Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಶಾಸಕರ ಸಮ್ಮುಖದಲ್ಲೂ ಬಗೆಹರಿಯದ ಗೊಂದಲ : ಟೆಂಡರ್ ಪ್ರಕ್ರಿಯೆಯ ಚೆಂಡು ಜಿಲ್ಲಾಧಿಕಾರಿಗಳ ಅಂಗಳಕ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಶಾಸಕರ ಸಮ್ಮುಖದಲ್ಲೂ ಬಗೆಹರಿಯದ ಗೊಂದಲ : ಟೆಂಡರ್ ಪ್ರಕ್ರಿಯೆಯ ಚೆಂಡು ಜಿಲ್ಲಾಧಿಕಾರಿಗಳ ಅಂಗಳಕ್ಕೆ*

ಡಿಸೆಂಬರ್ 17, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಡಿ.17: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ 60 ಅಂಗಡಿ ಮಳಿಗೆ ಹರಾಜು ವಿಚಾರ ಭಾರೀ ಚರ್ಚೆಗೆ ಒಳಪಟ್ಟಿರುವ ಬೆನ್ನಲ್ಲೇ ಶಾಸಕರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲೂ ತೀರ್ಮಾನ ಅಂತಿಮಗೊಂಡಿಲ್ಲ. ಸಭೆಯಲ್ಲಿ ಚರ್ಚೆಗಳು ನಡೆದರೂ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಅಂತಿಮವಾಗಿ ಜಿಲ್ಲಾಧಿಕಾರಿಗಳ ಅಂಗಳಕ್ಕೆ ಟೆಂಡರ್ ಪ್ರಕ್ರಿಯೆಯ ಚೆಂಡನ್ನು ಎಸೆಯಲಷ್ಟೇ ಸಭೆ ಸೀಮಿತವಾಯಿತು.
ಮಳಿಗೆಗಳ ಹರಾಜು ವಿಚಾರ ಮುನ್ನೆಲೆಗೆ ಬಂದಾಗಿನಿಂದಲೂ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳ ನಡುವೆ ತಿಕ್ಕಾಟ ಆರಂಭಗೊಂಡಿದ್ದು, ಶಾಸಕರ ಮಧ್ಯೆ ಪ್ರವೇಶದ ನಂತರವೂ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ತಾ.14ರಂದು ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಆಡಳಿತಾಧಿಕಾರಿಗಳ ನಡುವೆ ಪಂಚಾಯಿತಿ ಮುಂಭಾಗವೇ ಸಾರ್ವಜನಿಕರೆದುರು ಜಟಾಪಟಿ ನಡೆದಿದ್ದು, ಈ ಸಂದರ್ಭ ತಾ.16ರಂದು ಸಭೆ ಕರೆಯುವ ಬಗ್ಗೆ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ತಹಶೀಲ್ದಾರ್ ನರಗುಂದ್ ಅವರು ಭರವಸೆ ನೀಡಿದ್ದರು.
ಅದರಂತೆ ನಿನ್ನೆ (ಡಿ.16)ಸಂಜೆ 5 ಗಂಟೆಗೆ ಪಟ್ಟಣ ಪಂಚಾಯಿತಿಯಲ್ಲಿ ಸಭೆ ನಿಗದಿಯಾಗಿದ್ದರೂ, ಸಭೆಯನ್ನು ನಿಗದಿ ಮಾಡಿದ್ದ ಆಡಳಿತಾಧಿಕಾರಿ ನಿಗದಿತ ಸಮಯಕ್ಕೆ ಸಭೆಗೆ ಆಗಮಿಸಲಿಲ್ಲ. ಸದಸ್ಯರುಗಳು ಪಂಚಾಯಿತಿಗೆ ಆಗಮಿಸಿ ಸಭೆಗಾಗಿ ಕಾಯುತ್ತಿದ್ದರೂ ಅಧಿಕಾರಿಗಳ ಸುಳಿವು ಇರಲಿಲ್ಲ. ಇಲ್ಲಿಂದ ಆರಂಭವಾದ ಅಪಸ್ವರಗಳು ಎರಡೂವರೆ ಗಂಟೆಗಳ ಕಾಲ ತಡವಾಗಿ ಆರಂಭವಾದ ಸಭೆಯಲ್ಲೂ ಮುಂದುವರೆಯಿತು.
5 ಗಂಟೆಯ ಬದಲಾಗಿ 6.30ರ ಸುಮಾರಿಗೆ ಆಗಮಿಸಿದ ಆಡಳಿತಾಧಿಕಾರಿಗಳು ಸಭೆಯನ್ನು ನಡೆಸಲು ಮುಂದಾಗುತ್ತಿದ್ದಂತೆ, ಸದಸ್ಯರುಗಳು ಅಪಸ್ವರ ಎತ್ತಿದರು. ಶಾಸಕರ ಉಪಸ್ಥಿತಿಯಲ್ಲಿಯೇ ಈ ಹಿಂದಿನ ಸಭೆ ನಡೆಸಲಾಗಿದೆ. ಈಗಿನ ಸಭೆಗೂ ಶಾಸಕರು ಬರಲಿ. ನಂತರ ಸಭೆ ಆರಂಭಿಸುವ ಬಗ್ಗೆ ಒತ್ತಾಯಿಸಿದರು. ಪರಿಣಾಮ ಅಂತಿಮವಾಗಿ 7.30ರ ಸುಮಾರಿಗೆ ಸಭೆ ಆರಂಭವಾಯಿತು.
ಒಂದೇ ವಿಚಾರಕ್ಕೆ ಸಭೆ ಸೀಮಿತವಾಗಿದ್ದರಿಂದ ಆರಂಭದಲ್ಲಿಯೇ ಮಳಿಗೆಗಳ ಹರಾಜಿನ ಬಗ್ಗೆ ಚರ್ಚೆ ಕೈಗೆತ್ತಿಕೊಳ್ಳಲಾಯಿತು. ಈ ಹಿಂದೆ ನಿಮ್ಮ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಟೆಂಡರ್ ಮಾಡುವ ಮುನ್ನ ಈಗಿರುವ ವರ್ತಕರಿಗೆ ಅಂಗಡಿಗಳನ್ನು ಮುಂದುವರೆಸುವ ಬಗ್ಗೆ ಸರ್ಕಾರದ ಅಭಿಪ್ರಾಯ ಕೇಳಲು ನಿರ್ಧರಿಸಲಾಗಿತ್ತು. ಆದರೆ ಆಡಳಿತಾಧಿಕಾರಿಗಳು ಏಕಾಏಕಿ ಟೆಂಡರ್‌ನ್ನು ತಾ. 21ಕ್ಕೆ ನಿಗದಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆ ಹಾಗೂ ನಿಮ್ಮ ಅಭಿಪ್ರಾಯಕ್ಕೂ ಬೆಲೆ ನೀಡಿಲ್ಲ ಎಂದು ಸದಸ್ಯರುಗಳು, ಶಾಸಕರು ಗಮನಕ್ಕೆ ತಂದರು.
ಈ ಸಂದರ್ಭ ಮಾತನಾಡಿದ ಶಾಸಕ ಡಾ. ಮಂಥರ್ ಗೌಡ ಅವರು, ಅಂದಿನ ಸಭೆಯಲ್ಲಿ ಟೆಂಡರ್ ವಿಚಾರ ಪ್ರಸ್ತಾಪಗೊಂಡು ಸರ್ಕಾರದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಲಾಗಿತ್ತು. ನಂತರದ ದಿನಗಳಲ್ಲಿ ಟೆಂಡರ್‌ಗೆ ದಿನಾಂಕ ಮಾಡಿರುವ ಬಗ್ಗೆ ಮಾಹಿತಿಯಿಲ್ಲ. ಇಂತಹ ಕ್ರಮ ಏಕಾಯಿತು? ಎಂದು ಪ್ರಶ್ನಿಸಿದರು.
ಈ ಸಂದರ್ಭ ಮಾತನಾಡಿದ ಆಡಳಿತಾಧಿಕಾರಿ ನರಗುಂದ್ ಅವರು, ಸರ್ಕಾರದ ಮಾರ್ಗಸೂಚಿಯಂತೆ ಟೆಂಡರ್‌ಗೆ ದಿನಾಂಕ ನಿಗದಿ ವiಡುವ ಅನಿವಾರ್ಯತೆಯಿತ್ತು. ಹಾಗಾಗಿ ದಿನಾಂಕ ನಿಗದಿ ಮಾಡಲಾಗಿದೆ ಎಂದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರುಗಳು, ಹಿಂದಿನ ಸಭೆಯಲ್ಲಿ ಶಾಸಕರ ಉಪಸ್ಥಿತಿಯಲ್ಲಿಯೇ ಚರ್ಚೆ ನಡೆದು, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪತ್ರ ಬರೆದು ಈಗಿರುವವರಿಗೆ ಬಾಡಿಗೆ ಹಾಗೂ ಮುಂಗಡ ಹಣವನ್ನು ಹೆಚ್ಚಿಸಿ ಮಳಿಗೆ ನೀಡಲು ಅವಕಾಶ ಇದೆಯೇ ಎಂಬ ಬಗ್ಗೆ ಸ್ಪಷ್ಟನೆ ಕೇಳಲು ತೀರ್ಮಾನಿಸಲಾಗಿತ್ತು. ಅದನ್ನು ಮುಚ್ಚಿಟ್ಟು ಸಭಾ ನಿರ್ಣಯವನ್ನೂ ತಿದ್ದಿ ತಾ. 21ಕ್ಕೆ ಟೆಂಡರ್ ನಿಗದಿಪಡಿಸಿ ಪ್ರಕಟಣೆ ಹೊರಡಿಸಿರುವುದು ಸರಿಯಲ್ಲ ಎಂದು ನರಗುಂದ್ ಅವರ ವಿರುದ್ಧ ಮುಗಿಬಿದ್ದರು.
ಈ ಸಂದರ್ಭ ಸಭೆಯಲ್ಲಿ ಭಾರೀ ವಾಗ್ವಾದಗಳು ನಡೆಯಿತು. ಇದೀಗ ನಿಗದಿ ಪಡಿಸಿರುವ ಟೆಂಡರ್ ದಿನಾಂಕವನ್ನು ಮುಂದೂಡಬೇಕು. ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಕರೆದು ಟೆಂಡರ್ ಬಗ್ಗೆ ತೀರ್ಮಾನಿಸಬೇಕೆಂದು ಸದಸ್ಯರುಗಳು ಪಟ್ಟು ಹಿಡಿದರು.
ಅಂತಿಮವಾಗಿ ಮಾತನಾಡಿದ ಶಾಸಕ ಮಂಥರ್ ಗೌಡ ಅವರು, ಪಟ್ಟಣ ಪಂಚಾಯಿತಿ ಮಳಿಗೆಗಳಲ್ಲಿ ಯಾರು ವ್ಯಾಪಾರ ವಹಿವಾಟು ನಡೆಸುತ್ತಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಆದರೆ ಇಲ್ಲಿ ವ್ಯಾಪಾರ ವಹಿವಾಟು ಎಷ್ಟರ ಮಟ್ಟಿಗೆ ನಡೆಯುತ್ತಿದೆ ಎಂಬ ಬಗ್ಗೆ ಅರಿವಿದೆ. ಈಗಿರುವ ವರ್ತಕರು ಕಷ್ಟದ ನಡುವೆಯೂ ವಹಿವಾಟು ನಡೆಸಿಕೊಂಡು ಬರುತ್ತಿದ್ದಾರೆ. ಅವರುಗಳ ಜೊತೆಯಲ್ಲಿ ತಾನು ನಿಲ್ಲುತ್ತೇನೆ ಎಂದರಲ್ಲದೆ, ಅಂತಿಮವಾಗಿ ಟೆಂಡರ್ ವಿಚಾರಕ್ಕೆ ಸಂಬಂಧಿಸಿದಂತೆ ಸದಸ್ಯರುಗಳು ಪತ್ರ ನೀಡಲಿ. ಅವರುಗಳ ಅಭಿಪ್ರಾಯದಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಈಗಿರುವವರಿಗೇ ಮಳಿಗೆಗಳನ್ನು ನೀಡಲು ಮನವಿ ಮಾಡಲಾಗುವುದು. ಅಂತಿಮವಾಗಿ ಸರ್ಕಾರದ ನಿಯಮಕ್ಕೆ ಎಲ್ಲರೂ ಒಳಪಡಬೇಕಿದೆ ಎಂದರು.
ಅಧಿಕೃತವಾಗಿ ಸುತ್ತೋಲೆ ಹೊರಡಿಸಿ ಕರೆಯಲಾಗಿದ್ದ ಸಭೆ ಮುಕ್ತಾಯಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಇಂದಿನ ಸಭೆ ಅಧಿಕೃತ ಸಭೆಯಲ್ಲ. ತಾ. 14ರಂದು ಸದಸ್ಯರುಗಳು ಟೆಂಡರ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ ಹಿನ್ನೆಲೆ ಇಂದು ಮಾತುಕತೆ ನಡೆಸಲಾಗಿದೆ. ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದು, ತಾ. 18ರಂದು ಜಿಲ್ಲಾಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು. ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಬೇಕಿದೆ. ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಸದಸ್ಯರುಗಳಾದ ಸಂಜೀವ, ಶೀಲಾ ಡಿಸೋಜ, ಮೃತ್ಯುಂಜಯ, ಬಿ.ಆರ್. ಮಹೇಶ್, ಪಿ.ಕೆ. ಚಂದ್ರು, ಜಯಂತಿ ಶಿವಕುಮಾರ್, ಜೀವನ್, ಮೋಹಿನಿ, ಶುಭಕರ್, ಮುಖ್ಯಾಧಿಕಾರಿ ನಾಚಪ್ಪ, ಆಡಳಿತಾಧಿಕಾರಿ ನರಗುಂದ್, ಪಂಚಾಯಿತಿ ಸಿಬ್ಬಂದಿಗಳು ಇದ್ದರು.
ಒಟ್ಟಾರೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ 60 ಮಳಿಗೆಗಳ ಹರಾಜು ಪ್ರಕ್ರಿಯೆ ಇದೇ ಮೊದಲ ಬಾರಿಗೆ ಭಾರೀ ಪೈಪೋಟಿಗೆ ಕಾರಣವಾಗಿದ್ದು, ಇಂದಿನ ಸಭೆಯಲ್ಲಿಯೂ ಅಂತಿಮ ತೀರ್ಮಾನವಾಗದೇ ಗೊಂದಲ ಮುಂದುವರೆದಿದೆ. ಇದೀಗ ಟೆಂಡರ್ ಪ್ರಕ್ರಿಯೆಯ ಚೆಂಡು ಜಿಲ್ಲಾಧಿಕಾರಿಗಳ ಅಂಗಳ ತಲುಪಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.