Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಎಲ್ಲಾ ಭಾಷೆಗಳನ್ನು ಗೌರವಯುತವಾಗಿ ಕಾಣಬೇಕು : ಡಾ. ಎನ್.ವಿ. ಕರುಣಾಕರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಎಲ್ಲಾ ಭಾಷೆಗಳನ್ನು ಗೌರವಯುತವಾಗಿ ಕಾಣಬೇಕು : ಡಾ. ಎನ್.ವಿ. ಕರುಣಾಕರ*

ನವೆಂಬರ್ 1, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.1 : ಎಲ್ಲಾ ಭಾಷೆಗಳನ್ನು ಗೌರವಯುತವಾಗಿ ಕಾಣುವ ಸ್ವೀಕೃತಿಯ ಮನೋಭಾವ ಪ್ರತಿಯೊಬ್ಬ ರೂಪಿಸಿಕೊಳ್ಳಬೇಕು. ಪ್ರಸ್ತುತ ಸಂದರ್ಭದಲ್ಲಿ ಪ್ರಾದೇಶಿಕ ಭಾಷೆಗೂ ಸಾಹಿತ್ಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಭಾಷಿಕ ಎಚ್ಚರವೊಂದು ಒಡಮೂಡಿದೆ. ಆದರೂ ಸಹ ನಮ್ಮ ನಡುವೆ ಪ್ರತ್ಯೇಕತ ಕೂಗು ಮೂಡುತ್ತಲೇ ಇದೆ. ನಾವು ಎಚ್ಚರಿಕೆಯಿಂದ ಭಾಷೆಯನ್ನು ಒಳಗೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಮಾತ್ರವಲ್ಲ ಮಕ್ಕಳು ಕನ್ನಡದ ಜೊತೆಯಲ್ಲಿ ತಮ್ಮ ಮಾತೃ ಭಾಷೆಯಲ್ಲಿ ಕಲಿಕೆಯನ್ನು ಮುಂದುವರೆಸುವ ಅಗತ್ಯವಿದೆ ಎಂದು ಕಾಲೇಜಿನ ಉಪನ್ಯಾಸಕ ಡಾ. ಎನ್.ವಿ. ಕರುಣಾಕರ
ಅಭಿಪ್ರಾಯಪಟ್ಟರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗ, ಎನ್ ಎಸ್ ಎಸ್, ಎನ್ ಸಿ.ಸಿ, ಇಸಿ/ಸಿಸಿ, ಕ್ರೀಡಾ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ “ಹೆಸರಾಯಿತು ಕರ್ನಾಟಕ-50 ರಾಜ್ಯೋತ್ಸವ ಸಂಭ್ರಮ” ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಸಂದರ್ಭದಲ್ಲಿ ಭ್ರಷ್ಟಾಚಾರ ಮುಕ್ತ ಕರ್ನಾಟಕ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪಠ್ಯ ಪುಸ್ತಕಗಳಲ್ಲಿ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ಕಲ್ಪಿಸಲಾಗಿತ್ತು. ಆ ಬಗೆಯಲ್ಲಿ ಕನ್ನಡ ತನ್ನ ಸಹೋದರ ಭಾಷೆಗಳನ್ನು ಒಳಗೊಳ್ಳುವ ಪ್ರಕ್ರಿಯೆಗೆ ನಿರಂತರ ಚಾಲನೆ ನೀಡಬೇಕು. ಆ ಮೂಲಕ ಕನ್ನಡದ ಜೊತೆಯಲ್ಲಿ ಪ್ರಾದೇಶಿಕ ಭಾಷೆಗಳನ್ನು ಉಳಿಸಿ ಬೆಳಸುವ ಕೆಲಸ ಆಗಬೇಕು ಎಂದು ಹೇಳಿದರು.

ರಾಮ, ಧರ್ಮರಾಯ, ಹರಿಶ್ಚಂದ್ರ ರಂತಹ ಪಾತ್ರಗಳನ್ನು ಸೃಷ್ಟಿ ಮಾಡುವ ಮೂಲಕ ಭ್ರಷ್ಟರಹಿತ ಸಮಾಜದ ಆದರ್ಶವಾದಿ ರೂಪಕವನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದೆ. ಒಳ್ಳೆದನ್ನು ಕೇಡಿನ ಜೊತೆಯಲ್ಲಿ ಮುಖಾಮುಖಿ ಮಾಡಿಕೊಳ್ಳುವ ಪ್ರಯತ್ನ ಇದಾಗಿದೆ. ಗಾಂಧಿ, ವಿನೋಬಾವೆಯಂತ ವ್ಯಕ್ತಿಗಳು ಭ್ರಷ್ಟಾಚಾರ ಮುಕ್ತ ಸಮಾಜದ ನಿರ್ಮಿತಿಗಾಗಿ ಚಳವಳಿಗಳನ್ನು ರೂಪಿಸಿದರು. ಸಂಸ್ಕಾರಕ್ಕೆ ಮೌಲ್ಯಗಳನ್ನು ಜೋಡಿಸುವ ಮೂಲಕ ನೈತಿಕ ಶಿಕ್ಷಣವನ್ನು ಒದಗಿಸುವುದರಿಂದ ಭ್ರಷ್ಟಾಚಾರವನ್ನು ತಗ್ಗಿಸಬಹುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಲೇಜಿನ ಪೋಷಕ ಶಿಕ್ಷಕ ಸಂಘದ ಅಧ್ಯಕ್ಷ ಕೆ.ಪಿ.ಮಾಥ್ಯೂ, ವಿದ್ಯಾರ್ಥಿಗಳು ಉತ್ತಮ ಆಲೋಚನೆಗಳನ್ನು ರೂಢಿಸಿಕೊಳ್ಳಬೇಕು. ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾಲೇಜಿನ ಐಕ್ಯುಎಸಿ ಸಂಯೋಜಕರಾದ ಡಾ. ರಾಜೇಂದ್ರ ಮಾತನಾಡಿ, ಕರ್ನಾಟ ವೈವಿಧ್ಯಮಯ ಭೂ ಪ್ರದೇಶ. ಇಲ್ಲಿ ಹಲವು ಸಂಸ್ಕೃತಿಗಳು ಸಹಜವಾಗಿ ಸೌಹಾರ್ದ ಪರಂಪರೆಯನ್ನು ಹುಟ್ಟುಹಾಕುವ ಪ್ರಯತ್ನ ಮಾಡಿದೆ. ಈ ಸೌಹಾರ್ದ ಪರಂಪರೆಗೆ ಕನ್ನಡ ಭಾಷೆಯೇ ಮೂಲಧಾತುವಾಗಿದೆ. ಕನ್ನಡ ಭಾಷೆಗೆ ಸೌಹಾರ್ದ ಜಾಯಮಾನವೊಂದು ಸಾಹಿತ್ಯ ಪರಂಪರೆಯಿಂದ ದತ್ತವಾಗಿದೆ. ಕನ್ನಡ ಕೇವಲ ಭಾಷೆ ಅಲ್ಲ ಅದೊಂದು ಜೀವನ ವಿಧಾನ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ರಾಘವ, ಕನ್ನಡ ಸಂರಕ್ಷಣೆ ಯುವ ಜನಾಂಗದ ಕರ್ತವ್ಯ. ಯುವ ಜನಾಂಗವನ್ನು ಉತ್ತಮ ಹಾದಿಯಲ್ಲಿ ಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದು. ಇತ್ತೀಚಿನ ದಿನಗಳಲ್ಲಿ ಕನ್ನಡ ಬಳಕೆಯಲ್ಲಿ ದೋಷಗಳನ್ನು ಯುವ ಜನತೆ ಹೆಚ್ಚಾಗಿ ಮಾಡುತ್ತಿದೆ. ಕನ್ನಡ ಭಾಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣಗೊಳ್ಳುತ್ತಿದ್ದಾರೆ. ಭಾಷೆಯ ಬಗ್ಗೆ ಯುವ ಜನತೆಯಲ್ಲಿ ಅರಿವಿನ ಕೊರತೆ ಇದೆ. ಅದನ್ನು ಮೀರಬೇಕಾಗಿದೆ. ಕನ್ನಡ ಜಗತ್ತಿನ ಅತ್ಯಂತ ನವಿರಾದ ಭಾಷೆ, ಅಭಿವ್ಯಕ್ತಿಗೆ ಪೂರಕವಾದ ಭಾಷೆ. ಭಾಷೆಯ ಉಳಿವಿಗಾಗಿ ಸರಕಾರಗಳು ನಿಯಮಗಳನ್ನು ರೂಪಿಸುತ್ತದೆ. ಆದರೆ ಅದು ಸಾರ್ವಜನಿಕವಾಗಿ ಅನುಷ್ಠಾನಕ್ಕೆ ಬರುವಾಗ ಅಡೆತಡೆಗಳು ಏರ್ಪಡುತ್ತದೆ. ಈ ಬಗ್ಗೆ ಕಾಳಜಿಯನ್ನು ವಹಿಸಬೇಕಾಗುತ್ತದೆ. ಸಾಂಸ್ಕೃತಿಕ ಆಂದೋಲನಗಳು ಭಾಷಾ ವೈವಿಧ್ಯತೆಯ ಉಳಿವಿಗಾಗಿ ನಡೆಯಬೇಕಾಗಿದೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸುವ ಪರಿಪಾಠ ಬದಲಾಗಬೇಕಾಗಿದೆ. ವಿದ್ಯಾರ್ಥಿಗಳು ಕಾಗೆಗಳ ರೀತಿಯ ಸಹಬಾಳ್ವೆಯ ಗುಣವನ್ನು ರೂಪಿಸಿಕೊಳ್ಳಬೇಕು. ನಾಯಿಗಳ ರೀತಿ ಕಚ್ಚಾಟದ ಗುಣವನ್ನು ಕೈ ಬಿಡಬೇಕು. ಆ ಮೂಲಕ ಮನುಕುಲದ ಸಾರ್ಥಕತೆಗೆಗಾಗಿ ದುಡಿಯಬೇಕು ಎಂದು ಹೇಳಿದರು.

ವಿಶ್ವದಲ್ಲಿ ಶೇ.2 ವಿಜ್ಞಾನಿಗಳ ವಿಭಾಗದಲ್ಲಿ ಸ್ಥಾನ ಪಡೆದುಕೊಂಡ ಭಾರತದಲ್ಲಿ 3ನೇ ಸ್ಥಾನದಲ್ಲಿರುವ ಕಾಲೇಜಿನ ಯುವವಿಜ್ಞಾನಿ ರಸಾಯನ ಶಾಸ್ತ್ರ ವಿಭಾಗದ ಡಾ. ಮಂಜುನಾಥ್ ಅವರಿಗೆ, ರಾಜ್ಯಮಟ್ಟದ ಅತ್ಯುತ್ತ ಶಿಕ್ಷಕ ಪ್ರಶಸ್ತಿ ಪಡೆದ ಪ್ರೊ. ನಾಗರಾಜ ಅವರಿಗೆ ಹಾಗೂ ಸುದೀರ್ಘ ಮೂವತ್ತು ವರ್ಷಗಳಿಂದ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಎನ್.ವಿ.ಕರುಣಾಕರ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಡಾ. ಗಾಯತ್ರಿ, ಇಸಿ/ಸಿಸಿ ಸಂಯೋಜಕಿ ಡಾ. ರೇಣುಶ್ರೀ, ಗಣವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರವಿಶಂಕರ್, ಹಿಂದಿ ವಿಭಾಗದ ಡಾ. ಶ್ರೀಧರ ಹೆಗ್ಡೆ ಹಾಜರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಥಮ ಐಚ್ಛಿಕ ವಿದ್ಯಾರ್ಥಿ ನಿಧಾ ಫಜಿû್ಲೀ ನಿರೂಪಿದರು. ದೈಹಿಕ ಶಿಕ್ಷಣ ವಿಭಾಗದ ಅಧ್ಯಾಪಕ ರಮೇಶ್ ಸ್ವಾಗತಿಸಿದರು. ಕನ್ನಡ ವಿಭಾಗದ ಅಧ್ಯಾಪಕಿ ಡಾ. ಟಿ.ಎಸ್.ಮಹಾಲಕ್ಷ್ಮಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.