Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*
  • *ರೂ.15 ಲಕ್ಷ ಪರಿಹಾರ ವಿತರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*
  • *ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.23 ರಿಂದ 3 ದಿನ ಅಂಗನವಾಡಿ ನೌಕರರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.23 ರಿಂದ 3 ದಿನ ಅಂಗನವಾಡಿ ನೌಕರರ ಪ್ರತಿಭಟನೆ*

ಜನವರಿ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜ.19 : ಕನಿಷ್ಟ ವೇತನ ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜ.23 ರಿಂದ 25ರವರೆಗೆ ಪ್ರತಿಭಟನೆ ನಡೆಸಲು ಕೊಡಗು ಜಿಲ್ಲಾ ಅಂಗನವಾಡಿ ನೌಕರರ ಸಂಘ ನಿರ್ಧರಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊನ್ನಂಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ.ಎಸ್.ಸುಮಿತ್ರ, ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಜ.23 ರಂದು ಜಿಲ್ಲಾ ವ್ಯಾಪ್ತಿಯಲ್ಲಿರುವ ಸುಮಾರು 860 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಕಾರ್ಯಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉಳಿದ ಎರಡು ದಿನಗಳ ಪ್ರತಿಭಟನೆ ಸಂದರ್ಭ ಅಂಗನವಾಡಿಗಳು ಎಂದಿನಂತೆ ಕಾರ್ಯನಿರ್ವಹಿಸಲು ಪರ್ಯಾಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಪ್ರಸ್ತುತ ಮಾಸಿಕ 11,500 ರೂ. ಗೌರವ ಧನವನ್ನಷ್ಟೆ ಪಡೆಯುತ್ತಿದ್ದಾರೆ. 2017ರ ಬಳಿಕ ಗೌರವ ಧನ ಹೆಚ್ಚಳವಾಗಿಲ್ಲ. ಬೆಲೆ ಏರಿಕೆಯ ಈ ದಿನಗಳಲ್ಲಿ ಕನಿಷ್ಟ 31 ಸಾವಿರ ವೇತನವನ್ನು ನೀಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗುವವರಿಗೆ ಕನಿಷ್ಟ 10 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
::: ಸಮಸ್ಯೆ ಕೇಳುವವರೆ ಇಲ್ಲ :::
ಅಂಗನವಾಡಿ ಸಿಬ್ಬಂದಿಗಳು ತಮಗೆ ಸೀಮಿತವಾದ ಕೆಲಸ ಕಾರ್ಯಗಳೊಂದಿಗೆ, ಇಲಾಖೇತರ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಸರ್ಕಾರದ ಭಾಗ್ಯ ಲಕ್ಷ್ಮಿ, ಮಾತೃವಂದನಾ, ಗೃಹಲಕ್ಷ್ಮಿ ಮೊದಲಾದವುಗಳಲ್ಲು ಅಂಗನವಾಡಿ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. ಇಂತಹ ಇಲಾಖೇತರ ಕೆಲಸಗಳನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ನಿಲ್ಲಿಸಬೇಕು ಮತ್ತು ಶಾಲಾ ಪೂರ್ವ ಮಕ್ಕಳ ಕಲಿಕೆಗೆ ಸಮಯ ಒದಗಿಸಬೇಕು. ಆದರೆ, ಇಂತಹ ನಮ್ಮ ಮೂಲಭೂತ ಸಮಸ್ಯೆಗಳನ್ನು ಕೇಳುವವರೆ ಇಲ್ಲದಂತಾಗಿದೆ ಎಂದು ಸಮಿತ್ರ ಬೇಸರ ವ್ಯಕ್ತಪಡಿಸಿದರು.
ಮಡಿಕೇರಿ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಬಿ.ಎಸ್.ಸರೋಜ ಮಾತನಾಡಿ, ಅಂಗನವಾಡಿಗಳಿಗೆ ಪ್ರಸ್ತುತ ಪುಡಿಯ ರೂಪದ ಪೌಷ್ಠಿಕ ಆಹಾರವನ್ನು ಸರಬರಾಜು ಮಾಡಲಾಗುತ್ತಿದೆ. ಇದನ್ನು ನೀರಿನಲ್ಲಿ ಕರಡಿ ಇದನ್ನು ಮಕ್ಕಳಿಗೆ ನೀಡುವ ಪರಿಸ್ಥಿತಿ ಇದೆ. ಈ ಎಲ್ಲಾ ಗೊಜಲುಗಳಿಂದ ಮಕ್ಕಳನ್ನು ಅಂಗನವಾಡಿಗಳಿಗೆ ಕಳುಹಿಸಲು ಹಿಂದೇಟು ಹಾಕುವ ವಾತಾವರಣ ನಿರ್ಮಾಣ ಆಗುತ್ತಿರುವುದರಿಂದ, ಪೂರಕ ಪೌಷ್ಠಿಕ ಆಹಾರದಲ್ಲಿ ಅಗತ್ಯ ಬದಲಾವಣೆ ಮಾಡಬೇಕೆಂದು ಒತ್ತಾಯಿಸಿದರು.
ಸೋಮವಾರಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಖಜಾಂಚಿ ಎಂ.ಬಿ.ಜಮುನ ಮಾತನಾಡಿ, ಚುನಾವಣಾ ಹಂತಗಳಲ್ಲಿ ಅಂಗನವಾಡಿ ನೌಕರರನ್ನು ಡಿಸೆಂಬರ್‍ನಿಂದ ಜೂನ್ ತಿಂಗಳವರೆಗೆ ಸರ್ಕಾರ ಬಳಸಿಕೊಂಡು ಮೊದಲ ಹಂತದಲ್ಲಿ ಕೇವಲ 5700 ರೂ. ಮತ್ತು ಮತ್ತೊಂದು ಕಂತಿನಲ್ಲಿ 1300 ರೂ.ಗಳನ್ನಷ್ಟೆ ನೀಡುತ್ತಿದೆ. ಇದರೊಂದಿಗೆ ಇಂತಹ ಅವಧಿಯಲ್ಲಿ ಅಂಗನವಾಡಿ ನೌಕರರು ತಮ್ಮ ಸ್ವಂತ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿಮಾಣವಾಗುತ್ತಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ವಿರಾಜಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಎಂ.ಬಿ.ಲೀಲಾವತಿ, ಪೊನ್ನಂಪೇಟೆ ತಾಲ್ಲೂಕು ಸಂಘದ ಕಾರ್ಯದರ್ಶಿ ಬಿ.ಸಿ.ಲಲಿತಾಕ್ಷಿ ಹಾಗೂ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷೆ ಎ.ವಿ.ಶೀಲಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.19 : ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ, ಪೊನ್ನಂಪೇಟೆ ತಾಲೂಕು,…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*

ಏಪ್ರಿಲ್ 19, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.