Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲಕ್ಷ ಲಕ್ಷ ಮಕ್ಕಳಲ್ಲಿ ಪರಿಸರ ಪ್ರೀತಿ ಮತ್ತು ಸ್ಫೂರ್ತಿಯನ್ನು ತುಂಬಿದವರು ಈ ಹಿರಿಯ ವನ್ಯಜೀವಿ ತಜ್ಞರು*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಲಕ್ಷ ಲಕ್ಷ ಮಕ್ಕಳಲ್ಲಿ ಪರಿಸರ ಪ್ರೀತಿ ಮತ್ತು ಸ್ಫೂರ್ತಿಯನ್ನು ತುಂಬಿದವರು ಈ ಹಿರಿಯ ವನ್ಯಜೀವಿ ತಜ್ಞರು*

ಫೆಬ್ರವರಿ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.26 NEWS DESK : ಹಿರಿಯ ಪರಿಸರ ಪ್ರೇಮಿ, ವನ್ಯಜೀವಿ ತಜ್ಞ, ನಿವೃತ್ತ ಅರಣ್ಯಾಧಿಕಾರಿ ಕೊಟ್ರಂಗಡ ಎಂ.ಚಿಣ್ಣಪ್ಪ(84) ಅವರು ಸೋಮವಾರ ನಿಧನರಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಕಾಕೂರು ಗ್ರಾಮದ ನಿವಾಸಿಯಾಗಿದ್ದ ಚಿಣ್ಣಪ್ಪ, 30 ವರ್ಷಗಳ ಕಾಲ ಅರಣ್ಯ ಇಲಾಖೆಯಲ್ಲಿ ರೇಂಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.
ತಮ್ಮ ಸೇವಾ ಅವಧಿಯಲ್ಲಿ ರಾಜ್ಯದ ಹಲವು ಅರಣ್ಯ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಕೆ.ಎಂ.ಚಿಣ್ಣಪ್ಪ ಅವರು ವನ್ಯ ಸಂಪತ್ತು ಲೂಟಿ, ವನ್ಯ ಜೀವಿಗಳ ಕಳ್ಳ ಬೇಟೆ, ಮರ ಕಳ್ಳತನ ಮತ್ತಿತ್ತರ ಅಕ್ರಮಗಳಿಗೆ ಶಾಶ್ವತ ಕಡಿವಾಣ ಹಾಕಿದ್ದರು. ಕೆ.ಎಂ.ಚಿಣ್ಣಪ್ಪ ಅವರ ಅಮೋಘ ಸೇವೆಯನ್ನು ಪರಿಗಣಿಸಿ ಸರಕಾರ 1985ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿತ್ತು. 1990ರ ದಶಕದಲ್ಲಿ ನಾಗರಹೊಳೆ ಅಭಯಾರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದಾಗ ತಮ್ಮ ಜೀವದ ಹಂಗನ್ನೇ ತೊರೆದು ಬೆಂಕಿ ನಂದಿಸಲು ಹರ ಸಾಹಸ ಪಟ್ಟಿದ್ದರು. ಚಿಣ್ಣಪ್ಪ ಅವರು ಅರಣ್ಯ ಅಧಿಕಾರಿಯಾಗಿ ಸಲ್ಲಿಸಿದ ಸೇವೆಯ ಕುರಿತು ಲೇಖಕ ಗೋಪಾಲ್ ಎಂಬುವವರು ‘ಕಾಡಿನೊಳಗೊಂದು ಜೀವ’ ಎಂಬ ಪುಸ್ತಕವನ್ನು ರಚಿಸಿದ್ದು, ಈ ಕೃತಿ ಅಪಾರ ಜನ ಮೆಚ್ಚುಗೆ ಪಡೆದಿದೆ.
ಚಿಣ್ಣಪ್ಪ ಅವರು ವನ್ಯಜೀವಿ ಸಂರಕ್ಷಣಾ ರ‍್ಯಾಲಿ ಮತ್ತು ಸಂವಾದಗಳೊಂದಿಗೆ 1.50 ಲಕ್ಷಕ್ಕೂ ಹೆಚ್ಚು ಶಾಲಾ ಮಕ್ಕಳು, ಶಿಕ್ಷಕರು, ಗ್ರಾಮೀಣ ಯುವಕರು ಹಾಗೂ ಗ್ರಾಮಸ್ಥರನ್ನು ತಲುಪಿದರು. ನಿವೃತ್ತಿಯ ನಂತರವೂ 2,500 ಕ್ಕೂ ಹೆಚ್ಚು ಅರಣ್ಯ ಸಂರಕ್ಷಣಾ ಸಿಬ್ಬಂದಿಗೆ ಕಳ್ಳಬೇಟೆ ತಡೆ ಕಾರ್ಯಾಚರಣೆ ಮತ್ತು ಅಗ್ನಿಶಾಮಕ ರಕ್ಷಣೆಯಲ್ಲಿ ತರಬೇತಿ ನೀಡಿದರು.
ಕೊಟ್ರಂಗಡ ಚಿಣ್ಣಪ್ಪ ಅವರು ‘ಕೂರ್ಗ್ ವೈಲ್ಡ್ಲೈಫ್ ಫಸ್ಟ್’ ಸಂಘಟನೆ ಹುಟ್ಟುಹಾಕಿ ಪರಿಸರ ಸಂರಕ್ಷಣೆಗೆ ತಮ್ಮದೇ ಆದ ಸೇವೆ ಮತ್ತು ಕೊಡುಗೆ ನೀಡಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಶಾಲಾ ಮಕ್ಕಳಿಂದ ಕಾಡ್ಗಿಚ್ಚು ಜಾಗೃತಿ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಅರಣ್ಯ ಸಂರಕ್ಷಣೆಯ ಅರಿವು ಮೂಡಿಸುತ್ತಿದ್ದರು.
1941 ರಲ್ಲಿ ಜನಿಸಿದ ಚಿಣ್ಣಪ್ಪ ಅವರು 1967 ರಲ್ಲಿ ಅರಣ್ಯ ಸೇವೆಗೆ ಸೇರಿದರು. 1992 ರಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದೊಡ್ಡ ಕಾಡ್ಗಿಚ್ಚು ಸಂಭವಿಸಿದ ನಂತರ ಸ್ವಯಂಪ್ರೇರಿತರಾಗಿ ಸೇವೆಯಿಂದ ನಿವೃತ್ತರಾದರು.
ಇವರ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 1985 ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ, 1988 ರಲ್ಲಿ ಡಬ್ಲ್ಯುಸಿಎಸ್ ಪ್ರಶಂಸನಾ ಪತ್ರ ಮತ್ತು 1996 ರಲ್ಲಿ ಟೈಗರ್ ಲಿಂಕ್ ಬಾಗ್ ಸೇವಕ್ ಪ್ರಶಸ್ತಿ ನೀಡಲಾಗಿದೆ.
2000 ಮತ್ತು 2006 ರಲ್ಲಿ ಕ್ರಮವಾಗಿ ಇಎಸ್‌ಎಸ್‌ಒ ಮತ್ತು ಅಭಯಾರಣ್ಯದ ಜೀವಮಾನದ ಸಾಧನೆ ಪ್ರಶಸ್ತಿಗಳನ್ನು ಪಡೆದರು. 2009 ರಲ್ಲಿ ಅವರಿಗೆ ಸಿಎನ್‌ಎನ್- ಐಬಿಎನ್ ರಿಯಲ್ ಹೀರೋಸ್ ಪ್ರಶಸ್ತಿಯನ್ನು ನೀಡಲಾಯಿತು.
ಮೃತರು ಪತ್ನಿ ರಾಧ, ಪುತ್ರ ಮನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮದಲ್ಲಿ ನಡೆಯಲಿದೆ.
::: ಸಂತಾಪ :::
ವನ್ಯ ಜೀವಿ ಸಂರಕ್ಷಣಾ ಕಾಯಿದೆಯನ್ನು ಅನುಷ್ಟಾನಗೊಳಿಸಿ ಅವುಗಳ ಉಳಿವಿಗೆ ತಮ್ಮದೇ ಆದ ಕೊಡುಗೆ ನೀಡಿದ್ದ ಕೊಟ್ರಂಗಡ ಎಂ.ಚಿಣ್ಣಪ್ಪ ಅವರ ಅಗಲಿಕೆಗೆ ಪರಿಸರ ಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ. ವಿವಿಧ ಸಂಘ ಸಂಸ್ಥೆಗಳು ಕೂಡ ಚಿಣ್ಣಪ್ಪ ಅವರ ಅಗಲಿಕೆಗೆ ಕಂಬನಿ ಮಿಡಿದಿವೆ. ಈ ಕುರಿತು ಪ್ರತಿಕ್ರಿಯಿಸಿದ ವೈಲ್ಡ್ಲೈಫ್ ಫಸ್ಟ್ ಸಹ ಸಂಸ್ಥಾಪಕ ಪ್ರವೀಣ್ ಭಾರ್ಗವ್, ವನ್ಯ ಜೀವಿಗಳ ಸಂರಕ್ಷಣೆ ಕುರಿತು ತಮಗೆ ಅರಿವು ಮೂಡಿಸಿದ್ದ ಕೆ.ಎಂ.ಚಿಣ್ಣಪ್ಪ ಅವರು ತನಗೆ ಗುರುಗಳಾಗಿದ್ದರು ಎಂದು ಸ್ಮರಿಸಿದರು. ವನ್ಯಜೀವಿ ಸಂರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದ ಕೆ.ಎಂ.ಚಿಣ್ಣಪ್ಪ ಎಂಬ ದಿಗ್ಗಜರನ್ನು ನಾವಿಂದು ಕಳೆದು ಕೊಂಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.11 NEWS DESK : ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಸಾಯಿ ಹಾಕಿ ತರಬೇತಿ…

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.