Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾನ್‍ಬೈಲ್ ನಲ್ಲಿ ಓಣಂ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾನ್‍ಬೈಲ್ ನಲ್ಲಿ ಓಣಂ ಸಂಭ್ರಮ*

ನವೆಂಬರ್ 13, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, ನ.13: ಭಾರತದ ಸಂವಿಧಾನದ ಅಡಿಯಲ್ಲಿ ನಾವೆಲ್ಲಾರೂ ಒಂದು ಎಂಬ ಸಮಾನತೆ ಸೂತ್ರದಡಿಯಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಂಡು ಸಾಮರಸ್ಯ ಬದುಕನ್ನು ಕೊಡಗಿನಲ್ಲಿ ಹಿಂದೂ ಮಲಯಾಳಿ ಸಮಾಜ ಆಗ್ರ ಸ್ಥಾನದಲ್ಲಿದೆ ಎಂದು ಕೊಡಗು ಜಿ.ಪಂ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ.ವಿಜಯ ಹೇಳಿದರು.
ಕಾನ್‍ಬೈಲ್ ಸರ್ಕಾರಿ ಮಾದರಿ ಶಾಲೆಯಲ್ಲಿ ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ ವತಿಯಿಂದ 2ನೇ ವರ್ಷದ ಓಣಂ ಆಚರಣೆಯ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 14 ಕಡೆಗಳಲ್ಲಿ ಹಿಂದೂ ಮಲಯಾಳಿ ಸಮಾಜದ ಶಾಖೆಗಳು ಇದ್ದು, ಕೂಲಿ ಕಾರ್ಮಿಕರಿಂದ ಹಿಡಿದು ಅತ್ಯಲ್ಪ ಸಂಖ್ಯೆಯಲ್ಲಿ ಶ್ರೀಮಂತರು ನಮ್ಮ ಸಮಾಜದಲ್ಲಿದ್ದು, ಅಚಾರ ವಿಚಾರಗಳು ಹಬ್ಬ ಹರಿದಿನಗಳನ್ನು ನಾವೆಲ್ಲಾರೂ ಒಂದಾಗಿ ಆಚರಿಸುತ್ತಿರುವುದು ವೈಶಿಷ್ಟ್ಯ ಪೂರ್ಣ ಅಂಶವೆಂದು ಬಣ್ಣಿಸಿದರು.
ಸಾಮಾನ್ಯವಾಗಿ ಹಬ್ಬ ಹರಿದಿನಗಳಿಗೆ ಶುಭಸಮಾರಂಭಗಳಿಗೆ ನಾವೆಲ್ಲಾರೂ ನಮ್ಮ ಕೈಲಾದ ಸಹಾಯವನ್ನು ಮಾಡುತ್ತೇವೆ ಆದರೆ ಯಾರಿಗೂ ಸಾವು ಯಾವಾಗ ಸಂಭವಿಸುತ್ತದೆ ಎಂಬುದು ಗೊತ್ತಿರುವುದಿಲ್ಲ ಇಲ್ಲಿನ ಸಮಾಜದ ಸದಸ್ಯರು ಸಮುದಾಯದಲ್ಲಿ ಸಾವು ಸಂಭವಿಸಿದಾಗ ರೂ ಹತ್ತು ಸಾವಿರದವರೆಗೆ ಧನ ಸಹಾಯ ಮಾಡುತ್ತಿರುವುದು ವಿಶೇಷವಾಗಿದೆ ಎಂದು ವಿ.ಎಂ.ವಿಜಯ ಶ್ಲಾಘಿಸಿದರು.
ಮಕ್ಕಳಿಗೆ ಪಿಯುಸಿ ಅಥವಾ ಪದವಿ ವಿದ್ಯಾಭ್ಯಾಸವನ್ನು ನೀಡಿ ಮೊಟಕುಗೊಳಿಸಬೇಡಿ ಉನತ ಶಿಕ್ಷಣ ಕೊಡಿಸಲು ಮೊದಲ ಆದ್ಯತೆ ನೀಡಿ ಅದರಿಂದ ಸಮಾಜದ ಏಳಿಗೆ ಸುಲಭ ಸಾಧ್ಯವಾಗುತ್ತದೆ ಎಂದು ಕರೆ ನೀಡಿದ ಅವರು ಮಕ್ಕಳಿಗೆ ಸಂಸ್ಕಾರ ಕಲಿಸಿ, ಮೊಬೈಲ್ ಗೀಳಿನಿಂದ ದೂರವಿಡಿ ಎಂದು ಅವರು ಕರೆ ನೀಡಿದರು.
ನಾಕೂರು ಶಿರಂಗಾಲ ಗ್ರಾ.ಪಂ.ಅಧ್ಯಕ್ಷ ಮಂದೋಡಿ ಜಗನ್ನಾಥ್ ಮಾತನಾಡಿ ನಮ್ಮ ಗ್ರಾಮದಲ್ಲಿ ಹಿಂದೂ ಮಲಯಾಳಿ ಸಂಘದವರು ಅವರ ಸಂಸ್ಕೃತಿ ಸಂಪ್ರಾದಾಯದ ವೈಭವನ್ನು ಅನಾವರಣಗೊಳಿಸಿದ್ದು ಪ್ರತಿಯೊಬ್ಬರಿಗೂ ಇದಿ ಮಾರ್ಗದರ್ಶಿ ಎಂದು ಹೇಳಿದರಲ್ಲದೆ ಮಕ್ಕಳು ಹಿರಿಯರು ಎನ್ನದೆ ಎಲ್ಲಾರೂ ಮೊಬೈಲ್ ದಾಸರಾಗಿದ್ದು, ಅದನ್ನು ಬಿಟ್ಟು ಧಾರ್ಮಿಕ ಆಚರಣೆ ಹೆಚ್ಚು ಒಲವು ತೋರಬೇಕೆಂದರು.

ಕಲ್ಲೂರು ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಮೆರವಣಿಗೆ ಗ್ರಾಮ ಪಂಚಾಯಿತಿ ಸದಸ್ಯೆ ರಾಧಾಮಣಿ ಹಳದಿ ಧ್ವಜವನ್ನು ಹಿಡಿದು ಚಾಲನೆ ನೀಡಿದರು. ಚಂಡೆ ಮೇಳದೊಂದಿಗೆ ಮಹಿಳೆಯರು ಕೇರಳದ ಸೆಟ್ ಮುಂಡು ಸೀರೆ,ಪುರುಷರು ಬಿಳಿ ಪಂಚೆ ಶರ್ಟ್ ಧರಿಸಿದ್ದು ತಾಲ ಹಿಡಿದು ಮಾಮೆಲಿ ವೇಷದಾರಿಯೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಸಾಗಿ ಕಾನ್ ಬೈಲ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಾಗಿ ಬಂದರು.
ಕಾನ್‍ಬೈಲ್ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾದ್ಯಾಯ ಮತ್ತು ಪ್ರಾಭರ ಬಿಇಓ ಎಂ.ವಿ.ಮಂಜೇಶ್ ಎಂ.ಎ. ಮಜೇರ್ಶ ಮಾತನಾಡಿ ವiಲಯಾಳಿ ಸಮಾಜದವರು ಜೀವನೋಪಾಯಕ್ಕಾಗಿ ದೇಶವ್ಯಾಪಿ ನೆಲೆಸಿದ್ದಾರೆ ಆದರೆ ತಾವು ಇದ್ದಲೆ ತಮ್ಮ ಆಚಾರ ವಿಚಾರಗಳನ್ನು ಮರೆಯದೆ ಆಚರಿಸುತ್ತಿದ್ದಾರೆ ಅವರ ಶ್ರದ್ಧೆ, ಧೃಢತೆ ಮತ್ತು ಶ್ರಮಜೀವನದಿಂದಾಗಿ ಇಂದು ಚಂದ್ರಲೋಕದವರೆಗೂ ಅವರೇ ಮೊದಲು ತಲುಪುತ್ತಾರೆ ಎಂಬ ಮಾತಿಗೆ ಉದಾಹರಣೆಯಾಗಿ ನಿಂತಿದ್ದಾರೆಂದು ಮಂಜೇಶ್ ಹೇಳಿದರು.
ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ.ವಸಂತ್‍ಕುಮಾರ್ ಮಾತನಾಡಿ ಹಿಂದೂ ಮಲಯಾಳಿ ಸಮುಧಾಯ ಎಲ್ಲಾ ಜಾತಿ ಸಮುದಾಯದ ಜನರೊಂದಿಗೆ ಒಂದಾಗಿ ಹೋಗುವವರು ಈ ಕಾರಣದಿಂದಲೇ ಅವರು ನಮ್ಮನ್ನು ಕೂಡ ಅವರ ಧಾರ್ಮಿಕ ವಿಚಾರ ಹಬ್ಬ ಹರಿದಿನಗಳಲ್ಲಿ ನಮ್ಮನ್ನು ಆಹ್ವಾನಿಸುತ್ತಾರೆ ಆದರೆ ನಾವು ನಮ್ಮ ಹಬ್ಬ ಹರಿದಿನಗಳಲ್ಲಿ ಅವರನ್ನು ಕರೆಯದೆ ಸ್ವಾರ್ಥ ಮನೋಬಾವನೆಯನ್ನು ಪ್ರದರ್ಶಿಸುತ್ತೇವೆ ಎಂದು ವಿಷಾಧಿಸಿದರು.
ಸಮಾರಂಭದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಬಿ.ಜಿ.ರಮೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ರಂಜನಿ ಕುಂಞಕೃಷ್ಣ, ಸಭೆಯ ಅಧ್ಯಕ್ಷತೆಯನ್ನು ನಾಕೂರು ಶಿರಂಗಾಲ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಕೆ.ಗಂಗಾಧರ್ ವಹಿಸಿ ಮಾತನಾಡಿದರು.
ಸೋಮವಾರಪೇಟೆ ತಾಲೂಕು ಮಲಯಾಳಿ ಸಮಾಜ ಸ್ಥಾಪಕ ಅಧ್ಯಕ್ಷ ಪಿ.ಡಿ.ಪ್ರಕಾಶ್, ನಾಕೂರು ಶಿರಂಗಾಲ ಗ್ರಾ.ಪಂ ಉಪಾಧ್ಯಕ್ಷ ಬಿ.ಇ.ಸತೀಶ್, ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನ, ನಾಕೂರು ಕೊಡವ ಕೂಟ ಉಪಾಧ್ಯಕ್ಷ ಕೆ.ಎ.ಕಾರ್ಯಪ್ಪ, ನಾಕೂರುಶಿರಂಗಾಲ ಗೌಡ ಸಂಘದ ಅಧ್ಯಕ್ಷ ಎಂ.ಎಂ.ಕಾರ್ಯಪ್ಪ, ಮಳೂರು ಬೆಳ್ಳರಿಕಮ್ಮ ದೇವಸ್ಥಾನ ಅಧ್ಯಕ್ಷ ಕೆ.ಪಿ.ಬೋಪಯ್ಯ, ಬೆಳ್ಳರಿಕಮ್ಮ ದೇವಸ್ಥಾನ ಕಾರ್ಯದರ್ಶಿ ಎಂ.ಎನ್.ಲೋಹಿತಾಶ್ವ, ನಾಕೂರು ಗಂಗಾಧರೇಶ್ವ ದೇವಸ್ಥಾನ ಅಧ್ಯಕ್ಷ ಎಲ್.ಎಂ.ರುದ್ರಪ್ಪ, ನಾಕೂರು ಫ್ರೆಂಡ್ಸ್ ಯೂತ್ ಕ್ಲಬ್ ಅಧ್ಯಕ್ಷ ಎ.ಬಿ.ಚಂದ್ರಶೇಖರ್, ಸುಂಟಿಕೊಪ್ಪ ಹೋಬಳಿ ಜೈಜವಾನ್ ಮಾಜಿ ಸೈನಿಕರ ಟ್ರಸ್ಟ್ ಅಧ್ಯಕ್ಷ ಪಿ.ಜಿ.ಶ್ರೀನಿವಾಸ್,ಪಂಚಾಯಿತಿ ಮಾಜಿ ಕಾರ್ಯದರ್ಶಿ ಸುರೇಶ್, ಗ್ರಾ. ಪಂ. ಮಾಜಿ ಸದಸ್ಯ ಚೋಮಣಿ, ಕಾಫಿ ಬೆಳೆಗಾರರಾದ ಕರವಂಡ ಕುಂಞಯಪ್ಪ,ಕುಶಾಲನಗರ ಕ್ರೈಂ ಪೊಲೀಸ್ ಸಜಿ, ವಾಹನ ಚಾಲಕರ ಸಂಘದ ಮಾಜಿ ಅಧ್ಯಕ್ಷ ಕಿಟ್ಟಣರೈ ಮತ್ತಿತರರು ಇದ್ದರು.
ಸಮಾರಂಭಕ್ಕೂ ಮುನ್ನ ಕಲ್ಲೂರು ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಸಮುದಾಯ ಭಾಂದವರು ಮಹಿಳೆಯರು ಕೇರಳದ ಸಾಂಪ್ರಾದಾಯಿಕ ಶ್ವೇತ ವಸ್ತ್ರಧಾರಿಗಳಾಗಿ,ಪುರುಷರು ಬಿಳಿ ಪಂಚೆ ಶರ್ಟ್ ಧರಿಸಿದ್ದು ಮಹಿಳೆಯರು ತಾಲ ಹಿಡಿದು, ಮಾವೆಲಿ ವೇಷದಾರಿ ಹಾಗೂ ಚಂಡೆ ಮೇಳದೊಂದಿಗೆ, ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಸಾಗಿ ಕಾನ್‍ಬೈಲ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮಾವೇಶಗೊಂಡಿತು.
ಮೆರವಣಿಗೆಯ ಉದ್ಘಾಟನೆಯನ್ನು ನಾಕೂರು ಶಿರಂಗಾಲ ಗ್ರಾ.ಪಂ ಸದಸ್ಯೆ ರಾಧಮಣಿ ಚಾಲನೆ ನೀಡಿದರು.
ಇದೇ ಸಂದರ್ಭ ಓಣಂ ಹಬ್ಬದ ದಿನ ಮನೆಗಳಲ್ಲಿ ವಿಶೇಷ ರೀತಿಯ ಭೋಜನವನ್ನು ತಯಾರಿಸಲಾಗುತ್ತಿದ್ದು, ವಿವಿಧ ಬಗೆಯ ಖಾದ್ಯಗಳಿಂದ ತಯಾರಿಸಿ ಭೋಜನವನ್ನು ನೇರೆದಿದ್ದ ಜನರಿಗೆ ನೀಡಲಾಯಿತು.
ಹಿಂದೂ ಮಲಯಾಳಿ ಸಮಾಜದ ವತಿಯಿಂದ 2ನೇ ವರ್ಷದ ಓಣಂ ಆಚರಣೆಯ ಅಂಗವಾಗಿ ಮಹಿಳೆಯರು ಪುಷ್ಪ ರಂಗೋಲಿ ಸ್ಪರ್ಧೆ ನಡೆಯಿತು.
ಹಿಂದೂ ಮಲಯಾಳಿ ಸಮಾಜದ ವತಿಯಿಂದ 2ನೇ ವರ್ಷದ ಓಣಂ ಆಚರಣೆಯ ಅಂಗವಾಗಿ ಭಾಂದವರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ನೇರೆದಿದ್ದ ಜನರ ಜನಮನ ಸೂರೆಗೊಳಿಸಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.