Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಳ್ಳಬೇಕು : ಸುನೀಲ್ ನಾಣಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಳ್ಳಬೇಕು : ಸುನೀಲ್ ನಾಣಯ್ಯ*

ಜನವರಿ 20, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.20 : NEWS DESK : ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರಲ್ಲಿ ಕನ್ನಡ ನೆಲ ಜಲ ಮತ್ತು ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಮಾಡುತ್ತಾ ಕನ್ನಡಿಗರಲ್ಲಿ ಜಾಗೃತವಾಗಿರುವ ಕನ್ನಡ ಅಭಿಮಾನವನ್ನು ಬಡಿದೆಬ್ಬಿಸುತ್ತಿದೆ ಎಂದು ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಅಧ್ಯಕ್ಷ ಮುಕ್ಕಾಟೀರ ಐ.ಸುನೀಲ್ ನಾಣಯ್ಯ ಹೇಳಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಹಾಗೂ ದೇವಣಗೇರಿ ಬಿ.ಸಿ.ಪ್ರೌಢಶಾಲೆ ವತಿಯಿಂದ ಶಾಲಾ ಸಭಾಂಗಣದಲ್ಲಿ ನಡೆದ ಮುಲ್ಲೆಂಗಡ ಶಂಕರಿ ಪೊನ್ನಪ್ಪ ಮತ್ತು ಮುಲ್ಲೇಂಗಡ ಮಧೋಶ್ ಪೂವಯ್ಯ ಅವರು ಸ್ಥಾಪಿಸಿದ “ದಿ. ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಸ್ಮರಣಾರ್ಥ ದತ್ತಿನಿಧಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಸಾಹಿತ್ಯವನ್ನು ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ದೇವಣಗೇರಿ ಬಿ.ಸಿ. ಪ್ರೌಢ ಶಾಲೆ ಮುಖ್ಯೋದ್ಯಾಯರಾದ ಹೆಚ್.ಡಿ. ಲೋಕೇಶ್ ಕನ್ನಡದ ಹಿರಿಯ ಕವಿ, ಸಾಹಿತಿಗಳ ಸಾಹಿತ್ಯದ ಬಗ್ಗೆ ಉಲ್ಲೇಖಿಸಿ ಮಾತನಾಡಿ, ಮಹಾಕವಿಗಳಾದ ಕುವೆಂಪು, ದ.ರಾ. ಬೇಂದ್ರೆ, ಕುಮಾರವ್ಯಾಸ, ಪಂಪ, ರನ್ನ ಇವರ ಸಾಹಿತ್ಯದ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ವಿದ್ಯಾರ್ಥಿಗಳು ಸಾಹಿತ್ಯ ಪುಸ್ತಕ ಓದಬೇಕು, ಬೇರೆ ಭಾಷೆಗಳನ್ನು ಸಂಪರ್ಕಕ್ಕಾಗಿ ಬಳಸಬಹುದು. ಆದರೆ ಮಾತೃ ಭಾಷೆ ಕನ್ನಡವನ್ನು ಗಟ್ಟಿಗೊಳಿಸಬೇಕು. ಕನ್ನಡ ಅಂಕಿಗಳನ್ನು ಬಳಸಿ ಅವುಗಳನ್ನು ಮುಂದಿನ ಪೀಳಿಗೆಗಾಗಿ ಉಳಿಸಬೇಕಿದೆ. ಕನ್ನಡ ಬೆಳೆದು ಬಂದಿರುವ ಹಾದಿ ಹಾಗೂ ನಾವು ಉಳಿಸಿಕೊಂಡು ಹೋಗುವ ಅನಿವಾರ್ಯದ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಓದಿನ ಅಭಿರುಚಿಯನ್ನು ಬೆಳೆಸಲು ದತ್ತಿ ಉಪನ್ಯಾಸದಂಥ ಕಾರ್ಯಕ್ರಮ ಸಹಕಾರಿ. ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ನಡೆಸಲಾದ ಈ ಕಾರ್ಯಕ್ರಮದಿಂದ ಪರಿಷತ್ತಿನ ಉದ್ದೇಶ ಈಡೇರಿದೆ. ವಿದ್ಯಾರ್ಥಿಗಳು ಸಾಧಿಸುವ ಛಲವನ್ನು ಮೈಗೂಡಿಸಿಕೊಂಡು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿ ಸಾಧನೆ ಮಾಡಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಹೆಚ್.ಜಿ. ಸಾವಿತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಚಲಿತ ವಿದ್ಯಾಮಾನದಲ್ಲಿ ಮಕ್ಕಳಿಗೆ ಮಾತೃಭಾಷೆ ಕಲಿಕೆ ಬಹಳ ಅತ್ಯವಶ್ಯಕವಾಗಿದೆ, ಕನ್ನಡ ಶಾಲೆಗೆ ಮಕ್ಕಳನ್ನು ನೋಂದಣಿ ಮಾಡಿಸುವಲ್ಲಿ ಪೆÇೀಷಕರ ಆಸಕ್ತಿ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ಆತಂಕದ ವಿಷಯವಾಗಿದೆ. ಕನ್ನಡ ಭಾಷಾ ಶಾಲೆಗಳು, ನಾವು ಕಲಿತ ಶಾಲೆಗಳು ಇಂದಿನ ದಿನಗಳಲ್ಲಿ ಅಳಿವಿನ ಅಂಚಿನಲ್ಲಿರುವುದನ್ನು ನಾವು ನೋಡುತಿದ್ದೇವೆ, ಕನ್ನಡದ ಕಾರ್ಯಕ್ರಮವನ್ನು ಆಯೋಜಿಸಿ ಕನ್ನಡಮ್ಮನ ತೇರನ್ನು ಎಳೆಯುವ ಕನ್ನಡದ ಮನಸುಗಳನ್ನು ಒಗ್ಗೂಡಿಸುವ ಕೆಲಸ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದರು.
ಸಾಹಿತಿ ಪುಷ್ಪಲತಾ ಶಿವಪ್ಪ ಕೊಡಗಿನ ಮಹಿಳಾ ಸಾಹಿತಿಗಳು ಕುರಿತು ಉಪನ್ಯಾಸ ನೀಡಿ ಮಾತನಾಡಿ ಕೊಡಗಿನ ಸಾಹಿತ್ಯ ಪರಂಪರೆ ನಡೆದು ಬಂದ ಹಾದಿ ಬಗ್ಗೆ ವಿವರಿಸಿ ಕೊಡಗಿನ ಸಾಹಿತ್ಯಕ್ಕೆ ಜಾನಪದ ಸೊಗಡು ಹೇಗೆ ತಳಕು ಹಾಕಿಕೊಂಡು ಬಂದಿದೆ. ಕರ್ನಾಟಕದ ಮಹಿಳಾ ಮಣಿಗಳು ಸಾಹಿತ್ಯ ಕ್ಷೇತ್ರಕ್ಕೆ ಯಾವ ರೀತಿ ದುಡಿದು ಜಾನಪದದ ಮೂಲಕ ಕತೆ ಕವಿತೆ ಬರೆದು ಸಾಹಿತ್ಯ ರಚನೆ ಮಾಡಿದ್ದಾರೆ ಎನ್ನುವ ಬಗ್ಗೆ ವಿವರಿಸಿದರಲ್ಲದೆ. ಕೊಡಗಿನ ಮುಲ್ಲೇಂಗಡ ಬೇಬಿ ಚೊಂದಮ್ಮ ಅವರು ಸಾಹಿತ್ಯ ಪಂಡಿತೆ ಎನ್ನುವ ಬಿರುದು ಪಡೆದುಕೊಂಡಿದ್ದಾರೆ. ಕೊಡಗಿನ ಪ್ರಥಮ ಬರಹಗಾರ್ತಿ ಕೊಡಗಿನ ಗೌರಮ್ಮ ಪ್ರಶಸ್ತಿ ಪಡೆದುಕೊಂಡ ಅನೇಕ ಸಾಹಿತಿಗಳು ನಮ್ಮಲ್ಲಿದ್ದಾರೆ ಎಂದು ಬರಹಗಾರರ ಬಗ್ಗೆ ಮಾಹಿತಿ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಅಮ್ಮತ್ತಿ ಹೋಬಳಿ ಮಟ್ಟದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಮನಸುಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಕನ್ನಡದ ಸಾಹಿತಿಗಳು ಹಾಗೂ ಕನ್ನಡ ನೆಲದ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಮಾಡುತ್ತಿದೆ. ಉಪನ್ಯಾಸಗಳ ಮೂಲಕ ನಮ್ಮ ನೆಲದ ಪ್ರತಿಭೆಗಳನ್ನು ಪರಿಚಯಿಸುವ ಕೆಲಸ ಮಾಡುತ್ತದೆ ಎಂದು ವಿವರಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಪಿ.ರಾಜೇಶ್, ನಾವು ಮಾಡುವ ಕೆಲಸದ ಮೇಲೆ ಶ್ರದ್ಧೆ ಹಾಗೂ ಭಕ್ತಿಯನ್ನು ಇಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಸಾಕು. ನಾವು ಜೀವನದಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯವಿದೆ. ವಿದ್ಯಾರ್ಥಿಗಳು ತಂದೆ-ತಾಯಿಗಳು ಹಾಗೂ ಗುರು ಹಿರಿಯರನ್ನು ಗೌರವದಿಂದ ಕಾಣಬೇಕು. ವಿನಯವಂತಿಕೆ ಹಾಗೂ ಶಿಸ್ತು, ಸಂಯವು ಜೀವನದ ಉಸಿರಾಗಬೇಕು. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪತ್ರಿಕೆ ಓದಬೇಕು. ಪ್ರಚಲಿತ ವಿದ್ಯಮಾನಗಳು ತಿಳಿಯಬೇಕು. ಮಕ್ಕಳಲ್ಲಿ ಸಾಹಿತ್ಯ ಪ್ರಜ್ಞೆ ಮೂಡಬೇಕು ಎಂದು ಹೇಳಿದರು.
ಸತತ 7 ವರ್ಷಗಳಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ದೇವಣಗೇರಿ ಬಿ.ಸಿ.ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದ ಹಿನ್ನೆಲೆ ಶಾಲಾ ಮುಖ್ಯೋಪದ್ಯಾಯರಾದ ಹೆಚ್.ಡಿ.ಲೋಕೇಶ್ ಅವರನ್ನು ಸಾಹಿತ್ಯ ಪರಿಷತ್ತ್ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಬಡಕಡ ರಜಿತ ಕಾರ್ಯಪ್ಪ, ಸೋಮೆಯಂಡ ಕೌಸಲ್ಯ ಸತೀಶ್, ಶಿಕ್ಷಕಿ ಪ್ರಮೀಳಾ, ಎ.ಸಿ.ಸುನೀತ ಸೇರಿದಂತೆ ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.