Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶ*

ಜನವರಿ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.24 : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನಿಂದ ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆಯೆಂದು ವಿವಿಯ ಕುಲಪತಿಗಳಾದ ಪ್ರೊ.ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಯುಜಿಸಿ ನಿಯಮಾವಳಿಗಳಂತೆ ಪೂರ್ಣಾವಧಿಯಲ್ಲಿ (ರೆಗ್ಯೂಲರ್ ತರಗತಿ) ಯಾವುದೇ ವಿಶ್ವ ವಿದ್ಯಾನಿಲಯದಲ್ಲಿ ಒಂದು ಕೋರ್ಸ್ ಮಾಡುತ್ತಿರುವವರು ಮುಕ್ತ ವಿವಿಯಲ್ಲಿ ಮತ್ತೊಂದು ಕೋರ್ಸ್‍ನ್ನು ಏಕಕಾಲದಲ್ಲಿ ಮಾಡಲು ಅವಕಾಶವನ್ನು ಒದಗಿಸಲಾಗಿದೆ.ಈ ಸದವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವಂತೆ ಕೋರಿಕೊಂಡರು.
ಮುಕ್ತ ವಿವಿಗೆ ಎ+ ಮಾನ್ಯತೆ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ನ್ಯಾಕ್‍ನಿಂದ ಎ+ ಮಾನ್ಯತೆ ದೊರಕಿದೆ. ರಾಷ್ಟ್ರದಲ್ಲಿ ಒಟ್ಟು 17 ಮುಕ್ತ ವಿವಿಗಳಿದ್ದು, ಇವುಗಳಲ್ಲಿ ಗುಜರಾತ್ ಮುಕ್ತ ವಿವಿ ಎ++ ಮಾನ್ಯತೆ ಪಡೆದಿದ್ದರೆ, ನಂತರದ ಸ್ಥಾನದಲ್ಲಿ ಎ+ ಮಾನ್ಯತೆಯೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಇರುವುದಾಗಿ ಸಂತಸ ವ್ಯಕಪಡಿಸಿದರು.
64 ವಿಷಯಗಳ ಅಧ್ಯಯನಕ್ಕೆ ಅವಕಾಶ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ಯುಜಿಸಿಯು 2023 ರಿಂದ 2028ರವರೆಗೆ ಅನ್ವಯವಾಗುವಂತೆ 64 ವಿಷಯಗಳ ಕೋರ್ಸ್‍ಗಳನ್ನು ನಡೆಸಲು ಅವಕಾಶವನ್ನು ಒದಗಿಸಿದೆಯೆಂದು ಮಾಹಿತಿಯನ್ನಿತ್ತರು.
ಮುಕ್ತ ವಿವಿಯಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ನೀಡಲಾಗುತ್ತಿದ್ದು, ಇದರ ಜೊತೆಗೆ ಪ್ರಸಕ್ತ ಸಾಲಿನಿಂದ ಸಮಾಜ ಕಾರ್ಯ ಎಂಬಿಎ ವಿಭಾಗದಲ್ಲಿ ಆಸ್ಪತ್ರೆ ಮತ್ತು ಆರೋಗ್ಯ ಕಾಳಜಿ ನಿರ್ವಹಣೆ, ಎಂಸಿಎ ಹಾಗೂ 10 ಆನ್ ಲೈನ್ ಕೋರ್ಸ್‍ಗಳಿಗೆ ಪ್ರವೇಶಾತಿ ಮಾಡಲಾಗುತ್ತಿದೆಯೆಂದು ವಿವರಗಳನ್ನಿತ್ತರು. ಮುಕ್ತ ವಿವಿಯಲ್ಲಿ ಎಂಬಿಎ ಕೋರ್ಸ್‍ಗೆ ಹೆಚ್ಚಿನ ಬೇಡಿಕೆ ಇದೆ. ಖಾಸಗಿಯಾಗಿ ಎಂಬಿಎ ಮಾಡುವುದಿದ್ದಲ್ಲಿ ವಿದ್ಯಾರ್ಥಿ 15 ರಿಂದ 20 ಲಕ್ಷ ರೂ. ವ್ಯಯಿಸಬೇಕಾಗುತ್ತದೆ. ಆದರೆ, ಮುಕ್ತ ವಿವಿಯಲ್ಲಿ ಎಂಬಿಎ ವ್ಯಾಸಂಗಕ್ಕೆ 25 ಸಾವಿರ ರೂ. ಶುಲ್ಕವನ್ನಷ್ಟೆ ಪಡೆಯಲಾಗುತ್ತದೆಂದು ಪ್ರೊ. ಶರಣಪಪ್ಪ ವಿ. ಹಲಸೆ ತಿಳಿಸಿದರು.
ಪ್ರವೇಶಾತಿ ಪ್ರಾರಂಭ- ಪ್ರಸಕ್ತ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಇದೇ ಜ.10 ರಿಂದ ಆರಂಭವಾಗಿದ್ದು, ಮಾ.31 ಕೊನೆಯ ದಿನಾಂಕವಾಗಿದೆ. ರಾಜ್ಯ ವ್ಯಾಪಿ ವಿವಿಯ 34 ಪ್ರಾದೇಶಿಕ ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಪ್ರವೇಶಾತಿ ಪಡೆದುಕೊಳ್ಳಬಹುದಾಗಿದೆಯೆಂದು ಸ್ಪಷ್ಟಪಡಿಸಿದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಮಡಿಕೇರಿ ಪ್ರಾದೇಶಿಕ ಕೇಂದ್ರ ಮಡಿಕೇರಿಯ ಸರ್ಕಾರಿ ಪಪೂ ಕಾಲೇಜು ಆವರಣದ ಫೀ.ಮಾ. ಕಾರ್ಯಪ್ಪ ಅಡಿಟೋರಿಯಂನಲ್ಲಿ ಕೇಂದ್ರ ಕಾರ್ಯಾಚರಿಸುತ್ತಿದೆ. ಪ್ರವೇಶಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ದೂ.08272-201147, 8073342310, 9141938803, 9483391260, 8296215714ನ್ನು ಸಂಪರ್ಕಿಸಬಹುದೆಂದು ತಿಳಿಸಿದರು.
ಬೋಧನಾ ಶುಲ್ಕ ರಿಯಾಯಿತಿ- ಮುಕ್ತ ವಿವಿಯಲ್ಲಿ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಿಗೆ ಪ್ರವೇಶಾತಿ ಪಡೆಯುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ, ಸೈನ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಮತ್ತು ಮಾಜಿ ಸೈನಿಕರ ವಿದ್ಯಾರ್ಥಿಗಳಿಗೆ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಪತ್ನಿ ಇಲ್ಲವೆ ಪತಿ ಮತ್ತು ಇಬ್ಬರು ಮಕ್ಕಳಿಗೆ ಶೇ.25 ರಷ್ಟು ರಿಯಾಯಿತಿ, ಕೆಎಸ್‍ಆರ್‍ಟಿಸಿ, ಬಿಎಂಟಿಸಿ , ಎನ್‍ಡಬ್ಲ್ಯುಕೆಎಸ್‍ಆರ್‍ಟಿಸಿ, ಕೆಕೆಆರ್‌ಟಿಸಿ ನೌಕರರುಗಳಿಗೆ ಶೇ.25 ರಷ್ಟು ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆಂದು ಸ್ಪಷ್ಟಪಡಿಸಿದರು.
ಬೋಧನಾ ಶುಲ್ಕದಲ್ಲಿ ತೃತೀಯ ಲಿಂಗದ ವಿದ್ಯಾರ್ಥಿಗಳು, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿಇಡಿ, ಎಂಬಿಎ ಹೊರತು ಪಡಿಸಿ), ಕೋವಿಡ್ ಸಾಂಕ್ರಾಮಿಕದಿಂದ ತಂದೆ,ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಅವರು ಅರ್ಹತೆ ಹೊಂದಿ ಪ್ರವೇಶ ಬಯಸುವ ಶಿಕ್ಷಣ ಕ್ರಮಗಳಿಗೆ ಪೂರ್ಣ ವಿನಾಯಿತಿ ನೀಡಲಾಗುತ್ತದೆಂದು ಮಾಹಿತಿಯನ್ನಿತ್ತರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯ ಕಾರ್ಯನಿರ್ವಾಹಕ ಅಭಿಯಂತರ ಭಾಸ್ಕರ್ ಹಾಗೂ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.