Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಬುಡಕಟ್ಟು ಗುಣಲಕ್ಷಣಗಳನ್ನು ನಿರ್ಧರಿಸುವ ಅಧಿಕಾರವನ್ನು ಸಂಸದರು ಹೊಂದಿಲ್ಲ : ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಬುಡಕಟ್ಟು ಗುಣಲಕ್ಷಣಗಳನ್ನು ನಿರ್ಧರಿಸುವ ಅಧಿಕಾರವನ್ನು ಸಂಸದರು ಹೊಂದಿಲ್ಲ : ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದನೆ*

ಫೆಬ್ರವರಿ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.1 NEWD DESK : ಮಾನವ ಶಾಸ್ತ್ರ ವಿಜ್ಞಾನಿಗಳು ಮತ್ತು ಜನಾಂಗೀಯ ಶಾಸ್ತ್ರ ವಿಜ್ಞಾನಿಗಳು ಮಾತ್ರ ಕೊಡವ ಬುಡಕಟ್ಟು ಗುಣಲಕ್ಷಣಗಳನ್ನು ನಿರ್ಧರಿಸಬಹುದೇ ಹೊರತು ಸಂಸದರು ಈ ವಿಷಯದ ಬಗ್ಗೆ ಅಧಿಕಾರ ಹೊಂದಿಲ್ಲ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವರು ಮತ್ತು ಕೊಡವ ಬುಡಕಟ್ಟು ಜನಾಂಗದ ಭವಿಷ್ಯವನ್ನು ನಿರ್ಧರಿಸಲು ಅವರು ಯಾರೂ ಅಲ್ಲ. ಅವರು ಸಂವಿಧಾನ ತಜ್ಞರೂ ಅಲ್ಲ ಅಥವಾ ಮಾನವ ಶಾಸ್ತ್ರಜ್ಞರೂ ಅಲ್ಲ ಎಂದು ತಿಳಿಸಿದ್ದಾರೆ.
ಬುಡಕಟ್ಟು ಅಲ್ಲದ ನಗರೀಕರಣಗೊಂಡ ತಳವಾರ ಮತ್ತು ಪರಿವಾರವನ್ನು ಎಸ್ಟಿ ಪಟ್ಟಿಗೆ ಹೇಗೆ ಸೇರಿಸಿದರು? ಅವರಿಗೆ ಯಾವ ಮಾನದಂಡವನ್ನು ಅನ್ವಯಿಸಲಾಗಿದೆ? ಇದು ಕೇವಲ ರಾಜಕೀಯ ಲಾಭಕ್ಕಾಗಿ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಕೊಡವರ ಜನಾಂಗೀಯ ಕುಲಶಾಸ್ತ್ರ ಅಧ್ಯಯನಕ್ಕೆ ಧಕ್ಕೆ ತರುವ ತಂತ್ರವನ್ನು ರೂಪಿಸಿದವರು ಯಾರು ಎಂಬುವುದು ಈಗ ಸ್ಪಷ್ಟವಾಗಿದೆ. ಕೊಡವರ ಮೇಲೆ ನೈಜ ಅಭಿಮಾನವಿದ್ದರೆ ಸಂಸದರು ತಮ್ಮ ಲೋಕಸಭಾ ಸ್ಥಾನವನ್ನು ತೆರವು ಮಾಡಲಿ ಮತ್ತು ಕೊಡಗನ್ನು ಪ್ರತಿನಿಧಿಸಲು ನಿಜವಾದ ಅವಕಾಶ ವಂಚಿತ, ದೇಶಭಕ್ತ ಕೊಡವರಿಗೆ ದಾರಿ ಮಾಡಿಕೊಡಲಿ. ಲೋಕಸಭಾ ಚುನಾವಣೆಗೆ ಇನ್ನು ಕೇವಲ 2 ತಿಂಗಳು ಮಾತ್ರ ಬಾಕಿ ಉಳಿದಿದೆ. ನಿಜವಾಗಿ ಕೊಡವರ ಕುರಿತು ಕಾಳಜಿ ಇದ್ದರೆ, ತಮ್ಮ ಅಧಿಕಾರಾವಧಿಯ ಕೊನೆಯ ಅಧಿವೇಶನದಲ್ಲಿ ಈಗಾಗಲೇ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪ್ರತಿಪಾದಿಸಲ್ಪಟ್ಟ ಸಿಕ್ಕಿಂನ ಬೌದ್ಧ ಸನ್ಯಾಸಿಗಳ “ಸಂಘ” ಮತಕ್ಷೇತ್ರದ ಮಾದರಿಯಲ್ಲಿ ಕೊಡವರಿಗೆ ವಿಶೇಷ ಅಮೂರ್ತ ಲೋಕಸಭಾ ಕ್ಷೇತ್ರವನ್ನು ನೀಡಲು ಒತ್ತಾಯಿಸಲಿ. ಆ ಮೂಲಕ ಕೊಡವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲಿ ಎಂದು ಆಗ್ರಹಿಸಿದ್ದಾರೆ.
ಕೊಡವರ ಪವಿತ್ರ ಯಾತ್ರಾಸ್ಥಳವಾದ ತಲಕಾವೇರಿಯ ಮಧ್ಯಸ್ಥಿಕೆಯ ವಿಚಾರದಲ್ಲಿ ಸಂಚು ರೂಪಿಸಿದವರು ಯಾರು? ದೇವಟ್ ಪರಂಬು ಕೊಡವ ನರಮೇಧ ದುರಂತ ಸ್ಮಾರಕ ಸ್ಥಾನವನ್ನು ಅಳಿಸಿ ಹಾಕಲು ಪಿತೂರಿ ರೂಪಿಸಿದವರು ಯಾರು ಎಂಬುವುದು ಸ್ಪಷ್ಟವಾಗಿದೆ. ಕೊಡವರ ಧಾರ್ಮಿಕ ಸಂಸ್ಕಾರ ಬಂದೂಕು ಹಕ್ಕನ್ನು ಕಸಿದುಕೊಳ್ಳಲು ಷಡ್ಯಂತ್ರ ರೂಪಿಸಿದವರು ಯಾರು ಎನ್ನುವುದೂ ತಿಳಿದಿದೆ. ಅವರು ತಮ್ಮ ಇಡೀ ಸಮುದಾಯವನ್ನು ಧ್ರುವೀಕರಿಸಿದರು ಮತ್ತು ಸೂಕ್ಷ್ಮ ಸಮುದಾಯವಾದ ಕೊಡವರ ವಿರುದ್ಧ ಧಂಗೆಯನ್ನು ಪ್ರಚೋದಿಸಿದರು. ಇದನ್ನೆಲ್ಲ ಅರಿಯದಷ್ಟು ಮೂರ್ಖರು ಕೊಡವರಲ್ಲ ಎಂದು ನಾಚಪ್ಪ ಹೇಳಿದ್ದಾರೆ.
2024 ರ ಜನವರಿ 25 ರಂದು ಕೂಟ ಕಟ್ಟಿಕೊಂಡು ಮುಖ್ಯಮಂತ್ರಿಗಳ ಬಳಿ ತೆರಳಿ ಕೊಡವ ಲ್ಯಾಂಡ್ ವಿರುದ್ಧ ಈರ್ಷೆಯಿಂದ ಚಾಡಿ ಮಾಡಿದವರು ಯಾರು ಎನ್ನುವುದು ನಮಗೆ ತಿಳಿದಿದೆ. ಕೊಡವರನ್ನು ರಕ್ಷಿಸಬೇಕಾದ ರಾಜ್ಯದ ಬಹುಸಂಖ್ಯಾತ ಸಮುದಾಯವು ಕೊಡವ ಸಮುದಾಯವನ್ನು ಜನಾಂಗೀಯವಾಗಿ ಗುಡಿಸಿ ಹಾಕುವ ಪ್ರಕ್ರಿಯೆಗೆ ಮುಂದಾಗಿದ್ದು, ಇದರ ಜವಾಬ್ದಾರಿಯನ್ನು ಶಾಸನ ರೂಪಿಸುವವರಿಗೆ ವಹಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಅವರು ಕೊಡವರ ಏಕೈಕ ಪಾಲಕರು ಎಂದು ನಟಿಸುತ್ತಾರೆ, ಕೊಡವ ಮಹಿಳೆಯರ ಸೌಂದರ್ಯವನ್ನು ಹೊಗಳುತ್ತಾರೆ, ಕೊಡವ ಯುದ್ಧ ವೀರರನ್ನು ಪೀಠದ ಮೇಲೆ ಕೂರಿಸುತ್ತಾರೆ, ನಮ್ಮ ಪಾನ್ ಭಾರತ ದರ್ಶನವನ್ನು ಮೆಚ್ಚುತ್ತಾ ಇದರ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಕೊಡವರನ್ನು ಹಿಮ್ಮೆಟ್ಟಿಸುತ್ತಾ ಬಲೆಗೆ ಬೀಳಿಸಿ ಮೂರ್ಖರನ್ನಾಗಿಸುತ್ತಾರೆ. ತಮ್ಮ ದೈತ್ಯಾಕಾರದ ಜನಸಂಖ್ಯಾ ತೂಕದೊಂದಿಗೆ ಎಲ್ಲವನ್ನೂ ಮತ್ತು ಯಾರನ್ನಾದರೂ ಬೆದರಿಸಬಲ್ಲರು ಎಂದು ಅವರು ನಂಬುತ್ತಾರೆಂದು ನಾಚಪ್ಪ ಟೀಕಿಸಿದ್ದಾರೆ.
ರಾಜಕೀಯವಾಗಿ ನಿಷ್ಕಪಟವಾದ ಕೊಡವ ಮತದಾರರ ಲಾಭವನ್ನು ಪಡೆದುಕೊಂಡು ಕೊಡವರ ವಿರುದ್ಧವೇ ಸಂಚು ಹೂಡುವುದು ಯಾರೆಂದು ತಿಳಿದಿದೆ. ಕೊಡವರ ಮೇಲೆ ಅಷ್ಟೊಂದು ಅಭಿಮಾನವಿದ್ದರೆ ಪ್ರತ್ಯೇಕ ಕೊಡಗು ಲೋಕಸಭಾ ಕ್ಷೇತ್ರವನ್ನು ಕೊಡವರಿಗೆ ಬಿಟ್ಟುಕೊಡಲಿ ಎಂದು ನಾಚಪ್ಪ ಸವಾಲು ಹಾಕಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು…

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.