ಮಡಿಕೇರಿ ಜ.9 : ಮಡಿಕೇರಿಯ ಕೊಡಗು ವಿದ್ಯಾಲಯದ 8ನೇ ತರಗತಿ ವಿದ್ಯಾಥಿ೯ಗಳು ರಾಜ್ಯಮಟ್ಟದ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದು, ಏಡಿಗಳ ಸಂರಕ್ಷಣೆ ಸಂಬಂಧಿತ ಪ್ರಬಂಧ ಮಂಡಿಸುತ್ತಿದ್ದಾರೆ. ಕೊಡಗು ವಿದ್ಯಾಲಯದ ವಿಜ್ಞಾನ ಶಿಕ್ಷಕಿ ಟಿ.ಜಯಶ್ರೀ ಅವರ ಮಾಗ೯ದಶ೯ನದಲ್ಲಿ ವಿದ್ಯಾಥಿ೯ಗಳಾದ ಎಂ.ಪಿ.ಯಶಿಕಾ ಶೆಟ್ಟಿ ಮತ್ತು ಯಶ್ ಕಾರ್ಯಪ್ಪ ಪಿ. ಎಸ್. ಸಂಶೋಧನಾತ್ಮಕ ಪ್ರಬಂಧವನ್ನು ಏಡಿಗಳ ಕುರಿತಂತೆ ಮಂಡಿಸಲಿದ್ದಾರೆ.
ಪರಿಸರ ವ್ಯವಸ್ಥೆಯೊಳಗೆ ಏಡಿಗಳು ನಿಣಾ೯ಯಕ ಪಾತ್ರ ವಹಿಸಿದೆ. ಏಡಿಗಳು ಬಹು ಉಪಕಾರಿ ಜೀವಿಯಾಗಿದ್ದು, ಏಡಿಗಳು ಅಕಶೇರುಕಗಳಲ್ಲಿ ಸಂಧಿಪದಿ ವರ್ಗದ, ಕ್ರಸ್ಟೇಶಿಯ ಎಂಬ ಉಪವಗ೯ಕ್ಕೆ ಸೇರಿದ ಜೀವಿಗಳಾಗಿವೆ. ಏಡಿಗಳು ರೈತನ ಮಿತ್ರರೇ ಹೊರತು ಶತ್ರುವಲ್ಲ. ಏಡಿಗಳು ಮಣ್ಣನ್ನುಸಮೃದ್ಧಗೊಳಿಸಿ, ರಂಧ್ರಗಳನ್ನು ತಮ್ಮ ಅಡಗು ತಾಣವಾಗಿ ಪರಿವತಿ೯ಸುವುದರ ಮೂಲಕ ನೀರಿನ ಒಳಹರಿವಿಗೆ ಹಾಗೂ ಇಂಗುವಿಕೆಗೆ ಸಹಾಯ ಮಾಡುತ್ತವೆ.
ಕಳೆಗಳನ್ನು ತಿಂದು, ಮಣ್ಣನ್ನು ಗಾಳಿಯಾಡುವಂತೆ ಏಡಿಗಳು ಮಾಡುತ್ತವೆ. ಇವು ಜಲಮಾಲಿನ್ಯದ ತೀವ್ರತೆಯನ್ನು ನಿಯಂತ್ರಿಸುವಲ್ಲಿ ಬಹು ಮುಖ್ಯ ಪಾತ್ರವನ್ನುವಹಿಸುತ್ತವೆ. ಅತ್ಯಂತ ರುಚಿಕರ ಹಾಗೂ ಆರೋಗ್ಯಕರ ಆಹಾರದ ಮೂಲವಾಗಿ ಕಾಯ೯ನಿವ೯ಹಿಸುತ್ತದೆ. ಹೀಗಾಗಿಯೇ ಏಡಿಗಳು ಕೖಷಿಕರಿಗೆ ಪ್ರಯೋಜನಕಾರಿ ಎಂಬುದು ಯುವ ವಿಜ್ಞಾನಿಗಳಾದ ಗೋಪಾಲಕೃಷ್ಣಹೆಗ್ಡೆ, ಎ. ದಿವ್ಯಶ್ರೀ ಮತ್ತು ಪ್ರಾಣಿಶಾಸ್ತ್ರಜ್ಞರಾದ ಡಾ.ಎಂ.ಪಿ.ಕೃಷ್ಣ ಅವರ ಅಭಿಪ್ರಾಯವಾಗಿದೆ.
ಏಡಿಗಳ ಬಗ್ಗೆ ಹಲವಾರು ತಪ್ಪುಕಲ್ಪನೆಗಳಿವೆ, ಜನರು ಅವುಗಳನ್ನು ಕೀಟಗಳೊಂದಿಗೆ ಸಂಯೋಜಿಸುತ್ತಾರೆ. ಏಡಿಗಳನ್ನು ನಿಮೂ೯ಲನ ಮಾಡಲು ಜನರು ಕೀಟನಾಶಕಗಳು ಮತ್ತು ತಾಮ್ರದ ಸಲ್ಫೇಟಿ ನಂತಹ ರಾಸಾಯನಿಕಗಳನ್ನು ಬಳಸುತ್ತಾರೆ. ಏಡಿಗಳು ರಾಸಾಯನಿಕಗಳು ಮತ್ತು ಮಾಲಿನ್ಯಕಾರಕಗಳಿಗೆ ಸೂಕ್ಷ್ಮವಾಗಿರುತ್ತವೆ. ಅವು ಈ ಹಾನಿಕಾರಕ ರಾಸಾಯನಿಕಗಳಿಗೆ ಬಲಿಯಾಗುತ್ತವೆ. ಇದು ಏಡಿಗಳ ಸಂಖ್ಯೆಯ ಕ್ಷೀಣತೆಗೆ ಮುಖ್ಯಕಾರಣವಾಗಿದೆ. ಇದು ಅಂತಿಮವಾಗಿ ಆಹಾರಸರಪಳಿ ಮತ್ತು ಆಹಾರಜಾಲಗಳಲ್ಲಿನ ಬದಲಾವಣೆಗಳಿಂದಾಗಿ ಪರಿಸರ ವ್ಯವಸ್ಥೆಯಲ್ಲಿ ಅಸಮತೋಲನಕ್ಕೆ ಕಾರಣವಾಗುತ್ತದೆ. ಈ ಕಾರಣದಿಂದಾಗಿ ಏಡಿಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ರಾಸಾಯನಿಕ ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಜೈವಿಕ ಕೀಟ ನಿಯಂತ್ರಣವನ್ನು ಆಶ್ರಯಿಸುವುದು ಬಹು ಮುಖ್ಯವಾಗಿದೆ. ಬಾಲ ಏಡಿಗಳನ್ನುಕೊಲ್ಲಬಾರದು. ಏಕೆಂದರೆ ಅವು ಪರಿಸರ ವ್ಯವಸ್ಥೆಯ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತವೆ.
ಏಡಿಯನ್ನು ರಕ್ಷಿಸುವ ಮತ್ತು ಶ್ರೀಮಂತ ಜೈವಿಕ ವೈವಿಧ್ಯತೆಯೊಂದಿಗೆ ಆರೋಗ್ಯಕರ ಪರಿಸರ ವ್ಯವಸ್ಥೆಯನ್ನು ಹೊಂದುವ ಪ್ರಯತ್ನದಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಸಂಶೋಧನಾತ್ಮಕ ವಿದ್ಯಾಥಿ೯ಗಳು ಮಾಹಿತಿ ನೀಡಿದ್ದಾರೆ.







