Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಚಾರ ಮಂಡನೆ, ಸನ್ಮಾನ, “ನಾಡ ಕೊಡಗ್” ಪುಸ್ತಕ ಬಿಡುಗಡೆ : ಮಾತೃಭಾಷೆ ಮೂಲೆ ಗುಂಪಾಗುತ್ತಿದೆ : ರಾಣು ಅಪ್ಪಣ್ಣ ಬೇಸರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಚಾರ ಮಂಡನೆ, ಸನ್ಮಾನ, “ನಾಡ ಕೊಡಗ್” ಪುಸ್ತಕ ಬಿಡುಗಡೆ : ಮಾತೃಭಾಷೆ ಮೂಲೆ ಗುಂಪಾಗುತ್ತಿದೆ : ರಾಣು ಅಪ್ಪಣ್ಣ ಬೇಸರ*

ನವೆಂಬರ್ 24, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.24 : ಪ್ರಸ್ತುತ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವ ಭರದಲ್ಲಿ ಮಾತೃಭಾಷೆಯನ್ನು ಮೂಲೆ ಗುಂಪು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿರುವ ಪೊಮ್ಮಕ್ಕಡ ಪರಿಷತ್‍ನ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ, ಮಕ್ಕಳಲ್ಲಿ ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ಆಸಕ್ತಿ ಹೆಚ್ಚಾಗಬೇಕು ಎಂದು ಕರೆ ನೀಡಿದ್ದಾರೆ.
ವಿರಾಜಪೇಟೆ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್, ಕೊಡವ ಎಂ.ಎ.ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ಮತ್ತು ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಸಭಾಂಗಣದಲ್ಲಿ ನಡೆದ ವಿಚಾರ ಮಂಡನೆ, ಸನ್ಮಾನ ಹಾಗೂ “ನಾಡ ಕೊಡಗ್” ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾಷೆ, ಕಲೆ, ಜನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಮಹಿಳೆಯ ಪ್ರಮುಖ ಪಾತ್ರವಾಗಬೇಕು. ಆದರೆ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ಪದ್ಧತಿ ಪರಂಪರೆಯನ್ನೆ ಮರೆಯುತ್ತಿದ್ದಾರೆ. ತಮ್ಮ ನೆಲವನ್ನು ಇತರರಿಗೆ ಮಾರಿ ಮಣ್ಣಿನ ಸಂಬಂಧವನ್ನು ಕಳೆದುಕೊಳ್ಳುತ್ತಿರುವುದು ವಿಪರ್ಯಸ ಎಂದರು.
ಕೊಡವ ಜನಾಂಗ ವಿಶಿಷ್ಟ ಸಂಸ್ಕೃತಿ, ಪದ್ಧತಿಯನ್ನು ಹೊಂದಿರುವ ಜನಾಂಗ. ಕೊಡವ ಬುಡಕಟ್ಟು ಸಮುದಾಯವಾದರೂ ಇಂದು ಸುಧಾರಿತ ಜನಾಂಗವೆಂದು ಗುರುತಿಸಿಕೊಂಡಿರುವುದು ಶ್ಲಾಘನೀಯ. ಬುಡಕಟ್ಟು ಸಮುದಾಯದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಭಾಷೆ ಬಹಳ ಮುಖ್ಯ. ಆದರೆ ಪಾಶ್ಚಿಮಾತ್ಯದ ವ್ಯಾಮೋಹದಿಂದ ನಮ್ಮ ನೆಲ, ಸಂಸ್ಕೃತಿಯನ್ನು ಬಿಟ್ಟು ವಿದೇಶಿಗರ ಸಂಸ್ಕೃತಿಗೆ ಮಾರು ಹೋಗುತ್ತಿದ್ದು, ವಿದೇಶಗಳಿಗೆ ತೆರಳುತ್ತಿದ್ದಾರೆ. ಇದು ನಮ್ಮ ಸಂಸ್ಕೃತಿಯ ನಾಶಕ್ಕೆ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟರು.
ಪೋಷಕರು ಪಾಶ್ಚಿಮಾತ್ಯ ಭಾಷೆಗೆ ಆದ್ಯತೆ ನೀಡದೆ ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಿದರೆ ನಿರಂತರ ಅನುಕರಣೆಯಿಂದ ಸಂಸ್ಕೃತಿ, ಆಚಾರ, ವಿಚಾರ, ಶೌರ್ಯ, ಸಾಹಸವನ್ನು ತಿಳಿದುಕೊಳ್ಳುತ್ತಾರೆ ಎಂದರು.
ಇಂದು ಸಾಮಾಜಿಕ ಕಟ್ಟುಪಾಡುಗಳು ಸಡಿಲಗೊಂಡಿದೆ, ಐನ್‍ಮನೆಗಳು ನಾಶವಾಗುತ್ತಿವೆ. ಸಂಸ್ಕೃತಿ ಎಂಬುದು ನಿಧಿ ಇದ್ದಂತೆ, ಕೊಡವರಿಗೆ ಕೊಡವ ಸಂಸ್ಕೃತಿಯೇ ಆಧಾರ. ನಮ್ಮದು ಜಗ ಮೆಚ್ಚಿದ ಸಂಸ್ಕೃತಿ, ಅದನ್ನು ರಕ್ಷಣೆ ಮಾಡಿ ಮುಂದಿನ ಯುವ ಪೀಳಿಗೆಗೆ ಉಳಿಸಬೇಕು. ಭಾಷೆ, ಸಾಹಿತ್ಯ, ಸಂಸ್ಕೃತಿ ಮೂಲ ಸ್ಥಾನವೇ ಮನೆ. ಬೇರೆ ಭಾಷೆಗಳನ್ನು ಕಲಿಯಲು ಬೇಕಾದಷ್ಟು ಅವಕಾಶಗಳಿವೆ. ಆದರೆ ಮಾತೃಭಾಷೆಯನ್ನು ಮನೆಯಿಂದಲೇ ಬೆಳೆಸಬೇಕು ಎಂದು ರಾಣು ಅಪ್ಪಣ್ಣ ಕರೆ ನೀಡಿದರು.
ನಿರ್ಮಾಪಕ, ನಿರ್ದೇಶಕ, ನಟ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಬರೆದಿರುವ ಕೊಡವ ಮಕ್ಕಡ ಕೂಟದ 76ನೇ ಪುಸ್ತಕ “ನಾಡ ಕೊಡಗ್” ನ್ನು ಬಿಡುಗಡೆಗೊಳಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ಹಾಗೂ ಎಂ.ಎ.ಕೊಡವ ಉಪನ್ಯಾಸಕ ಬಾಚರಣಿಯಂಡ ಅಪ್ಪಣ್ಣ, ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಕ್ಷೇತ್ರ ಬೆಳೆದಿದ್ದು, ಬರಹಗಾರರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಓದುಗರ ಸಂಖ್ಯೆ ಕಡಿಮೆಯಾಗಿರುವುದು ವಿಪರ್ಯಸ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರತಿಯೊಬ್ಬರು ಪುಸ್ತಕವನ್ನು ಹೆಚ್ಚು ಕೊಂಡುಕೊಳ್ಳುವ ಮೂಲಕ ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಸಾಹಿತ್ಯ ಬೆಳೆಯಬೇಕು, ಕೊಡವಾಮೆಯನ್ನು ಬೆಳೆಸಬೇಕು ಎಂದ ಅವರು, ಕೊಡವ ಎಂ.ಎ. ವಿದ್ಯಾರ್ಥಿಗಳು ಸಾಹಿತ್ಯ ಲೋಕಕ್ಕೆ ಪದಾರ್ಪಣೆ ಮಾಡಿ, ಕೊಡವ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರವಾಹಿಸಿದ್ದು, ಮುಂದಿನ ದಿನಗಳಲ್ಲಿ ಸಾಹಿತ್ಯ ಲೋಕದ ಬೆಳವಣಿಗೆಗೆ ಮತ್ತಷ್ಟು ಕೊಡುಗೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ. ಮಾತನಾಡಿ, ಕಾಲೇಜ್‍ನಲ್ಲಿ ಎಂ.ಎ.ಕೊಡವ ಪ್ರಾರಂಭವಾದ ನಂತರ ಗಮನಾರ್ಹ ಬದಲಾವಣೆಯಾಗುತ್ತಿದೆ. ಹಿರಿಯರ ಮಾರ್ಗದರ್ಶನ ಹಾಗೂ ಕಿರಿಯರ ಉತ್ಸಾಹದಿಂದ ಪುಸ್ತಕಗಳನ್ನು ಅನಾವರಣಗೊಳಿಸಲಾಗಿದ್ದು, ಇದೇ ಮೊದಲ ಬಾರಿಗೆ ಕೃತಿ ರಚಿಸಿ ಪದವಿ ಪಡೆದಿರುವುದು ಶ್ಲಾಘನೀಯ. ಇದು ಶೈಕ್ಷಣಿಕ ಇತಿಹಾಸದಲ್ಲಿ ಉತ್ತಮ ಸಾಧನೆ ಎಂದರು.
ಸಂಸ್ಕೃತಿ  ಉಳಿದು, ಬೆಳವಣಿಗೆ ಕಾಣಬೇಕಾದರೆ ಸಾಹಿತಿಗಳ ಕೊಡುಗೆ ಅಪಾರ. ತಾಯಿಯನ್ನೇ ದೇವರು ಎಂದು ಪೂಜಿಸುವ ಸಂಸ್ಕೃತಿ ನಮ್ಮ ದೇಶದ್ದು. ಆದ್ದರಿಂದ ನಮ್ಮ ಸಂಸ್ಕೃತಿಯನ್ನು ಬೆಳೆಸಲು ತಾಯಿಯ ಪಾತ್ರ ಪ್ರಮುಖವಾಗಿದೆ. ಸಾಹಿತ್ಯ ಎನ್ನುವುದು ವ್ಯಕ್ತಿತ್ವವವನ್ನು ರೂಪಿಸುವಂತದ್ದು, ವಿದ್ಯಾರ್ಥಿಗಳು ಮೊಬೈಲ್ ಗಳನ್ನು ಬಿಟ್ಟು ಓದಿನೆಡೆಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಕರೆ ನೀಡಿದರು.
ಕೊಡವ ಎಂ.ಎ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ ಮಾತನಾಡಿ, ಕಾರ್ಯಪ್ಪ ಕಾಲೇಜ್‍ನಲ್ಲಿ ಎಂ.ಎ ಕೊಡವ ಪದವಿಯನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡಿದ್ದಾರೆ. ಪುಸ್ತಕ ರಚಿಸಿ ಬಿಡುಗಡೆ ಮಾಡುವ ಮೂಲಕ ಯುವಕ, ಯುವತಿಯರಿಗೆ ಮಾದರಿಯಾಗಿದ್ದಾರೆ. ಕೊಡವ ಸಾಹಿತ್ಯ, ಭಾಷೆ ಹಾಗೂ ಬರಹವನ್ನು ಬೆಳೆಸಲು ಎಲ್ಲರು ಮುಂದಾಗಬೇಕು ಎಂದರು.
ಕೊಡವ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಎಂ.ಎ ಕೊಡವಕ್ಕೆ ಸೇರುವಂತೆ ಮನವಿ ಮಾಡಿದ ಅವರು, ಕೊಡವ ಎಂ.ಎ ನಂತರ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿದೆ ಎಂದು ತಿಳಿಸಿದರು.
“ನಾಡ ಕೊಡಗ್” ಪುಸ್ತಕದ ಬರಹಗಾರ, ನಿರ್ಮಾಪಕ, ನಿರ್ದೇಶಕ, ನಟ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಮಾತನಾಡಿ, ಪುಸ್ತಕದ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳು ನಿರಂತರ ಮೊಬೈಲ್ ಬಳಕೆಯಿಂದ ಹೊರ ಬಂದು ಕಲೆ, ಸಂಸ್ಕೃತಿಗೆ ಹೆಚ್ಚು ಒತ್ತು ನೀಡಬೇಕು, ಹೆಚ್ಚು ಹೆಚ್ಚು ಬರೆಯುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ಸಲಹೆ ನೀಡಿದರು.
ಕೊಡವ ಎಂ.ಎ.ವಿದ್ಯಾರ್ಥಿ ಐಚಂಡ ರಶ್ಮಿ ಮೇದಪ್ಪ “ನಂಗಡ ಮಕ್ಕಳ ಸಂಸ್ಕಾರವಂತಂಗಳಾಯಿತ್ ಬೊಳ್ತುವಲ್ಲಿ ಅವ್ವಂಗಡ ಪಾತ್ರ” ಎಂಬ ವಿಷಯದ ಕುರಿತು ವಿಚಾರ ಮಂಡನೆ ಮಾಡಿದರು.
::: ಸನ್ಮಾನ :::
ಕೊಡವ ಎಂ.ಎ ವಿದ್ಯಾರ್ಥಿಗಳಾದ ಬೊಪ್ಪಂಡ ಶ್ಯಾಮ್ ಪೂಣಚ್ಚ, ಲೆ.ಕರ್ನಲ್ ಬಿ.ಎಂ.ಪಾರ್ವತಿ, ಐಚಂಡ ರಶ್ಮಿ ಮೇದಪ್ಪ, ಪುತ್ತರಿರ ವನಿತ ಮುತ್ತಪ್ಪ,  ಬೊಳ್ಳಾರ್ ಪಂಡ  ಎನ್.ಹೇಮಾವತಿ (ಜಾನ್ಸಿ), ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಚೌಂಡಿರ ಶಿಲ್ಪ ಪೊನ್ನಪ್ಪ, ಬೊಳ್ಳಜಿರ ಯಮುನಾ ಅಯ್ಯಪ್ಪ, ಕರವಂಡ ಸೀಮಾ ಗಣಪತಿ ಅವರನ್ನು ಗಣ್ಯರು ಸನ್ಮಾನಿಸಿ, ಗೌರವಿಸಿದರು.
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಉಪಾಧ್ಯಕ್ಷೆ ಪೂವಿ ಮುತ್ತಪ್ಪ, ಖಜಾಂಚಿ ಮೂವೇರ ಧರಣಿ ಗಣಪತಿ ಉಪಸ್ಥಿತರಿದ್ದರು. ಎಂ.ಎ ವಿದ್ಯಾರ್ಥಿಗಳಾದ ಚಿಯಕ್‍ಪೂವಂಡ ಶ್ವೇತನ್ ಚೆಂಗಪ್ಪ ಪ್ರಾರ್ಥಿಸಿದರು. ಕರವಂಡ ಸೀಮಾ ಗಣಪತಿ ಸ್ವಾಗತಿಸಿ, ಬೊಳ್ಳಜಿರ ಯಮುನಾ ಅಯ್ಯಪ್ಪ ನಿರೂಪಿಸಿದರು. ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನಿರ್ದೇಶಕಿ ತಿತೀರ ಊರ್ಮಿಳ ಸೋಮಯ್ಯ ವಂದಿಸಿದರು.
ಬೊಪ್ಪಂಡ ಶ್ಯಾಮ್ ಪೂಣಚ್ಚ ಅವರು ನಿರ್ದೇಶಕ ಪ್ರಕಾಶ್ ಕಾರ್ಯಪ್ಪ ಅವರ ವ್ಯಕ್ತಿ ಪರಿಚಯ ಮಾಡಿ, ವಿದ್ಯಾರ್ಥಿಗಳ ಪರವಾಗಿ ಅನಿಸಿಕೆ ವ್ಯಕ್ತಪಡಿಸಿದರು. ಸಭಾ ಕಾರ್ಯಕ್ರಮದ ನಂತರ ಕರವಂಡ ಪದ್ಮಿತಾ ತಂಗಮ್ಮ, ಕರವಂಡ ಕಲ್ಪಿತ ಮುತ್ತಮ್ಮ ನ್ಯತ್ಯ ಪ್ರದರ್ಶಿಸಿ ಗಮನ ಸೆಳೆದರು. ಕೊನೆಯಲ್ಲಿ ಆಶುಭಾಷಣ ಸ್ಪರ್ಧೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.