Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ಸಾರ್ವಜನಿಕರಿಂದ ರಾಜ್ಯ ಮಾನವ ಹಕ್ಕು ಆಯೋಗದಿಂದ ಅಹವಾಲು ಸ್ವೀಕಾರ : ಹಾಡಿ ಜನರಿಗೆ ಕನಿಷ್ಠ ಸೌಲಭ್ಯ ತಲುಪಿಸಲು ನಾರಾಯಣ ಸ್ವಾಮಿ ತಾಕೀತು*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ಸಾರ್ವಜನಿಕರಿಂದ ರಾಜ್ಯ ಮಾನವ ಹಕ್ಕು ಆಯೋಗದಿಂದ ಅಹವಾಲು ಸ್ವೀಕಾರ : ಹಾಡಿ ಜನರಿಗೆ ಕನಿಷ್ಠ ಸೌಲಭ್ಯ ತಲುಪಿಸಲು ನಾರಾಯಣ ಸ್ವಾಮಿ ತಾಕೀತು*

January 31, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ವಿರಾಜಪೇಟೆ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಅಹವಾಲು ಸ್ವೀಕರಿಸುವುದಕ್ಕೂ ಮೊದಲು ಮಾತನಾಡಿದ ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ಎಲ್.ನಾರಾಯಣಸ್ವಾಮಿ, ಬಾಳುಗೋಡು ಯರವ ಕುಟುಂಬದವರು ವಾಸ ಮಾಡುತ್ತಿರುವುದನ್ನು ಗಮನಿಸಿ ಒಂದು ರೀತಿ ವಿಚಲಿತನಾದೆ ಎಂದು ಬೇಸರ ವ್ಯಕ್ತಪಡಿಸಿದರು.
ಭಾರತ ದೇಶ ಚಂದ್ರಯಾನ ಉಡಾವಣೆ ಮಾಡಿ ಯಶಸ್ಸುಗಳಿಸಿದೆ. ವಿಶ್ವದ ಜಿಡಿಪಿಯಲ್ಲಿ 10 ರೊಳಗಿನ ಸ್ಥಾನವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಆದರೆ ವಾಸಕ್ಕೆ ಯೋಗ್ಯವಾದ ನಿವೇಶನ, ಮನೆ, ವಿದ್ಯುತ್ ಹಾಗೂ ಸಾರಿಗೆ ಸಂಪರ್ಕ ಹೊಂದದೆ ಇರುವ ಎಷ್ಟೋ ಕಡುಬಡ ಕುಟುಂಬಗಳಿದ್ದು, ಭಾರತ ವಿಕಾಸ ಹೊಂದಿದೆಯೇ ಎಂಬುದನ್ನು ಪ್ರತಿಯೊಬ್ಬರೂ ಅವಲೋಕನ ಮಾಡಬೇಕಿದೆ ಎಂದರು.
ಆದಿವಾಸಿ ಜನರಿಗೆ ಬೇಕಿರುವ ನಿವೇಶನ, ಮನೆ, ದೀಪ, ಹತ್ತಿರದಲ್ಲಿ ಅಂಗನವಾಡಿ, ಶಾಲೆ, ಇಂತಹ ಕನಿಷ್ಠ ಮೂಲ ಸೌಲಭ್ಯ ಇಲ್ಲದಿರುವುದು ನಮ್ಮ ವ್ಯವಸ್ಥೆ ಯಾವ ಮಟ್ಟಕ್ಕೆ ಇದೆ ಎಂಬುದನ್ನು ಪ್ರತಿಯೊಬ್ಬರೂ ಆತ್ಮವಲೋಕನ ಮಾಡಬೇಕಿದೆ ಎಂದು ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ಎಲ್.ನಾರಾಯಣಸ್ವಾಮಿ ಅವರು ನೋವಿನಿಂದ ನುಡಿದರು.
ಬಾಳುಗೋಡು ಯರವ ಹಾಡಿಯ ಜನರಿಗೆ ಕನಿಷ್ಠ ಮೂಲ ಸೌಲಭ್ಯವನ್ನಾದರೂ ಕಲ್ಪಿಸಬೇಕು. ಸರ್ಕಾರದ ವ್ಯವಸ್ಥೆಯಲ್ಲಿರುವವರಿಗೆ ಎಲ್ಲಾ ರೀತಿಯ ಸೌಲಭ್ಯವನ್ನು ಕಲ್ಪಿಸುತ್ತಿದೆ. ಆದರೆ ಇಂತಹ ವಸತಿರಹಿತ ನಿರ್ಗತಿಕ ಕುಟುಂಬಗಳಿಗೆ ಸೌಲಭ್ಯ ಇಲ್ಲದಿರುವುದು ಬೇಸರ ತರಿಸುತ್ತದೆ. ಒಂದು ಪೈಸೆಯೂ ಸಹ ಅವರ ಜೋಬಲ್ಲಿ ಇರುವುದಿಲ್ಲ. ಇಂತಹ ನಿರ್ಗತಿಕರಿಗೆ ಸೌಲಭ್ಯ ಕಲ್ಪಿಸುವುದು ಪ್ರಥಮ ಆದ್ಯತೆ ಆಗಬೇಕು ಎಂದರು.
ಈ ಜನರಿಗೆ ಶೇ.5 ರಷ್ಟು ಸರ್ಕಾರದ ಸೌಲಭ್ಯಗಳು ತಲುಪಿಲ್ಲ. ಹೀಗಾದರೆ ಸಮಾಜ ಅಭಿವೃದ್ಧಿ ಆಗುತ್ತದೆ ಹೇಗೆ ಎಂದು ಪ್ರಶ್ನಿಸಿದರು.
ದೇಶ, ರಾಜ್ಯ, ಸಮಾಜ ಬೆಳೆಯುತ್ತಿದೆ ಎಂದು ಹೇಳುತ್ತೇವೆ. ಆದರೆ ಇಂತಹ ಜನರನ್ನು ಯಾರೂ ಸಹ ಗುರುತಿಸುವುದಿಲ್ಲ. ಇಂತಹ ನಿರ್ಗತಿಕರನ್ನು ಗುರುತಿಸಿ ಮೂಲ ಸೌಲಭ್ಯ ಕಲ್ಪಿಸಬೇಕು ಎಂಬ ಮನೋಭಾವ ಯಾರಿಗೂ ಇಲ್ಲದಿರುವುದು ಸಮಾಜದ ಕನ್ನಡಿಯಾಗಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾನವ ಹಕ್ಕು ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಇಲ್ಲಿನ ಬಾಳುಗೋಡು ಯರವ ಹಾಡಿಯ ಜನರ ಸ್ಥಿತಿಗತಿಯನ್ನು ಗಮನಿಸಲಾಗಿದೆ. ಮಾನವ ಹಕ್ಕು ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ಮಾನವ ಹಕ್ಕು ಉಲ್ಲಂಘನೆಯಾಗದಂತೆ ಗಮನಹರಿಸಬೇಕಿತ್ತು. ಆದರೆ ಈ ಕಾರ್ಯ ಆಗಿಲ್ಲ ಎಂದು ಹೇಳಿದರು.
ಯಾರೂ ಯಾರನ್ನು ಸಹ ಶೋಷಣೆ ಮಾಡಬಾರದು. ಆದರೆ ಇಂತಹ ಹಾಡಿಗಳನ್ನು ಗಮನಿಸಿದಾಗ ಶೋಷಣೆ ಯಾವ ರೀತಿ ಆಗಿದೆ ಎಂಬುದು ತಿಳಿಯುತ್ತದೆ ಎಂದರು.
ಮತ್ತೊಬ್ಬ ಸದಸ್ಯರಾದ ಶ್ಯಾಮ್ ಭಟ್ ಮಾತನಾಡಿ, ಮಾನವ ಹಕ್ಕು ಸಂಬಂಧಿಸಿದಂತೆ ನಾಗರಿಕರಲ್ಲಿ ಅರಿವು ಇರಬೇಕು. ಬಾಳುಗೋಡು ಯರವ ಕುಟುಂಬದವರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ತಲುಪಿಲ್ಲ. ಅಧಿಕಾರಿಗಳು ಈ ನಿಟ್ಟಿನಲ್ಲಿ ಮನಸ್ಸು ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು. ಆರ್ಜಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅವ್ಯವಸ್ಥೆಯ ಆಗಾರವಾಗಿದ್ದು, ಇಲ್ಲಿನ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಸಾರ್ವಜನಿಕರೊಬ್ಬರು ದೂರು ನೀಡಿದರು. ಮತ್ತೊಬ್ಬರು ಅಪಘಾತದಲ್ಲಿ ಕುಟುಂಬದವರು ಮೃತಪಟ್ಟಿದ್ದು, ಯಾವುದೇ ಪರಿಹಾರ ದೊರಕಿಲ್ಲ ಎಂದು ಅವಲತ್ತುಕೊಂಡರು. ಈ ಸಂಬಂಧ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಸೂಚಿಸಿದರು.
ಬಳಿಕ ಮಾನವ ಹಕ್ಕು ಉಲ್ಲಂಘನೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳನ್ನು ವಿಚಾರಣೆ ನಡೆಸಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಮಾನವ ಹಕ್ಕು ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಅಹವಾಲು ಸ್ವೀಕರಿಸುವುದಕ್ಕೂ ಮೊದಲು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಜೊತೆ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಬಾಳುಗೋಡು ಯರವ ಹಾಡಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಲೆಫ್ಟಿನೆಂಟ್ ಆಗಿ ಬಡ್ತಿ ಪಡೆದ ಎ.ಎ.ಸುಧಾಕರ್*
Next Article *ಬಾಳುಗೋಡು ಯರವ ಹಾಡಿಗೆ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಭೇಟಿ : ಹಾಡಿ ಜನರೊಂದಿಗೆ ಸಂವಾದ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.