Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಿರ್ಜಲೀಕರಣ ತಪ್ಪಿಸಲು ದೇಹಕ್ಕೆ ಬೇಕು ನೀರು*
ಇತ್ತೀಚಿನ ಸುದ್ದಿಗಳು

*ನಿರ್ಜಲೀಕರಣ ತಪ್ಪಿಸಲು ದೇಹಕ್ಕೆ ಬೇಕು ನೀರು*

February 26, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಿರ್ಜಲೀಕರಣ ಅಥವಾ ಡಿಹೈಡ್ರೇಶನ್ ಬಿಸಿಲ ಝಳ ಹೆಚ್ಚಿದಂತೆ ಕಾಣಿಸಿಕೊಳ್ಳುವ ಸಮಸ್ಯೆ. ಜ್ವರ, ವಾಂತಿ, ಅಜೀರ್ಣ, ಅತಿಯಾದ ಬಿಸಿಲು, ಹೆಚ್ಚಿನ ದೈಹಿಕ ಶ್ರಮ ಮುಂತಾದವು ದೇಹದಲ್ಲಿನ ನೀರಿನಂಶವನ್ನು ಕಡಿಮೆಗೊಳಿಸುತ್ತವೆ. ಈ ಸಂದರ್ಭದಲ್ಲಿ ವ್ಯಕ್ತಿ ಹೆಚ್ಚಿನ ನೀರನ್ನು ಸೇವಿಸಬೇಕಾಗುತ್ತದೆ. ನಿರ್ಜಲೀಕರಣ ಅತಿಯಾದರೆ ವ್ಯಕ್ತಿ ಪ್ರಾಣಾಪಾಯದಂಚಿಗೂ ಹೋಗಬೇಕಾಗಬಹುದು ಎನ್ನುತ್ತಾರೆ ವೈದ್ಯರು. ಆದ್ದರಿಂದ ಬೇಸಿಗೆಯಲ್ಲಿ ಹೆಚ್ಚು ನೀರು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ. ನಿರ್ಜಲೀಕರಣದ ಲಕ್ಷಣಗಳನ್ನು ಪತ್ತೆ ಹಚ್ಚುವುದು ಸುಲಭ. ಅತಿಯಾಗಿ ಬಾಯಾರಿಕೆಯಾಗುವುದು, ಬಾಯಿ ಒಣಗಿದಂತಾಗುವುದು, ತಲೆಸುತ್ತುವುದು, ನಿರಾಸಕ್ತಿ, ನಿಶ್ಶಕ್ತಿ, ಆಲಸ್ಯ, ಉರಿಮೂತ್ರ ಮುಂತಾದ ಸಮಸ್ಯೆಗಳು ಆರಂಭವಾದರೆ ಅದು ನಿರ್ಜಲೀಕರಣದ ಲಕ್ಷಣವೇ.

ನಿರ್ಜಲೀಕರಣ ಹೆಚ್ಚಿದಂತೆ ಜ್ವರ, ಅತಿಯಾದ ವಾಂತಿ ಬೇಧಿ, ನಿಶ್ಶಕ್ತಿ,ದೇಹದ ತೂಕದಲ್ಲಿ ಹಠಾತ್ ಕುಸಿತ ಕಾಣಿಸಿಕೊಳ್ಳುತ್ತದೆ. ಮೂತ್ರವಿಸರ್ಜನೆಯೂ ಆಗದಿರಬಹುದು. ಈ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಕಾಣುವುದು ಒಳಿತು. ನಿಮ್ಮ ದೇಹಕ್ಕೆ ಎಷ್ಟು ನೀರು ಅಗತ್ಯವಿದೆಯೋ ಅಷ್ಟನ್ನು ಸೇವಿಸಲೇಬೇಕು. ಅತಿಯಾಗಿ ದೈಹಿಕ ಶ್ರಮಪಡುವವರು ಹೆಚ್ಚು ಹೆಚ್ಚು ನೀರು ಸೇವಿಸಬೇಕು. ಬಿಸಿಲು ಹೆಚ್ಚಾದಂತೆ ದೇಹದಲ್ಲಿನ ನೀರಿನ ಪ್ರಮಾಣ ಬೆವರಿನ ಮೂಲಕ ಹೊರಹೋಗಿರುತ್ತದೆ. ಆದ್ದರಿಂದ ಆ ಸಂದರ್ಭದಲ್ಲಿ ಹೆಚ್ಚು ನೀರು ಸೇವಿಸಿ. ಹಣ್ಣಿನ ರಸ, ಪಾನಕಗಳ ಸೇವನೆಯೂ ಒಳ್ಳೆಯದು. ಬೇಸಿಗೆ ಕಾಲದಲ್ಲಿ ಸಿಗುವ ಹಣ್ಣನ್ನು ಮಾತ್ರ ಸೇವಿಸಿ. ಮುಖ್ಯವಾಗಿ ಕಲ್ಲಂಗಡಿ, ಕಿತ್ತಳೆ, ಮೋಸಂಬಿ, ದ್ರಾಕ್ಷಿ, ಮಾವು… ಇವುಗಳಲ್ಲಿ ನೀರಿನಂಶ ಹೆಚ್ಚಿರುವುದರಿಂದ ದೇಹದಲ್ಲಿ ನೀರಿನಂಶ ಬತ್ತದಂತೆ ಕಾಪಾಡುತ್ತವೆ. ಹಾಗೆಯೇ ನೀರನ್ನು ಸೇವಿಸುವ ಮೊದಲು ಅದು ಶುದ್ಧವಾಗಿದೆಯೇ ಎಂಬುದನ್ನು ದೃಢಪಡಿಸಿಕೊಳ್ಳಿ. ಏಕೆಂದರೆ ಅಶುದ್ಧ ನೀರಿನ ಸೇವನೆಯಿಂದಲೂ ದೇಹ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಸಮಯದಲ್ಲಿ ತರಕಾರಿಯ ಸೂಪ್ ತಯಾರಿಸಿ ಸೇವಿಸುವುದೂ ಉತ್ತಮ. ಈ ಸಮಯದಲ್ಲಿ ಘನ ಆಹಾರಗಳನ್ನು ಕಡಿಮೆ ಸೇವಿಸುವುದು ಒಳ್ಳೆಯದು. ಹಾಗೆಯೇ ಹೆಚ್ಚು ಖಾರದ ಪದಾರ್ಥವನ್ನು ಸೇವಿಸಬೇಡಿ. ಪ್ರತಿದಿನ ಮಧ್ಯಾಹ್ನ ಊಟವಾದ ತಕ್ಷಣ ಒಂದು ಲೋಟ ಮಜ್ಜಿಗೆ ಸೇವಿಸಿ. ರಾತ್ರಿ ಮಲಗುವ ಅರ್ಧ ಗಂಟೆ ಮೊದಲು ಬೇಸಿಗೆಯಲ್ಲಿ ಸಿಗುವ ಯಾವುದಾದರೂ ಹಣ್ಣಿನ ಜ್ಯೂಸ್ ಸೇವಿಸಿ.

ಮಾನವರಲ್ಲಿನ ನಿರ್ಜಲೀಕರಣಕ್ಕೆ ವೈದ್ಯಕೀಯ ಕಾರಣಗಳು ;:
ಮಾನವರಲ್ಲಿ, ನಿರ್ಜಲೀಕರಣವು ವಿಸ್ತಾರ ವ್ಯಾಪ್ತಿಯ ರೋಗಗಳು ಹಾಗೂ ಸ್ಥಿತಿಗಳಿಂದ ಉಂಟಾಗಬಹುದಾಗಿದ್ದು, ಅವು ದೇಹದಲ್ಲಿನ ಜಲ/ನೀರು ಪರಿಚಲನಾ ವ್ಯವಸ್ಥೆಗೆ ಧಕ್ಕೆ ತರುವಂತಹವಾಗಿರುತ್ತವೆ. ಅವುಗಳೆಂದರೆ:

ಬಾಹ್ಯ ಅಥವಾ ಒತ್ತಡ-ಸಂಬಂಧಿ ಕಾರಣಗಳು
ವಿಶೇಷತಃ ಶಾಖಪೂರಿತ ಹಾಗೂ/ಅಥವಾ ಒಣ ಪರಿಸರಗಳಲ್ಲಿ ಅಗತ್ಯ ಜಲ/ನೀರು ಸೇವನೆ ಮಾಡದೇ ಬೆವರು ಹರಿಸುವಂತಹಾ ದೀರ್ಘಕಾಲೀನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ
ದೀರ್ಘಕಾಲೀನ ಒಣಗಾಳಿ ಸೇವನೆ, e.g. ಎತ್ತರದಲ್ಲಿರುವ ವಿಮಾನಗಳಲ್ಲಿ (5–12% ಸಾಪೇಕ್ಷ ಆರ್ದ್ರತೆಯೊಂದಿಗೆ)
ರಕ್ತ ನಷ್ಟ ಅಥವಾ ದೈಹಿಕ ಗಾಯದಿಂದಾಗಿ ಒತ್ತಡಹೀನತೆ
ಅತಿಸಾರ ಭೇದಿ
ಲಘುಉಷ್ಣತೆ
ಆಘಾತ (ಹೈಪೋವಾಲೆಮಿಕ್‌ )
ವಾಂತಿ ಮಾಡುವುದು
ಸುಟ್ಟಗಾಯಗಳು
ಅಶ್ರುಧಾರೆ
ಮೆಥಾಂಫೆಟಾಮೈನ್‌, ಆಂಫೆಟಾಮೈನ್‌, ಕೆಫೀನ್‌ ಹಾಗೂ ಇತರೆ ಉತ್ತೇಜಕಗಳ ಬಳಕೆ
ಮದ್ಯಸಾರೀಯ ಪಾನೀಯಗಳ ವಿಪರೀತ ಸೇವನೆ
ಸಾಂಕ್ರಾಮಿಕ ರೋಗಗಳು
ಕಾಲರಾ
ಜಠರದ ಉರಿಯೂತ
ಷಿಗೆಲ್ಲೋಸಿಸ್‌‌
ಕಾಮಾಲೆ
ಅಪೌಷ್ಟಿಕತೆ
ವಿದ್ಯುತ್‌ವಿಚ್ಛೇದ್ಯ/ಎಲೆಕ್ಟ್ರೋಲೈಟ್‌ ಪ್ರಕ್ಷುಬ್ಧತೆ
ರಕ್ತದಲ್ಲಿ ಸೋಡಿಯಂ ಪ್ರಮಾಣದ ಹೆಚ್ಚಳ (ನಿರ್ಜಲೀಕರಣದಿಂದಲೂ ಆಗಲು ಸಾಧ್ಯ)
ರಕ್ತದಲ್ಲಿ ಸೋಡಿಯಂ ಪ್ರಮಾಣದ ಇಳಿಕೆ, ವಿಶೇಷವಾಗಿ ಆಹಾರದಲ್ಲಿ ಉಪ್ಪಿನ ನಿಯಂತ್ರಿತ ಬಳಕೆಯಿಂದ ಆಗಲು ಸಾಧ್ಯ
ಉಪವಾಸಾಚರಣೆ
ಇತ್ತೀಚಿನ ತ್ವರಿತ ತೂಕ ಇಳಿಕೆಯು ದ್ರವದ ಪ್ರಮಾಣವು ಹೆಚ್ಚಾಗಿ ಇಳಿಕೆಯಾಗುತ್ತಿರುವುದನ್ನು ಸೂಚಿಸಬಹುದು (1 ಐ ದ್ರವದ ನಷ್ಟವು 1 ಞgಯಷ್ಟು ತೂಕ ಇಳಿಕೆಯನ್ನು ಸೂಚಿಸಬಹುದು.
ರೋಗಿಯು ಪೌಷ್ಟಿಕ ಆಹಾರ ಹಾಗೂ ನೀರನ್ನು ಅಗತ್ಯ ಪ್ರಮಾಣದಲ್ಲಿ ಸೇವಿಸಲು ನಿರಾಕರಿಸುವುದು
ನುಂಗಲಾಗದಿರುವುದು (ಅನ್ನನಾಳದಲ್ಲಿನ ಅಡಚಣೆಯ ಕಾರಣ )
ಬಂಧಕ ಜಲ/ನೀರು ನಷ್ಟದ ಇತರೆ ಕಾರಣಗಳು
ವಿಪರೀತ ಹೆಚ್ಚಾದ ರಕ್ತದಲ್ಲಿನ ಸಕ್ಕರೆ ಅಂಶ , ವಿಶೇಷವಾಗಿ ಡಯಾಬಿಟಿಸ್‌ ಮೆಲ್ಲಿಟಸ್‌/ಸಕ್ಕರೆ ರೋಗದಲ್ಲಿ
ಸಕ್ಕರೆ ಮೂತ್ರ
ಯುರೇಮಿಯಾ

Share. Facebook Twitter Pinterest LinkedIn Tumblr Email WhatsApp
Previous Article*ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ*
Next Article *ಯುವ ಸಮೃದ್ಧಿ ಸಮ್ಮೇಳನ : ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.