Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಲು ಷರತ್ತುಗಳಿಲ್ಲ, ಸೂತಕದ ಅಡ್ಡಿಯಿಲ್ಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಲು ಷರತ್ತುಗಳಿಲ್ಲ, ಸೂತಕದ ಅಡ್ಡಿಯಿಲ್ಲ*

ಡಿಸೆಂಬರ್ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ ಡಿ.31 : ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಲು ಯಾವುದೇ ಷರತ್ತು, ನಿರ್ಬಂಧಗಳಿಲ್ಲ, ವೃತಾಚರಣೆಯ ಅಗತ್ಯವಿಲ್ಲ ಮತ್ತು ಸೂತಕದ ಅಡ್ಡಿ ಇಲ್ಲವೆಂದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾ ಘಟಕ ಸ್ಪಷ್ಟಪಡಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಟ್ರಸ್ಟ್ ಮತ್ತು ವಿಹೆಚ್‌ಪಿ, ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕಾರದ ಕುರಿತು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಈ ಬಗ್ಗೆ ಯಾರೂ ಗೊಂದಲಕ್ಕೀಡಾಗದೆ ಭಕ್ತಿಯಿಂದ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಎಂದು ಮನವಿ ಮಾಡಿದೆ.
ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮನೆಯವರಿಂದ ಹಣ ಅಥವಾ ಯಾವುದೇ ವಸ್ತುವನ್ನು ದಾನವಾಗಿ ಪಡೆಯಬಾರದು. ಹಿರಿಯರನ್ನು ಗೌರವಿಸಬೇಕು ಮತ್ತು ಮನೆಯವರಿಗೆ ಅಕ್ಷತೆ ಬಗ್ಗೆ ಮಾಹಿತಿ ನೀಡಬೇಕು.
ಮಂತ್ರಾಕ್ಷತೆಯನ್ನು ಕೊಡಗು ಜಿಲ್ಲೆಗೆ ತಂದು ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ತಾಲ್ಲೂಕು ಮಟ್ಟದಲ್ಲಿ ವಿತರಣೆ ಮಾಡಲಾಗಿದೆ. ಪ್ರಸ್ತುತ ಗ್ರಾಮ ಗ್ರಾಮಗಳ ದೇವಾಲಯಗಳಲ್ಲಿ ಇರಿಸಲಾಗಿದ್ದು, ಜನವರಿ ಒಂದರಿoದ 15 ರವರೆಗೆ ವಿತರಣೆ ಮಾಡಲು ಸಮಯ ನಿಗದಿಪಡಿಸಲಾಗಿದೆ. ಜ.7ರಂದು ಮಹಾ ಅಭಿಯಾನದ ಮೂಲಕ ಬೆಳಗ್ಗಿನಿಂದ ಸಂಜೆಯವರೆಗೆ ಮಂತ್ರಾಕ್ಷತೆ ವಿತರಿಸಬೇಕು.
ಮಂತ್ರಾಕ್ಷತೆ ವಿತರಣೆ ಸಂದರ್ಭ ಒಂದು ತಂಡದಲ್ಲಿ ಐದು ಮಂದಿಗಿoತ ಹೆಚ್ಚು ಸದಸ್ಯರಿರಬೇಕು. ಎಲ್ಲರೂ ಬಿಳಿ ಬಣ್ಣದ ವಸ್ತ್ರವನ್ನು ತೊಡಬೇಕು ಮತ್ತು ಮಂತ್ರಾಕ್ಷತೆ ಕಳಶವನ್ನು ಹಿಡಿದವರು ಕಾಲಿಗೆ ಚಪ್ಪಲಿಗಳನ್ನು ಹಾಕಬಾರದು. ಕಾರ್ಯಕ್ರಮದಲ್ಲಿ ಮಹಿಳೆಯರು ಕೂಡ ಪಾಲ್ಗೊಳ್ಳಬೇಕು. ರಾಮನಾಮ ಜಪದೊಂದಿಗೆ ಮನೆಯೊಳಗೆ ಹೋಗಿ ತಟ್ಟೆಯಲ್ಲಿ ಎಂಟರಿoದ 10 ಗ್ರಾಂ ಅಕ್ಷತೆಯನ್ನು ನೀಡಬೇಕು. ಅಕ್ಷತೆ ವಿತರಣೆ ಮಾಡುವವರ ಬಳಿ ಒಂದು ನೋಟು ಪುಸ್ತಕ ಇರಬೇಕು. ಮನೆಯ ಯಜಮಾನನ ಹೆಸರು ಮತ್ತು ದೂರವಾಣಿ ಸಂಖ್ಯೆ, ಸದಸ್ಯರ ಸಂಖ್ಯೆಯನ್ನು ಪಡೆದುಕೊಳ್ಳಬೇಕು.
::: ಭಕ್ತರು ಹೀಗೆ ಮಾಡಿ :::
ಸ್ವೀಕರಿಸಿದ ಅಕ್ಷತೆಯನ್ನು ಮನೆಯ ಪೂಜಾ ಕ್ಷೇತ್ರದಲ್ಲಿ ಇರಿಸಬೇಕು. ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನ ಜ.22 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲರೂ ಅವರವರ ಗ್ರಾಮದ ದೇವಾಲಯಕ್ಕೆ ಹೋಗಿ ರಾಮನಾಮ ಜಪದೊಂದಿಗೆ ಪೂಜೆ ಸಲ್ಲಿಸಬೇಕು. ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರವನ್ನು ದೂರದರ್ಶನದ ಮೂಲಕ ದೇವಸ್ಥಾನಗಳಲ್ಲಿ ಪ್ರಸಾರ ಮಾಡಬೇಕು. ಸಂಜೆ ಸೂರ್ಯಾಸ್ತಮದ ನಂತರ ಪ್ರತಿ ಮನೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಹಣತೆಯನ್ನು ಹಚ್ಚಬೇಕು. ಆ ದಿನವನ್ನು ದೀಪಾವಳಿಯ ರೀತಿಯಲ್ಲಿ ಆಚರಣೆ ಮಾಡಬೇಕು.
ಉತ್ತರಾಭಿಮುಖವಾಗಿ ಒಂದು ದೀಪವನ್ನು ಹಿಡಿದು ಶ್ರೀರಾಮಚಂದ್ರನಿಗೆ ಆರತಿ ಬೆಳಗಬೇಕು. ಮನೆಯ ಮುಖ್ಯದ್ವಾರದ ಎದುರಿನಲ್ಲಿ ನಿಂತು ಮನೆಯ ಯಜಮಾನ ಪಡೆದುಕೊಂಡ ಅಕ್ಷತೆಯ ಕಾಳನ್ನು ಕುಟುಂಬ ಸದಸ್ಯರ ತಲೆಗೆ ಪ್ರೋಕ್ಷಣೆ ಮಾಡಬೇಕು. ನಂತರ ಸದಸ್ಯರು ಪ್ರೋಕ್ಷಣೆ ಮಾಡಿದವರ ಕಾಲು ಹಿಡಿದು ಶ್ರೀರಾಮನ ಆಶೀರ್ವಾದ ಪಡೆಯಬೇಕು. ಮಂತ್ರಾಕ್ಷತೆ ತರುವ ಕಾರ್ಯಕರ್ತರಿಗೆ ಹೂವುಗಳನ್ನು ಹಾಕಿ ಗೌರವದಿಂದ ಸ್ವಾಗತಿಸಬೇಕು ಎಂದು ಟ್ರಸ್ಟ್ ಮತ್ತು ವಿಹೆಚ್‌ಪಿ ಕೋರಿಕೊಂಡಿದೆ.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಪೊನ್ನಂಪೇಟೆ : ಮೂವರು ವಿದ್ಯಾರ್ಥಿಗಳು ನೀರುಪಾಲು*
Next Article *ರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿಗೆ ಮಾದಾಪುರದ ದೀಕ್ಷಿತ ಆಯ್ಕೆ*

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

ಸೋಮವಾರಪೇಟೆ NEWS DESK ಮಾ.3 : ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಮಾಜಿ ಸಿ ಆರ್ ಪಿ ಎಫ್ ನ…

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.