Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.8 ರಂದು ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ಮರುಸ್ಥಾಪನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.8 ರಂದು ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ಮರುಸ್ಥಾಪನೆ*

ಮಾರ್ಚ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.6 NEWS DESK : ಅಪಘಾತದಿಂದ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಮಾ.8 ರಂದು ಮರುಸ್ಥಾಪನೆ ಮಾಡಲಾಗವುದೆಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ತಿಂಗಳ ಹಿಂದೆ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆಎಸ್‍ಆರ್‍ಟಿ ಬಸ್ ಡಿಕ್ಕಿಪಡಿಸಿ ಹಾನಿಯಾಗಿದ್ದ ಪ್ರತಿಮೆಯನ್ನು ದುರಸ್ತಿ ಪಡಿಸಲಾಗಿದ್ದು, ಮಾ.8 ರಂದು ಜಿಲ್ಲಾಡಳಿತ ಹಾಗೂ ನಗರಸಭೆಯ ಸಹಕಾರದೊಂದಿಗೆ ಪ್ರತಿಮೆಯನ್ನು ಮರು ಸ್ಥಾಪನೆ ಮಾಡಲಾಗುವುದೆಂದರು.

ಬೆಳಿಗ್ಗೆ 6.30ಕ್ಕೆ ಮೈಸೂರಿನಿಂದ ಪ್ರತಿಮೆ ಹೊರಡಲಿದ್ದು, ಕುಶಾಲನಗರದಲ್ಲಿ ಭವ್ಯ ಸ್ವಾಗತ ಕೋರಲಾಗುವುದು. ಇದೇ ಸಂದರ್ಭ ತಿಮ್ಮಯ್ಯ ಅವರ ಮಾಹಿತಿ ಇರುವ ಸ್ತಬ್ಧಚಿತ್ರ ಹಾಗೂ ಬೈಕ್ ಮತ್ತು ಕಾರು ಜಾಥಾ ನಡೆಯಲಿದೆ ಎಂದರು.

ನಂತರ ಮಡಿಕೇರಿಯ ಕಾರ್ಯಪ್ಪ ವೃತ್ತದಿಂದ ಗೌರವಯುತ ಮೆರವಣಿಗೆಯ ಮೂಲಕ ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡವ ಸಾಂಪ್ರದಾಯಿಕ ಉಡುಪು, ವಾಲಗದೊಂದಿಗೆ ಜನರಲ್ ತಿಮ್ಮಯ್ಯ ವೃತ್ತಕ್ಕೆ ತಂದು ಅಪರಾಹ್ನ 12 ಗಂಟೆಗೆ ಮಾಜಿ ಸಚಿವ ಎಂ.ಸಿ.ನಾಣಯ್ಯ ಮುಂದಾಳತ್ವದಲ್ಲಿ  ಏರ್ ಮಾರ್ಷಲ್ ನಂದಾ ಕಾರ್ಯಪ್ಪ ಅವರು ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ ಎಂದರು.

ಈ ಸಂದರ್ಭ ಶಾಸಕರು, ಜಿಲ್ಲಾಧಿಕಾರಿ, ಮಾಜಿ ಸೈನಿಕರು, ಕೊಡವ ಸಮಾಜಗಳ ಪ್ರಮುಖರು, ಜನರಲ್ ತಿಮ್ಮಯ್ಯ ಫೋರಂನ ಪ್ರಮುಖರು, ಜನರಲ್ ತಿಮ್ಮಯ್ಯ ಶಾಲೆಯ ವಿದ್ಯಾರ್ಥಿಗಳು, ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ನಗರದಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಹಾನಿಗೊಳಗಾದ ಪ್ರತಿಮೆಯನ್ನು ಮೈಸೂರಿನ ಶಿಲ್ಪಕಲಾ ಅಕಾಡೆಮಿಗೆ ರವಾನಿಸಿ ಪ್ರತಿಮೆಯನ್ನು ದುರಸ್ತಿಗೊಳಿಸಲು ಹಾಗೆಯೇ ಹಾನಿಗೊಳಗಾಗಿದ್ದ ವೃತ್ತವನ್ನೂ ಸಹ ದುರಸ್ತಿಗೊಳಿಸಲು ಕೆ.ಆ‌ರ್.ಐ.ಡಿ.ಎಲ್ ಸಂಸ್ಥೆಯಿಂದ ಕ್ರಮ ವಹಿಸಲಾಗಿತ್ತು ಪ್ರಸ್ತುತ ಹಾನಿಗೊಳಗಾದ ಪ್ರತಿಮೆ ಮತ್ತು ಪ್ರತಿಷ್ಠಾಪನಾ ವೃತ್ತವೂ ಸಹ ದುರಸ್ತಿಯಾಗಿ ಪುನರ್ ಸ್ಥಾಪನೆಗೆ ಸಿದ್ಧವಾಗಿರುತ್ತದೆ. ಈ ಕಾರ್ಯವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು, ನಗರಸಭೆ, ಕೆ.ಎಸ್.ಆ‌ರ್.ಟಿ.ಸಿ ಮತ್ತು ಕೊಡವ ಸಮಾಜದ ಸಹಕಾರದೊಂದಿಗೆ ನಿರ್ವಹಿಸಲಾಗಿದೆ.

ಅದರಂತೆ ಕೆಎಸ್‌ಆರ್‌ಟಿಸಿ ಯ ರೂ.4 ಲಕ್ಷ ಸೇರಿದಂತೆ ಒಟ್ಟು ರೂ.17 ಲಕ್ಷ ವೆಚ್ಚದಲ್ಲಿ ಜನರಲ್ ತಿಮ್ಮಯ್ಯ ವೃತ್ತಕ್ಕೆ ವೈಜ್ಞಾನಿಕ ರೂಪ ಹಾಗೂ ತಿಮ್ಮಯ್ಯ ಅವರ ಪ್ರತಿಮೆಯ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕೊಡವ ಸಮಾಜದ ನಿರ್ದೇಶಕರಾದ ಕಾಳಚಂಡ ಅಪ್ಪಣ್ಣ, ಕೇಕಡ ವಿಜು ದೇವಯ್ಯ, ಚೊಟ್ಟೆಯಂಡ ಸಂಜು ಕಾವೇರಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ದುಬಾರೆ ಮೀಸಲು ಅರಣ್ಯದಲ್ಲಿ ಯಾವುದೇ ಅನುಮತಿ ಇಲ್ಲದೆ ಬಂದೂಕಿನೊಂದಿಗೆ ಪ್ರವೇಶಿಸಿದ್ದ ಏಳು ಮಂದಿಯ…

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.