Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಹಿತಿ ನಾ. ಡಿ’ಸೋಜ ದತ್ತಿ ಕಾರ್ಯಕ್ರಮ : ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ನಾಟಕ ಸ್ಪರ್ಧೆ : ಸಂತ ಮೈಕಲರ ಪ್ರೌಢ ಶಾಲೆಯ ‘ಪ್ರಜಾನಿಷ್ಠೆ’ ನಾಟಕ ತಂಡ ಪ್ರಥಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಹಿತಿ ನಾ. ಡಿ’ಸೋಜ ದತ್ತಿ ಕಾರ್ಯಕ್ರಮ : ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ನಾಟಕ ಸ್ಪರ್ಧೆ : ಸಂತ ಮೈಕಲರ ಪ್ರೌಢ ಶಾಲೆಯ ‘ಪ್ರಜಾನಿಷ್ಠೆ’ ನಾಟಕ ತಂಡ ಪ್ರಥಮ*

ಮಾರ್ಚ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.4 NEWS DESK : ಆಧುನಿಕ ಕಾಲದ ಭರಾಟೆಯಲ್ಲಿ ನಮ್ಮ ರಂಗಭೂಮಿಯ ಕಲೆಗಳ ವಿನಾಶಕ್ಕೆ ನಾವು ಕಾರಣರಾಗದೆ ಅದನ್ನು ಉಳಿಸಿ ಬೆಳೆಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಸಂತ ಅನ್ನಮ್ಮ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕಿ ಪ್ರತಿಮಾ ಹರೀಶ್ ರೈ ಹೇಳಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಮಡಿಕೇರಿ ಪತ್ರಿಕಾ ಭವನದಲ್ಲಿ ಸಾಹಿತಿ ನಾ. ಡಿ’ಸೋಜ ಅವರ ದತ್ತಿ ಕಾರ್ಯಕ್ರಮದ ಅಂಗವಾಗಿ ಫ್ರೌಡ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಲಲಿತಕಲೆಗಳಲ್ಲಿ ರಂಗ ಭೂಮಿಯ ಕಲಾ ಪ್ರಕಾರಗಳು ಪೂರ್ವಿಕರಿಂದ ನೆಲೆಯೂರಿ ಬೆಳೆದಿದ್ದು, ಚಲನಚಿತ್ರಗಳ ಆರಂಭವಾಗುವುದಕ್ಕೆ ಮೊದಲೇ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಸಮಾಜಕ್ಕೆ ಮಾಹಿತಿ ನೀಡುತ್ತಿದ್ದ ಕಲಾವಿದರ ಪ್ರತಿಭೆ ಅದ್ಭುತವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಂಗಾಯಣ, ನೀನಾಸಂ ಇನ್ನಿತರ ಸಂಸ್ಥೆಗಳು ಸಾಮಾಜಿಕ ಪೌರಾಣಿಕ, ಹಾಸ್ಯ ಮತ್ತು ಸಮಾಜಮುಖಿ ನಾಟಕಗಳ ಪ್ರದರ್ಶನದಿಂದ ಸಮಾಜ ಪರಿವರ್ತನೆಗೊಂಡಂತೆ ಇಂದಿನ ಆಧುನಿಕ ಯುಗದಲ್ಲಿರುವ ನಮ್ಮ ವಿದ್ಯಾರ್ಥಿಗಳು ಸಾಹಿತ್ಯ ಪುಸ್ತಕಗಳಲ್ಲಿ ಅಡಕವಾಗಿರುವ ನಾಟಕಗಳನ್ನು ಅಭ್ಯಾಸ ಮಾಡುವುದರೊಂದಿಗೆ ಅವುಗಳನ್ನು ಅಭಿನಯಿಸಿ ಪ್ರದರ್ಶನ ನೀಡಿ ವಿದ್ಯಾರ್ಥಿ ದೆಸೆಯಲ್ಲಿ ನಾಟಕ ಕಲೆಯ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕೆಂದರು. ಪ್ರಾಯೋಗಿಕವಾಗಿ ಇಂದು ಆರಂಭಗೊಂಡ ವಿದ್ಯಾರ್ಥಿಗಳ ನಾಟಕ ಸ್ಪರ್ಧೆ ಮುಂದೆ ಜಿಲ್ಲೆಯಾಧ್ಯಂತ ಹೆಮ್ಮರವಾಗಿ ಬೆಳೆಯಲೆಂದು ಆಶಿಸಿದರು.
ರಂಗಭೂಮಿ ಕಲಾವಿದ ಹಾಗೂ ಮಡಿಕೇರಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಪ್ರವೀಣ್ ಮಾತನಾಡಿ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯಲ್ಲಿ ವಿದ್ಯಾರ್ಥಿಗಳ ನಾಟಕೋತ್ಸವವನ್ನು ಆಯೋಜಿಸುವಂತಾಗಬೇಕೆಂದು ಮನವಿ ಮಾಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಮಾತನಾಡಿ, ನಾಟಕ ಕಲೆಯ ಅಭಿರುಚಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ನಾವುಗಳು ಮುಂದಾದಲ್ಲಿ ಉತ್ತಮ ತರಬೇತಿಯೊಂದಿಗೆ ಒಳ್ಳೆಯ ಕಲಾವಿದರುಗಳನ್ನು ಬೆಳೆಸಿ ಹೊರಹೊಮ್ಮಲು ಸಾಧ್ಯ ಎಂದರು. ರಂಗಭೂಮಿ ಕಲಾವಿದ ಪ್ರವೀಣ್ ಅವರ ಪ್ರೇರಣೆಯಿಂದಾಗಿ ಪ್ರಾಯೋಗಿಕವಾಗಿ ನಾಟಕ ಸ್ಪರ್ಧೆ ನಡೆಯುತ್ತಿರುವುದಕ್ಕೆ ಅವರನ್ನು ಅಭಿನಂದಿಸುವುದಾಗಿ ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಲಹೆಗಾರ ಟಿ.ಪಿ. ರಮೇಶ್, 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2014ರಲ್ಲಿ ಮಡಿಕೇರಿಯಲ್ಲಿ ನಡೆದಾಗ ಅದರ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ನಾ.ಡಿ’ಸೋಜ ಅವರ ಹೆಸರಿನಲ್ಲಿ ಪರಿಷತ್ತು ದತ್ತಿ ಸ್ಥಾಪಿಸಿದ್ದು, ಕಥಾ ಸ್ಪರ್ಧೆ, ನಾಟಕ ಸ್ಪರ್ಧೆ ಹಾಗೂ ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಪಿಯುಸಿ ಮಕ್ಕಳಿಗೆ ಕಥಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದೀಗ ನಾಟಕ ಸ್ಪರ್ಧೆ ಏರ್ಪಾಡಿಸಲಾಗಿದೆ ಎಂದರು.
ಮುಂದಿನ ವರ್ಷ ಎಲ್ಲರ ಅಪೇಕ್ಷೆಯಂತೆ ಮಕ್ಕಳ ನಾಟಕೋತ್ಸವವನ್ನು ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಏರ್ಪಡಿಸಲು ಪರಿಷತ್ತು ಅಧ್ಯಕ್ಷರೊಂದಿಗೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.
ಫಲಿತಾಂಶ :: ಸಂತ ಮೈಕಲರ ಫ್ರೌಡ ಶಾಲೆಯ ‘ಪ್ರಜಾನಿಷ್ಠೆ’ ನಾಟಕ ತಂಡ ಪ್ರಥಮ ಬಹುಮಾನ, ಮಡಿಕೇರಿ ಸರಕಾರಿ ಫ್ರೌಡಶಾಲೆಯ ‘ಚೆನ್ನ ಭೈರದೇವಿ’ ನಾಟಕ ತಂಡ ದ್ವಿತೀಯ ಬಹುಮಾನ ಹಾಗೂ ಚೆಂಬು ಪ್ರೌಢ ಶಾಲೆಯ ‘ಭೂ ಕೈಲಾಸ’ ನಾಟಕ ತಂಡ ತೃತೀಯ ಬಹುಮಾನ ಪಡೆಯಿತು.
ತೀರ್ಪುಗಾರರಾಗಿ ಶಿಕ್ಷಕಿಯರಾದ ಜಯಲಕ್ಷ್ಮಿ, ಗೌತಮಿ, ಮತ್ತು ಸೌಮ್ಯ ಶೆಟ್ಟಿ ಕಾರ್ಯನಿರ್ವಹಿಸಿದರು.
ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ, ತೀರ್ಪುಗಾರರಿಗೆ ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಪರಿಷತ್ತಿನ ಸಹಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ನಿರ್ದೇಶಕಿ ಹಾಗೂ ಸಾಹಿತಿ ಫ್ಯಾನ್ಸಿ ಮುತ್ತಣ್ಣ ಉಪಸ್ಥಿತರಿದ್ದರು. ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿ ಭಾರತಿ ರಮೇಶ್ ಕಾರ್ಯಕ್ರಮ ನಿರೂಪಿಸಿ, ಸರ್ವರನ್ನು ಸ್ವಾಗತಿಸಿದರು.
ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಸಾಹಿತಿ ಕಟ್ರತನ ಲಲಿತಾ ಅಯ್ಯಣ್ಣ, ಕ.ಸಾ.ಪ ಜಿಲ್ಲಾ ಸಮಿತಿಯ ಸದಸ್ಯ ಶ್ರೀಧರ್ ಹೂವಲ್ಲಿ, ಕ.ಸಾ.ಪ. ಸಿಬ್ಬಂದಿ ರೇಣುಕಾ ಶಿಕ್ಷಕರಾದ ಕುಂಬಗೌಡನ ರಂಜಿತ್ ಹಾಗೂ ಪತ್ರಕರ್ತ ರಂಜಿತ್ ಕವಲಪಾರ, ಇನ್ನಿತರರು ಉಪಸ್ಥಿತರಿದ್ದರು. ಸಂತ ಮೈಕಲರ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.