Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಶಿವ ಜಯಂತಿ ಮಹೋತ್ಸವ : ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಶಿವ ಜಯಂತಿ ಮಹೋತ್ಸವ : ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನ*

ಫೆಬ್ರವರಿ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಫೆ.27 NEWS DESK :  ನಮ್ಮನ್ನು ನಾವು ಪರಿವರ್ತನೆ ಮಾಡಿಕೊಂಡು ನಮ್ಮೊಳಗೆ ಬೆಳಕು ತರುವಂತದ್ದೇ ಧರ್ಮ ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜಿ ಅಭಿಪ್ರಾಯಪಟ್ಟರು.

ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ವಿರಾಜಪೇಟೆ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಜ್ಞಾನ ಗಂಗಾ ಭವನದ  ವತಿಯಿಂದ 88ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವದ ಪ್ರಯುಕ್ತ ವಿರಾಜಪೇಟೆ ನಗರದ ತಾಲೂಕು ಮೈದಾನದಲ್ಲಿ ಭಾರತದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಅಂತರಂಗದಲ್ಲಿರುವ ಅಜ್ಞಾನ ತೊಲಗಿಸಿ ಜ್ಞಾನದ ಚಕ್ಷು ಬೀರಬೇಕು. ಜ್ಞಾನದ ಚಕ್ಷು ಇಲ್ಲದೆ ಸಿರಿಸಂಪತ್ತು, ಸಾಮ್ರಾಜ್ಯ, ತಂದಿಟ್ಟರೂ ಅದನ್ನು ಅನುಭವಿಸಲು ಹೊರಟಾಗ ನಮಗೆ ಶೂನ್ಯವೇ ಲಭಿಸುತ್ತದೆ. ಇಂದು ಎಲ್ಲ ಕಡೆ ಹಿಂಸೆ, ಕ್ರೋಧ, ಆಕ್ರೋಶ, ಅಸೂಯೆಗಳಲ್ಲಿ ತೊಡಗಿಸಿಕೊಂಡು ಜೀವನ ಎನೂ ಎಂಬುವುದನ್ನು ಮರೆತಿದ್ದಾರೆ. ತಾನು ಬದುಕುವುದರ ಜೊತೆಗೆ ಎಲ್ಲರನ್ನೂ ಪ್ರೀತಿಸುವಂತಾಗಬೇಕು. ದ್ವೇಷ ತೊಡೆದು ಹಾಕಬೇಕು. ಜಗತ್ತು ನನ್ನದು ಅಂತ ಪರಿಭಾವಿಸುವವನು ಜಗದ್ಗುರು ಆಗುತ್ತಾನೆ ಎಂದರು.

ಬಾಹ್ಯ ಅನ್ವೇಷಣೆಯಿಂದ ಪರಿವರ್ತನೆ ಸಾಧ್ಯವಿಲ್ಲ. ನಮ್ಮೊಳಗೆ ಇರುವ ಅರಿಷಡ್ವರ್ಗಗಳನ್ನು ನಾಶ ಮಾಡಿ ಎತ್ತರಕ್ಕೆ ಏರಿದರೆ ವ್ಯಕ್ತಿ ಪರಿಪೂರ್ಣನಾಗುತ್ತಾನೆ. ನಾವು ಓದುತ್ತೇವೆ ಆದರೆ ಪಾಲಿಸುವುದಿಲ್ಲ. ನಾವು ಅನುಭವಿಸುವುದಕ್ಕಿಂತ ಅನುಸಂಧಾನ ಮಾಡಿಕೊಂಡು ನಮ್ಮ ಮೂಲ ಉದ್ದೇಶ ಓಂ ಶಾಂತಿ ಆಗಬೇಕು, ಮಾತು ಜ್ಯೋತಿರ್ಲಿಂಗವಾಗಬೇಕು ಎಂದು ಹಿತವಚನ ನೀಡಿದರು.

ಸೇವಾದಾರಿ ಮೈಸೂರಿನ ಪ್ರಾಣೇಶ್ ಅವರು ಮಾತನಾಡಿ ನಮ್ಮೊಳಗಿನ ಪರಿವರ್ತನೆ ಪ್ರಸ್ತುತ ಸಮಾಜದಲ್ಲಿ ಬಹಳ ಅವಶ್ಯಕವಾಗಿದೆ. ಭಗವಂತನ ಧ್ಯಾನದಿಂದ ಜ್ಞಾನ ಲಭಿಸುತ್ತದೆ. ನಮ್ಮೊಳಗಿನ ಅಂತಛಕ್ಷು ಜಾಗೃತವಾಗುತ್ತದೆ ಎಂದರು.

ಹಾಕಿ ಕೋಚ್, ನಿವೃತ್ತ ಸೈನಿಕ ಪ್ರಿನ್ಸ್ ಗಣಪತಿ ಮಾತನಾಡಿ, ನಮ್ಮ ಜೀವನದಲ್ಲಿ ಕಲಿಯುವಂತದ್ದು ಬಹಳಷ್ಟಿದೆ. ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಪರ್ಕಕ್ಕೆ ಬಂದ ನಂತರ ತಮ್ಮ ಜೀವನದ ಬದಲಾವಣೆಯ ಪರ್ವ ಹೇಗೆ ಪ್ರಾರಂಭವಾಯಿತು ಹಾಗೂ ಅದರಿಂದ ತಮಗಾದ ಅನುಕೂಲತೆ ಬಗ್ಗೆ ತಿಳಿಸಿ ಪ್ರತಿಯೊಬ್ಬರೂ ಜೀವನದಲ್ಲಿ ಒಳ್ಳೆಯದನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಮಡಿಕೇರಿ ಶಾಖೆಯ ಧನಲಕ್ಷ್ಮಿ ಮಾತನಾಡಿ, ಜ್ಯೋರ್ತಿಲಿಂಗದ ಪುಣ್ಯದರ್ಶನ ಮಾಡುವುದರ ಮೂಲಕ ಅಂತರಂಗದ ಆವಿಷ್ಕಾರ ಮಾಡಿ ಅಜ್ಞಾನದ ಕತ್ತಲು ತೊಲಗಿಸಿ ಜ್ಞಾನದ ಬೆಳಕು ಹೆಚ್ಚಾಗಬೇಕು. ಸಂಕಷ್ಟಗಳನ್ನು ಮಂಜಿನಂತೆ ಕರಗಿಸುವ ಶಕ್ತಿ ಆದ್ಯಾತ್ಮಕ್ಕೆ ಇದೆ ಎಂದರು.

ಜ್ಞಾನ ಗಂಗಾ ಭವನದ ಮುಖ್ಯಸ್ಥರಾದ ಕೋಮಲ ಮಾತನಾಡಿ, ಆರು ದಿನಗಳ ಕಾಲ ಪ್ರವಚನ, ಜೀವನದಲ್ಲಿ ಸುಖ ಶಾಂತಿ, ನೆಮ್ಮದಿ ಮತ್ತು ಉತ್ತಮ ಆರೋಗ್ಯ ದೊರಕಲೆಂದು ಜ್ಯೋತಿರ್ಲಿಂಗಗಳ ಪುಣ್ಯ ದರ್ಶನಕ್ಕಾಗಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಮಹಿಳೆಯರಿಗೆ, ಮಕ್ಕಳಿಗೆ, ಸಾರ್ವಜನಿಕರಿಗೆ ಪ್ರತ್ಯೆಕ ವ್ಯವಸ್ಥೆ ಮಾಡಲಾಗಿದೆ. ಮುಂದೆ ಬಹಳಷ್ಟು ಪರಿಸ್ಥಿತಿಗಳು ಬರುತ್ತದೆ. ಅದಕ್ಕಾಗಿ ನಮ್ಮ ಮನಸ್ಸನ್ನು ಸಶಕ್ತಗೊಳಿಸಿಕೊಳ್ಳಬೇಕಾಗಿದೆ ಎಂದರು.

ಮೈಸೂರು ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕ ರಾಜಯೋಗಿನಿ ಬಿ.ಕೆ.ಲಕ್ಷ್ಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿ, ಮನಸ್ಸನ್ನು ಬಲಶಾಲಿ ಮಾಡಿಕೊಳ್ಳಲು ರಾಜಯೋಗ (ಮೆಡಿಟೇಶನ್) ಅಭ್ಯಾಸ ಮಾಡಬೇಕು. ಇದರಲ್ಲಿ ಸ್ವಯಂ ನಾನು ಯಾರು ಎಂಬುದು ಹಾಗೂ ಪರಮಾತ್ಮನ ಸತ್ಯ ಪರಿಚಯದ ಅವಶ್ಯಕತೆ ಇದೆ. ಸ್ವಯಂನ ಪರಿವರ್ತನೆಯಿಂದ ವಿಶ್ವ ಪರಿವರ್ತನೆ ಸಾಧ್ಯ. ಪ್ರಪಂಚವನ್ನು ನಾವು ಬದಲಿಸುತ್ತೇವೆ ಎಂದು ಹೇಳುತ್ತೇವೆ, ಆದರೆ ಅದು ಸಾಧ್ಯವಿಲ್ಲ.

ಶಾರೀರಿಕ ವೀರತ್ವ ಎಲ್ಲರಿಗೂ ಇರುತ್ತದೆ. ಆದರೆ ಮಾನಸಿಕ ವೀರತ್ವ ಎಲ್ಲರಿಗೂ ಬೇಕು. ಸ್ಥಿತಿಯನ್ನು ಸಮತೋಲನ ಮಾಡಿಕೊಂಡು ಸ್ಥಿರತೆ ಕಾಪಾಡಿಕೊಳ್ಳಬೇಕು. ಮಾನವ ಜೀವನವನ್ನು ದಾನವ ಜೀವನವನ್ನಾಗಿ ಮಾಡಿಕೊಳ್ಳಬಾರದು. ಅರಿಷಡ್ವರ್ಗಗಳೇ ನಮ್ಮ ಶತ್ರು. ಜೀವನದಲ್ಲಿ, ಪ್ರವೃತ್ತಿಯಲ್ಲಿ ಯೋಗಿಗಳಾಗಬೇಕು, ತ್ಯಾಗಮಯ ಜೀವನದಿಂದ ಮನೆಗೂ ಸಮಾಜಕ್ಕೂ ಆದರ್ಶರಾಗಿರಬೇಕು, ಮನಸ್ಸಿನಲ್ಲಿ ಭಗವಂತನ ಸ್ಮರಣೆ ಮಾಡಿ ಎಂದು ಸುದೀರ್ಘವಾಗಿ ಮಾತನಾಡಿದರು.

ಇದೇ ಸಂದರ್ಭ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಿತು. ಬಳಿಕ ನೆರೆದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಮಾರ್ಚ್ 1ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ, ಜ್ಯೋತಿರ್ಲಿಂಗಗಳ ದರ್ಶನ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭ ವಿದ್ಯಾರಣ್ಯಪುರಂ ಶಾಖೆಯ ಸಂಚಾಲಕಿ ಯತ್ನ, ವಿವಿಧ ಸೇವಾ ಕೇಂದ್ರದ ಸದಸ್ಯರುಗಳು, ಸೇರಿದಂತೆ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.