Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದ ವಿವಿಧೆಡೆ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ : ಆನಂದ್ ಬಸಪ್ಪರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದ ವಿವಿಧೆಡೆ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ : ಆನಂದ್ ಬಸಪ್ಪರಿಗೆ ಸನ್ಮಾನ*

ಜನವರಿ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ,ಜ.22 NEWS DESK :  ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆಯೊಂದಿಗೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಹಿನ್ನಲೆಯಲ್ಲಿ ದೇಶದ್ಯಾಂತ ನಡೆದ ವಿಶೇಷ ಪೂಜಾ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕೂಡ ಪ್ರತಿಸ್ಪಂದನಗೊಂಡು ಪ್ರತಿ ಹಳ್ಳಿಯ ದೇವಾಲಯಗಳಲ್ಲಿ ವಿಶೇಷ ಪೂಜೆ ಹೋಮ, ಹವನದಿಗಳ ಸಹಿತ ಅನ್ನಸಂತರ್ಪಣೆಯೊಂದಿಗೆ ಸಹಸ್ರಹಾರು ಭಕ್ತರು ಪಾಲ್ಗೊಂಡು ಐತಿಹಾಸಿಕ ಕ್ಷಣವನ್ನು ಸಂಭ್ರಮಿಸಿದರು. ಹೆಚ್ಚಿನ ದೇವಾಲಯಗಳಲ್ಲಿ ಬಹೃತ್ ಟಿವಿ ಪರದೆ ಅಳವಡಿಸುವ ಮೂಲಕ ಭಕ್ತಾಧಿಗಳು ಪೂಜೆಯೊಂದಿಗೆ ಅಯೋಧ್ಯೆಯ ನೇರ ಕಾರ್ಯಕ್ರಮವನ್ನು ಕಣ್ತುಂಬಿಕೊಂಡರು.
ಸುಂಟಿಕೊಪ್ಪದ ಶ್ರೀ ಕೊದಾಂಡರಾಮ ದೇವಾಲಯದಲ್ಲಿ ವಿಶೇಷ ಪೂಜೆ ಅನ್ನಸಂತರ್ಪಣೆ ನಡೆಯಿತು.
ಬೆಳಿಗ್ಗೆ ಗಣಪತಿ ಹೋಮದೊಂದಿಗೆ ಪ್ರಾರಂಭವಾಗಿ ರಾಮತರಾಕ ಹೋಮವನ್ನು ನಡೆಸಲಾಯಿತು. ಪೂಜಾ ಕೈಂಕರ್ಯಗಳನ್ನು ಪ್ರಧಾನ ಅರ್ಚಕ ದರ್ಶನ್ ಭಟ್, ಮನೋಜ್ ಭಟ್, ವೆಂಕಟರಮಣ ಭಟ್ ನೇರವೇರಿಸಿದರು.
ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನೆರವೇರಿತು.
ಕಾರ್ಯಕ್ರಮದ ನೇತೃತ್ವವನ್ನು ಪಿ.ಆರ್.ಸುನಿಲ್ ಕುಮಾರ್, ಎಸ್.ಶಾಂತರಾಂ ಕಾಮತ್, ಡಿ.ನರಸಿಂಹ, ಎಂ.ಎಸ್.ಸುನಿಲ್, ಧನುಕಾವೇರಪ್ಪ, ಬಿ.ಕೆ.ಮೋಹನ್, ಪ್ರಶಾಂತ್ ಕೋಕಾ, ವಾಸುದೇವ, ನಿಖಿಲ್ ಸೇರಿದಂತೆ ಸ್ವಯಂ ಸೇವಕರು ವಸಹಿಸಿದ್ದರು.

ದೊಡ್ಡಮನೆ ಆನಂದ್ ಬಸಪ್ಪ ರಿಗೆ ಗೌರವ ಅರ್ಪಣೆ : 1972ನೇ ಇಸವಿಯಲ್ಲಿ ಪನ್ಯ ತೋಟದ ಮಾಲೀಕರಾದ ಸರಸ್ವತಿ ಬಸಪ್ಪ ಮತ್ತು ಡಿ. ಬಸಪ್ಪ ಅವರು ಸುಂಟಿಕೊಪ್ಪದ ಕೊದಾಂಡ ರಾಮ ದೇವಾಲಯವನ್ನು ನಿರ್ಮಿಸಿಕೊಟ್ಟಿದ್ದರು.
ಅಲ್ಲದೆ ಜವಾಬ್ದಾರಿ ಮತ್ತು ನಿರ್ವಹಣೆಯನ್ನು ಅವರ ಕಾಲದವರೆಗೂ ನಿರ್ವಹಿಸಿ ಆನಂತರ ಅವರ ಪುತ್ರ ಡಿ.ಆನಂದ ಬಸಪ್ಪ ವಹಿಸಿದ್ದರು. ಪ್ರಸ್ತುತ ಅವರು ಈ ದೇವಾಲಯವನ್ನು ಸುಂಟಿಕೊಪ್ಪದ ಶ್ರೀ ರಾಮ ಸೇವಾ ಸಮಿತಿ ಟ್ರಸ್ಟ್‍ಗೆ ವಹಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಡಿ.ಆನಂದ ಬಸಪ್ಪ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಈ ಸಂದರ್ಭ ಟ್ರಸ್ಟಿಗಳಾದ ಕೆ.ಪಿ.ಜಗನ್ನಾಥ್, ಎ.ಲೋಕೇಶ್ ಕುಮಾರ್, ಬಿ.ಎಸ್.ಅಶೋಕ್ ಮತ್ತು ಮಂಜುನಾಥ್ ಅವರು ನಡೆಸಿಕೊಟ್ಟರು.
ಈ ಸಂದರ್ಭ ಟ್ರಸ್ಟ್ ಅಧ್ಯಕ್ಷ ಎಸ್.ಬಿ.ಶಂಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಊರಿನ ಪ್ರಮುಖರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಭಜನೆ ಬಳಿಕ ಅನ್ನ ಸಂತರ್ಪಣೆ ನಡೆಯಿತು.
ಶ್ರೀ ಬೈತೂರಪ್ಪ ಭಜನಾ ಮಂಡಳಿಯವರು ಬೆಳಗ್ಗೆ ಮತ್ತು ಸಂಜೆ ತಲಾ 3 ಗಂಟೆಗಳ ಕಾಲ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣಚ್ಚ ಕಾರ್ಯದರ್ಶಿ ಬಿ.ಸಿ.ದಿನೇಶ್, ಖಜಾಂಜಿ ಡಾ.ಎ.ಬಿ.ತಮ್ಮಯ್ಯ, ಟ್ರಸ್ಟಿಗಳಾದ ಜೆ.ಎಂ.ಹ್ಯಾರಿ ಕಾರ್ಯಪ್ಪ, ಎ.ಎಂ.ಸನ್ನಿ ಕಾರ್ಯಪ್ಪ, ಕೆ.ಎಸ್.ಮಂಜುನಾಥ್, ಎಂ.ಎಸ್.ಸುರೇಶ್ ಚಂಗಪ್ಪ, ಸಿ.ಎನ್.ದತ್ತ ಸೋಮಣ್ಣ ಪರುಪತ್ಯೆದಾರರಾದ ಎ.ಪಿ.ರಾಜೇಂದ್ರ, ಬೈತೂರಪ್ಪ ಭಜನಾ ಮಂಡಳಿಯ ಪುರೋಷತ್ತೋಮ ಬಂಗೇರ, ಪೂವಪ್ಪ, ಅಯ್ಯಪ್ಪ ನಾಯರ್, ನೀತಾ ಹರೀಶ್ ಸೇರಿದಂತೆ ನೂರಾರು ಭಕ್ತರು ಪಾಲ್ಗೊಂಡಿದ್ದರು.
7ನೇ ಹೊಸಕೋಟೆಯ ಶ್ರೀ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಅನ್ನ ಸಂತರ್ಪಣಾ ಕಾರ್ಯಕ್ರಮ ನಡೆಯಿತು.
ನೂರಾರು ಭಕ್ತರು ಪಾಲ್ಗೊಂಡಿದ್ದರು. ಇಲ್ಲಿಗೆ ಸಮೀಪದ ಮಾರುತಿನಗರದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನ ಸಂತರ್ಪಣೆ ನಡೆಯಿತು.
ಕಂಬಿಬಾಣೆಯ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಅನ್ನ ಸಂತರ್ಪಣೆ ನಡೆಯಿತು.
ಸುತ್ತ ಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಂಗವಾಗಿ ಗಣಪತಿ ಹೋಮ ಮತ್ತು ರಾಮತಾರಕ ಹೋಮವನ್ನು ದೇವಾಲಯದ ಪ್ರಧಾನ ಅರ್ಚಕರಾದ ಪ್ರಭಾಕರ ಕುದ್ದಣ್ಣಾಯ್ಯ ಮತ್ತು ಪ್ರಜಲ್ವ ಕುದ್ದಣ್ಣಾಯ್ಯ ನಡೆಸಿಕೊಟ್ಟರು.
ಕಾರ್ಯಕ್ರಮದ ನೇತೃತ್ವವನ್ನು ದೇವಾಲಯ ಸಮಿತಿ ಅಧ್ಯಕ್ಷ ಡಾ.ಶಶಿಕಾಂತರೈ, ಕಾರ್ಯದರ್ಶಿ ಬಿ.ಪಿ.ಗಣೇಶ, ಖಜಾಂಜಿ ಅಜಿತ್ ಕುಮಾರ್ ಸೇರಿದಂತೆ ದೇವಾಲಯದ ಪದಾಧಿಕಾರಿಗಳು ಸೇವಕರು ನಡೆಸಿಕೊಟ್ಟರು.
ಸುಂಟಿಕೊಪ್ಪ ರಾಮ ಮಂದಿರದಲ್ಲಿ ನಡೆಯುವ ಪೂಜಾ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಹಿಂದೂ ಬಾಂಧವರು ಕೋಳಿ, ಕುರಿ, ಮೀನು ಮಾರಾಟದ ಮಾಲೀಕರಿಗೆ ಸೋಮವಾರ ಮಧ್ಯಾಹ್ನದವರಿಗೆ ತಮ್ಮ ಅಂಗಡಿಗಳನ್ನು ಮುಚ್ಚಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.