Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸರ್ವೇ, ತಾಲ್ಲೂಕು ಕಚೇರಿ ಮತ್ತು ಸಬ್ ರಿಜಿಸ್ಟ್ರಾರ್ ಕಚೇರಿ ಡಿಜಿಟಲೀಕರಣ : ಕಂದಾಯ ಇಲಾಖೆಯ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ಸಹಕಾರ ಅಗತ್ಯ : ಸಚಿವ ಕೃಷ್ಣ ಬೈರೇಗೌಡ*
ಇತ್ತೀಚಿನ ಸುದ್ದಿಗಳು

*ಸರ್ವೇ, ತಾಲ್ಲೂಕು ಕಚೇರಿ ಮತ್ತು ಸಬ್ ರಿಜಿಸ್ಟ್ರಾರ್ ಕಚೇರಿ ಡಿಜಿಟಲೀಕರಣ : ಕಂದಾಯ ಇಲಾಖೆಯ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ಸಹಕಾರ ಅಗತ್ಯ : ಸಚಿವ ಕೃಷ್ಣ ಬೈರೇಗೌಡ*

February 5, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.5 NEWS DESK : ಕಂದಾಯ ಕಚೇರಿಗಳಲ್ಲಿ ಅರ್ಜಿಗಳ ವಿಲೇವಾರಿ ಮತ್ತು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಕಾರ್ಯ ವಿಳಂಬವಾಗುತ್ತಿದ್ದು, ಸಮಸ್ಯೆ ಜಟಿಲವಾಗುತ್ತಿದೆ. ಜನಸಾಮಾನ್ಯರು ಕಂದಾಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಲು ಅಧಿಕಾರಿಗಳು ಅಗತ್ಯ ಸಹಕಾರ ನೀಡಿ ಜನಪರವಾಗಿ ಕಾರ್ಯನಿರ್ವಹಿಸಬೇಕು. ಕರ್ನಾಟಕ ರಾಜ್ಯ ಸರ್ಕಾರ ಇಂದಿನಿಂದ ಎಲ್ಲಾ ಸರ್ವೇ, ತಾಲ್ಲೂಕು ಕಚೇರಿ ಮತ್ತು ಸಬ್ ರಿಜಿಸ್ಟಾçರ್ ಕಚೇರಿಗಳ ದಾಖಲೆಗಳನ್ನು ಡಿಜಿಟಲೀಕರಣಕ್ಕೆ ಒಳಪಡಿಸಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಮಡಿಕೇರಿಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಅಗತ್ಯ ಕೆಲಸ ಕಾರ್ಯಗಳು ನಿಗದಿತ ವೇಳೆಯಲ್ಲಿ ನಡೆಯದೆ ಉಂಟಾಗುತ್ತಿರುವ ಸಮಸ್ಯೆಗಳ ಬಗೆಹರಿಕೆಗೆ ರಾಜ್ಯ ಸರ್ಕಾರ ಕಳೆದ ಎಂಟು ತಿಂಗಳ ಅವಧಿಯಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದೆ. ಇದರ ಪರಿಣಾಮ ಅರ್ಜಿಗಳ ವಿಲೇವಾರಿ ಮತ್ತು ಪ್ರಕರಣಗಳ ಇತ್ಯರ್ಥ ಪ್ರಸ್ತುತ ಚುರುಕುಗೊಂಡಿದೆ ಎಂದರು.
ಜನರ ಕೆಲಸ ಕಾರ್ಯಗಳನ್ನು ಮಾಡಿಕೊಡುವ ಮನಸ್ಥಿತಿಯನ್ನು ಇಲಾಖಾ ಅಧಿಕಾರಿ, ಸಿಬ್ಬಂದಿಗಳು ಹೊಂದುವುದು ಅವಶ್ಯಕ. ತಮ್ಮ ಮೈಂಡ್ ಸೆಟ್ ಅಪ್ ನ್ನು ಬದಲಾಯಿಸಿಕೊಳ್ಳುವ ಮೂಲಕ ನಾವು ಜನರಿಂದ ಜನರಿಗಾಗಿ ಬಂದವರು ಎಂದು ಅರ್ಜಿದಾರರ ಅಹವಾಲಿಗೆ ತುರ್ತಾಗಿ ಸ್ಪಂದಿಸಬೇಕು ಎಂದು ಕರೆ ನೀಡಿದರು.
ಕೆಲಸ ಮಾಡಿಕೊಡುವುದು ಬೇಡ ಎನ್ನುವುದಕ್ಕೆ ನೂರು ಕಾರಣಗಳು ದೊರಕುತ್ತದೆ, ಅದೇ ಕೆಲಸ ಮಾಡಿಕೊಡಲೇಬೇಕೆನ್ನುವ ಭಾವನೆ ಇದ್ದಲ್ಲಿ ಅದಕ್ಕೆ ಹತ್ತಾರು ಹಾದಿಗಳು ತೆರೆದುಕೊಳ್ಳುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ತಹಶೀಲ್ದಾರ್ ಅವರ ನ್ಯಾಯಾಲಯದಲ್ಲಿ ದಾಖಲಾಗುವ ಯಾವುದೇ ಪ್ರಕರಣಗಳು 3 ತಿಂಗಳ ಒಳಗಾಗಿ ಇತ್ಯರ್ಥಗೊಳ್ಳಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಹಂತದಲ್ಲಿ ನಿಗದಿತ ಅವಧಿ ಕಳೆದರು ಇತ್ಯರ್ಥವಾಗದೆ ಉಳಿದಿದ್ದ 2515 ಪ್ರಕರಣಗಳಲ್ಲಿ ಪ್ರಸ್ತುತ 107 ಪ್ರಕರಣಗಳಷ್ಟೆ ಬಾಕಿಯಾಗಿದೆ. ಶೇ.95 ರಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅದೇ ರೀತಿ ಎಸಿ ನ್ಯಾಯಾಲಯದಲ್ಲಿ ಪ್ರಕರಣಗಳ ಇತ್ಯರ್ಥಕ್ಕೆೆ 6 ತಿಂಗಳ ಕಾಲಾವಕಾಶವಷ್ಟೆ ಇದೆ. ಹೀಗಿದ್ದು, ಅಲ್ಲಿ ಇತ್ಯರ್ಥವಾಗದ, ಐದು ವರ್ಷಕ್ಕೂ ಮೇಲ್ಪಟ್ಟ 32,787 ಪ್ರಕರಣಗಳಿವೆ, ಸುಮಾರು 26 ರಿಂದ 27 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅಂದು ಪ್ರಕರಣಗಳನ್ನು ಬಾಕಿ ಉಳಿಸಿಕೊಂಡವರು ನೀವೆ, ಇಂದು ಇತ್ಯರ್ಥಪಡಿಸಿದವರು ನೀವೆ ಎಂದು ಕೃಷ್ಣ ಬೈರೇಗೌಡ ಅಧಿಕಾರಿಗಳ ಸಹಕಾರವನ್ನು ಶ್ಲಾಘಿಸಿದರು.
::: ಪರಿಹಾರ ಬಿಡುಗಡೆ :::
ರಾಜ್ಯದಾದ್ಯಂತ ‘ಫ್ರೂಟ್ ಆಪ್’ ಮೂಲಕ ನೋಂದಣಿ ಮಾಡಿಕೊಂಡ 31 ಲಕ್ಷ ಬೆಳೆಗಾರರಿಗೆ 650 ಕೋಟಿ ರೂ. ಪರಿಹಾರವನ್ನು ಈಗಾಗಲೆ ಒದಗಿಸಲಾಗಿದೆ. ಇದರ ನಡುವೆಯೂ ಪರಿಹಾರ ದೊರಕದಿರುವ ಪ್ರಕರಣಗಳಿದ್ದಲ್ಲಿ, ಅದನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಈ ಸಂದರ್ಭ ಮಾಹಿತಿ ನೀಡಿ, ಕೊಡಗು ಜಿಲ್ಲೆಯಲ್ಲಿ 11,303 ಕೃಷಿಕ ಫಲಾಬನುಭವಿಗಳಿಗೆ ಈಗಾಗಲೆ 1.81 ಕೋಡಿ ರೂ.ಗಳನ್ನು ಪಾವತಿಸಲಾಗಿದೆಯೆಂದು ತಿಳಿಸಿದರು.
::: ಬಾಡಿಗೆಗೆ ಕೊಳವೆಬಾಯಿ :::
ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಬೇಕು. ಬರದ ಪರಿಸ್ಥಿತಿ ನಿರ್ವಹಿಸುವ ಸಲುವಾಗಿ ರಾಜ್ಯದಾದ್ಯಂತ ಈಗಾಗಲೆ ಸರ್ಕಾರ ಸುಮಾರು 3 ಸಾವಿರ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಂಡಿದೆ. ಜಿಲ್ಲೆಗೆ ಸಂಬಂಧಿಸಿದಂತೆ ತಾಲ್ಲೂಕುವಾರು ಕುಡಿಯವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು, ಟ್ಯಾಂಕರ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಧ ಟೆಂಡರ್ ಕರೆದು ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಬೇಕು. ಕೊನೆಯ ಕ್ಷಣದಲ್ಲಿ ನೀರಿನ ಪೂರೈಕೆಯಲ್ಲಿ ಲೋಪಗಳಾಗಬಾರದೆಂದು ಸಚಿವರು ಹೇಳಿದರು.
:::: ‘ಪೈಕಿ ಖಾತೆ’ :::
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಜಾಗಕ್ಕೆ ಸಂಬಂಧಪಟ್ಟ ಹಲವು ಸಮಸ್ಯೆಗಳಿದ್ದು, ಇವುಗಳನ್ನು ಇತ್ಯರ್ಥ ಪಡಿಸುವ ಬಗ್ಗೆ ಸಚಿವರು ಸಮಾಲೋಚಿಸಿದರು.
ಈ ಸಂದರ್ಭ ಕಂದಾಯ ಆಯುಕ್ತ ಮಂಜುನಾಥ್ ಅವರು, ಜಿಲ್ಲೆಯ ಜಾಗದ ಸಮಸ್ಯೆ ಬಗ್ಗೆ ಮಾಹಿತಿ ನೀಡಿ, ರಾಜ್ಯ ವ್ಯಾಪಿ ಅವಿಭಜಿತ ಕುಟುಂಬಳಿಗೆ ಸಂಬಂಧಿಸಿದ ‘ಪೈಕಿ’ ಆರ್‌ಟಿಸಿಗಳಿವೆ. ಇವುಗಳಲ್ಲಿ ಸುಮಾರು 35 ಸಾವಿರ ಆರ್‌ಟಿಸಿಗಳು ಕೊಡಗಿನಲ್ಲೆ ಇವೆ. ಇವುಗಳ ಇತ್ಯರ್ಥಕ್ಕಾಗಿ ಈಗಾಗಲೆ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಇರುವ ಒಟ್ಟು ‘ಪೈಕಿ’ ಆರ್‌ಟಿಸಿಯಲ್ಲಿ 25 ಸಾವಿರ ಪೈಕಿ ಖಾತೆಗಳು ಖಾಸಗಿಯವು. ಇವುಗಳಲ್ಲಿ ಸಮಸ್ಯೆಗಳು ಇಲ್ಲದ ಸುಮಾರು 12 ಸಾವಿರ ಖಾತೆಗಳ ‘ಪೈಕಿ’ ಯನ್ನು ತೆಗೆಯಲು ಕ್ರಮ ಕೈಗೊಳ್ಳಲಾಗಿದೆ. ಉಳಿದವುಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಸಹಕಾರದೊಂದಿಗೆ ಸರ್ವೇ ಕಾರ್ಯಗಳು, ಆಯಾ ಜಾಗದ ಪಟ್ಟೆದಾರರ ಸಮ್ಮುಖದಲ್ಲಿ ನಡೆಸಬೇಕಾಗಿದೆಯೆಂದು ತಿಳಿಸಿದರು.
ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಪೈಕಿ ಖಾತೆಯ 38,300 ಏಕರೆ ಜಾಗದ ಸರ್ವೇ ಕಾರ್ಯ ನಡೆಯುತ್ತಿದೆ. ಈ ಸಂಬಂಧ ತಾಲ್ಲೂಕಿನ 98 ಗ್ರಾಮಗಳಲ್ಲಿ ಪೋಡಿ ಮುಕ್ತ ಗ್ರಾಮ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಮಾಹಿತಿ ನೀಡಿದರು.
::: ಆಧುನಿಕ ಸರ್ವೆ ಸಲಕರಣೆ :::
ಸಚಿವ ಕೃಷ್ಣ ಬೈರೇಗೌಡ ಮಾತನಾಡಿ ಜಾಗದ ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಗೆ ಸರ್ವೇಯರ್‌ಗಳನ್ನು ಹಾಗೂ ಆಧುನಿಕ ಸರ್ವೆ ಸಲಕರಣೆಗಳನ್ನು ನೀಡಲು ಸಿದ್ಧ ಇರುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕರಾವಳಿಯ ಕಣ್ಮಣಿ ಕುಂದಾಪುರ*
Next Article *ವಿಪ್ರ ಕ್ರೀಡಾಕೂಟ ಅಂಗವಾಗಿ ಬ್ಯಾಡ್ಮಿಂಟನ್, ಟಿ.ಟಿ ಸ್ಪರ್ಧೆ : ಸಮಾಜ ಸಂಘಟನೆಗೆ ಕ್ರೀಡಾಕೂಟ ಸಹಕಾರಿ : ಗೀತಾ ಗಿರೀಶ್*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.