Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರವೇ ಬಳಸಲಾಗುತ್ತದೆ : ಅಪಪ್ರಚಾರ ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರವೇ ಬಳಸಲಾಗುತ್ತದೆ : ಅಪಪ್ರಚಾರ ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಫೆಬ್ರವರಿ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Cute cartoon vector illustration of a Hinduist Temple
Facebook Twitter WhatsApp Email Telegram Copy Link

ಬೆಂಗಳೂರು ಫೆ.22 NEWS DESK : ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲ್ಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ.

ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ. 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಪ್ರಸ್ತುತ ತಿದ್ದುಪಡಿಗೂ ಮುನ್ನ ಈ ನಿಧಿಗೆ ಹಣವು ಈ ಕೆಳಗಿನ ಮಾರ್ಗಗಳಿಂದ ಬರುತ್ತಿತ್ತು:

(1). ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10;

(2) ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5; ಹಾಗೂ

(3) ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ಅನುದಾನ.

ತಿದ್ದುಪಡಿಯ ನಂತರ ಸಾಮಾನ್ಯ ಸಂಗ್ರಹಣಾ ನಿಧಿಗೆ ಹಣವು ಇದೇ ಮೂಲದಿಂದ ಬರಲಿದೆ:

(1) ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ. 10;

(2) ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ಸಂಸ್ಥೆಗಳಿಂದ ಶೇ.5 ಹಾಗೂ

(3) ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ.

ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ‌ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ.

ಸಮಾಜದಲ್ಲಿ ತಪ್ಪು ಮಾಹಿತಿಯನ್ನು ಹರಡಿ ಜನರನ್ನು ತಪ್ಪು ಹಾದಿಗೆ ಎಳೆಯುವ ಮೂಲಕ ಈ ದೇಶದ ಜನರ ಅದರಲ್ಲಿಯೂ ವಿಶೇಷವಾಗಿ ಈ ದೇಶದ ಯುವಕರ ವೃತ್ತಿ, ಭವಿಷ್ಯದೊಂದಿಗೆ ಬಿಜೆಪಿ ನಾಯಕರು ಚೆಲ್ಲಾಟವಾಡುತ್ತಿದ್ದಾರೆ. ಯುವಪೀಳಿಗೆ ತಮ್ಮ ಭವಿಷ್ಯವನ್ನು ಬದಿಗೆ ಸರಿಸಿ ಇಂತಹ ಅವಾಸ್ತವಿಕ, ಕಲ್ಪಿತ ಯುದ್ಧಗಳಲ್ಲಿ ತೊಡಗಿಕೊಳ್ಳಲು ಇವರು ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿಗಳು  ನಾಡಿನ ಜನತೆ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.