Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಚುನಾವಣೆ : ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 992, ಪದವೀಧರರ ಕ್ಷೇತ್ರದಲ್ಲಿ 3003 ಮತದಾರರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಚುನಾವಣೆ : ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 992, ಪದವೀಧರರ ಕ್ಷೇತ್ರದಲ್ಲಿ 3003 ಮತದಾರರು*

ನವೆಂಬರ್ 23, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.23 : 2024 ರ ಜೂನ್, 21 ಕ್ಕೆ ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಅವರು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ನ.6 ರ ವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-18 ಮತ್ತು 19 ರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ 2023 ನ.6 ಕ್ಕೆ 1395 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ 992 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 79 ಅರ್ಜಿಗಳು ವಿವಿಧ ಕಾರಣಗಳಿಂದ ತಿರಸ್ಕøತಗೊಂಡಿವೆ. 189 ಅರ್ಜಿಗಳನ್ನು ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ವರ್ಗಾಯಿಸಲಾಗಿದೆ. 135 ಅರ್ಜಿಗಳನ್ನು ಬೇರೆ ಮತ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ. ಒಟ್ಟಾರೆ 324 ಅರ್ಜಿಗಳನ್ನು ವರ್ಗಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಹಾಗೆಯೇ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ 3521 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ 3,003 ಅರ್ಜಿಗಳು ಅಂಗೀಕಾರವಾಗಿದೆ. 82 ಅರ್ಜಿಗಳು ತಿರಸ್ಕøತಗೊಂಡಿವೆ. ನೈರುತ್ಯ ಪದವೀಧರರ ಕ್ಷೇತ್ರ ವ್ಯಾಪ್ತಿಗೆ 251 ಅರ್ಜಿಗಳನ್ನು ವರ್ಗಾಯಿಸಲಾಗಿದೆ. 185 ಅರ್ಜಿಗಳನ್ನು ಬೇರೆ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ. ಒಟ್ಟಾರೆ 436 ಅರ್ಜಿಗಳನ್ನು ವರ್ಗಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿದರು.
‘ನಮೂನೆ-19 ಮತ್ತು 18 ರ ಅರ್ಜಿಗಳನ್ನು ಡಾಟಾ ಎಂಟ್ರಿ ಮಾಡಿ ಭಾರತ ಚುನಾವಣಾ ಆಯೋಗದ ವೇಳಾ ಪಟ್ಟಿ ಅನುಸಾರ ಗುರುವಾರ(ನ.23) ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ಕೊಡಗು ಜಿಲ್ಲೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 992 ಮಂದಿ ಮತದಾರರು ಇದ್ದಾರೆ. ಇವರಲ್ಲಿ 336 ಪುರುಷ ಮತದಾರರು ಮತ್ತು 656 ಮಹಿಳಾ ಮತದಾರರು ಇದ್ದಾರೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ 294, ಸೋಮವಾರಪೇಟೆ 124, ವಿರಾಜಪೇಟೆ 123, ಕುಶಾಲನಗರ 211, ಪೊನ್ನಂಪೇಟೆ 240 ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 992 ಮತದಾರರು ನೋಂದಣಿ ಆಗಿದ್ದಾರೆ.’
‘ಹಾಗೆಯೇ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 3003 ಮತದಾರರು ಇದ್ದು, 1331 ಪುರುಷ ಮತದಾರರು, 1671 ಮಹಿಳಾ ಮತದಾರರು ಇದ್ದಾರೆ. ಮಡಿಕೇರಿ 928, ಸೋಮವಾರಪೇಟೆ 691, ವಿರಾಜಪೇಟೆ 377, ಕುಶಾಲನಗರ 627, ಪೊನ್ನಂಪೇಟೆ 380 ಮತದಾರರು ನೋಂದಣಿ ಆಗಿದ್ದಾರೆ ಎಂದು ವಿವರಿಸಿದರು.’
‘ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅರ್ಹರು ಇನ್ನೂ ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಗೆ ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಅವರು ಸ್ಪಷ್ಟಪಡಿಸಿದರು.’
ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವವರು ಡಿಸೆಂಬರ್, 9 ರೊಳಗೆ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಾದ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದರು.
ಸ್ವೀಕೃತವಾಗುವ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಡಿಸೆಂಬರ್, 25 ರೊಳಗೆ ವಿಲೇವಾರಿ ಮಾಡಿ ಡಿಸೆಂಬರ್, 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ಸಂಬಂಧಪಟ್ಟ ತಾಲ್ಲೂಕು ಕಚೇರಿಗಳನ್ನು ಸಂಪರ್ಕಿಸಬಹುದು. ಹಾಗೂ ತಿ www.ceokarnataka.kar.nic.in  ವೆಬ್‍ಸೈಟ್‍ನಲ್ಲಿಯೂ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023: ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್, 27 ರಂದು ಪ್ರಕಟಿಸಿದ್ದು, ಅಕ್ಟೋಬರ್, 27 ರಿಂದ ಡಿಸೆಂಬರ್, 09 ರವರೆಗೆ 2024ರ ಜನವರಿ, 01, 2024 ರ ಏಪ್ರಿಲ್, 01, 2024 ರ ಜುಲೈ, 01 ಮತ್ತು 2024 ರ ಅಕ್ಟೋಬರ್, 01 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದು.

ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7 ರಲ್ಲಿ ಆಕ್ಷೇಪಣೆ ಅರ್ಜಿಯನ್ನು ಪಡೆಯಲಾಗುತ್ತದೆ ಎಂದರು.
ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8 ರಲ್ಲಿ ಅರ್ಜಿ ಸ್ವೀಕರಿಸಲಾಗುತ್ತಿದೆ.
ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್(ವೋಟರ್ ಹೆಲ್ಫ್‍ಲೈನ್ ಆ್ಯಪ್) ಹಾಗೂ https://voters.eci.gov.in/ / ವೋಟರ್ಸ್ ಸರ್ವಿಸ್ ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ನೇರವಾಗಿ ಸಲ್ಲಿಸಬಹುದು.
ಡಿಸೆಂಬರ್, 02 ಮತ್ತು ಡಿಸೆಂಬರ್, 03 ರಂದು ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದ್ದು, ನಾಗರಿಕರು ಇದರ ಉಪಯೋಗವನ್ನು ಪಡೆದುಕೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಸಿಕೊಳ್ಳಲು ಸಹ ಕೋರಿದೆ. ನೋಂದಣಿ ಆಗದೆ ಇದ್ದಲ್ಲಿ ನಮೂನೆ-6 ರಲ್ಲಿ ಅರ್ಜಿಯನ್ನು ಸ್ಥಳದಲ್ಲಿಯೇ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.