ಮಡಿಕೇರಿ ಜ.26 : ಸಂವಿಧಾನ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜಾಗೃತಿ ಅಭಿಯಾನದ ಸ್ತಬ್ಧಚಿತ್ರಕ್ಕೆ ಚಾಲನೆ ನೀಡಿದರು.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದ ಸಂವಿಧಾನದ ಮಹತ್ವ ತಿಳಿಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ 22 ದಿನಗಳ ಕಾಲ ಸಂವಿಧಾನ ಜಾಗೃತಿ ಜಾಥ ಅಭಿಯಾನ ನಡೆಯಲಿದ್ದು, ಶಾಲಾ-ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಕೋರಿದರು.
ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
‘ಭಾರತ ಸಂವಿಧಾನ ಪೀಠಿಕೆ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಕಲ್ಪನೆ ಸಾಮಾಜಿಕ ನ್ಯಾಯ, ಆರ್ಥಿಕ, ಮತ್ತು ರಾಜಕೀಯ ಪರಿಕಲ್ಪನೆ, ಬಸವಣ್ಣನವರ ವಚನಗಳು, ಭಾರತದ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಸ್ಥಳೀಯ ಐತಿಹಾಸಿಕ ವ್ಯಕ್ತಿಗಳು, ಸಾಹಿತ್ಯ ದಿಗ್ಗಜರು ಸೇರಿದಂತೆ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳೀಯ ಕಲೆ ಮತ್ತು ಸಂಸ್ಕೃತಿಗಳನ್ನು ಒಳಗೊಂಡ ‘ಸ್ತಬ್ದಚಿತ್ರ’ ಮೂಲಕ ಸಂವಿಧಾನದ ಜಾಗೃತಿ ಜಾಥ ಅಭಿಯಾನ ನಡೆಯಲಿದೆ.
ಶಾಸಕರಾದ ಡಾ|| ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ದಿವಾಕರ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಇತರರು ಇದ್ದರು.
ಏಲ್ಲೆಲ್ಲಿ ಸಂವಿಧಾನ ಜಾಗೃತಿ ಅಭಿಯಾನ: ಮಡಿಕೇರಿ ತಾಲ್ಲೂಕಿನಲ್ಲಿ ಜನವರಿ, 27 ರಂದು ಪೆರಾಜೆ, ಚೆಂಬು, ಸಂಪಾಜೆ, ಮದೆ, ಮೇಕೇರಿ ಗ್ರಾಮಗಳಲ್ಲಿ ಜಾಥ ಸಂಚರಿಸಲಿದೆ.
ಜನವರಿ, 28 ರಂದು ಬೆಟ್ಟಗೇರಿ, ಚೇರಂಬಾಣೆ, ಕುಂದಚೇರಿ, ಕರಿಕೆ, ಜನವರಿ, 29 ರಂದು ಭಾಗಮಂಡಲ, ಅಯ್ಯಂಗೇರಿ, ಬಲ್ಲಮಾವಟಿ, ಎಮ್ಮೆಮಾಡು, ನಾಪೋಕ್ಲು, ಜನವರಿ, 30 ರಂದು ಕುಂಜಿಲ ಕಕ್ಕಬ್ಬೆ, ನರಿಯಂದಡ, ಕೊಣಂಜಗೇರಿಪಾರಾಣೆ, ಹೊದ್ದೂರು, ಮೂರ್ನಾಡು, ಜನವರಿ, 31 ರಂದು ಹಾಕತ್ತೂರು, ಮರಗೋಡು, ಹೊಸ್ಕೇರಿ, ಕಡಗದಾಳು, ಕೆ.ನಿಡುಗಣೆ, ಫೆಬ್ರವರಿ, 01 ರಂದು ಗಾಳಿಬೀಡು, ಮಕ್ಕಂದೂರು.
ಫೆಬ್ರವರಿ, 01 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಕೆದಕಲ್, ಚೆಟ್ಟಳ್ಳಿ, ಫೆಬ್ರವರಿ, 02 ರಂದು ಸುಂಟಿಕೊಪ್ಪ, ಹರದೂರು, ಮಾದಪುರ, ಗರ್ವಾಲೆ, ಕಿರಗಂದೂರು ಗ್ರಾಮಗಳಲ್ಲಿ ಅಭಿಯಾನ ನಡೆಯಲಿದೆ.
ಫೆಬ್ರವರಿ, 03 ರಂದು ಐಗೂರು, ಬೇಲೂರು, ತೋಳೂರು ಶೆಟ್ಟಳ್ಳಿ, ಬೆಟ್ಟದಳ್ಳಿ, ಶಾಂತಳ್ಳಿ, ಫೆಬ್ರವರಿ, 04 ರಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ಹಾನಗಲ್ಲು, ಚೌಡ್ಲು, ದೊಡ್ಡಮಳ್ತೆ, ಗೌಡಳ್ಳಿ ಇಲ್ಲಿ ಅಭಿಯಾನ ನಡೆಯಲಿದೆ.
ಫೆಬ್ರವರಿ, 05 ರಂದು ಬೆಸ್ಸೂರು, ಕೊಡ್ಲಿಪೇಟೆ, ಬ್ಯಾಡಗೊಟ್ಟ, ಹಂಡ್ಲಿ, ಶನಿವಾರಸಂತೆ, ಫೆಬ್ರವರಿ, 06 ರಂದು ದುಂಡಳ್ಳಿ, ನಿಡ್ತ, ಆಲೂರು ಸಿದ್ದಾಪುರ, ಗಣಗೂರು, ನೇರುಗಳಲೆ. ಫೆಬ್ರವರಿ, 07 ರಂದು ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು ಇಲ್ಲಿ ಅಭಿಯಾನ ನಡೆಯಲಿದೆ.
ಫೆಬ್ರವರಿ, 08 ರಂದು ನಾಕೂರು ಶಿರಂಗಾಲ, 7ನೇ ಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ, ಗುಡ್ಡೆಹೊಸೂರು, ಫೆಬ್ರವರಿ, 09 ರಂದು ಕುಶಾಲನಗರ ಪುರಸಭೆ, ನಂಜರಾಯಪಟ್ಟಣ, ವಾಲ್ನೂರು ತ್ಯಾಗತ್ತೂರು, ನೆಲ್ಲಿಹುದಿಕೇರಿ,
ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ಫೆಬ್ರವರಿ,10 ರಂದು ಸಿದ್ದಾಪುರ, ಮಾಲ್ದಾರೆ, ಚೆನ್ನಯ್ಯನ ಕೋಟೆ, ಪಾಲಿಬೆಟ್ಟ, ಫೆಬ್ರವರಿ, 11 ರಂದು ಹೊಸೂರು, ಕಾರ್ಮಾಡು, ಅಮ್ಮತ್ತಿ, ಕಣ್ಣಂಗಾಲ, ಹಾಲುಗುಂದ, ಫೆಬ್ರವರಿ, 12 ರಂದು ಬಿಳುಗುಂದ, ಚೆಂಬೆಳ್ಳೂರು, ಕಾಕೋಟು ಪರಂಬು, ಕದನೂರು, ಕೆದಮುಳ್ಳೂರು, ಫೆಬ್ರವರಿ, 13 ರಂದು ವಿರಾಜಪೇಟೆ ಪುರಸಭೆ, ಬೇಟೋಳಿ, ಆರ್ಜಿ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಫೆಬ್ರವರಿ, 14 ರಂದು ಹಾತೂರು, ಗೋಣಿಕೊಪ್ಪಲು, ಅರುವತ್ತೋಕ್ಲು, ಪೊನ್ನಂಪೇಟೆ, ಕಿರುಗೂರು, ಫೆಬ್ರವರಿ, 15 ರಂದು ಹುದಿಕೇರಿ, ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ ಮತ್ತು ಕುಟ್ಟ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥ ನಡೆಯಲಿದೆ.
ಫೆಬ್ರವರಿ, 16 ರಂದು ಕೆ.ಬಾಡಗ, ನಾಲ್ಕೇರಿ, ಕಾನೂರು, ಬಲ್ಯಮಂಡೂರು, ನಿಟ್ಟೂರು, ಫೆಬ್ರವರಿ, 17 ರಂದು ಬಾಳಲೆ, ಪೊನ್ನಪ್ಪಸಂತೆ, ಮಾಯಮುಡಿ, ದೇವರಪುರ, ತಿತಿಮತಿ, ಈ ಪ್ರದೇಶಗಳಲ್ಲಿ ಸಂವಿಧಾನ ಜಾಗೃತಿ ಅಭಿಯಾನ ನಡೆಯಲಿದೆ.







