Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂಡಿಗೆ ಸೈನಿಕ ಶಾಲೆಗೆ ಮೇಜರ್ ಜನರಲ್ ಸಂಜೀವ್ ಡೋಗ್ರಾ ಭೇಟಿ : ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕರೆ*
ಇತ್ತೀಚಿನ ಸುದ್ದಿಗಳು

*ಕೂಡಿಗೆ ಸೈನಿಕ ಶಾಲೆಗೆ ಮೇಜರ್ ಜನರಲ್ ಸಂಜೀವ್ ಡೋಗ್ರಾ ಭೇಟಿ : ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕರೆ*

March 16, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಮಾ.16 NEWS DESK : ಶಾಲೆಯಲ್ಲಿನ ಅತ್ಯಾಧುನಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಮತ್ತು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕೆಡೆಟ್‌ಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದ ಆಕಾಂಕ್ಷೆಗಳನ್ನು ಉತ್ಸಾಹದಿಂದ ಮುಂದುವರಿಸಿ, ಆದರ್ಶ ನಾಗರೀಕರಾಗಬೇಕು ಎಂದು ಪುಣೆಯ ಡೆಪ್ಯುಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರು, ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ಖಡಕ್ವಾಸ್ಲಾ, ಮೇಜರ್ ಜನರಲ್ ಸಂಜೀವ್ ಡೋಗ್ರಾ ಹೇಳಿದರು.

ಕೊಡಗು ಜಿಲ್ಲೆಯ ಕೂಡಿಗೆ ಸೈನಿಕ ಶಾಲೆಗೆ ವಿಶೇಷ ಅತಿಥಿಯಾಗಿ ಆಗಮಿಸಿ ಶಾಲೆಯ ವಿದ್ಯಾರ್ಥಿಗಳೊಂದಿಗೆ  ಪ್ರೇರಣಾತ್ಮಕ ಸಂವಾದದಲ್ಲಿ ಮಾತನಾಡಿದ ಅವರು ಸಮಾಜದ ಆದರ್ಶ ವ್ಯಕ್ತಿಗಳನ್ನು ರೂಪಿಸುವಲ್ಲಿ ಶಾಲೆಯ ತರಬೇತಿ ಹಾಗೂ ಸೌಲಭ್ಯಗಳ  ವ್ಯವಸ್ಥೆಯನ್ನು ಶ್ಲಾಘಿಸಿದರು.  ಕೇಂದ್ರ ಲೋಕಸೇವಾ ಆಯೋಗದ ಎನ್‌ ಡಿ ಎ ಪರೀಕ್ಷೆ ಮತ್ತು ವಿವಿಧ ರಕ್ಷಣಾ ತರಬೇತಿ ಅಕಾಡೆಮಿಗಳಿಗೆ ಶಿಸ್ತುಬದ್ಧ ತಯಾರಿ ಮಾಡುವ ಕುರಿತು ಅವರು ಅಮೂಲ್ಯವಾದ ಮಾರ್ಗದರ್ಶನವನ್ನು ನೀಡಿದರು. ಇಂತಹ ಸ್ಪರ್ಧಾತ್ಮಕ ಪ್ರಯತ್ನಗಳಲ್ಲಿ ಯಶಸ್ಸನ್ನು ಸಾಧಿಸುವಲ್ಲಿ ಸಕಾರಾತ್ಮಕ ಮನೋಭಾವ, ಕಠಿಣ ಪರಿಶ್ರಮ, ದೃಢಸಂಕಲ್ಪ, ತೆರೆದ ಮನಸ್ಸು ಮತ್ತು ಸಾಂಘಿಕ ಕಾರ್ಯಗಳ ಪ್ರಾಮುಖ್ಯತೆ ಇದೆ ಎಂದರು.  ಈ ಸಂವಾದವು ಮಕ್ಕಳ ಆಲೋಚನಾ ವಿಶ್ಲೇಷಣೆ ಮತ್ತು ಸ್ಪೂರ್ತಿದಾಯಕ ಪ್ರೇರಣೆಗೆ ಹೆಸರಾಯಿತು. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿ ಕೆಡೆಟ್ ಸರ್ವೇಶ್ ಅವರು ಅತಿಥಿಗಳಿಗೆ ಸ್ವಾಗತ ಕೋರಿದರು. ಹಾಗೆಯೇ ಮುಖ್ಯ ಅತಿಥಿಗಳ ಕಿರು ಪರಿಚಯ ಮಾಡಿ, ಮೇಜರ್ ಜನರಲ್ ಸಂಜೀವ್ ಡೋಗ್ರಾ ಅವರ ವೃತ್ತಿಪರ ಸಾಧನೆಗಳ ಮೇಲೆ ಬೆಳಕು ಚೆಲ್ಲಿದರು ಮತ್ತು ಅವರ ಆರಂಭಿಕ ತರಬೇತಿ ದಿನಗಳಿಂದ ಹಿಡಿದು  ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ ಡಿ ಎ)ಯಲ್ಲಿ ಡೆಪ್ಯುಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರಾಗಿ ನೇಮಕವಾಗುವವರೆಗಿನ ಎಲ್ಲಾ ಸಾಧನೆಗಳ ವಿವರ ನೀಡಿದರು. ಕೆಡೆಟ್ ಸರ್ವೇಶ್ ರವರು ಮುಖ್ಯ ಅತಿಥಿಯ ಪರಿಚಯದಲ್ಲಿ ಪುಣೆಯ ಖಡಕ್ವಾಸ್ಲಾದಲ್ಲಿರುವ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಪೋರ್ಟಲ್‌ಗೆ ಅಧಿಕಾರಿಯ ಪ್ರವೇಶವನ್ನು ಒಳಗೊಂಡಂತೆ,  ಅಧಿಕಾರಿಯ ಸುಪ್ರಸಿದ್ಧ ವೃತ್ತಿಜೀವನದ ವಿವಿಧ ಮಜಲುಗಳನ್ನು ಪರಿಚಯಿಸಿದರು. ಡಿಫೆನ್ಸ್ ಸರ್ವಿಸ್ ಸ್ಟಾಫ್ ಕಾಲೇಜ್, ವೆಲ್ಲಿಂಗ್ಟನ್ ಮತ್ತು ಕಾಲೇಜ್ ಆಫ್ ಡಿಫೆನ್ಸ್ ಮ್ಯಾನೇಜ್‌ಮೆಂಟ್, ಸಿಕಂದರಾಬಾದ್ ನಲ್ಲಿ ಸಲ್ಲಿಸಿದ ಸೇವೆಯು ಯುದ್ಧ ಅನುಭವವನ್ನು ಎದುರಿಸಲು ಮತ್ತು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್ ಸೇರಿದಂತೆ ಬಹುತೇಕ ಎಲ್ಲಾ ಕಠಿಣ ಭೂಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವಿಶೇಷ ಅನುಭವ ನೀಡಿತು. ನಂತರ ಜನರಲ್ ಆಫೀಸರ್‌ನಂತಹ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ಶ್ರೀಯುತರು ಮೌಂಟೇನ್ ವಿಭಾಗದ ಕಮಾಂಡಿಂಗ್, ಇನ್‌ಫೆಂಟ್ರಿ ಸ್ಕೂಲ್‌ನಲ್ಲಿ ಡೆಪ್ಯೂಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರಾದರು. ನಂತರ ವಾರ್ ಗೇಮಿಂಗ್ ಡೆವಲಪ್‌ಮೆಂಟ್ ಸೆಂಟರ್‌ನ ಕಮಾಂಡೆಂಟ್ ಹಾಗೂ ಪ್ರಸ್ತುತ ಖಡಕ್ವಾಸ್ಲಾದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ(ಎನ್ ಡಿ ಎ)ಯಲ್ಲಿ ಡೆಪ್ಯುಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

[ಪ್ರಸ್ತುತ ಸಂವಾದವು ವಿದ್ಯಾರ್ಥಿಗಳಿಗೆ ರಕ್ಷಣಾ ಪಡೆಗಳಲ್ಲಿ ವೃತ್ತಿಜೀವನವನ್ನು ಹೊಂದುವ ಅಂತದೃಷ್ಠಿಗಳಿಸಲು ಮತ್ತು ಭಾರತೀಯ ಸಶಸ್ತ್ರ ಪಡೆಗಳಲ್ಲಿ ದಕ್ಷ ರಕ್ಷಣಾ ಅಧಿಕಾರಿಯಾಗಲು ಹೊಂದಬೇಕಾದ ಅಗತ್ಯ ಗುಣಗಳ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳಲು ಅನುವು ಮಾಡಿಕೊಟ್ಟಿತು. ]

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಎನ್‌ ಡಿ ಎ ಯಲ್ಲಿನ ದೈನಂದಿನ ತರಬೇತಿ, ಜೀವನ ಶೈಲಿ, ಶಿಸ್ತು ಹಾಗೂ ಅಕಾಡೆಮಿಯು ವಿದ್ಯಾರ್ಥಿಗಳಿಂದ ಏನನ್ನು ನಿರೀಕ್ಷಿಸುತ್ತದೆ ಎಂದು ಮುಖ್ಯ ಅತಿಥಿಗಳಿಗೆ ಹಲವಾರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು. ಕೊಡಗಿನ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು ಮುಖ್ಯ ಅತಿಥಿಗಳಿಗೆ ಶಾಲೆಯ ಪರವಾಗಿ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ಹಾಗೆಯೇ ಸೌಹಾರ್ಧಯುತ ಭೇಟಿಯ ದ್ಯೋತಕದ ಸಂಕೇತವಾಗಿ  ಮುಖ್ಯ ಅತಿಥಿಗಳಿಗೆ ಶಾಲೆಯ ಯುದ್ಧ ವೀರರ ಸ್ಮಾರಕದ  ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ಮೇಜರ್ ಜನರಲ್ ಸಂಜೀವ್ ಡೋಗ್ರಾ ಅವರ ಭೇಟಿಯು ಸೈನಿಕ ಶಾಲೆ ಕೊಡಗಿನ ವಿದ್ಯಾರ್ಥಿಗಳಿಗೆ ಪ್ರೇರಣಾತ್ಮಕವಾಗಿದ್ದು, ನೂತನ ಅನುಭವವನ್ನು ನೀಡಿತು. ಇದರೊಂದಿಗೆ ವಿದ್ಯಾರ್ಥಿಗಳು ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಿದ ನಂತರ ವೃತ್ತಿ ಜೀವನದಲ್ಲಿ ಉತ್ಕೃಷ್ಟತೆಯೊಂದಿಗೆ ಮುಂದುವರಿಯಲು ಅವರನ್ನು ಪ್ರೇರೇಪಿಸಿತು. ಪ್ರಸ್ತುತ ಸಂವಾದ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪ್ರಕಾಶ್ ರಾವ್ ಹಾಗೂ ಸಿಬ್ಬಂದಿಗಳು  ಉಪಸ್ಥಿತರಿದ್ದರು. (ವರದಿ : ಅಶ್ವಥ್ ಕುಮಾರ್ ಎನ್.ಎ)     

Share. Facebook Twitter Pinterest LinkedIn Tumblr Email WhatsApp
Previous Article*ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ*
Next Article *ವಸತಿ ಶಾಲೆ : ಮಾ.31 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.