Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಂಭ್ರಮದ ಓಣಂ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಂಭ್ರಮದ ಓಣಂ ಆಚರಣೆ*

ನವೆಂಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.27 : ಜನಾಂಗಗಳ ನಡುವಿನ ಸಂಸ್ಕೃತಿ, ಆಚಾರ-ವಿಚಾರದಲ್ಲಿ, ಬದಲಾವಣೆಗಳಿರಬಹುದು. ಆದರೆ, ದೇಶದ ರಕ್ಷಣೆ ವಿಚಾರ ಎಂದು ಬಂದರೆ ‘ನಾವೆಲ್ಲ ಒಂದು, ನಾವೆಲ್ಲ ಬಂಧು’ ಎಂಬ ಮನಸ್ಥಿತಿ ಹೊಂದಬೇಕು ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದರು.

ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಹಿಂದೂ ಮಲಯಾಳಿ ಸಂಘದ ವತಿಯಿಂದ ಓಣಂ ಹಬ್ಬದ ಅಂಗವಾಗಿ ಆಯೋಜಿಸಿದ್ದ ‘ಓಣಾಘೋಷಂ-ಓಣಂ ಸದ್ಯ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು.

ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿದೆ. ಸಂವಿಧಾನ ಮೂಲಕ ಆಡಳಿತ ವ್ಯವಸ್ಥೆ ಕೆಲಸ ಮಾಡುತ್ತಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು. ದೇಶದ ಏಕತೆ, ಅಖಂಡತೆ, ಸಮಗ್ರತೆ ಕಾಪಾಡುವುದು ನಮ್ಮ ಆದ್ಯತೆಯಾಗಬೇಕು. ದೇಶದ ರಕ್ಷಣೆಗೆ ಪಣ ತೊಡಬೇಕು ಎಂದು ಕರೆ ನೀಡಿದರು.

ಸಂಘಟನಾತ್ಮಕವಾಗಿದ್ದರೆ ಮಾತ್ರ ನಮ್ಮ ಬೇಡಿಕೆಗಳು ಈಡೇರಿಕೆ ಸಾಧ್ಯ ಎಂದ ಅವರು, ಆಚಾರ-ವಿಚಾರ ಉಳಿಸಿ, ಬೆಳೆಸಬೇಕು. ಮತಾಂತರ ಆಮಿಷಗಳಿಗೆ ಬಲಿಯಾಗಬಾರದು ಎಂದು ಹೇಳಿದರು.

‘ಮಾಜಿ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ನಮ್ಮ ಸಂಸ್ಕೃತಿಯನ್ನು ಮೊದಲು ಗೌರವಿಸಬೇಕು. ಆಗ ಮಾತ್ರ ಜನಾಂಗದ ಅಸ್ತಿತ್ವ ಉಳಿಯುತ್ತದೆ. ಕೊಡಗಿಗೂ ಕೇರಳಕ್ಕೂ ಅವಿನಾಭಾವ ಸಂಬಂಧವಿದೆ. ಧಾರ್ಮಿಕ ವಿಚಾರದಲ್ಲಿ ಕೊಡಗಿನೊಂದಿಗೆ ಕೇರಳ ಜನರು ಬೆರೆತಿದ್ದಾರೆ. ಕೊಡವ ಭಾಷೆಯಲ್ಲೂ ಮಲಯಾಳ ಭಾಷೆ ಪದಗಳಿವೆ. ಇದು ಮಲಯಾಳಿ- ಕೊಡವರ ಅನ್ನೋನ್ಯಕ್ಕೆ ಸಾಕ್ಷಿ. ಆರ್ಥಿಕ, ಶೈಕ್ಷಣಿಕರಾಗಿ ಸಬಲರನ್ನಾಗಿ ಮಾಡಲು ಸಂಘ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಮಾತನಾಡಿ, ಒಗ್ಗಟ್ಟು ಮನೋಭಾವದಿಂದ ಸುಭದ್ರ ಭಾರತ ನಿರ್ಮಾಣ ಸಾಧ್ಯ ಸಂಘಟನೆಗಳ ಮೂಲಕ ಜನಾಂಗದ ಆಚಾರ-ವಿಚಾರ ಉಳಿಸಿ, ಬೆಳೆಸುವ ಕೆಲಸವಾಗುತ್ತದೆ ಎಂದರು.

ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಓಣಂ ನೆಪದಲ್ಲಿ ಜನಾಂಗ ಬಾಂಧವರು ಸೇರಲು ವೇದಿಕೆಯಾಗಿದೆ. ಸಂಘ ಸ್ಥಾಪನೆಯಾಗಿ ಹಲವು ವರ್ಷ ಕಳೆದಿದೆ. ವರ್ಷದಿಂದ ವರ್ಷಕ್ಕೆ ಕಾರ್ಯಚಟುವಟಿಕೆ ಹೆಚ್ಚಾಗಿದೆ. ವರ್ಷಕ್ಕೆ 14 ಕಾರ್ಯಕ್ರಮ ನಡೆಸಲಾಗುತ್ತದೆ. ಒಗ್ಗೂಡುವಿಕೆ ಸಂಘದ ಉದ್ದೇಶ. ಮರಣನಿಧಿಯನ್ನು ಸಂಘದ ಸದಸ್ಯರ ಕುಟುಂಬಕ್ಕೆ ಮಾತ್ರ ನೀಡಲು ನಿರ್ಧರಿಸಲಾಗಿದೆ. ಜನಾಂಗದ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಆರ್.ವಾಸುದೇವ್, ನಗರಸಭಾ ಮಾಜಿ ಸದಸ್ಯರಾದ ಕೆ.ಎಂ.ಗಣೇಶ್, ಉಣ್ಣಿಕೃಷ್ಣ, ಮಾಜಿ ಸೈನಿಕ, ಕಾವೇರಿ ಗ್ರೂಪ್ ವ್ಯವಸ್ಥಾಪಕ ಗಣೇಶ್, ಮುತ್ತಪ್ಪ ದೇವಾಲಯ ಅಧ್ಯಕ್ಷ ಟಿ.ಕೆ.ಸುಧೀರ್, ಖಜಾಂಚಿ ಕೆ.ಟಿ.ಉತ್ತಮ್ಮನ್ ಹಾಜರಿದ್ದರು.
ದೀಪ್ತಿ ಧರ್ಮೇಂದ್ರ ಪ್ರಾರ್ಥಿಸಿ, ಪ್ರಧಾ ಕಾರ್ಯದರ್ಶಿ ಕೆ.ವಿ.ಧರ್ಮೇಂದ್ರ ಸ್ವಾಗತಿಸಿ, ಅಶೋಕ್ ವಂದಿಸಿದರು.

ಆಕರ್ಷಕ ಮೆರವಣಿಗೆ : ನಗರದ ಗಾಂದಿ ಮೈದಾನ ದಲ್ಲಿ ಮುಖ್ಯಬೀದಿಯಲ್ಲಿ ಸಾಗಿದ ಮೆರವಣಿಗೆ ಆಕರ್ಷಕವಾಗಿ ಮೂಡಿಬಂತು. ಸಾಂಪ್ರದಾಯಿಕ ಉಡುಗೆ ತೊಟ್ಟು ಪುರುಷ ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಜೊತೆಗೆ ಪುಟಾಣಿಗಳು ಛದ್ಮವೇಷ ಧರಿಸಿ ಗಮನಸೆಳೆದರು. ಮೆರವಣಿಗೆಯಲ್ಲಿ ವಿಶೇಷವಾಗಿ ಸಂವಿಧಾನ ಪೀಠಿಕೆ ಇರುವ ರಥ ಸಾಗಿತು. ಇದರೊಂದಿಗೆ ಕೇರಳದ ಚಂಡೆ ವಾದ್ಯ ಆಕರ್ಷಕವಾಗಿತ್ತು. ಕಾವೇರಿ ಹಾಲ್‍ನಲ್ಲಿ ಮಹಿಳೆಯರು ರಚಿಸಿದ್ದ ಹೂವಿನ ರಂಗೋಲಿಗಳು (ಪೊಕೊಳಂ) ಜನಮನ ಸೆಳೆದವು.

ಸಾಂಸ್ಕೃತಿಕ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ :: ಕಾರ್ಯಕ್ರಮದ ಅಂಗವಾಗಿ ಮಹಿಳೆಯರು, ಮಕ್ಕಳಿಂದ ಮೂಡಿಬಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜಿಸಿದವು. ಕೇರಳದ ಸಾಂಪ್ರದಾಯಕ ನೃತ್ಯಗಳು ಮೂಡಿಬಂದವು. ಇದೇ ಸಂದರ್ಭ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಸಬ್ ಜೂನಿಯರ್ ಹಾಕಿ ತಂಡವನ್ನು ಪ್ರತಿನಿಧಿಸಿದ ತೃಪ್ತ ಅವರನ್ನು ಇದೇ ವೇಳೆ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಂದಿ ಓಣಂ ವಿಶೇಷ ಬೋಜನ ಸವಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.