಚಾರ ಮಾರಕವಾಗಿದ್ದು, ಅದನ್ನು ನಿಯಂತ್ರಿಸದಿದ್ದರೆ ಆಡಳಿತ ಯಂತ್ರ ಕುಸಿಯುತ್ತದೆ ಎಂದರು.
ಸರ್ಕಾರವು ಭ್ರಷ್ಟಾಚಾರ ನಿಯಂತ್ರಣಕ್ಕೆ ಹಲವು ಕಾಯಿದೆಗಳನ್ನು ತಂದಿದ್ದು ಅದರ ಜಾಗೃತಿ ಮೂಡಿಸುವ ಪ್ರಯತ್ನ ಶಾಲಾ ಹಂತದಿಂದಲೇ ಆಗಬೇಕು ಎಂದರು.
ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಶಾಂತಿಭೂಷಣ್ ಪ್ರಾಸ್ತಾವಿಕ ನುಡಿಯೊಂದಿಗೆ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.
ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕಿ ಹೇಮ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಪನ್ಯಾಸಕರು, ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







