Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*“ಕೊಡವ” ಪದ ಬಳಕೆ : ಸಿಎನ್‍ಸಿ ಹೋರಾಟಕ್ಕೆ ದೊರೆತ ಐತಿಹಾಸಿಕ ಗೆಲುವು : ದೋಷಗಳನ್ನು ಸರಿಪಡಿಸಲು ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*“ಕೊಡವ” ಪದ ಬಳಕೆ : ಸಿಎನ್‍ಸಿ ಹೋರಾಟಕ್ಕೆ ದೊರೆತ ಐತಿಹಾಸಿಕ ಗೆಲುವು : ದೋಷಗಳನ್ನು ಸರಿಪಡಿಸಲು ಒತ್ತಾಯ*

ಡಿಸೆಂಬರ್ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.8 : ಸರ್ಕಾರಿ ದಾಖಲೆಗಳಲ್ಲಿ “ಕೊಡವ” ಪದ ಬಳಕೆಯ ಕ್ರಮವನ್ನು ರಾಜ್ಯ ಗೆಜೆಟ್‍ನಲ್ಲಿ ಅಧಿಕೃತವಾಗಿ ನಮೂದಿಸುವಾಗ “ಕೆ” ಆವೃತ್ತಿಯ “ಕೊಡವ” ಪದವನ್ನು ಮಾತ್ರ ದಾಖಲಿಸಿ, “ಸಿ” ಆವೃತ್ತಿಯ “ಕೊಡವ” ಪದವನ್ನು ಉಲ್ಲೇಖಿಸಿಲ್ಲ. ಅರ್ಜಿದಾರ ಸಂಘಟನೆಯ ಹೆಸರನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಗೆ ಬದಲಾಗಿ “ರಾಷ್ಟ್ರೀಯ ಕೊಡವ ಪರಿಷತ್ತು” ಎಂದು ವಿಕೃತಿಗೊಳಿಸಲಾಗಿದೆ. ಈ ದೋಷಗಳನ್ನು ಸರಿಪಡಿಸದಿದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡವ ನ್ಯಾಷನಲ್ ಕೌನ್ಸಿಲ್/ಸಿಎನ್‍ಸಿ ಸಂಘಟನೆಯ 14 ವರ್ಷಗಳ ಸುದೀರ್ಘ ರಾಜಕೀಯ ಮತ್ತು ಕಾನೂನು ಹೋರಾಟದ ನಂತರ ಸರ್ಕಾರಿ ದಾಖಲೆಗಳಲ್ಲಿ “ಕೊಡವ” ಪದ ಬಳಕೆಯ ಕ್ರಮವನ್ನು ರಾಜ್ಯ ಗೆಜೆಟ್‍ನಲ್ಲಿ ನಮೂದಿಸಲಾಗಿದೆ. ಕೊಡವ ಹೆಗ್ಗುರುತನ್ನು ಶಾಸನಬದ್ಧವಾಗಿ ಅನುಮೋದಿಸುವ ಮತ್ತು ಎಲ್ಲಾ ಕ್ಷೇತ್ರದಲ್ಲಿ ಕೊಡವ ಅಸ್ತಿತ್ವವನ್ನು ಮರುಸ್ಥಾಪಿಸುವ ಪ್ರಕ್ರಿಯೆ ಸಿಎನ್‍ಸಿಯ ದೊಡ್ಡ ಸಾಧನೆಯಾಗಿದೆ.
‘ಕೊಡಗರು’ ಬದಲಿಗೆ ತನ್ನ ಶಾಸ್ತ್ರೀಯ ನಾಮಕರಣ “ಕೊಡವ” ಎಂದು ಮರುಸ್ಥಾಪಿಸುವಲ್ಲಿ ತೊಡಗಿಸಿಕೊಂಡ ಎಲ್ಲರಿಗೂ ಸಿಎನ್‍ಸಿ ಕೃತಜ್ಞತೆ ಸಲ್ಲಿಸುತ್ತದೆ. ಮುಖ್ಯವಾಗಿ ಆಗಿನ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಹಾಗೂ ಬಹುಕಾಲದ ಗೆಳೆಯರಾದ ಡಾ.ಸಿ.ಎಸ್.ದ್ವಾರಕಾನಾಥ್ ಅವರಿಗೆ ನಮ್ಮ ವಿಶೇಷ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು.
ಸರ್ಕಾರದ ಈ ಕ್ರಮ ನಮಗೆ ಸಂತೋಷವನ್ನು ತಂದಿದೆ, ಆದರೆ ಇದನ್ನು ಸಂಭ್ರಮಿಸಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಡಾ.ದ್ವಾರಕಾನಾಥ್ ಆಯೋಗದ ವರದಿ ಮತ್ತು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಆದೇಶದ ಪ್ರಕಾರ, “ಕೊಡವ” ನಾಮಕರಣವು ರಾಜ್ಯ ಗೆಜೆಟ್‍ನಲ್ಲಿ ಅಧಿಕೃತವಾಗಿ ಪ್ರವೇಶಿಸಿತು, ಇದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಪ್ರಯತ್ನದ ಫಲವಾಗಿದೆ.
ನಾವು ಸಂತೋಷವನ್ನು ಮಾತ್ರ ವ್ಯಕ್ತಪಡಿಸುತ್ತಿದ್ದೇವೆ, ಆದರೆ ಸಂಭ್ರಮಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಗೆಜೆಟ್‍ನಲ್ಲಿ ವಿಷಯವನ್ನು ನಮೂದಿಸುವಾಗ, “ಕೆ” ಆವೃತ್ತಿಯ “ಕೊಡವ” ಪದವನ್ನು ಮಾತ್ರ ದಾಖಲಿಸಿ, “ಸಿ” ಆವೃತ್ತಿಯ “ಕೊಡವ” ಪದವನ್ನು ಉಲ್ಲೇಖಿಸಿಲ್ಲ. ಇದು ಡಾ.ದ್ವಾರಕಾನಾಥ್ ಆಯೋಗದ ವರದಿಯ ತಿರುಳು ಮತ್ತು ಆತ್ಮದ ಉಲ್ಲಂಘನೆಯಾಗಿದೆ. ಸುದೀರ್ಘ ಹೋರಾಟದ ರುವಾರಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಹೆಸರನ್ನು ಗೆಜೆಟ್‍ನಲ್ಲಿ ಅರ್ಥಹೀನಗೊಳಿಸಲಾಗಿದೆ.
WP  ಸಂಖ್ಯೆ 48624/ 2016 [GM]  ಜೊತೆಗೆ ಅರ್ಜಿದಾರರ ಸಂಘಟನೆಯ ಹೆಸರನ್ನು “ರಾಷ್ಟ್ರೀಯ ಕೊಡವ ಪರಿಷತ್ತು” ಎಂದು ಉಲ್ಲೇಖಿಸಿ ವಿಕೃತಗೊಳಿಸಲಾಗಿದೆ. ಇದು 2021 ಡಿ.8 ರಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಹೊರಡಿಸಿದ ಹೈಕೋರ್ಟ್‍ನ ಆದೇಶಕ್ಕೆ ಸ್ಪಷ್ಟ ಅಗೌರವ ತೋರಿದ ಬೆಳವಣಿಗೆಯಾಗಿದೆ ಎಂದು ನಾಚಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಇದು ಕಾನೂನು ವ್ಯಾಪ್ತಿಯನ್ನು ಮೀರಿದ ಉದ್ದೇಶಪೂರ್ವಕ ಪ್ರಕ್ರಿಯೆಯೇ ? ಅಥವಾ ತಪ್ಪಾಗಿ ನಡೆದ ವಿದ್ಯಮಾನವೊ ಎಂಬುವುದನ್ನು ನಮಗೆ ಸ್ಪಷ್ಟಪಡಿಸಬೇಕು. ಈ ದೋಷಗಳನ್ನು ಸರಿಪಡಿಸಿದ ನಂತರವೇ, ಸಿಎನ್‍ಸಿ ಸಂಭ್ರಮಿಸಲು ಸಾಧ್ಯ. ಕೊಡವ ನ್ಯಾಷನಲ್ ಕೌನ್ಸಿಲ್ ನ ಅವಿರತ ಮಹಾಸೇವೆಗಾಗಿ ಅದು ನೇರ ಶ್ರೇಯಸ್ಸನ್ನು ಬಯಸುತ್ತದೆ. ಪರೋಕ್ಷ ಅಥವಾ ರಹಸ್ಯ ಶ್ರೇಯಸ್ಸು ನಮಗೆ ಬೇಕಿಲ್ಲ. ಇದು ನಮ್ಮ ನ್ಯಾಯಯುತವಾದ ಹಕ್ಕು ಹೊರತು ಭಿಕ್ಷೆಯಲ್ಲ ಎಂದು ಪ್ರತಿಪಾದಿಸಿದರು.
ದೋಷಗಳನ್ನು ಶೀಘ್ರ ಸರಿಪಡಿಸದಿದ್ದರೆ, ಸಿಎನ್‍ಸಿ ನ್ಯಾಯಾಂಗ ಮೂಲಕ ನ್ಯಾಯ ಪಡೆಯಲು ಹಿಂಜರಿಯುವುದಿಲ್ಲ. ಈ ಪ್ರಕ್ರಿಯೆ ವಿಳಂಬವಾದರೆ ನ್ಯಾಯಕ್ಕಾಗಿ ಕಾನೂನು ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಡಾ.ದ್ವಾರಕಾನಾಥ್ ಹೊರತುಪಡಿಸಿ, ಇನ್ಯಾರೇ ಆಗಿದ್ದರೂ ಕೊಡವರ ಪರವಾಗಿ ವರದಿ ನ್ಯಾಯಯುತವಾಗಿ ಬರುತ್ತಿರಲಿಲ್ಲ. ಸಿಎನ್‍ಸಿಯ ನ್ಯಾಯವಾದಿಗಳಾದ ಹೈಕೋರ್ಟ್ ವಕೀಲ ಬಲ್ಲಚಂಡ ಬೊಳ್ಳಿಯಪ್ಪ ಅವರು ಯಾವುದೇ ರಾಜಿಯಿಲ್ಲದೆ ನಿರಂತರವಾಗಿ ಕಾನೂನು ಹೋರಾಟವನ್ನು ರೂಪಿಸಿದರು. ಮಹತ್ವದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್‍ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್, ಕೆಎಸ್‍ಬಿಸಿಯ ಇಂದಿನ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಸಿಎನ್‍ಸಿ ಒಡನಾಡಿಗಳು, ನನ್ನೊಂದಿಗೆ ಅಚಲವಾಗಿ ನಿಂತ ಸ್ವಯಂಸೇವಕರು, ಹಿತೈಷಿಗಳು ಹಾಗೂ ಬೆಂಬಲಿಗರೆಲ್ಲರು ಸಿಎನ್‍ಸಿ ಹೋರಾಟಕ್ಕೆ ಸಿಕ್ಕ ಜಯಕ್ಕೆ ಕಾರಣಕರ್ತರಾಗಿದ್ದಾರೆ. ಇವರೆಲ್ಲರ ಒಳಿತಿಗಾಗಿ ಕೊಡವರ ಕುಲದೇವಿ ಕಾವೇರಿ ಮಾತೆಯಲ್ಲಿ ಪ್ರಾರ್ಥಿಸುವುದಾಗಿ ನಾಚಪ್ಪ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.