Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»Uncategorized»*ಕರಿಕೆ : ಸಹಕಾರ ಸಂಘದಿಂದ ರೈತರ ಆರ್ಥಿಕತೆ ವೃದ್ಧಿ : ಎ.ಕೆ.ಮನು ಮುತ್ತಪ್ಪ*
Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರಿಕೆ : ಸಹಕಾರ ಸಂಘದಿಂದ ರೈತರ ಆರ್ಥಿಕತೆ ವೃದ್ಧಿ : ಎ.ಕೆ.ಮನು ಮುತ್ತಪ್ಪ*

ನವೆಂಬರ್ 23, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.23 : ಒಂದು ಗ್ರಾಮದಲ್ಲಿ ಒಂದು ಸಹಕಾರ ಸಂಘ ಸ್ಥಾಪನೆಯಾಗಬೇಕೆಂಬುದು ಸರ್ಕಾರದ ಆಶಯವಾಗಿದ್ದು, ಆ ಮೂಲಕ ಸ್ಥಳೀಯ ರೈತರಿಗೆ ಗೊಬ್ಬರ, ಉತ್ಪನ್ನಗಳಿಗೆ ಗೋದಾಮು, ಶಿಕ್ಷಣ ನೀಡುವಂತಹ ಕಾರ್ಯಗಳನ್ನು ಕೈಗೊಂಡು ರೈತರ ಆರ್ಥಿಕತೆಯನ್ನು ವೃದ್ಧಿಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಕರಿಕೆ ಸಹಕಾರ ಸಂಘದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕರಿಕೆ ಸಹಕಾರ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ’ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೆ ಕೊಡಗು ಜಿಲ್ಲೆಯ ಕರಿಕೆ ಭಾಗದಲ್ಲಿ ಅಪ್ಪಿಕೊ ಚಳುವಳಿಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕರಿಕೆ ಪ್ಯಾಕ್ಸ್‍ನ ಸಣ್ಣ ಕೊಠಡಿಯಲ್ಲಿ ಉಳಿದುಕೊಂಡು ಚಳುವಳಿಯಲ್ಲಿ ಭಾಗವಹಿಸಿದ ಘಟನೆಯನ್ನು ನೆನೆಯುತ್ತಾ ಇಂದು ಪ್ಯಾಕ್ಸ್ ಉತ್ತಮ ಕಟ್ಟಡ ನಿರ್ಮಾಣ ಮಾಡಿದ್ದು, ಸ್ಥಳೀಯ ಉತ್ಪನ್ನಗಳ ಖರೀದಿಯಂತಹ ಮಹಾತ್ಕಾರ್ಯವನ್ನು ಕೈಗೊಳ್ಳುತ್ತಾ ಉತ್ತಮವಾಗಿ ಬೆಳೆಯುತ್ತಿದೆ. ಒಂದು ಗ್ರಾಮದಲ್ಲಿ ಒಂದು ಸಹಕಾರ ಸಂಘ ಸ್ಥಾಪನೆಯಾಗಬೇಕೆಂಬುದು ಸರ್ಕಾರದ ಆಶಯವಾಗಿದ್ದು ಆ ಮೂಲಕ ಸ್ಥಳೀಯ ರೈತರಿಗೆ ಗೊಬ್ಬರ, ಉತ್ಪನ್ನಗಳಿಗೆ ಗೋದಾಮು, ಶಿಕ್ಷಣ ನೀಡುವಂತಹ ಕಾರ್ಯಗಳನ್ನು ಕೈಗೊಂಡು ರೈತರ ಆರ್ಥಿಕತೆಯನ್ನು ವೃದ್ಧಿಗೊಳಿಸಲು ಪ್ರಯತ್ನಿಸುತ್ತಿದೆ. ಈ ಮೂಲಕ ದೇಶದ ಆರ್ಥಿಕತೆಯನ್ನು ವೃದ್ಧಿಗೊಳಿಸಬಹುದೆಂಬ ಚಿಂತನೆಯೊಂದಿಗೆ 5 ಟ್ರಿಲಿಯನ್ ಡಾಲರ್‍ಗೆ ದೇಶದ ಆರ್ಥಿಕತೆಯನ್ನು ಕೊಂಡೊಯ್ಯಬೇಕೆನ್ನುವ ಉದ್ದೇಶದೊಂದಿಗೆ ಸಹಕಾರ ಕ್ಷೇತ್ರದ ಮೂಲಕ ಈ ಸಾಧನೆಯನ್ನು ಕೈಗೊಳ್ಳಬಹುದೆಂದು ಚಿಂತಿಸಿ ಯೋಜನೆ ರೂಪಿಸಲಾಗಿದೆ ಎಂದರು.

ಈ ದಿಸೆಯಲ್ಲಿಯೇ 12 ಅಂಶಗಳ ಯೋಜನೆಯನ್ನು ಜಾರಿಗೊಳಿಸಿದ್ದು, ಸಹಕಾರ ಸಂಘಗಳು, ಜನೌಷಧಿ ಕೇಂದ್ರ ಸ್ಥಾಪನೆ, ಪೆಟ್ರೋಲ್ ಬಂಕ್ / ಚಾರ್ಚಿಂಗ್ ಘಟಕ, ಕುಡಿಯುವ ನೀರಿನ ಘಟಕ, ಗೋದಾಮು ನಿರ್ಮಾಣ ಇತ್ಯಾದಿ ಯೋಜನೆಗಳನ್ನು ಕೈಗೊಳ್ಳುವಂತೆ ಪ್ರೇರೇಪಿಸಲಾಗುತ್ತಿದೆ. ಸಹಕಾರ ಕ್ಷೇತ್ರಕ್ಕೆ 119 ವರ್ಷಗಳ ಇತಿಹಾಸವಿದ್ದು, ಅನೇಕ ಹಿರಿಯ ಸಹಕಾರಿಗಳ ತ್ಯಾಗ, ನಿಸ್ವಾರ್ಥ ಸೇವೆ, ಉತ್ತಮ ಆಡಳಿತದ ಫಲವಾಗಿ ಇದೆಲ್ಲಾ ಸಾಧಿಸಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕರಿಕೆ ಗ್ರಾ.ಪಂ ಅಧ್ಯಕ್ಷ ಬಾಲಚಂದ್ರ ನಾಯರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆ ಉತ್ತಮವಾಗಿದ್ದು, ಎಲ್ಲಾ ಕ್ಷೇತ್ರಕ್ಕೂ ಸಂಘಗಳ ಕಾರ್ಯವ್ಯಾಪ್ತಿ ಹಬ್ಬಿದೆ. ಕ್ಯಾಂಪ್ಕೋ, ಮ್ಯಾಂಮ್ಕೋ, ನಂದಿನಿ, ಅಮೂಲ್ ಇತ್ಯಾದಿ ಬ್ರಾಂಡ್‍ಗಳೇ ಇದಕ್ಕೆ ಸಾಕ್ಷಿಯಾಗಿದ್ದು ಸಂಘಗಳು ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಎಚ್.ಜೆ.ಸತೀಶ್ ಕುಮಾರ್ ಮಾತನಾಡಿ, ಇಂಗ್ಲೆಂಡ್‍ನಲ್ಲಿ ಪ್ರಪ್ರಥಮ ಸಹಕಾರ ಸಂಘ ಪ್ರಾರಂಭವಾದ ನಂತರದಲ್ಲಿ ಭಾರತದಲ್ಲಿ 1905 ರಲ್ಲಿ ಗದಗ್ ಜಿಲ್ಲೆಯಲ್ಲಿ ಸ್ಥಾಪನೆಯಾಯಿತು. ತದನಂತರದಲ್ಲಿ ಕೊಡಗು ಜಿಲ್ಲೆಯಲ್ಲಿ ಕೇವಲ 12 ದಿನಗಳ ಅಂತರದಲ್ಲಿ ತಲ್ತರೆ ಶೆಟ್ಟಳ್ಳಿಯಲ್ಲಿ ಪತ್ತಿನ ಸಹಕಾರ ಸಂಘ ಸ್ಥಾಪನೆಯಾಯಿತು. ನಂತರದಲ್ಲಿ ಭಾಗಮಂಡಲ ಪ್ಯಾಕ್ಸ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ, ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘ, ಜೇನು ಬೆಳೆಗಾರರ ಸಹಕಾರ ಸಂಘ, ಹೀಗೆ ಹಲವು ಸಂಘಗಳು ಇಂದು ಶತಮಾನೋತ್ಸವವನ್ನು ಕಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಅಂದಿನ ಕಾಲದಲ್ಲಿ ಸಹಕಾರಿಗಳ ದೂರದೃಷ್ಟಿಯ ಫಲವಾಗಿ ಸ್ಥಳಿಯವಾಗಿ ಬೆಳೆಯುವಂತಹ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ದೊರಕಿಸುವ ಉದ್ದೇಶದೊಂದಿಗೆ ಹಲವು ಸಂಘಗಳು ಪ್ರಾರಂಭವಾದವು. ಇಂದು ಪ್ಯಾಕ್ಸ್, ಪತ್ತಿನ ಸಹಕಾರ ಸಂಘಗಳು ವಾಣಿಜ್ಯ ಬ್ಯಾಂಕ್‍ಗಳಿಗೆ ಪೈಪೋಟಿಯನ್ನು ನೀಡುತ್ತಿದ್ದು, ಸಂಘಗಳ ತ್ವರಿತ ಕಾರ್ಯನಿರ್ವಹಣೆಯು ಶ್ಲಾಘನಾರ್ಹ ಎಂದರು.

ರಾಜ್ಯದಲ್ಲಿಯೇ ಹಲವು ವಿಧದ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಸಹಕಾರ ಆಸ್ಪತ್ರೆ, ಸಹಕಾರ ಸಾರಿಗೆ, ಸಹಕಾರ ಸೂಪರ್ ಮಾರ್ಕೆಟ್ ಇತ್ಯಾದಿ ಎಲ್ಲಾ ರಂಗಗಳಲ್ಲೂ ಸಹಕಾರ ಕ್ಷೇತ್ರ ವ್ಯಾಪಿಸಿದೆ ಎಂದು ಹೇಳಿದರು.

ಅಂತೆಯೇ ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ರೈತರಿಗೆ ಪಿಕ್‍ಅಪ್ ವಾಹನ ಖರೀದಿಗೆ, ಶಿಕ್ಷಣ ಪಡೆಯಲು ಸಾಲ ನೀಡುವಂತಹ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಲಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ಪ್ರಗತಿ ಹೊಂದುತ್ತಿದೆ ಎಂದು ಹೇಳಿದರು.

ಸಂಘದ ಮಾಜಿ ಅಧ್ಯಕ್ಷರುಗಳಾದ ಬೇಕಲ್ ಸಿ.ಜಯರಾಮ, ಕೋಡಿ ಕೆ.ಪೊನ್ನಪ್ಪ, ಕೋಡಿ ಕೆ.ಸೀತಾರಾಮ, ಎಸ್.ವೆಂಕಪ್ಪಗೌಡ, ಬಿ.ಪಿ. ನಿರ್ಮಲಾನಂದ, ಎಚ್.ಎ.ಹರೀಶ, ಕೆ.ಬಿ.ರಾಘವ, ಬಿ.ಎ.ನಾರಾಯಣ, ಪಿ.ಟಿ.ಐಸಾಕ್, ಪಿ.ಎಂ.ನಂಜುಂಡ, ಬೇಕಲ್ ಡಿ.ದೇವರಾಜ, ಕೆ.ಪಿ.ರಘುರಾಮ, ಬೇಕಲ್ ಜೆ.ಶರಣ್ ಕುಮಾರ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗಾಧರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರಿಕೆ ಪ್ಯಾಕ್ಸ್ ಅಧ್ಯಕ್ಷ ಬೇಕಲ್ ದೇವರಾಜ್, ಕರಿಕೆ ಪ್ಯಾಕ್ಸ್ ಬೆಳೆದು ಬಂದ ದಾರಿಯ ಕುರಿತು ಸಂಘದ ಮುಂದಿನ ಯೋಜನೆಗಳು, ಸಂಘವು ಮೇಲೆ ಹೇಳಿದಂತೆ ಪೆಟ್ರೋಲ್ ಬಂಕ್ ನಿರ್ಮಾಣ, ಜನೌಷಧಿ ಕೇಂದ್ರ ಸ್ಥಾಪನೆಯಂತಹ ಯೋಜನೆ ರೂಪಿಸುತ್ತಿದೆ ಎಂದು ಹೇಳಿದರು. ಅಲ್ಲದೆ ಈಗಾಗಲೇ ಕ್ಯಾಂಪ್ಕೋದ ಸಂಯುಕ್ತಾಶ್ರಯದಲ್ಲಿ ಸಂಘದಲ್ಲಿ ಅಡಿಕೆ ಖರೀದಿ ಘಟಕವನ್ನು ಸಹ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.
ದಿನದ ಮಹತ್ವದ ಕುರಿತು ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ. ಶ್ಯಾಮಲಾ ಉಪನ್ಯಾಸ ನೀಡಿದರು.
ಸಪ್ತಾಹದ ಅಂಗವಾಗಿ ಮೇರಿ ಬಾಪ್ಟಿಸ್ ಆಯುರ್ವೇದ ಆಸ್ಪತ್ರೆಯಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ವೇದಿಕೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎನ್.ಎ.ರವಿ ಬಸಪ್ಪ, ಕೆ.ಎಸ್.ಗಣಪತಿ, ಕೆ.ಎಂ.ತಮ್ಮಯ್ಯ, ಸಹಕಾರ ಅಭಿವೃದ್ಧಿ ಅಧಿಕಾರಿ ಪಿ.ಬಿ.ಮೋಹನ್, ಕರಿಕೆ ಪ್ಯಾಕ್ಸ್‍ನ ಉಪಾಧ್ಯಕ್ಷ ಎಂ.ಎಂ.ರೆಲ್ಸನ್ ಹಾಜರಿದ್ದರು.

ಕಾರ್ಯಕ್ರಮದ ಪ್ರಾರ್ಥನೆಯನ್ನು ಸಂಘದ ನಿರ್ದೇಶಕರುಗಳಾದ ಧನ್ಯಶ್ರೀ ಕುಮಾರ್ ಹಾಗೂ ಕೆ.ಪಿ. ಸರಸ್ವತಿ ನೆರವೇರಿಸಿದರು. ನಿರೂಪಣೆಯನ್ನು ಯೂನಿಯನ್‍ನ ವ್ಯವಸ್ಥಾಪಕಿ ಆರ್.ಮಂಜುಳ ನಿರೂಪಿಸಿದರು. ಕಾರ್ಯಕ್ರಮ ನಿರ್ವಹಣೆಗೆ ಯೂನಿಯನ್ ಸಿಬ್ಬಂದಿಗಳು ಹಾಗೂ ಪ್ಯಾಕ್ಸ್‍ನ ಸಿಬ್ಬಂದಿಗಳು ಸಹಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.