ಮಡಿಕೇರಿ ಮಾ.21 NEWS DESK : ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಧರ್ಮ-ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಪ್ರಚೋದನಾಕಾರಿ ಪದಗಳನ್ನು ಬಳಸಿ ಯಾವುದೇ ಜಾತಿ/ಪಕ್ಷ/ವ್ಯಕ್ತಿಗಳ ವಿರುದ್ಧ ಸುಳ್ಳ ಸುದ್ದಿಗಳನ್ನು ಹರಿಬಿಡದಂತೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸಂದೇಶ/ಭಾವಚಿತ್ರ ಪೋಸ್ಟ್ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಸಂಪೂರ್ಣ ನಿಗಾವಹಿಸಿದ್ದು, ಸುಳ್ಳು ಸುದ್ದಿಯ ಪೋಸ್ಟ್ಗಳನ್ನು ಹರಿಬಿಟ್ಟ ವ್ಯಕ್ತಿಗಳ ವಿರುದ್ಧ RP Act & IPC ಅಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.








