Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶ*
ಇತ್ತೀಚಿನ ಸುದ್ದಿಗಳು

*ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶ*

January 24, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.24 : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನಿಂದ ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆಯೆಂದು ವಿವಿಯ ಕುಲಪತಿಗಳಾದ ಪ್ರೊ.ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಯುಜಿಸಿ ನಿಯಮಾವಳಿಗಳಂತೆ ಪೂರ್ಣಾವಧಿಯಲ್ಲಿ (ರೆಗ್ಯೂಲರ್ ತರಗತಿ) ಯಾವುದೇ ವಿಶ್ವ ವಿದ್ಯಾನಿಲಯದಲ್ಲಿ ಒಂದು ಕೋರ್ಸ್ ಮಾಡುತ್ತಿರುವವರು ಮುಕ್ತ ವಿವಿಯಲ್ಲಿ ಮತ್ತೊಂದು ಕೋರ್ಸ್‍ನ್ನು ಏಕಕಾಲದಲ್ಲಿ ಮಾಡಲು ಅವಕಾಶವನ್ನು ಒದಗಿಸಲಾಗಿದೆ.ಈ ಸದವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವಂತೆ ಕೋರಿಕೊಂಡರು.
ಮುಕ್ತ ವಿವಿಗೆ ಎ+ ಮಾನ್ಯತೆ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ನ್ಯಾಕ್‍ನಿಂದ ಎ+ ಮಾನ್ಯತೆ ದೊರಕಿದೆ. ರಾಷ್ಟ್ರದಲ್ಲಿ ಒಟ್ಟು 17 ಮುಕ್ತ ವಿವಿಗಳಿದ್ದು, ಇವುಗಳಲ್ಲಿ ಗುಜರಾತ್ ಮುಕ್ತ ವಿವಿ ಎ++ ಮಾನ್ಯತೆ ಪಡೆದಿದ್ದರೆ, ನಂತರದ ಸ್ಥಾನದಲ್ಲಿ ಎ+ ಮಾನ್ಯತೆಯೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಇರುವುದಾಗಿ ಸಂತಸ ವ್ಯಕಪಡಿಸಿದರು.
64 ವಿಷಯಗಳ ಅಧ್ಯಯನಕ್ಕೆ ಅವಕಾಶ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ಯುಜಿಸಿಯು 2023 ರಿಂದ 2028ರವರೆಗೆ ಅನ್ವಯವಾಗುವಂತೆ 64 ವಿಷಯಗಳ ಕೋರ್ಸ್‍ಗಳನ್ನು ನಡೆಸಲು ಅವಕಾಶವನ್ನು ಒದಗಿಸಿದೆಯೆಂದು ಮಾಹಿತಿಯನ್ನಿತ್ತರು.
ಮುಕ್ತ ವಿವಿಯಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ನೀಡಲಾಗುತ್ತಿದ್ದು, ಇದರ ಜೊತೆಗೆ ಪ್ರಸಕ್ತ ಸಾಲಿನಿಂದ ಸಮಾಜ ಕಾರ್ಯ ಎಂಬಿಎ ವಿಭಾಗದಲ್ಲಿ ಆಸ್ಪತ್ರೆ ಮತ್ತು ಆರೋಗ್ಯ ಕಾಳಜಿ ನಿರ್ವಹಣೆ, ಎಂಸಿಎ ಹಾಗೂ 10 ಆನ್ ಲೈನ್ ಕೋರ್ಸ್‍ಗಳಿಗೆ ಪ್ರವೇಶಾತಿ ಮಾಡಲಾಗುತ್ತಿದೆಯೆಂದು ವಿವರಗಳನ್ನಿತ್ತರು. ಮುಕ್ತ ವಿವಿಯಲ್ಲಿ ಎಂಬಿಎ ಕೋರ್ಸ್‍ಗೆ ಹೆಚ್ಚಿನ ಬೇಡಿಕೆ ಇದೆ. ಖಾಸಗಿಯಾಗಿ ಎಂಬಿಎ ಮಾಡುವುದಿದ್ದಲ್ಲಿ ವಿದ್ಯಾರ್ಥಿ 15 ರಿಂದ 20 ಲಕ್ಷ ರೂ. ವ್ಯಯಿಸಬೇಕಾಗುತ್ತದೆ. ಆದರೆ, ಮುಕ್ತ ವಿವಿಯಲ್ಲಿ ಎಂಬಿಎ ವ್ಯಾಸಂಗಕ್ಕೆ 25 ಸಾವಿರ ರೂ. ಶುಲ್ಕವನ್ನಷ್ಟೆ ಪಡೆಯಲಾಗುತ್ತದೆಂದು ಪ್ರೊ. ಶರಣಪಪ್ಪ ವಿ. ಹಲಸೆ ತಿಳಿಸಿದರು.
ಪ್ರವೇಶಾತಿ ಪ್ರಾರಂಭ- ಪ್ರಸಕ್ತ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಇದೇ ಜ.10 ರಿಂದ ಆರಂಭವಾಗಿದ್ದು, ಮಾ.31 ಕೊನೆಯ ದಿನಾಂಕವಾಗಿದೆ. ರಾಜ್ಯ ವ್ಯಾಪಿ ವಿವಿಯ 34 ಪ್ರಾದೇಶಿಕ ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಪ್ರವೇಶಾತಿ ಪಡೆದುಕೊಳ್ಳಬಹುದಾಗಿದೆಯೆಂದು ಸ್ಪಷ್ಟಪಡಿಸಿದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಮಡಿಕೇರಿ ಪ್ರಾದೇಶಿಕ ಕೇಂದ್ರ ಮಡಿಕೇರಿಯ ಸರ್ಕಾರಿ ಪಪೂ ಕಾಲೇಜು ಆವರಣದ ಫೀ.ಮಾ. ಕಾರ್ಯಪ್ಪ ಅಡಿಟೋರಿಯಂನಲ್ಲಿ ಕೇಂದ್ರ ಕಾರ್ಯಾಚರಿಸುತ್ತಿದೆ. ಪ್ರವೇಶಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ದೂ.08272-201147, 8073342310, 9141938803, 9483391260, 8296215714ನ್ನು ಸಂಪರ್ಕಿಸಬಹುದೆಂದು ತಿಳಿಸಿದರು.
ಬೋಧನಾ ಶುಲ್ಕ ರಿಯಾಯಿತಿ- ಮುಕ್ತ ವಿವಿಯಲ್ಲಿ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಿಗೆ ಪ್ರವೇಶಾತಿ ಪಡೆಯುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ, ಸೈನ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಮತ್ತು ಮಾಜಿ ಸೈನಿಕರ ವಿದ್ಯಾರ್ಥಿಗಳಿಗೆ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಪತ್ನಿ ಇಲ್ಲವೆ ಪತಿ ಮತ್ತು ಇಬ್ಬರು ಮಕ್ಕಳಿಗೆ ಶೇ.25 ರಷ್ಟು ರಿಯಾಯಿತಿ, ಕೆಎಸ್‍ಆರ್‍ಟಿಸಿ, ಬಿಎಂಟಿಸಿ , ಎನ್‍ಡಬ್ಲ್ಯುಕೆಎಸ್‍ಆರ್‍ಟಿಸಿ, ಕೆಕೆಆರ್‌ಟಿಸಿ ನೌಕರರುಗಳಿಗೆ ಶೇ.25 ರಷ್ಟು ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆಂದು ಸ್ಪಷ್ಟಪಡಿಸಿದರು.
ಬೋಧನಾ ಶುಲ್ಕದಲ್ಲಿ ತೃತೀಯ ಲಿಂಗದ ವಿದ್ಯಾರ್ಥಿಗಳು, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿಇಡಿ, ಎಂಬಿಎ ಹೊರತು ಪಡಿಸಿ), ಕೋವಿಡ್ ಸಾಂಕ್ರಾಮಿಕದಿಂದ ತಂದೆ,ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಅವರು ಅರ್ಹತೆ ಹೊಂದಿ ಪ್ರವೇಶ ಬಯಸುವ ಶಿಕ್ಷಣ ಕ್ರಮಗಳಿಗೆ ಪೂರ್ಣ ವಿನಾಯಿತಿ ನೀಡಲಾಗುತ್ತದೆಂದು ಮಾಹಿತಿಯನ್ನಿತ್ತರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯ ಕಾರ್ಯನಿರ್ವಾಹಕ ಅಭಿಯಂತರ ಭಾಸ್ಕರ್ ಹಾಗೂ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ*
Next Article *ಬಜೆಟ್ ಪೂರ್ವ ಜನಾಗ್ರಹ ಬೃಹತ್ ಪ್ರತಿಭಟನೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.