Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಪಿಎಂ ಸ್ವನಿಧಿಯಿಂದ ಪಿಎಂ ಸುರಕ್ಷಾ’ ಯೋಜನೆ ತಳ ಹಂತದಲ್ಲಿರುವವರ ಆಶಾಕಿರಣ : ಎ.ರಾಮದಾಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಪಿಎಂ ಸ್ವನಿಧಿಯಿಂದ ಪಿಎಂ ಸುರಕ್ಷಾ’ ಯೋಜನೆ ತಳ ಹಂತದಲ್ಲಿರುವವರ ಆಶಾಕಿರಣ : ಎ.ರಾಮದಾಸ್*

ನವೆಂಬರ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.23 : ವಿವಿಧ ಕ್ಷೇತ್ರಗಳಲ್ಲಿನ ಅಸಂಘಟಿತ ಕಾರ್ಮಿಕ ಸಮೂಹಕ್ಕೆ ಆರ್ಥಿಕ ಚೈತನ್ಯವನ್ನು ಒದಗಿಸುವ ಮೂಲಕ ರಾಷ್ಟ್ರಾಭ್ಯುದಯದ ಚಿಂತನೆಯಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ಸ್ವನಿಧಿಯಿಂದ ಪಿಎಂ ಸುರಕ್ಷಾ’ ಯೋಜನೆ ಸಮಾಜದ ತಳ ಹಂತದಲ್ಲಿರುವವರ ಆಶಾಕಿರಣವಾಗಿದೆ ಎಂದು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವ ಕರ್ಮ ಯೋಜನೆಯ ರಾಜ್ಯ ಸಂಚಾಲಕರಾದ ಮಾಜಿ ಸಚಿವ ಎ.ರಾಮದಾಸ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಯೋಜನೆಯ ವಿವರಗಳನ್ನು ನೀಡಿದ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಬೀದಿ ಬದಿ ವ್ಯಾಪಾರಿಗಳ ನೆರವಿನ ಚಿಂತನಡಿಯಡಿ ರೂಪುಗೊಂಡ ಪಿಎಂ ಸ್ವನಿಧಿ ಯೋಜನೆಯಡಿ ಪ್ರಸ್ತುತ ಪತ್ರಿಕಾ ವಿತರಕರು, ವಿವಾಹ ಸಮಾರಂಭಗಳಲ್ಲಿ ಛಾಯಾಚಿತ್ರ ತೆರೆಯುವವರು, ವಿಡಿಯೋಗ್ರಾಫರ್‍ಗಳು, ಹಾಲು ವಿತರಕರು, ಹೂ ಕಟ್ಟುವವರು ಮತ್ತು ಮಾರುವವರು ಹೀಗೆ 23 ವಿವಿಧ ಕ್ಷೇತ್ರಗಳ ಅಸಂಘಟಿತರನ್ನು ಸೇರ್ಪಡೆಗೊಳಿಸಿ, ಅವರಿಗೆ ಯೋಜನೆಯ ನೆರವನ್ನು ವಿಸ್ತರಿಸಲಾಗಿದೆ ಎಂದರು.
ಸ್ವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗೆ ಮೊದಲ ಹಂತದಲ್ಲಿ 10ಸಾವಿರ, ಎರಡನೇ ಹಂತದಲ್ಲಿ 20 ಸಾವಿರ ರೂ., ಮೂರನೇ ಹಂvದಲ್ಲಿ 50ಸಾವಿರ ರೂ. ಮತ್ತು ನಾಲ್ಕನೇ ಹಂತದಲ್ಲಿ ಮುದ್ರಾ ಯೋಜನೆಯಡಿ 10ಲಕ್ಷದವರೆಗೆ ಸಾಲವನ್ನು ಯಾವುದೇ ಗ್ಯಾರಂಟಿ ಇಲ್ಲದೆ ಮಂಜೂರು ಮಾಡಲಾಗುತ್ತದೆ. ಬಡ್ಡಿಯ ದರದಲ್ಲಿ ಶೇ. 7ರಷ್ಟು ಹಣವನ್ನು ಕೇಂದ್ರ ಸರ್ಕಾರವೇ ಬ್ಯಾಂಕ್‍ಗೆ ಭರಿಸುತ್ತದೆ ಎಂದು ಮಾಹಿತಿ ನೀಡಿದರು.
ಪಿಎಂ ಸ್ವನಿಧಿ ಯೋಜನೆಯಡಿ ಕೊಡಗಿನಲ್ಲಿ ಇಲ್ಲಿಯವರೆಗೆ 1776 ಮಂದಿಗೆ ನೆರವನ್ನು ಒದಗಿಸಲಾಗಿದೆ. ಪ್ರಸ್ತುತ ಜಿಲ್ಲೆಯ ಪಟ್ಟಣ ಪಂಚಾಯ್ತಿ ನಗರಸಭೆ ಸೇರಿದಂತೆ ಒಟ್ಟು ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ, ಸ್ವನಿಧಿ ಯೋಜನೆಯಡಿ ಬರುವ ಫಲಾನುಭವಿಗಳ ಸರ್ವೇ ನಡೆಸಿ, ಅರ್ಹ ಫಲಾನುಭವಿಗಳನ್ನು ಯೋಜನೆಗೆ ಒಳಪಡಿಸುವಂತೆ ಸೂಚಿಸಲಾಗಿದೆಯೆಂದು ರಾಮದಾಸ್ ತಿಳಿಸಿದರು.
ಪಿ.ಎಂ.ಸ್ವನಿಧಿ ಫಲಾನುಭವಿಗಳಿಗೆ ಪಿಎಂ ಸುರಕ್ಷಾ ಭೀಮಾ ಯೋಜನೆಯ ಅಡಿಯಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ 20ರೂ.ವಾರ್ಷಿಕ ಚಂದಾಕ್ಕೆ 2 ಲಕ್ಷ , ಅಪಘಾತದಿಂದ ಅಂಗವೈಕಲ್ಯತೆ ಒಳಗಾದಲ್ಲಿ 1 ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಇದರೊಂದಿಗೆ ಪಿ.ಎಂ.ಸುರಕ್ಷಾ ಜೀವನ ಜ್ಯೋತಿ ಯೋಜನೆ, ಪಿ.ಎಂ.ಜನನಿ ಸುರಕ್ಷಾ ಯೋಜನೆ, ಪಿ.ಎಂ. ಮಾತೃವಂದನಾ ಯೋಜನೆ, ಪಿ.ಎಂ.ಶ್ರಮಯೋಗಿ ಮನ್‍ಧನ್ ಯೋಜನೆಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆಂದು ವಿವರಗಳನ್ನಿತ್ತರು.
ಪಿಎಂ ಸ್ವನಿಧಿ ಯೋಜನೆಯಡಿ ರಾಷ್ಟ್ರವ್ಯಾಪಿ 44 ಲಕ್ಷ ಕುಟುಂಬಗಳಿಗೆ ನೆರವನ್ನು ನೀಡಲಾಗಿದ್ದು, 8 ಲಕ್ಷ ಕೋಟಿ ರೂ.ಗಳ ಈ ಯೋಜನೆಯಡಿ 8 ಸಾವಿರ ಕೋಟಿ ರೂ.ಗಳನ್ನು ಪಿಎಂ ಸ್ವನಿಧಿಗೆ ಮೀಸಲಿರಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಯೋಜನೆಯಡಿ 3.10 ಲಕ್ಷ ಜನರಿಗೆ 600 ಕೊಟಿ ರೂ.ಗಳ ನೆರವನ್ನು ಒದಗಿಸಲಾಗಿದೆ. ಆ ಮೂಲಕ ಯೋಜನೆ ಅನುಷ್ಟಾನದಲ್ಲಿ ರಾಜ್ಯ ಇಡೀ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆಯೆಂದು ಸಂತಸ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಅವರ ಹುಟ್ಟಿದ ದಿನವಾದ ಸೆ.17 ರಂದು ‘ವಿಶ್ವ ಕರ್ಮ ಯೋಜನೆ’ ಜಾರಿಗೆ ಬಂದಿದೆ. ಇದು ಕೇವಲ ವಿಶ್ವ ಕರ್ಮ ಸಮಾಜಕ್ಕೆ ಸೀಮಿತವಾಗಿಲ್ಲ. ಬದಲಾಗಿ ಕೈ ಕೆಲಸಗಳಲ್ಲಿ ನಿರತರಾದ 18 ಸಮಾಜಗಳಿಗೆ ಯೋಜನೆ ಅನ್ವಯಿಸುತ್ತದೆ ಎಂದರು.
ಈ ಯೋಜನೆಯಡಿ ಫಲಾನುಭವಿಗಳಿಗೆ ಅವರ ಉದ್ಯೋಗಕ್ಕೆ ಸಂಬಂಧಿಸಿದಂತೆ ಭತ್ಯೆಯೊಂದಿಗೆ ಅಗತ್ಯ ತರಬೇತಿಯನ್ನು ನೀಡಿ, 15 ಸಾವಿರ ರೂ. ಮೌಲ್ಯದ ಟೂಲ್ ಕಿಟ್ ಒದಗಿಸಲಾಗುತ್ತದೆ. ಈ ಯೋಜನೆಯಡಿ ಹೆಸರನ್ನು ಪಿಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಹೆಸರನ್ನು ನೋಂದಾಯಿಸಲು ಅವಕಾಶವನ್ನು ಒದಗಿಸಲಾಗಿದೆ ಎಂದು ಎ.ರಾಮದಾಸ್ ತಿಳಿಸಿದರು.
ಪಿಎಂ ಸ್ವನಿಧಿ ಯೋಜನೆಗಳನ್ನು ಆರಂಭಿಕ ಹಂತರಲ್ಲಿ ರಾಜ್ಯದ 18 ಜಿಲ್ಲೆಗಳಿಗೆ ಸೀಮಿತವಾಗಿ ಜಾರಿಗೆ ತರಲಾಗಿತ್ತು. ಆದರೆ ಡಿ.1 ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳು ಇದರ ವ್ಯಾಪ್ತಿಗೆ ಒಳಪಡುತ್ತದೆಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಎಂಎಲ್‍ಸಿ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಪಂಡ ಕಾಳಪ್ಪ ಹಾಗೂ ಹುಲ್ಲೂರಿಕೊಪ್ಪ ಮಾದಪ್ಪ ಉಪಸ್ಥಿತರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.