Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಸಕರ ಕಚೇರಿಗೆ ಪತ್ರ ನೀಡಿರುವ ಬಿಜೆಪಿ ನಡೆ ಹಾಸ್ಯಾಸ್ಪದ : ವೀಣಾ ಅಚ್ಚಯ್ಯ ತೀವ್ರ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಸಕರ ಕಚೇರಿಗೆ ಪತ್ರ ನೀಡಿರುವ ಬಿಜೆಪಿ ನಡೆ ಹಾಸ್ಯಾಸ್ಪದ : ವೀಣಾ ಅಚ್ಚಯ್ಯ ತೀವ್ರ ಅಸಮಾಧಾನ*

ಫೆಬ್ರವರಿ 12, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.12 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 8 ತಿಂಗಳುಗಳಷ್ಟೇ ಆಗಿದೆ, ಜಿಲ್ಲೆಯ ಇಬ್ಬರು ಶಾಸಕರ ಅವಧಿಯೂ ಇಷ್ಟೇ ಆಗಿದೆ. ಇದನ್ನು ಅರಿಯದ ಬಿಜೆಪಿ ಮಂದಿ ಕಮಲದ ಗುರುತಿನ ಶಾಲನ್ನು ಹಾಕಿಕೊಂಡು ಶಾಸಕರ ಕಚೇರಿಗೆ ತೆರಳಿ ಅಭಿವೃದ್ಧಿ ಕುರಿತು 15 ಪ್ರಶ್ನೆಗಳ ಪತ್ರ ನೀಡಿರುವುದು ಹಾಸ್ಯಾಸ್ಪದ ಎಂದು ವಿಧಾನಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಕೊಡಗಿನಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಶಾಸಕರುಗಳ ಕೊಡುಗೆ ಏನು ಎನ್ನುವುದನ್ನು ಮೊದಲು ಸಾಬೀತು ಪಡಿಸಲಿ ಎಂದು ಒತ್ತಾಯಿಸಿದರು.
ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಇಲ್ಲದ ಸಂದರ್ಭ ಅವರ ಗೃಹ ಕಚೇರಿಗೆ ಬಿಜೆಪಿಯ ಮಂದಿ ತೆರಳಿ 15 ಪ್ರಶ್ನೆಗಳ ಪತ್ರ ನೀಡಿರುವುದು ಖಂಡನೀಯ. ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರು ಕಳೆದ 8 ತಿಂಗಳಿನಿಂದ ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸುತ್ತಾ ಬರುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಸಾಕಷ್ಟು ಸಮಯದ ಅವಕಾಶ ಬೇಕಾಗುತ್ತದೆ. ಆದರೆ ಶಾಸಕರಿಲ್ಲದ ಸಂದರ್ಭ ಕಚೇರಿಗೆ ಹೋಗುವ ಅನಿವಾರ್ಯತೆ ಮತ್ತು ಶಾಸಕರ ಆಪ್ತ ಸಹಾಯಕರೊಂದಿಗೆ ಲೆಕ್ಕ ಕೇಳುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.
ಇಪ್ಪತ್ತೈದು ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿತ್ತು. ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು ನಂತರ ಅಧಿಕಾರದಲ್ಲಿದ್ದ ಬಿಜೆಪಿ ಶಾಸಕರ ಹೊಣೆಯಾಗಿತ್ತು. ಆದರೆ ಯಾವುದೇ ಜನಪರವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಈಗಷ್ಟೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಶಾಸಕರನ್ನು ಪ್ರಶ್ನಿಸುವುದು ಎಷ್ಟು ಸರಿ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನೂತನ ಶಾಸಕರ ಕಾರ್ಯವೈಖರಿಯನ್ನು ಸಹಿಸಿಕೊಳ್ಳಲಾಗದೆ ದ್ವೇಷ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.
ಜಿಲ್ಲೆಯಲ್ಲಿ ಬಿಜೆಪಿ ಶಾಸಕರಿದ್ದಾಗ ಕಾಂಗ್ರೆಸಿಗರು ಎಂದೂ ದ್ವೇಷ ರಾಜಕರಣ ಪ್ರದರ್ಶಿಸಿಲ್ಲ, ಕೊಡಗಿನ ಜನರ ಸಮಸ್ಯೆಗಳನ್ನು ಅರಿತಿರುವ ಇಬ್ಬರೂ ಶಾಸಕರು ಜನರಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪ್ರತಿಯೊಂದು ಸಂಕಷ್ಟದ ಸಂದರ್ಭದಲ್ಲೂ ಸಂತ್ರಸ್ತರ ಬಳಿಗೆ ತೆರಳಿ ಸಾಂತ್ವನ ಹೇಳುವ ದೊಡ್ಡ ಗುಣ ಹೊಂದಿದ್ದಾರೆ. ದಿನದಿಂದ ದಿನಕ್ಕೆ ಇಬ್ಬರು ಶಾಸಕರ ಜನಪ್ರಿಯತೆ ಹೆಚ್ಚಾಗುತ್ತಿದೆ. ಇದನ್ನು ಬಿಜೆಪಿ ಮಂದಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಉತ್ಸಾಹಿ ಶಾಸಕದ್ವಯರಿಂದ ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗಲಿದೆ ಎಂದರು.
ಒಬ್ಬ ಜನಪ್ರತಿನಿಧಿ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಗುಣ ಅಳವಡಿಸಿಕೊಂಡಿರಬೇಕು. ಧರ್ಮದ ಆಧಾರದಲ್ಲಿ ಯಾರೂ ರಾಜಕೀಯ ಮಾಡಬಾರದು, ನಾವು ಕೂಡ ಹಿಂದೂಗಳೆ, ರಾಮಮಂದಿರ ಕೇವಲ ಬಿಜೆಪಿಗರ ಕೊಡುಗೆಯಲ್ಲ, ಎಲ್ಲರ ಶ್ರಮದಿಂದ ನಿರ್ಮಾಣವಾಗಿದೆ ಎಂದು ಪ್ರತಿಪಾದಿಸಿದರು.
::: ಕೊಡುಗೆ ಶೂನ್ಯ :::
ಕೊಡಗು ಜಿಲ್ಲೆಗೆ ಸಂಸದ ಪ್ರತಾಪ್ ಸಿಂಹ ಅವರ ಕೊಡುಗೆ ಶೂನ್ಯ ಎಂದು ಟೀಕಿಸಿದ ವೀಣಾ ಅಚ್ಚಯ್ಯ, ಕಳೆದ ಹತ್ತು ವರ್ಷಗಳಿಂದ ಸಮಸ್ಯೆಗಳಿದ್ದಾಗ ಜಿಲ್ಲೆಗೆ ಬಾರದ ಸಂಸದರು ಈಗ ಕಾಣಿಸಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಕೇಂದ್ರ ಸರ್ಕಾರದ ವಿಶೇಷ ಯೋಜನೆಯಡಿ ಯಾವ ನೆರವನ್ನು ತಂದಿದ್ದಾರೆ ಎಂದು ಪ್ರಶ್ನಿಸಿದರು.
ಪ್ರಧಾನಮಂತ್ರಿಗಳ ಆಪ್ತ ಎಂದು ಪ್ರತಿಬಿಂಬಿಸಿಕೊಳ್ಳುವ ಸಂಸದರಿಗೆ ತಮ್ಮ ಕ್ಷೇತ್ರದ ಬಗ್ಗೆ ಯಾವುದೇ ಕಾಳಜಿ ಇರಲಿಲ್ಲ, ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
::: ಜನ ನಮ್ಮೊಂದಿಗಿದ್ದಾರೆ :::
ರಾಜ್ಯದ ಮತದಾರರು ಬಿಜೆಪಿಯ ಸುಳ್ಳುಗಳಿಗೆ ಮಾರು ಹೋಗುವುದಿಲ್ಲ, ಜನಸಾಮಾನ್ಯರ ಪರವಾಗಿರುವ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಪೂರೈಸುವ ಮೂಲಕ ಮತ್ತಷ್ಟು ಜನಪ್ರಿಯತೆಯನ್ನು ಗಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ಸ್ಥಾನದಲ್ಲಿದ್ದಾಗ ಪ್ರಾಕೃತಿಕ ವಿಕೋಪ ಹಾನಿಯನ್ನು ವೀಕ್ಷಿಸಲು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಬಿಜೆಪಿಗರು ಅವಮಾನಿಸಿದ್ದರು. ಆದರೆ ಇಂದು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಆಗಮಿಸಿ ಸನ್ಮಾನ ಮತ್ತು ಗೌರವಕ್ಕೆ ಪಾತ್ರರಾಗಿದ್ದಾರೆ. ಬಿಜೆಪಿ ಮೊದಲು ತನ್ನ ನಡೆಯನ್ನು ಸರಿಪಡಿಸಿಕೊಳ್ಳಲಿ ಎಂದರು.
ನಗರಸಭೆಯಲ್ಲಿ ಬೇಕಾದಷ್ಟು ಹಣವಿದ್ದರೂ ನಗರ ಅಭಿವೃದ್ಧಿ ಕಾಣುತ್ತಿಲ್ಲ, ನಗರಸಭಾ ಅಧ್ಯಕ್ಷರ ಕಾರ್ಯವೈಖರಿ ನೀರಸವಾಗಿದೆ. ಅಭಿವೃದ್ಧಿ ಪರ ಕಾಳಜಿಯ ಮಾತನಾಡುವ ಬಿಜೆಪಿ ತನ್ನದೇ ನೇತೃತ್ವದ ಆಡಳಿತವಿರುವ ನಗರಸಭೆಯ ವೈಫಲ್ಯತೆಯ ಬಗ್ಗೆ ತಲೆಕೆಡಿಸಿಕೊಳ್ಳಲಿ ಎಂದು ವೀಣಾ ಅಚ್ಚಯ್ಯ ತಿರುಗೇಟು ನೀಡಿದರು.
ನಗರದ ಚೈನ್‍ಗೇಟ್ ಬಳಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇಲ್ಲಿರುವ ಅವೈಜ್ಞಾನಿಕವಾದ ಮತ್ತು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬಸ್ ನಿಲ್ದಾಣವನ್ನು ತಕ್ಷಣ ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮಂಡೀರ ಸದಾ ಮುದ್ದಪ್ಪ ಹಾಗೂ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.