Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.7 ರಿಂದ ಹೊದ್ದೂರು ಶ್ರೀ ಭಗವತಿ ದೇವಾಲಯದ ಬ್ರಹ್ಮಕಳಶೋತ್ಸವ : ಭರದ ಸಿದ್ಧತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.7 ರಿಂದ ಹೊದ್ದೂರು ಶ್ರೀ ಭಗವತಿ ದೇವಾಲಯದ ಬ್ರಹ್ಮಕಳಶೋತ್ಸವ : ಭರದ ಸಿದ್ಧತೆ*

ಮಾರ್ಚ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮಾ.4 NEWS DESK : ನಾಪೋಕ್ಲು – ಮೂರ್ನಾಡು ಮುಖ್ಯರಸ್ತೆಯ ಸಮೀಪದಲ್ಲೇ ಇರುವ ಹೊದ್ದೂರು ಗ್ರಾಮದ ಶ್ರೀ ಭಗವತಿ ದೇವಾಲಯ ನೂತನವಾಗಿ ನಿರ್ಮಾಣಗೊಂಡು ಅತ್ಯಾಕರ್ಷಕವಾಗಿ ಕಂಗೊಳಿಸುತ್ತಿದ್ದು, ಪುನರ್ ಪ್ರತಿಷ್ಠಾಪನೆ ಬ್ರಹ್ಮ ಕಳಶೋತ್ಸವದ ಅಂಗವಾಗಿ ಅಂತಿಮ ಹಂತದ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿವೆ.
ಸುಮಾರು 1.5 ಕೋಟಿ ರೂ.ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದ್ದು, ಇತಿಹಾಸದ ಪ್ರಕಾರ ಸಾವಿರಾರು ವರ್ಷಗಳ ಹಿಂದೆ ಋಷಿಮುನಿಗಳು ತಪಸ್ಸು ಮಾಡಿದ ದೈವಿಕ ತಾಣ ಇದು ಎಂದು ನಂಬಲಾಗಿದೆ. ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ನೆಲೆ ನಿಂತ ತಾಣ ಇದಾಗಿದೆ. ದೇವಾಲಯವನ್ನು ಕಾರ್ಕಳದಿಂದ ತರಲಾದ ಕಲ್ಲಿನಿಂದಲೇ ಅತ್ಯಂತ ಆಧುನಿಕ ತಂತ್ರಜ್ಞಾನವನ್ನು ಬಳಸಿ ಆಕರ್ಷಕ ಕುಸುರಿ ಕೆಲಸದೊಂದಿಗೆ ಸಂಪೂರ್ಣವಾಗಿ ನಿರ್ಮಿಸಲಾಗಿರುವುದು ವಿಶೇಷ.
ದೇವ ಮಹಿಮೆ ಜನರ ಮೇಲೆ ಬಂದ ಊರು ಕೊಡವ ಭಾಷೆಯ ಪೊದ್ದು ನಂತರ ಹೊದ್ದೂರು ಎಂದಾಯಿತು ಎಂದು ಹೇಳಲಾಗುತ್ತಿದೆ.
ಮರಕಡ ಶ್ರೀ ಗುರ ಪರಾಶಕ್ತಿ ಮಠದ ಪರಮಪೂಜ್ಯ ನರೇಂದ್ರನಾಥ ಯೋಗೇಶ್ವರ ಮಹಾಸ್ವಾಮಿಯವರ ಪೂರ್ಣ ಅನುಗ್ರಹದೊಂದಿಗೆ ನಿತಿನ್ ನರೇಂದ್ರನಾಥ ಯೋಗೇಶ್ವರ ಸ್ವಾಮಿ ಮತ್ತು ಮಾತೆ ಶಕುಂತಲಾ ಅಮ್ಮನವರ ದಿವ್ಯ ಮಾರ್ಗದರ್ಶನದಲ್ಲಿ ನೂತನವಾಗಿ ಜೀರ್ಣೋದ್ಧಾರ ಗೊಂಡಿದೆ.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ನಿವೃತ್ತ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಚೌರಿರ ಕೆ. ಮೇದಪ್ಪ , ದೇವತಕ್ಕರಾಗಿ ನೆರವಂಡ ಸಂಜಯ್ ಪೂಣಚ್ಚ, ಸಮಿತಿ ಸದಸ್ಯರಾಗಿರುವ ಮಾಜಿ ಸೈನಿಕ, ನಿವೃತ್ತ ಶಿಕ್ಷಕ ಚೌರಿರ ಉದಯ ಸೇರಿದಂತೆ ಸಮಿತಿ ಸದಸ್ಯರು ಗ್ರಾಮಸ್ಥರು ಕಾರ್ಯನಿರ್ವಹಿಸುತ್ತಿದ್ದ, ಇದೀಗ ದೇವಾಲಯಕ್ಕೆ ಅಳವಡಿಸಿದ್ದ ಶಿಲೆಗಳನ್ನು ಪಾಲಿಶ್, ದೇವಾಲಯದ ಸುತ್ತಲೂ ಇಂಟರ್ಲಾಕ್ ಅಳವಡಿಕೆ, ಗಾರ್ಡನ್ ಪೂರ್ವಭಾವಿ ಸಿದ್ಧತೆತ್ವರಿತವಾಗಿ ಜರುಗುತ್ತಿದ್ದು, ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದೆ.
ದೇವಾಲಯದ ಪುನರ್ ಪ್ರತಿಷ್ಠಾಪನೆ ಬ್ರಹ್ಮ ಕಳಶೋತ್ಸ ಮತ್ತಿತರ ದೈವಿಕ ಕಾರ್ಯಕ್ರಮಗಳು ನೀಲೇಶ್ವರ ಪದ್ಮನಾಭ ತಂತ್ರಿ ಅವರ ಮುಂದಾಲತ್ವದಲ್ಲಿ ಮಾ.7 ರಿಂದ ಆರಂಭಗೊಂಡು ಮಾ.14.ವರೆಗೆ ಒಂದು ವಾರಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಲಿದೆ.
ನಾಲ್ಕು ವರ್ಷಗಳ ಹಿಂದೆ ಗ್ರಾಮದಲ್ಲಿ ಹೊಸ ದೇವಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಜೀರ್ಣೋದ್ಧಾರಗೊಂಡ ದೇವಾಲಯ ಇದೀಗ ಸುಂದರವಾಗಿ ಕಂಗೊಳಿಸುತ್ತಿದೆ. ಈಗಾಗಲೇ ಸುಮಾರು 1.5 ಕೋಟಿ ರೂ. ವೆಚ್ಚವಾಗಿದೆ ಇನ್ನೂ ಹಲವು ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ .ಅಂದಾಜು 30 ಲಕ್ಷ ರೂ. ಅವಶ್ಯಕತೆ ಇದ್ದು, ನಿರೀಕ್ಷಿಸಲಾಗಿದೆ. ಚೌರಿರ ಕೆ. ಮೇದಪ್ಪ :: ಅಧ್ಯಕ್ಷರು ದೇವಾಲಯ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿ

ಹೊದ್ದೂರು ಗ್ರಾಮದಲ್ಲಿ 5 ದೇವಾಲಯಗಳಿದ್ದು, ಅವುಗಳಲ್ಲಿ ಭಗವತಿ ದೇವಾಲಯವು ಒಂದು. ಇದು ಗ್ರಾಮ ದೇವಾಲಯವಾಗಿದ್ದು, ಶಿಥಿಲಗೊಂಡ ಕಾರಣ ದೇವಾಲಯದ ಪುನರ್ ನಿರ್ಮಾಣಕ್ಕೆ ಗ್ರಾಮಸ್ಥರು ನಿರ್ಧರಿಸಿ 2013ರಲ್ಲಿ ಜ್ಯೋತಿಷಿ ಮೂಲಕ ತಿಳಿದುಬಂದಂತೆ ಚೌಟ್ ಪೂಜೆ ಮಾಡುವುದರ ಮೂಲಕ ಪ್ರಾರಂಭವಾಗಿ ಚಾಲನೆ ನೀಡಲಾಯಿತು .
2017 ರಲ್ಲಿ ಸ್ವರ್ಣ ಪ್ರಶ್ನೆ ಇಟ್ಟು ಆ ಮೂಲಕ ಜೀರ್ಣೋದ್ಧಾರ ಅಧಿಕೃತವಾಗಿ ಚಾಲನೆ ನೀಡಿ ದೇವರ ಅನುಗ್ರಹದಿಂದ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದೆ :: ನೆರವಂಡ ಸಂಜಯ್ ಪೂಣಚ್ಚ :: ದೇವತಕ್ಕ ಮುಖ್ಯಸ್ಥರು , ಸಮಿತಿ ಕಾರ್ಯದರ್ಶಿ

ಹೊದ್ದೂರು ಗ್ರಾಮದ ಭಗವತಿ ದೇವಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಹಲವಾರು ಬಾರಿ ಜೀರ್ಣದೋರಗೊಂಡಿದೆ. 2017 ರಲ್ಲಿ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪನೆ ಆಗಬೇಕು ಎಂದು ಗ್ರಾಮಸ್ಥರು ನಿರ್ಧರಿಸಿ ಮರಕಡ ಶ್ರೀ ಗುರ ಪರಾಶಕ್ತಿ ಮಠದ ಪರಮಪೂಜ್ಯ ನರೇಂದ್ರನಾಥ ಯೋಗೇಶ್ವರ ಮಹಾಸ್ವಾಮಿಯವರ ಮಾರ್ಗದರ್ಶನದಲ್ಲಿ ನೂತನ ದೇವಾಲಯದ ನಿರ್ಮಾಣ ಕೈಗೊಂಡರು.
ಗರ್ಭಗುಡಿ ಶಾಸ್ತ್ರೋತ್ರವಾಗಿ ನಿರ್ಮಾಣಗೊಂಡು ಷಡಧಾರ ಪ್ರತಿಷ್ಠೆ 9 ಅಡಿ ಆಳದಿಂದ ಆಗಿದೆ. ಇತಿಹಾಸದ ಪ್ರಕಾರ ಸಾವಿರಾರು ವರ್ಷಗಳ ಹಿಂದೆ ಋಷಿಮುನಿಗಳು ತಪಸ್ಸು ಮಾಡಿದ ದೈವಿಕ ತಾಣ ಇದು ಎಂದು ನಂಬಲಾಗಿದೆ. ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ನೆಲೆ ನಿಂತ ತಾಣ ಇದಾಗಿದೆ. ಭಕ್ತಾದಿಗಳ ಸಹಕಾರದಿಂದ ಜನರ ಶ್ರೇಯೋಭಿವೃದ್ಧಿಗಾಗಿ ದೇವಾಲಯ ನಿರ್ಮಾಣಗೊಂಡಿದೆ. :: ಚೌರಿರ ಉದಯ :: ಮಾಜಿ ಸೈನಿಕರು, ನಿವೃತ್ತ ಶಿಕ್ಷಕ ಹಾಗೂ ಜೀರ್ಣೋದ್ಧಾರ ಸಮಿತಿ ಸದಸ್ಯ

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.