Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ : ಕೊಡಗಿನ ಇಬ್ಬರು ಬಾಲ ವಿಜ್ಞಾನಿಗಳು ರಾಷ್ಟ್ರೀಯ ಸಮಾವೇಶಕ್ಕೆ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ : ಕೊಡಗಿನ ಇಬ್ಬರು ಬಾಲ ವಿಜ್ಞಾನಿಗಳು ರಾಷ್ಟ್ರೀಯ ಸಮಾವೇಶಕ್ಕೆ ಆಯ್ಕೆ*

ಜನವರಿ 23, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಜ.23 NEWS DESK :  ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಲಬುರಗಿ ಜಿಲ್ಲೆಯ ಸೇಡಂ ನಗರದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸಂಯುಕ್ತಾಶ್ರಯದಲ್ಲಿ ಮೂರು ದಿನಗಳ ಕಾಲ ” ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ- ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ “(Main theme : “Understanding Eco- System for Health & Well being “) ಎಂಬ ಕೇಂದ್ರ ವಿಷಯದಡಿ ಏರ್ಪಡಿಸಿದ್ದ 31ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶವು ಸಮಾರೋಪಗೊಂಡಿತು.
ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ವಿದ್ಯಾರ್ಥಿಗಳು ಕೇಂದ್ರ ವಿಷಯದಡಿ ತಮ್ಮ ಸುತ್ತಲಿನ ಪರಿಸರದಲ್ಲಿ ಸಮೀಕ್ಷೆ ಕೈಗೊಂಡು ವೈಜ್ಞಾನಿಕ ಯೋಜನಾ ಪ್ರಬಂಧ ಸಿದ್ದಪಡಿಸಿ ಉತ್ತಮವಾಗಿ ಪ್ರಬಂಧ ಮಂಡಿಸಿದ ಕೊಡಗು ಜಿಲ್ಲೆಯ ಇಬ್ಬರು ಬಾಲ ವಿಜ್ಞಾನಿಗಳು 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಗೊಂಡಿದ್ದಾರೆ.
ಸುಂಟಿಕೊಪ್ಪ ಸಮೀಪದ‌ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ 8 ನೇ ತರಗತಿಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಹಾಗೂ ಮಡಿಕೇರಿ ನಗರದ ಕೊಡಗು ವಿದ್ಯಾಲಯದ ವಿದ್ಯಾರ್ಥಿನಿ ಶ್ರೀಯಾ ಎಂ.ಕಿರಣ್ ಬಾಲ ವಿಜ್ಞಾನಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ವಿಜ್ಞಾನ ಸಮಾವೇಶದ ಜಿಲ್ಲಾ ಸಮನ್ವಯಾಧಿಕಾರಿ ಜಿ.ಶ್ರೀಹರ್ಷ ತಿಳಿಸಿದ್ದಾರೆ.

ವೈಜ್ಞಾನಿಕ ಸಂಶೋಧನೆಯ ಪ್ರಬಂಧದ ವಿವರಗಳು:
ಪ್ರಬಂಧ ಮಂಡಿಸಿದ ತಂಡದ ನಾಯಕಿ, ತಂಡದ ಸದಸ್ಯರು,
ವಿದ್ಯಾರ್ಥಿಗಳು ಮಂಡಿಸಿದ ವಿಷಯ
ಹಾಗೂ ಮಾರ್ಗದರ್ಶಿ ಶಿಕ್ಷಕರು
1) ನಗರ ಕಿರಿಯ ವಿಭಾಗ:: ಮಡಿಕೇರಿ ನಗರದ ಕೊಡಗು ವಿದ್ಯಾಲಯದ 7 ನೇ ತರಗತಿಯ
ಶ್ರೀಯಾ ಕಿರಣ್( ತಂಡದ ನಾಯಕಿ) ಮತ್ತು ಶ್ಲೋಕ್ ಅಯ್ಯಪ್ಪ ( ತಂಡದ ಸಹ ಸದಸ್ಯ)
ಮಂಡಿಸಿದ ವಿಷಯ : ಜೇನು ಕೃಷಿಯ ಮಹತ್ವ : ಮಾರ್ಗದರ್ಶಿ ಶಿಕ್ಷಕಿ ಎಂ.ಎಸ್.ಶೃತಿ ,

2) ಗ್ರಾಮಾಂತರ ಕಿರಿಯ ವಿಭಾಗ:: ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ತಂಡದ 8 ನೇ ತರಗತಿಯ ಎ..ಎಸ್.ಶ್ರೀಶಾ ( ತಂಡದ ನಾಯಕಿ ) ಮತ್ತು ಟಿ.ಎಸ್.ಶೃಜನ್ಯ ( ತಂಡದ ಸದಸ್ಯೆ ), ಮಂಡಿಸಿದ ವಿಷಯ : ಕಲುಷಿತಗೊಳ್ಳುತ್ತಿರುವ ಜೀವ
ನದಿ ಕಾವೇರಿ ಮತ್ತು ಪರಿಹಾರೋಪಾಯಗಳು, : ಮಾರ್ಗದರ್ಶಿ ಶಿಕ್ಷಕಿ : ಎಂ.ಟಿ.ಶೋಭಾ

2024 ರ ಏಪ್ರಿಲ್ ನಲ್ಲಿ ನಡೆಯಲಿರುವ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಕೊಡಗಿನ ಈ ಇಬ್ಬರು ಬಾಲ ವಿಜ್ಞಾನಿಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.ರಾಜ್ಯದಿಂದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿರುವ 30 ಕಿರಿಯ ವಿಜ್ಞಾನಿಗಳ ಪೈಕಿ ಕೊಡಗಿನ ಈ ಇಬ್ಬರು ಬಾಲ ವಿಜ್ಞಾನಿಗಳು ಆಯ್ಕೆಯಾಗಿರುವುದು ಕೊಡಗು ಜಿಲ್ಲೆಯ ಹೆಮ್ಮೆಯ ಸಂಗತಿ ಎಂದು ವಿಜ್ಞಾನ ಸಮಾವೇಶದ ಸಂಘಟಕರೂ ಆದ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ. ಬಾಲ ವಿಜ್ಞಾನಿಗಳಿಗೆ ರಾಜ್ಯಸಭಾ ಮಾಜಿ ಸದಸ್ಯರೂ ಆದ ಶಿಕ್ಷಣ ತಜ್ಞ ಬಸವರಾಜ್ ಪಾಟೀಲ್ ಸೇಡಂ ಪ್ರಶಸ್ತಿ ಪತ್ರ ವಿತರಿಸಿದರು.

ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ್ ಕಡ್ಲೇವಾಡ, ಸಮಾವೇಶದ ಸಂಯೋಜಕರಾದ ಡಾ ಕುಂಟೆಪ್ಪ ಗೌರೀಪುರ್, ಎಚ್.ಜಿ.ಹುದ್ದಾರ್ ಇದ್ದರು.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸುವ ಮೂಲಕ ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸೂಕ್ತ ವೇದಿಕೆ ಒದಗಿಸುತ್ತದೆ ಎಂದು ತಿಳಿಸಿದ್ದಾರೆ.

ಕೊಡಗರಹಳ್ಳಿ ಪ್ರೌಢಶಾಲೆಯ ಬಾಲ ವಿಜ್ಞಾನಿ ಎ.ಎಸ್.ಶ್ರೀಶಾ, ಸುಂಟಿಕೊಪ್ಪದಲ್ಲಿ ಟೈಲರ್ ಎ.ಕೆ.ಶ್ರೀಜು ಹಾಗೂ ಹರದೂರು ಗ್ರಾಮದ ಗ್ರಂಥಾಲಯದ ಗ್ರಂಥಪಾಲಕಿ ಕೆ.ಎಸ್.ಸಂಧ್ಯಾ ದಂಪತಿಯ ಪುತ್ರಿಯಾಗಿದ್ದರೆ, ಬಾಲ ವಿಜ್ಞಾನಿ ತಂಡದ ಸದಸ್ಯೆ ಸೃಜನ್ಯ, ಸುಂಟಿಕೊಪ್ಪ ಗದ್ದೆಹಳ್ಳದ ಸುನೀತಾ ಮತ್ತು ಟಿ.ವಿ.ಶಿವರಾಮ್ ಪುತ್ರಿ.

ಹಾಗೆಯೇ, ಮಡಿಕೇರಿ ಕೊಡಗು ವಿದ್ಯಾಲಯದ ಬಾಲ ವಿಜ್ಞಾನಿ ಶ್ರೀಯಾ ಕಿರಣ್ ,‌ ಮಡಿಕೇರಿ ಕೊಡಗು ವಿದ್ಯಾಲಯದ ಶಿಕ್ಷಕಿ ಕೆ.ಎಸ್.ನಳಿನಿ ಹಾಗೂ ಮದೆನಾಡು ಮೋಂಟಡ್ಕ ಕೆ.ಕಿರಣ್ ಕುಮಾರ್ ದಂಪತಿಯ ಪುತ್ರಿಯಾಗಿದ್ದರೆ, ಬಾಲ ವಿಜ್ಞಾನಿ ತಂಡದ ಸದಸ್ಯ ಶ್ಲೋಕ್ ಅಯ್ಯಪ್ಪ, ತಾಯಿ ಶಿಕ್ಷಕಿ ಕೆ.ಎಂ.ದೃಶ್ಯ ಮತ್ತು ತಂದೆ ಟಾಟಾ ಕಾಫಿ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಸಿ.ಎ.ರೋಶನ್ ದಂಪತಿಯ ಪುತ್ರ ಎಂದು ತಿಳಿಸಲಾಗಿದೆ.

ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಮಾರ್ಗದರ್ಶಿ ಶಿಕ್ಷಕರಾಗಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ತೊರೆನೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಜಿ.ಶ್ರೀಹರ್ಷ, ಪೊನ್ನಂಪೇಟೆ ತಾಲ್ಲೂಕಿನ ಕಿರಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ
ಎಂ.ಎ.ಶ್ರೀಜಾ , ಎಂ.ಕೆ.ವೀಣಾ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿದ್ದರು.

ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಗೊಂಡ ಮಕ್ಕಳು, ಮಾರ್ಗದರ್ಶಿ ಶಿಕ್ಷಕರು ಹಾಗೂ ಶಾಲೆಯ ಪ್ರಾಂಶುಪಾಲರು/ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದಕ್ಕೆ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ಪ್ರಬಂಧ ಮಂಡಿಸಿದ ಕೊಡಗಿನ ಮಕ್ಕಳ ವಿವರ:
ಕಲಬುರಗಿ ಜಿಲ್ಲೆಯ ಸೇಡಂ ನಗರದಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ವೈಜ್ಞಾನಿಕ ಪ್ರಬಂಧ ಮಂಡಿಸಿದ 8 ತಂಡಗಳಲ್ಲಿ ಎರಡು ತಂಡಗಳು ರಾಷ್ಟ್ರೀಯ ಸಮಾವೇಶಕ್ಕೆ ಆಯ್ಕೆಗೊಂಡಿದ್ದು, ಈ ಕೆಳಕಂಡ 6 ತಂಡಗಳ ವೈಜ್ಞಾನಿಕ ಯೋಜನಾ ಪ್ರಬಂಧವನ್ನು ಮಂಡಿಸಿದ ಬಾಲ ವಿಜ್ಞಾನಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳು ಮಂಡಿಸಿದ ವಿಷಯ ಹಾಗೂ ಮಾರ್ಗದರ್ಶಿ ಶಿಕ್ಷಕರ ವಿವರಗಳನ್ನು
ಕೆಳಗೆ ಆವರಣದಲ್ಲಿ ನೀಡಲಾಗಿದೆ.
ಗ್ರಾಮಾಂತರ ಹಿರಿಯ ವಿಭಾಗ:: ಸುಂಟಿಕೊಪ್ಪ ಬಳಿಯ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ಬಿ.ಆರ್.ಚೇತನ್ ಮತ್ತು ಎ.ಅಫ್ರಿನಾ ( ವನ್ಯಜೀವಿಗಳು ಮತ್ತು ಮಾನವ ಸಂಘರ್ಷ : ಕಾಡಾನೆಗಳ ಸುಳಿಯಲ್ಲಿ ರೈತಾಪಿ ಜನ: ಮಾರ್ಗದರ್ಶಿ ಶಿಕ್ಷಕಿ : ಟಿ.ವಿ.ಶೈಲಾ)
ತೊರೆನೂರು ಸರ್ಕಾರಿ ಪ್ರೌಢಶಾಲೆಯ ಟಿ.ಎ.ಪುಷ್ಪ ಮತ್ತು ಎ.ಆರ್.ಪೂರ್ವಿಕ ( ಸೊಳ್ಳೆಗಳ ಚೆಲ್ಲಾಟ – ಜನರಿಗೆ ಪ್ರಾಣ ಸಂಕಟ ,
ಮಾರ್ಗದರ್ಶಿ ಶಿಕ್ಷಕಿ : ಬಿ.ಪಿ.ಸವಿತ)
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಬೋರಮ್ಮ ಮತ್ತು ಕೆ.ವಿ.ಇಶ್ರತ್ ( ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಿ
ಆರೋಗ್ಯ ಕಾಪಾಡಿ :ಮಾರ್ಗದರ್ಶಿ ಶಿಕ್ಷಕರು : ಟಿ.ಜಿ.ಪ್ರೇಮಕುಮಾರ್ ಮತ್ತು ಬಿ.ಡಿ.ರಮ್ಯ)
ನಗರ ಹಿರಿಯ ವಿಭಾಗ::
ಮಡಿಕೇರಿ ನಗರದ ಕೊಡಗು ವಿದ್ಯಾಲಯದ ಪಿ.ವಿ.ಲಕ್ಷ್ಯ ಮತ್ತು ಎಂ.ಭವಿಷ್ಯ ( ವನ್ಯಜೀವಿಗಳು ಮತ್ತು ಮಾನವನ ನಡುವಿನ ಸಂಘರ್ಷ – ಬದುಕಿ ಮತ್ತು ನಮ್ಮನ್ನು ಬದುಕಲು ಬಿಡಿ – ಆನೆಗಳ ಜತೆ ಸಹಬಾಳ್ವೆ ಜೀವನಕ್ಕೆ ಕರೆ :
,ಮಾರ್ಗದರ್ಶಿ ಶಿಕ್ಷಕಿ : ಪಿ.ಎಸ್.ಪೊನ್ನಮ್ಮ)
ನಗರ ಕಿರಿಯ ವಿಭಾಗ:: ಮಡಿಕೇರಿ ನಗರದ ಕೊಡಗು ವಿದ್ಯಾಲಯದ
ಎಂ.ಪಿ.ಯಾಶಿಕ ಶೆಟ್ಟಿ ಮತ್ತು ಯಶ್ ಕಾರಿಯಪ್ಪ ( ಪರಿಸರ ವ್ಯವಸ್ಥೆಯಲ್ಲಿ ಏಡಿಗಳ ಕ್ಷೀಣಿಸುವಿಕೆ : ಮಾರ್ಗದರ್ಶಿ ಶಿಕ್ಷಕಿ : ಟಿ.ಜಯಶ್ರೀ)
ಗ್ರಾಮಾಂತರ ಕಿರಿಯ ವಿಭಾಗ::
ಪೊನ್ನಂಪೇಟೆ ಬಳಿಯ ಕಿರಗೂರು ಸರ್ಕಾರಿ ಪ್ರಾಥಮಿಕ ಶಾಲೆಯ ಎಚ್.ಬಿ.ಶ್ರೇಯಸ್ ಮತ್ತು ವೈ.ಆರ್.ಕೃತಿಕ್ ( ಮಾರಕವಾದ ಪ್ಲಾಸ್ಟಿಕ್ – ಪುನರ್ ಬಳಕೆ ಹಾದಿಯಲ್ಲಿ , ಮಾರ್ಗದರ್ಶಿ ಶಿಕ್ಷಕಿಯರು: ಎಂ.ಎ.ಶ್ರೀಜ ಮತ್ತು ಎಂ.ಕೆ. ವೀಣಾ)

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.