Advertisement
10:27 AM Sunday 3-December 2023

*“ಕರ್ನಾಟಕ ಸಾಧಕ ರತ್ನ” ರಾಜ್ಯೋತ್ಸವ ಪ್ರಶಸ್ತಿಗೆ ಆರ್.ಕೆ.ಬಾಲಚಂದ್ರ ಆಯ್ಕೆ*

21/11/2023

ಮಡಿಕೇರಿ ನ.21 :  ಕನ್ನಡ ರಾಜ್ಯೋತ್ಸವದ ಅಂಗವಾಗಿ  ಬಳ್ಳಾರಿಯ  ಸ್ಮಿಯಾಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ  “ಕರ್ನಾಟಕ ಸಾಧಕ ರತ್ನ” ರಾಜ್ಯೋತ್ಸವ ಪ್ರಶಸ್ತಿಗೆ ಆರ್.ಕೆ.ಬಾಲಚಂದ್ರ  ಆಯ್ಕೆಯಾಗಿದ್ದಾರೆ. 

ಆರ್.ಕೆ.ಬಾಲಚಂದ್ರ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ , ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ಮಡ ಕಲಿಸುವಿಕೆ, ರಾಜ್ಯಾದ್ಯಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ನೀಡಿದ ತರಬೇತಿಯ ಸೇವೆ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವಿಸಲಾಗುವುದು. ನ.26 ರಂದು ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ  ಪ್ರಶಸ್ತಿ  ಪ್ರದಾನ ಮಾಡಲಾಗುವುದು.