Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  •  *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಝೀಕಾ ವೈರಸ್ : ಮುನ್ನೆಚ್ಚರ ವಹಿಸಲು ಡಾ.ಸತೀಶ್ ಕುಮಾರ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಝೀಕಾ ವೈರಸ್ : ಮುನ್ನೆಚ್ಚರ ವಹಿಸಲು ಡಾ.ಸತೀಶ್ ಕುಮಾರ್ ಮನವಿ*

ನವೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.6 : ಕೊರೋನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಈಡಿಸ್ ಈಜಿಪ್ಟಾ ಸೊಳ್ಳೆಗಳ ಸಮೂಹ ಮಾದರಿಗಳನ್ನು ಪರೀಕ್ಷಿಸಿದಾಗ ಝೀಕಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಡೆಂಗ್ಯೂ/ ಚಿಕುಂಗುನ್ಯಾ, ವೆಸ್ಟನೈಲ್ ಹಾಗೂ ಹಳದಿ ಜ್ವರವನ್ನು ಹರಡುವಂತಹ ಸೊಳ್ಳೆಗಳಾದ ಈಡೀಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಖಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಝೀಕಾ ವೈರಸ್ ಕೇವಲ ಸೊಳ್ಳೆಗಳ ಕಡಿತದಿಂದ ಹರಡುವುದಲ್ಲದೇ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ ದೇಹದ ದ್ರವಗಳ ವಿನಿಮಯದ ಮೂಲಕವೂ ಹರಡುತ್ತದೆ. ಮಳೆಗಾಲದಲ್ಲಿ ಈ ವೈರಸ್ ಹರಡಲು ಅನುಕೂಲವಾದ ವಾತಾವರಣ ಸೃಷ್ಟಿಯಾಗುತ್ತದೆ. ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳ ಸಾಂದ್ರತೆ ಜಾಸ್ತಿ ಇರುತ್ತದೆ.
ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಜ್ವರ, ಕೆಂಪಾದ ಕಣ್ಣುಗಳು, ಮೈ-ಕೈ ನೋವು, ಕೀಲುಗಳಲ್ಲಿ ನೋವು, ದೇಹದ ಮೇಲೆ ಕೆಂಪುರಕ್ತ ಮಿಶ್ರಿತ ಗುಳ್ಳೆಗಳು (ಗಂಧೆಗಳು) ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣವಾಗಿದ್ದು, 2-7 ದಿನಗಳ ಅವಧಿಗೆ ಕಾಣಿಸಿಕೊಳ್ಳುತ್ತವೆ. ರಕ್ತ ಹಾಗೂ ಮೂತ್ರವನ್ನು ಪರೀಕ್ಷಿಸಿದಾಗ ಈ ರೋಗದ ಸೋಂಕು ಇರುವುದು ಕಂಡುಬರುತ್ತದೆ.
ಸಂಭವಿಸಬಹುದಾದಂತಹ ಅಪಾಯ: ಗರ್ಭಿಣಿಯರು ಝೀಕಾ ವೈರಸ್ ಸೋಂಕಿಗೆ ಒಳಗಾಗಿದ್ದರೆ ಗರ್ಭಪಾತವಾಗುವ ಸಾಧ್ಯತೆ ಇದೆ ಹಾಗೂ ಹುಟ್ಟಲಿರುವ ಮಗುವಿಗೂ ಕೂಡ ಸೋಂಕು ರವಾನೆಯಾಗಬಹುದಾಗಿದೆ. ಹುಟ್ಟುವ ಮಕ್ಕಳಲ್ಲಿ ಅಂಗಾಗ ನ್ಯೂನತೆ (ಮೈಕ್ರೋಸೆಫಲಿ -ಅಂದರೆ ಮಗುವಿನ ಮೆದುಳಿನ ಬೆಳವಣಿಗೆ ಕುಂಠಿತವಾಗುವುದು) ಕಾಣಿಸಿಕೊಳ್ಳುವ ಸಾಧ್ಯತೆಯೂ ಹೆಚ್ಚಾಗಿದೆ. ವಯಸ್ಕರಲ್ಲಿ ತೀವ್ರತರವಾದ ನರಗಳ ದೌರ್ಬಲ್ಯ (Guillain-barre syndrome) ವಿರಳವಾಗಿ ಕಾಣಿಸಿಕೊಳ್ಳಬಹುದು.
ರೋಗ ಲಕ್ಷಣಗಳು ಕಂಡು ಬಂದರೆ ಏನು ಮಾಡಬೇಕು: ಇದುವರೆಗೆ ಈ ಕಾಯಿಲೆಗೆ ಯಾವುದೇ ಲಸಿಕೆ ಕಂಡುಹಿಡಿದಿಲ್ಲ.
ಸಾಕಷ್ಟು ದ್ರವ ಆಹಾರಗಳನ್ನು ಸೇವಿಸುವುದರ ಮೂಲಕ ನಿರ್ಜಲೀಕರಣವನ್ನು ತಡೆಯಬೇಕು. ಸಾಕಷ್ಟು ವಿಶ್ರಾಂತಿಯನ್ನು ಪಡೆಯಬೇಕು. ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದು.
ಸೊಳ್ಳೆಗಳ ಉತ್ಪತ್ತಿ ತಾಣಗಳು: ಈ ಸೊಳ್ಳೆಗಳು ಹಗಲು ಹೊತ್ತು ಕಚ್ಚುತ್ತವೆ. ಡ್ರಮ್, ಬ್ಯಾರೆಲ್, ನೀರಿನ ತೊಟ್ಟಿ, ಏರ್ ಕೂಲರ್, ಪ್ರಿಜ್, ಅನುಪಯುಕ್ತ ಟೈರ್, ಒಡೆದ ಮಡಕೆ, ತೆಂಗಿನ ಚಿಪ್ಪು, ತಾರಸಿ ಮನೆಗಳ ಮೇಲ್ಚಾವಣಿ, ಮನೆಗಳಲ್ಲಿ ಉಪಯೋಗಿಸಿ ಬಿಸಾಡಿದಂತಹ ಘನತ್ಯಾಜ್ಯ ವಸ್ತುಗಳು, ಅಡಿಕೆ ತೋಟಗಳಲ್ಲಿ ಬಿದ್ದಿರುವ ಹಾಳೆಗಳು(ಎಲೆಗಳು), ರಬ್ಬರ್ ತೋಟಗಳಲ್ಲಿ ರಬ್ಬರ್ ಸಂಗ್ರಹಿಸುವ ಕಪ್, ಹೂವಿನ ಕುಂಡ, ಶಾಲಾ-ಕಚೇರಿಗಳ ಮೇಲ್ಚಾವಣಿ ಇತ್ಯಾದಿಗಳಲ್ಲಿ ನೀರು ನಿಂತು ಈಡಿಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ.
ಮನೆ ಪರಿಸರ, ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲಿಯೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಮತ್ತು ಆರೋಗ್ಯ ಸಿಬ್ಬಂದಿ/ಆಶಾ ಕಾರ್ಯಕರ್ತೆಯರು ನೀಡುವ ಸಲಹೆ-ಸೂಚನೆಗಳನ್ನು ಪಾಲಿಸಬೇಕು. ಸೊಳ್ಳೆಗಳು ಪ್ರವೇಶಿಸದಂತೆ ಮನೆಯ ಕಿಟಕಿ ಬಾಗಿಲುಗಳಿಗೆ ಜಾಲರಿ ಅಳವಡಿಸುವುದು. ಹೊರಾಂಗಣದಲ್ಲಿ ಮಲಗುವುದನ್ನು ಸಾಧ್ಯವಾದಷ್ಟು ತಪ್ಪಿಸುವುದು ಹಾಗೂ ವಿಶ್ರಾಂತಿ ಪಡೆಯುವಾಗ ಮತ್ತು ಮಲಗುವಾಗ ವಿಶೇಷವಾಗಿ ಗರ್ಭಿಣಿಯರು/ ವಯಸ್ಕರು ಮತ್ತು ಮಕ್ಕಳು ಕೀಟನಾಶಕ ಲೇಪಿತ ಸೊಳ್ಳೆ ಪರದೆಗಳನ್ನು ಉಪಯೋಗಿಸುವುದು. ನೀರಿನ ತೊಟ್ಟಿ/ ಟ್ಯಾಂಕ್‍ನ್ನು ಕನಿಷ್ಟ ಪಕ್ಷ ವಾರಕ್ಕೆ ಎರಡು ಸಲ ಪೂರ್ತಿ ಖಾಲಿ ಮಾಡಿ ಸ್ವಚ್ಛಗೊಳಿಸುವುದು.
ಬಯಲಿನಲ್ಲಿ ತ್ಯಾಜ್ಯ ವಸ್ತುಗಳಾದ ಟೈರ್, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರವಹಿಸಿವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸಾಧ್ಯವಾದಷ್ಟು ಮೈಮುಚ್ಚುವಂತೆ ಬಟ್ಟೆಯನ್ನು ಧರಿಸುವುದು.
ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು. ಸೊಳ್ಳೆ ಕಚ್ಚದಂತೆ ಎಲ್ಲಾ ರೀತಿಯ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಲು ಸೂಕ್ತ ಕ್ರಮಗಳನ್ನು ವಹಿಸಬೇಕು.
ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದರೊಂದಿಗೆ ಈ ಎಲ್ಲಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎಲ್.ಶ್ರೀನಿವಾಸ್ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

 *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*

ಆಗಷ್ಟ್ 31, 2026

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ, NEWS DESK ಆ.30: ಮಳೆಯ ಪ್ರಮಾಣ ತೀವ್ರವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಾಫಿ, ಕರಿಮೆಣಸು, ಭತ್ತ ಸೇರಿದಂತೆ ವಿವಿಧ ಬೆಳೆಗಳ…

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.