Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”The girl who unleashed MAGIC” ಪುಸ್ತಕ ಬಿಡುಗಡೆ : ಈ ಪುಸ್ತಕ ಬರೆದ ಬಾಲಕಿ ಮಾಯಾ ಅಪ್ಪಚ್ಚು ಈಗ ನೆನಪು ಮಾತ್ರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”The girl who unleashed MAGIC” ಪುಸ್ತಕ ಬಿಡುಗಡೆ : ಈ ಪುಸ್ತಕ ಬರೆದ ಬಾಲಕಿ ಮಾಯಾ ಅಪ್ಪಚ್ಚು ಈಗ ನೆನಪು ಮಾತ್ರ*

ಡಿಸೆಂಬರ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.21 : ಏಳು ವರ್ಷದ ಬಾಲಕಿ ಮಾಯಾ ಅಪ್ಪಚ್ಚು ತನ್ನ ಶಾಲೆಯ ಆರಂಭದ ದಿನಗಳಲ್ಲಿ ಅಲ್ಲಿಯ ಹೊಸ ವಾತಾವರಣದಲ್ಲಿ ತನಗೆ ಉಂಟಾದ ಭಯ, ಆತಂಕ, ಮನಸ್ಸಿನ ಗೊಂದಲಗಳು ಹಾಗೂ ಅದ್ಭುತ ಕಲ್ಪನಾ ಶಕ್ತಿಯನ್ನು ಸ್ವತ: ತಾನೇ ವಿಶೇಷವಾಗಿ ವಿವರಿಸಿರುವ “ಮಾಯಾಳ ಮಾಂತ್ರಿಕ ಜಗತ್ತು” ಪುಸ್ತಕ ಇಂದು ಬಿಡುಗಡೆಗೊಂಡಿತು.
ಮಡಿಕೇರಿಯಲ್ಲಿ ಮಾಯಾ ಅಪ್ಪಚ್ಚು ಬರೆದಿರುವ “The girl who unleashed MAGIC”  ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಮಾಯಾಳ ತಾಯಿ ಸಂಚಿತ್ ಅಪ್ಪಚ್ಚು, ತಂದೆ ಕಾರ್ತಿಕ್ ಅಪ್ಪಚ್ಚು, ಮಾಯಾಳ ನೆನಪುಗಳನ್ನು ಮೆಲುಕು ಹಾಕಿ, ಅವಳ ಬರಹಳನ್ನು ಪುಸ್ತಕ ರೂಪದಲ್ಲಿ ಸಂಗ್ರಹಿಸಿದ ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಮಾಯಾಳ ಸಾಧನೆಯನ್ನು ಇತರ ವಿದ್ಯಾರ್ಥಿಗಳಿಗೆ ಮಾದರಿಯನ್ನಾಗಿಸುವ ನಿಟ್ಟಿನಲ್ಲಿ ಕೊಡಗಿನ ಶಾಲಾ ಕಾಲೇಜುಗಳ ಗ್ರಂಥಾಲಯಗಳಿಗೆ ಪುಸ್ತಕವನ್ನು ನೀಡಲಾಗುವುದೆಂದರು.
ಮಾಯಾಳ ಪುಟ್ಟ ಸಹೋದರ ವರುಣ್ ಹಾಜರಿದ್ದರು.
ಅಮೇರಿಕದ ಹೈಕ್ರಾಫ್ಟ್ ಡ್ರೈವ್ ಎಲೆಮೆಂಟ್ರಿ ಸ್ಕೂಲ್ ನಲ್ಲಿ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಾಯಾ ಅಪ್ಪಚ್ಚು ಒಬ್ಬ ಅಪರೂಪದ ಪ್ರತಿಭಾವಂತ ಬಾಲಕಿ. ಪ್ರತೀ ಒಂದು ವಸ್ತು ಅಥವಾ ಜೀವಿಗೆ ಸಂಬಂಧಿಸಿದ ಎಲ್ಲಾ ವಿಚಾರಗಳನ್ನು ವಿವರವಾಗಿ ತಿಳಿದುಕೊಳ್ಳುವ ಕುತೂಹಲ. ಅವುಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವ ಹಸಿವು, ಉತ್ಸಾಹ. ಕೀಟಗಳ ಮೇಲೆ ಅವಳಿಗಿದ್ದ ಒಲವು ತಾನು ಕೀಟ ಶಾಸ್ತ್ರಜ್ಞೆ ಆಗಬೇಕು ಎಂಬ ಬಯಕೆಯನ್ನು ಅವಳಲ್ಲಿ ಮೂಡಿಸಿತ್ತು.
ವಿದ್ಯಾ ಬುದ್ಧಿಯ ಜೊತೆಗೆ ಶಾಸ್ತ್ರೀಯ ಸಂಗೀತ, ನಾಟ್ಯಶಾಸ್ತ್ರ, ಚಿತ್ರಕಲೆ, ಸಾಹಿತ್ಯ ರಚನೆ ಇವೆಲ್ಲವೂ ಆಕೆಗೆ ಒಲಿದಿತ್ತು. ಹಾಗಾಗಿ ತನ್ನ ಅಧ್ಯಾಪಕರ, ಸಹಪಾಠಿಗಳ, ನೆರೆಯ ಹೊರೆಯವರ ಮೆಚ್ಚುಗೆಗೆ ಪಾತ್ರವಾಗಿದ್ದ ಮಾಯಾ ಅಪ್ಪಚ್ಚು, ತನ್ನ ಜೀವಿತದ ಎಂಟು ವರ್ಷಗಳ ಅವಧಿಯಲ್ಲಿ ಸಾಧನೆಯ ಹಾದಿಯನ್ನು ಹಿಡಿದಿದ್ದಳು.
ನಕಾರಾತ್ಮಕ ಭಾವನೆಗಳನ್ನು ಜಯಿಸುವ ಗುಟ್ಟನ್ನು ತಿಳಿಯಲು ಅವಳು ಕೈಗೊಂಡ ರೋಮಾಂಚಕ ಪ್ರಯಾಣ, ಇತ್ಯಾದಿ ಶೌರ್ಯ ಸಾಹಸಗಳಿಂದ ಕೂಡಿದ ಮಾಂತ್ರಿಕ ಜಗತ್ತನ್ನು ಏಳನೇ ವಯಸ್ಸಿನಲ್ಲಿ “The girl who unleashed MAGIC”  ಎಂಬ ಶೀರ್ಷಿಕೆಯ ಆಂಗ್ಲ ಭಾಷೆಯ ಕಥೆಯನ್ನು ತನ್ನ ಡೈರಿಯಲ್ಲಿ ಚಿತ್ರಗಳ ಸಹಿತ ಬರೆದು ಇಟ್ಟಿದ್ದಾಳೆ.
“The girl who unleashed MAGIC”   ಆಂಗ್ಲ ಭಾಷೆಯ ಕೃತಿಯನ್ನು ಕೊಡವ ಮಕ್ಕಡ ಕೂಟದ 78ನೇ ಪುಸ್ತಕವಾಗಿ ಬಿಡುಗಡೆಗೊಂಡಿದೆ.
ಚಿತ್ರಕಲಾವಿದೆ, ರಂಗ ಕಲಾವಿದೆ, ಕವಯತ್ರಿ, ಗಾಯಕಿ, ಬರಹಗಾರ್ತಿ, ಪತ್ರಕರ್ತೆ ಹಾಗೂ ಸಂಗೀತ ನಿರ್ದೇಶಕಿ, ಕೊಡಗಿನ “ಶಕ್ತಿ” ದಿನಪತ್ರಿಕೆಯ “ಚೇತನ”ದ ಉಪ ಸಂಪಾದಕಿಯಾಗಿದ್ದ ಪುಷ್ಪ ದೇವಯ್ಯ ಕಂಬೆಯಂಡ ಅವರು ಕನ್ನಡ ಭಾಷೆಗೆ ಅನುವಾದ ಮಾಡಿರುವ “ಮಾಯಾಳ ಮಾಂತ್ರಿಕ ಜಗತ್ತು” 79ನೇ ಪುಸ್ತಕವಾಗಿ ಬಿಡುಗಡೆಗೊಂಡಿದೆ.
::: ದು:ಖಕರ :::
ಆದರೆ ಮಾಯಾ ಇಂದು ಜೀವಂತವಾಗಿಲ್ಲ ಎನ್ನುವ ವಿಚಾರ ಅತ್ಯಂತ ದು:ಖಕರವಾಗಿದೆ. ತನ್ನ ಎಂಟನೇ ವಯಸ್ಸಿಗೆ ಬಾರದ ಲೋಕಕ್ಕೆ ತೆರಳಿದ ಆಕೆ ಬಿಟ್ಟು ಹೋದ ನೆನಪುಗಳು ಅಪಾರ. ಆಕಾಸ್ಮಿಕವಾಗಿ AVM ನಿಂದ ಅಕಾಲಿಕ ಮರಣ ಹೊಂದಿದ ಮಾಯಾಳ ನೆನಪು ಮಾತ್ರ ಈಗ ಶಾಶ್ವತವಾಗಿದೆ. ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾಯಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ.
ಪುತ್ರಿ ಮಾಯಾಳ ಅಂಗಾಂಗಗಳನ್ನು ದಾನ ಮಾಡಿದ ಕಾರಣಕ್ಕಾಗಿ “ಹಾನರ್ ಬ್ರಿಡ್ಜ್” ಸಂಸ್ಥೆ ಪೋಷಕರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಮಾಯಾ ನೆನಪಿನಲ್ಲಿ ಅಮೇರಿಕ ಹೈಕ್ರಾಫ್ಟ್ ಡ್ರೈವ್ ಎಲೆಮೆಂಟ್ರಿ ಸ್ಕೂಲ್ ನಲ್ಲಿ ಚೆರ್ರಿ ಗಿಡ ನೆಡುವ ಮೂಲಕ ಸಂತಾಪ ಸೂಚಿಸಿದೆ. ಕಣ್ಣು ದಾನ ಮಾಡಿದಕ್ಕಾಗಿ “ಮಿರಾಕಲ್ ಇನ್ ಸೈಟ್ ಸಂಸ್ಥೆ” ತನ್ನ ಲಾಂಚನವನ್ನು ಪೋಷಕರಿಗೆ ನೀಡಿದೆ.
ಮಾಯಾಳ ತಾಯಿ ಸಂಚಿತ್ ಅಪ್ಪಚ್ಚು, ತಂದೆ ಕಾರ್ತಿಕ್ ಅಪ್ಪಚ್ಚು ಪುಟ್ಟಿಚಂಡ ಮೂಲತಃ ಕೊಡಗು ಜಿಲ್ಲೆಯರಾಗಿದ್ದು, ಉದ್ಯೋಗದ ನಿಮಿತ್ತ ವಿದೇಶದಲ್ಲಿ ನೆಲೆಸಿದ್ದಾರೆ. ಮೀರ (ಅಮ್ಮ) ಹಾಗೂ ವಿಠಲ್ (ತಾತ), ಅಯ್ಯಪ್ಪ (ಮಾಮಾ) ಕೊಡಾಂಗಡ ಹಾಗೂ ಪುಟ್ಟಿಚಂಡ ಅಪ್ಪಯ್ಯ ಮತ್ತು ಜಾನ್ಸಿ ಮೂಲತಃ ಕೊಡಗಿನವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದು, ಮಾಯಾಳ ಮಾಂತ್ರಿಕ ಜಗತ್ತು ಪುಸ್ತಕವನ್ನು ಬಿಡುಗಡೆಗೊಳಿಸುವ ಮೂಲಕ ಮಾಯಾಳ ಕನಸ್ಸನ್ನು ನನಸು ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.