Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತಿ : ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು

*ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತಿ : ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*

January 22, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.22 NEWS DESK : ಪ್ರತಿಯೊಬ್ಬರೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು.
ಇಡೀ ವಿಶ್ವ ಒಂದು ಹಳ್ಳಿಯಾಗಿದೆ ಎಂದು ಹೇಳುತ್ತೇವೆ. ಆದರೆ ಜಾತಿಯತೆ ಹೋಗಿದೆಯೇ ಎಂಬುದನ್ನು ಆತ್ಮವಲೋಕನ ಮಾಡಿಕೊಳ್ಳಬೇಕು. ಮೌಡ್ಯ ಹಾಗೂ ಕಂದಾಚಾರಗಳಿಂದ ದೂರ ಇರಬೇಕು ಎಂದರು.
ಅಲ್ಲಮಪ್ರಭು, ಬಿಜ್ಜಳ ಸೇರಿದಂತೆ ಬಸವಾದಿ ಶರಣರು ಸಮಾನತೆಗಾಗಿ ಎಲ್ಲರನ್ನೂ ಒಟ್ಟುಗೂಡಿಸಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಬಸವೇಶ್ವರರ ಸಮಕಾಲೀನರಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಅಂಬಿಗರ ಚೌಡಯ್ಯ ಅವರು ಕಾಯಕ ನಿಷ್ಠೆಯಿಂದ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಆದರ್ಶ ತತ್ವಗಳನ್ನು ತಿಳಿದುಕೊಂಡು ಬದಲಾವಣೆಯತ್ತ ಹೆಜ್ಜೆ ಇಡಬೇಕು ಎಂದು ಅವರು ಹೇಳಿದರು.
ಭೋವಿ ಸಮಾಜದವರಿಗೆ ಜಾತಿ ಪ್ರಮಾಣ ಪತ್ರ ಒದಗಿಸುವಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಯಾರಿಗೂ ಅನ್ಯಾಯವಾಗದಂತೆ ಗಮನಹರಿಸಬೇಕು. ಅಗತ್ಯ ಸೌಲಭ್ಯಗಳು ತಲುಪಬೇಕು. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.
ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರು ಬಸವಣ್ಣ, ಅಲ್ಲಮಪ್ರಭುಗಳ ಕಾಲದ ಮಹಾನ್ ಪವಾಡ ಪುರುಷರು. 12ನೇ ಶತಮಾನದಲ್ಲೇ ಕಾಯಕದ ಮೂಲಕ ಆಧ್ಯಾತ್ಮ ಕಂಡುಕೊಂಡವರು. ಇವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.
ಫ.ಗು ಹಳಕಟ್ಟಿ ಅವರು ಸಿದ್ದರಾಮೇಶ್ವರ ವಚನಗಳನ್ನು ಸೇರಿ, ಶರಣರ ವಚನಗಳನ್ನು ಸಂಗ್ರಹಿಸಿದ್ದಾರೆ. ಇವರನ್ನು ಸೊನ್ನಲ್ಲಿಗೆ ಸಿದ್ದರಾಮೇಶ್ವರರು ಎಂತಲೂ ಕೂಡ ಕರೆಯುತ್ತಾರೆ. 12 ನೇ ಶತಮಾನದಲ್ಲೇ ಸಾವಿರಾರು ಕೆರೆ, ಕಟ್ಟೆಗಳನ್ನು ನಿರ್ಮಿಸಿದ್ದಾರೆ. ಅವರ ವಚನ ಸಂಸ್ಕøತಿಯನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ನಿಜಶರಣ ಅಂಬಿಗರ ಚೌಡಯ್ಯ ಅವರು ಕಲ್ಯಾಣ ಕ್ರಾಂತಿಯ ನಂತರ ಇತರ ಶರಣರಂತೆ ಕಲ್ಯಾಣವನ್ನು ತೊರೆದು ನಾನಾ ಸ್ಥಳಗಳನ್ನು ಸಂದರ್ಶಿಸಿ ರಾಣಿಬೆನ್ನೂರು ತಾಲ್ಲೂಕಿನ ಚೌಡದಾನಪುರದಲ್ಲಿನ ತುಂಗಭದ್ರಾ ನದಿಯ ತಟದಲ್ಲಿ ಅಂಬಿಗನ ಕಾಯಕವನ್ನು ಮುಂದುವರೆಸುತ್ತಾ ತಮ್ಮ ಜೀವನವನ್ನು ಪೂರೈಸಿ ಅದೇ ಗ್ರಾಮದಲ್ಲಿ ಶಿವೈಕ್ಯರಾದರು. ಈಗಲೂ ಚೌಡದಾನಪುರದ ನದಿಯ ಬಳಿ ಅವರ ಸಮಾದಿ ಗದ್ದುಗೆ ಇದ್ದು ಪುಣ್ಯಕ್ಷೇತ್ರವಾಗಿ ಕಂಗೊಳಿಸುತ್ತಿದೆ ಎಂದರು.
ಭೋವಿ ಸಮಾಜದ ಜಿಲ್ಲಾಧ್ಯಕ್ಷ ಡಿ.ಸುಜೀತ್ ಮಾತನಾಡಿ, ಭೋವಿ ಸಮಾಜದವರು ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಭೋವಿ ಸಮಾಜಕ್ಕೆ ಕಲ್ಲುಬಂಡೆ ಕೆಲಸಕ್ಕಾಗಿ 94ಎಫ್ ಕಾಯ್ದೆಯಡಿ ಶೇ.24 ರಷ್ಟು ಮೀಸಲಾತಿ ಒದಗಿಸಬೇಕು ಎಂದು ಕೋರಿದರು.
ಅಸಂಘಟಿತ ಕಾರ್ಮಿಕರಿಗೆ ಸ್ವಂತ ನಿವೇಶನ ಇಲ್ಲ. ನಿವೇಶನ ಒದಗಿಸಿಕೊಡಬೇಕು. ಜಾತಿ ಪ್ರಮಾಣ ಪತ್ರವನ್ನು ಸರಿಪಡಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನ ಕಲ್ಪಿಸಬೇಕು ಎಂದು ಕೋರಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರರು 12ನೇ ಶತಮಾನದಲ್ಲಿ ಶಿವಶರಣರಾಗಿದ್ದರು. ಕನ್ನಡ ಕಾವ್ಯ ಮತ್ತು ಸಮಕಾಲೀನ ವಚನ ಹಾಗೂ ಸಾಹಿತ್ಯಕಾರರಾಗಿದ್ದಾರೆ ಎಂದರು.
ಶಿವಯೋಗಿ ಸಿದ್ದರಾಮೇಶ್ವರರು ಕೆರೆಕಟ್ಟೆ, ಬಾವಿ ಇತರೆ ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಕಾಯಕ ಕಂಡಿದ್ದರು. ಇವರು 12 ನೇ ಶತಮಾನದಲ್ಲಿ ವಚನಕಾರರಲ್ಲಿ ಪ್ರಮುಖರಾಗಿದ್ದಾರೆ. ಹಾಗೆಯೇ ನಿಜಶರಣ ಅಂಬಿಗರ ಚೌಡಯ್ಯ ಅವರು ಸಮಾಜದಲ್ಲಿ ಸಮಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ಎಂದು ವಿವರಿಸಿದರು.
ತಹಶೀಲ್ದಾರರಾದ ಪ್ರವೀಣ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಚೆಟ್ಟಳ್ಳಿ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ*
Next Article *ಅಂತಿಮ ಮತದಾರರ ಪಟ್ಟಿ ಪ್ರಕಟ : ಕೊಡಗು ಜಿಲ್ಲೆಯಲ್ಲಿ 546 ಮತಗಟ್ಟೆಗಳು : 4,63,414 ಮತದಾರರು*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.