Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ಸಂಭ್ರಮದ ಪುತ್ತರಿ ಒತ್ತೊರ್ಮೆ ಕೂಟ : ಒಗ್ಗಟ್ಟಿನಿಂದ ಜನಾಂಗದ ಅಭಿವೃದ್ಧಿ ಸಾಧ್ಯ : ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅಭಿಪ್ರಾಯ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ಸಂಭ್ರಮದ ಪುತ್ತರಿ ಒತ್ತೊರ್ಮೆ ಕೂಟ : ಒಗ್ಗಟ್ಟಿನಿಂದ ಜನಾಂಗದ ಅಭಿವೃದ್ಧಿ ಸಾಧ್ಯ : ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅಭಿಪ್ರಾಯ*

January 11, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಜ.11 : ಒಗ್ಗಟ್ಟಿನ ಬಲ ಇದ್ದಾಗ ಮಾತ್ರ ಕೊಡವ ಜನಾಂಗ ಉಳಿಯಲು ಸಾಧ್ಯ. ಕೊಡವ ಪೊಮ್ಮಕ್ಕಡ ಕೂಟ ಜನಾಂಗದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಏಳಿಗೆಯನ್ನು ಪಡೆಯಲೆಂದು ಬಾಳುಗೊಡು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹೇಳಿದರು.
ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಕೊಡವ ಸಮಾಜದ ಆವರಣದಲ್ಲಿ ನಡೆದ ಪುತ್ತರಿ ಒತ್ತೊರ್ಮೆ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು, ತಾಯಿಯೇ ನಮ್ಮ ಮೊದಲ ಗುರು. ನಾವು ಭೂಮಿ ತಾಯಿಯನ್ನು ಪೂಜೆ ಮಾಡುವವರು. ಭೂಮಿಗೆ ತಾಯಿಯ ಸ್ಥಾನ ನೀಡಿದ್ದೇವೆ. ಹಾಗಾಗಿ ತಾಯಿ, ಹೆಂಡತಿ, ಮಕ್ಕಳು ಎಲ್ಲರಲ್ಲೂ ಪೂಜನೀಯ ಭಾವದಿಂದ ಕಾಣಬೇಕು ಎಂದರು.
ಹೆಣ್ಣಿನ ಪಾತ್ರ ಮಹತ್ವದಾಗಿದ್ದು, ಪ್ರತಿಯೊಬ್ಬರ ಯಶಸ್ಸಿನ ಹಿಂದೆ ಮಹಿಳೆ ಇದ್ದಾಳೆ. ತಾಯಿ ಮಕ್ಕಳಿಗೆ ಮೊದಲು ಸಂಸ್ಕಾರ ಕಲಿಸಬೇಕು. ಜೊತೆಗೆ ವಿದ್ಯೆ ಕೊಡಬೇಕು. ಬುದ್ದಿ ಹೇಳಬೇಕು. ಮಕ್ಕಳನ್ನು ಆಸ್ತಿಯಾಗಿ ಮಾಡಿ ಅವರನ್ನು ಓದಿಸಿ ಅವರ ಕಾಲಮೇಲೆ ಅವರನ್ನು ನಿಲ್ಲುವಂತೆ ಮಾಡಿ ಎಂದು ಕಿವಿಮಾತು ಹೇಳಿದರು.
ಕೊಡವರಿಗೆ ಎಸ್ಟಿ ಟ್ಯಾಗ್ ದೊರೆತಲ್ಲಿ ನಮ್ಮ ಸಮುದಾಯ ಮತ್ತಷ್ಟು ಮುಂದುವರೆಯಲು ಸಾಧ್ಯವಾಗುತ್ತದೆ. ಎಲ್ಲರಿಗೂ ಸಮಯದ ಮಹತ್ವ ತಿಳಿದಿರಬೇಕು. ಹಾಗಿದ್ದಲ್ಲಿ ಮಾತ್ರ ಸಮಾಜದಲ್ಲಿ, ಜೀವನದಲ್ಲಿ ಮುಂದುವರೆಯಲು ಸಾಧ್ಯ ಎಂದರು.
ಬಾಳುಗೊಡು ಸಮಾಜದಲ್ಲಿ ಮುಂದಿನ ಬಾರಿ ಹುತ್ತರಿ ಹಬ್ಬ ಆಚರಣೆ ಮಾಡುವುದಾಗಿ ತಿಳಿಸಿದರಲ್ಲದೆ ನಮ್ಮ ಸಮುದಾಯದಲ್ಲಿ ಹೆಚ್ಚು ಮಕ್ಕಳು ಬೇಕು. ಹಾಗೆಯೇ ಅವರನ್ನು ಸರಿಯಾದ ದಾರಿಯಲ್ಲಿ ನಡೆಯುವಂತೆ ಮಾಡಬೇಕು. ಕೊಡವರ ಅಭಿವೃದ್ಧಿ ನಮ್ಮ ಸಮಾಜದ ಅಭಿವೃದ್ಧಿ ಆಗಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ, ದೇವರು ಹೆಣ್ಣಿಗೆ ಒಂದು ಅದ್ಬುತ ಶಕ್ತಿ ನೀಡಿರುತ್ತಾರೆ. ತಾಯಿ ಎನ್ನುವುದು ಬಿಂಬ. ಎಲ್ಲಾ ಕೆಲಸವನ್ನು ಸಮಚಿತ್ತದಿಂದ ನಿಭಾಯಿಸುವುದು ನಮ್ಮ ಕರ್ತವ್ಯ ಎಂದರು.
ಇತ್ತಿಚೆಗೆ ನಮ್ಮ ಹೆಣ್ಣು ಮಕ್ಕಳು ಬಹಳ ದಿಕ್ಕು ತಪ್ಪುವ ಸಾಧ್ಯತೆ ಹೆಚ್ಚಾಗುತ್ತಿದೆ. ಅದನ್ನು ಪೋಷಕರು ಸಮರ್ಥಿಸಬಾರದು. ಅವರಿಗೆ ಬುದ್ದಿ ಹೇಳಿ ಅವರ ಜೀವನ ಸುಧಾರಿಸಲು ತಂದೆ ತಾಯಿ ದಾರಿ ದೀಪವಾಗಬೇಕು, ಹಿರಿಯರಿಗೆ ಗೌರವ ನೀಡಬೇಕೆಂದು ಸಲಹೆ ನೀಡಿದರು.
ಮಹಿಳೆಯರು ದಿನನಿತ್ಯ ಯೋಗ, ದ್ಯಾನ ಮಾಡುವ ಅಭ್ಯಾಸವನ್ನಿಟ್ಟುಕೊಳ್ಳಬೇಕು ಎಂದ ಅವರು, ಇದರಿಂದ ಸಮಸ್ಯೆಗಳು ಪರಿಹಾರವಾಗಲಿದ್ದು, ದಿನನಿತ್ಯದ ಒತ್ತಡ ಕಡಿಮೆಯಾಗುತ್ತದೆ ಎಂದು ಸಲಹೆ ನೀಡಿದರು.
ಚುಮ್ಮಕ್ಕ ಗ್ರೂಪ್‍ನ ಅಧ್ಯಕ್ಷೆ ಉದ್ದಪಂಡ ವಿಮಲ ಮಾತನಾಡಿ, ಎಲ್ಲಾ ಮಹಿಳೆಯರಿಗೂ ವೇದಿಕೆ ದೊರಕುವಂತಾಗಿದೆ. ಜಂಜಾಟದ ನಡುವೆ ಇರುವ ಮಹಿಳೆಯರಿಗೆ ಈ ರೀತಿಯ ಕಾರ್ಯಕ್ರಮ ಒಂದು ವೇದಿಕೆ ಕಲ್ಪಿಸಿದೆ, ಎಲ್ಲರಿಗೂ ಶುಭವಾಗಲಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಪೊಮ್ಮಕ್ಕದ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್, ಕೊಡವ ಸಮುದಾಯದಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಇದು ಹೀಗೆ ಮುಂದುವರೆಯಬಾರದು. ಮನೆ ತುಂಬ ಮಕ್ಕಳಿರಬೇಕು. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ತಿಳಿ ಹೇಳಿ ಕೊಡವ ಜನಾಂಗದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಕರೆ ನೀಡಿದರು.
ಕೂಟದ ಹಿರಿಯ ಸಲಹೆಗಾರರಾದ ನಾಯಕಂಡ ಬೇಬಿ ಚಿಣ್ಣಪ್ಪ ಕೊಡವ ಸಂಪ್ರದಾಯದಂತೆ ತಪ್ಪಡಕ ಕಟ್ಟುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅತಿಥಿ ಗಣ್ಯರು ಸಾಂಪ್ರದಾಯಿಕ ಉಡುಪು ಧರಿಸಿ ದೇವರ ನೆಲೆಯಲ್ಲಿ ಕದಿರು ಕಟ್ಟಿ, ಅಕ್ಕಿ ಹಾಕಿ ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಪುಚ್ಚಿಮಂಡ ರಾಧಾ ಕಾರ್ಯಪ್ಪ, ಮುಂಡಂಡ ರಾಣು ಮಂದಣ್ಣ, ಪಾಲಚಂಡ ಸೀಮಾ ಹಾಗೂ ಮುಖ್ಯ ಅತಿಥಿಗಳಾಗಿದ್ದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹಾಗೂ ಶಾಲಿನಿ ಕಾರ್ಯಪ್ಪ ಅವರನ್ನು ಒಕ್ಕೂಟದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಕೂಟದ ಉಪಾಧ್ಯಕ್ಷೆ ಅಮ್ಮುಣಿಚಂಡ ಈಶ್ವರಿ ಗಂಗಮ್ಮ, ಸಲಹಾ ಸಮಿತಿ ಸದಸ್ಯರಾದ ಬಿದ್ದಂಡ ರಾಣಿ ಹಾಗೂ ನಾಯಕಂಡ ಬೇಬಿ ಚಿಣ್ಣಪ್ಪ ಹಾಜರಿದ್ದರು.
ಚುಮ್ಮಕ್ಕ ಗುಂಪಿನ ಸದಸ್ಯರು ಸ್ವಾಗತ ನೃತ್ಯ, ಕೋಲಾಟ ಹಾಗೂ ಇತರ ನೃತ್ಯ ಪ್ರದರ್ಶನ ನೀಡಿದರು. ಇದೆ ಸಂದರ್ಭ ಹಾಡು ನೃತ್ಯ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು.
ಕೊನೆಯಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆ ಹಾಗೂ ವಾಲಗತ್ತಾಟ್ ಸ್ಪರ್ಧೆ, ಸೀರೆಯ ಬೆಲೆ ಹೇಳುವ ಸ್ಪರ್ಧೆ ನಡೆದು ವಿಜೇತರಿಗೆ ಬಹುಮಾನ ನೀಡಲಾಯಿತು.
ಕೊಡವ ಪೊಮ್ಮಕ್ಕಡ ಒಕ್ಕೂಟದ ಕಾರ್ಯದರ್ಶಿ ಬಯವಂಡ ಇಂದಿರಾ ಬೆಳ್ಯಪ್ಪ ಸ್ವಾಗತಿಸಿದರೆ, ಮಾಳೇಟಿರ ಕವಿತಾ ಶ್ರೀನಿವಾಸ್ ನಿರೂಪಿಸಿದರು. ಖಜಾಂಚಿ ತಾತಂಡ ಯಶು ಕಬೀರ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಜಲಜೀವನ್ ಮಿಷನ್ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಚಾಲನೆ*
Next Article *ವಿರಾಜಪೇಟೆ : ಫಲಾನುಭವಿಗಳಿಗೆ ಉಚಿತ ಗ್ಯಾಸ್‌ ಸ್ಟವ್‌ ವಿತರಣೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.