ಮಡಿಕೇರಿ ಮಾ.7 NEWS DESK : ಕೊಡಗು ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಸಾರ್ವಜನಿಕ ಹಿತಾಸಕ್ತಿಯಿಂದ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ನದಿ ಹಾಗೂ ನದಿ ಮೂಲಗಳಿಂದ ಅಕ್ರಮ/ ಅನಧಿಕೃತವಾಗಿ ಖಾಸಗಿ ಚಟುವಟಿಕೆಗಳಿಗೆ ಪಂಪ್ಸೆಟ್ ಬಳಸಿ ಅಥವಾ ಕಾಲುವೆಗಳ ಮುಖಾಂತರ ನದಿ ನೀರನ್ನು ಇತರೆ ಉದ್ದೇಶಕ್ಕೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.







