Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮಾನವ ಹಕ್ಕುಗಳ ದಿನಾಚರಣೆ : ಸಮಾಜದಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತಿದೆ : ನ್ಯಾಯಾಧೀಶ ಶಾಮ್ ಪ್ರಸಾದ್ ಅಭಿಪ್ರಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮಾನವ ಹಕ್ಕುಗಳ ದಿನಾಚರಣೆ : ಸಮಾಜದಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತಿದೆ : ನ್ಯಾಯಾಧೀಶ ಶಾಮ್ ಪ್ರಸಾದ್ ಅಭಿಪ್ರಾಯ*

ಡಿಸೆಂಬರ್ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.12 : ಇತ್ತೀಚಿನ ದಿನಗಳಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತಿದ್ದು, ಸ್ವಾರ್ಥ ಹೆಚ್ಚಾಗುತ್ತಿದೆ. ಇದು ಸಮಾಜದ ಅಭಿವೃದ್ಧಿಗೆ ಪೂರಕವಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೆಚ್.ಸಿ.ಶಾಮ್ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಸಹ ಇತರರಂತೆ ಬದುಕಬೇಕೆಂಬುದು ಎಲ್ಲರಲ್ಲಿಯೂ ಬರಬೇಕು. ಆದರೆ ನಾನು ಬದುಕಿದರೆ ಸಾಕು, ಇತರರು ಹೇಗಿದ್ದಾರೋ ಹಾಗೆಯೇ ಇರಲಿ ಎಂಬುದು ಹೆಚ್ಚಾಗುತ್ತಿದೆ. ಇದು ಸಮಾಜದ ಅಭಿವೃದ್ಧಿಗೆ ಒಳ್ಳೆಯದಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಪ್ರತಿಪಾದಿಸಿದರು.
ಮಾನವ ಹಕ್ಕು ಉಲ್ಲಂಘನೆಯು ಸುಸಂಸ್ಕøತರಲ್ಲಿ ಹೆಚ್ಚಾಗುತ್ತಿದೆ. ದೌರ್ಜನ್ಯಗಳು ಹೆಚ್ಚು ತಿಳಿದವರಿಂದಲೇ ಆಗುತ್ತಿದೆ ಎಂದರೆ ಅತಿಶಯೋಕ್ತಿಯಲ್ಲ ಎಂದರು.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಅವರು ತಮ್ಮ ತಮ್ಮ ಕಾಲ ಘಟ್ಟದಲ್ಲಿ ಸಮಾಜದ ಏಳಿಗೆಗೆ ಹೋರಾಟ ಮಾಡಿದ್ದಾರೆ. ಸಾಮರಸ್ಯದ ಬದುಕು ಮತ್ತು ಸಮಾನತೆಗಾಗಿ ದುಡಿದಿದ್ದಾರೆ ಎಂದು ಶಾಮ್ ಪ್ರಸಾದ್  ಸ್ಮರಿಸಿದರು.
ರಾಷ್ಟ್ರದಲ್ಲಿ ಸಂವಿಧಾನವಿದೆ, ಕಾನೂನುಗಳಿವೆ. ಆದರೂ ಸಹ ಅಮಾನವೀಯ ಘಟನೆಗಳು, ದೌರ್ಜನ್ಯಗಳು ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯನ್ನು ಬೆತ್ತಲೆ ಮೆರವಣಿಗೆ ಮಾಡಿರುವುದು ಅಮಾನವೀಯ ಘಟನೆಯಾಗಿದೆ. ಗುಜರಾತ್ ರಾಜ್ಯದಲ್ಲಿ ಕಳೆದ ತಿಂಗಳು ಸಂಬಳ ಕೇಳಿದಕ್ಕೆ ಸಿಬ್ಬಂದಿಯನ್ನು ಥಳಿಸಿರುವ ಘಟನೆ, ಶವ ಸಾಗಿಸಲು ಆಂಬ್ಯುಲೆನ್ಸ್ ವಾಹನ ಇಲ್ಲದೆ ಮೈಲುಗಟ್ಟಲೆ ಹೊತ್ತುಕೊಂಡು ಹೋಗುವಂತೆ ಮಾಡಿದ್ದು, ಹೀಗೆ ಹಲವು ಅಮಾನವೀಯ ಘಟನೆಗಳು ಕೇಳಿ ಬರುತ್ತವೆ. ಈ ಎಲ್ಲಾ ಘಟನೆಗಳನ್ನು ಗಮನಿಸಿದಾಗ ಮಾನವೀಯ ಮೌಲ್ಯ ಕುಸಿಯುತ್ತಿರುವುದು ಕಂಡು ಬರುತ್ತಿದೆ. ಇಂತಹ ಕೃತ್ಯಗಳಿಗೆ ಅವಕಾಶ ಮಾಡಬಾರದು. ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಪ್ರತಿಯೊಬ್ಬರಲ್ಲೂ ಆತ್ಮಾವಲೋಕನ ಅಗತ್ಯ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮಾತನಾಡಿ ವಿದ್ಯಾರ್ಥಿಗಳು ಕಾನೂನಿನ ಅರಿವು ಪಡೆಯಬೇಕು. ಸಂವಿಧಾನಾತ್ಮಕವಾಗಿ ರಚನೆಯಾಗಿರುವ ಪ್ರತಿಯೊಂದು ವಿಷಯದ ಬಗ್ಗೆಯೂ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.
ಕೃತ್ಯ ಸಾಬೀತಾಗುವವರೆಗೂ ಅಪರಾಧಿಯಾಗಿರುವುದಿಲ್ಲ ಆರೋಪಿ ಆಗಿರುತ್ತಾನೆ. ಪ್ರತಿಯೊಂದು ಹಂತದಲ್ಲಿ ಪರಿಶೀಲಿಸಿಯೇ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಆರೋಪಿಗೂ ಕೂಡ ಮಾತನಾಡಲು ಅವಕಾಶ ನೀಡುತ್ತದೆ. ಮಾನವ ಹಕ್ಕು ನಿರಪರಾಧಿಗೆ ಶಿಕ್ಷೆಯಾಗಬಾರದೆಂಬ ದ್ಯೇಯೋದ್ದೇಶ ಹೊಂದಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಕೆ.ಆರ್.ವಿದ್ಯಾಧರ ಗೌಡ ಅವರು ಮಾತನಾಡಿ ಮಾನವ ಹಕ್ಕುಗಳನ್ನು ಸಂರಕ್ಷಿಸಬೇಕು. ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು. ಇತರರನ್ನು ಗೌರವಿಸಿದಲ್ಲಿ ಮಾನವ ಹಕ್ಕನ್ನು ಸಂರಕ್ಷಿಸಿದಂತೆ ಎಂದರು.
ಬಸವಣ್ಣನ ವಚನ ‘ಕಳಬೇಡ ಕೊಲಬೇಡ, ಅನ್ಯರಿಗೆ ಅಸಹ್ಯ ಪಡಬೇಡ’ ಎಂಬ ವಚನವು ಮಾನವ ಹಕ್ಕು ಮಹತ್ವದ ಬಗ್ಗೆ ಸಾರುತ್ತದೆ. ಅಂದಿನ ಕಾಲದಲ್ಲಿ ರಾಜನಿಗೆ ನೇರವಾಗಿ ಶಿಕ್ಷಿಸುವ ಹಕ್ಕನ್ನು ನೀಡಲಾಗಿತ್ತು. ಇದು ಮಾನವ ಹಕ್ಕಿಗೆ ವಿರುದ್ಧವಾಗಿದೆ. ಯಾವ ಶಿಕ್ಷೆಯನ್ನು ಪರಿಶೀಲಿಸದೆ ಶಿಕ್ಷಿಸುವ ಹಕ್ಕು ಯಾರಿಗೂ ಇಲ್ಲ, ಅದನ್ನು ಮಾನವ ಹಕ್ಕು ವಿವರಿಸುತ್ತದೆ ಎಂದು ತಿಳಿಸಿದರು.
ಮ್ಯಾಗ್ನಾಕಾರ್ಟ ಎಂಬ ಪದ್ಧತಿಯು ಮಾನವ ಹಕ್ಕಿನ ಮೊದಲ ಹೆಜ್ಜೆ ಆಗಿದೆ. ಇದರಿಂದ ಮಾನವ ಹಕ್ಕು ಬಲಿಷ್ಠವಾಗಿ ಬೆಳೆಯಲು ಅಡಿಪಾಯ ದೊರಕಿತು ಎಂದರು.
ನಗರದ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಕೋರನ ಸರಸ್ವತಿ ಅವರು ಮಾತನಾಡಿ 10 ನೇ ಶತಮಾನದಲ್ಲಿ ಪಂಪ ಹೇಳುವಂತೆ ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನರು ಅಂದಿನಿಂದಲೂ ಸಮಾನತೆಗಾಗಿ ಹೋರಾಟ ನಡೆಸುತ್ತಾ ಬಂದಿದ್ದು ಮಾನವಹಕ್ಕಿನ ಅಡಿಪಾಯ ಇದಾಗಿದೆ ಎಂದು ತಿಳಿಸಿದರು.
ಕಾನೂನು ಸಡಿಲವಾದಂತೆ ಕಾನೂನು ಉಲ್ಲಂಘನೆ ಆಗುತ್ತದೆ. ಆದ್ದರಿಂದ ಕಾನೂನು ಕೂಡ ಸಡಿಲವಾಗಬಾರದು. ಈ ನಿಟ್ಟಿನಲ್ಲಿ ಮಾನವ ಹಕ್ಕನ್ನು ತಿಳಿದುಕೊಳ್ಳುವ ಅತ್ಯವಶ್ಯಕತೆ ಇದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್ ಘಟಕದ ಅಧಿಕಾರಿ ಕನ್ನಿಕಾ ಇತರರು ಇದ್ದರು. ಪ್ರಾಧ್ಯಾಪಕರಾದ ಎಚ್.ಪಿ.ನಿರ್ಮಲ ಸ್ವಾಗತಿಸಿದರು. ವನಿತಾ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಇದೇ ಮಾಚ್೯ 16 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4…

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.