Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಜನರಲ್ ತಿಮ್ಮಯ್ಯ ಶಾಲೆಯ ಬೆಳ್ಳಿ ಮಹೋತ್ಸವದಲ್ಲಿ ಸಾಂಸ್ಕೃತಿಕ ವೈಭವದ ಆಕರ್ಷಣೆ : ಉನ್ನತ ಹುದ್ದೆಗಳನ್ನು ಅಲಂಕರಿಸಲು ಮಾಜಿ ಎಂಎಲ್‍ಸಿ ವೀಣಾ ಕರೆ
ಇತ್ತೀಚಿನ ಸುದ್ದಿಗಳು

ಜನರಲ್ ತಿಮ್ಮಯ್ಯ ಶಾಲೆಯ ಬೆಳ್ಳಿ ಮಹೋತ್ಸವದಲ್ಲಿ ಸಾಂಸ್ಕೃತಿಕ ವೈಭವದ ಆಕರ್ಷಣೆ : ಉನ್ನತ ಹುದ್ದೆಗಳನ್ನು ಅಲಂಕರಿಸಲು ಮಾಜಿ ಎಂಎಲ್‍ಸಿ ವೀಣಾ ಕರೆ

March 30, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.30 NEWS DESK  : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವದ ಪ್ರಯುಕ್ತ ಎರಡನೇ ದಿನ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು, ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಿ ಶಾಲೆಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ಕರೆ ನೀಡಿದರು.
ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಗೆ ತನ್ನದೇ ಆದ ಇತಿಹಾಸವಿದೆ, ಇಲ್ಲಿ ವ್ಯಾಸಂಗ ಮಾಡಿದ ಮಕ್ಕಳು ಉನ್ನತ ಸ್ಥಾನಗಳಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಶಾಲೆಯಲ್ಲಿ ಜನರಲ್ ತಿಮ್ಮಯ್ಯ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ವೀರಾಸೇನಾನಿಗೆ ನಿರಂತರ ಗೌರವ ಸೂಚಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ಜೀವನ ನಡೆಸಲು ಶಿಕ್ಷಕರು ಹಾಗೂ ಶಾಲೆಯ ಆಡಳಿತ ಮಂಡಳಿ ಉತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ.
ಇಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದು ದೇಶ ವಿದೇಶದಲ್ಲಿ ಉತ್ತಮ ಹುದ್ದೆಗಳನ್ನು ಅಲಂಕರಿಸಿದ್ದಾರೆ. ನಮ್ಮ ದೇಶದ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಇದು ಉತ್ತಮ ಭವಿಷ್ಯ ರೂಪಿಸುವ ದೇಗುಲವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸನ್ನು ಸಾಧಿಸಿ ಎಂದು ವೀಣಾ ಅಚ್ಚಯ್ಯ ಕಿವಿಮಾತು ಹೇಳಿದರು.
ಮೈಸೂರಿನ ಎಸ್‍ಬಿಆರ್‍ಆರ್ ಮಹಾಜನ ಕಾಲೇಜ್ ನ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಕೊಡಂದೇರ ಹರೀಶ್ ಮಾಚಯ್ಯ ಅವರು ಮಾತನಾಡಿ, ಜನರಲ್ ತಿಮ್ಮಯ್ಯ ಅವರು ಒಬ್ಬ ಪರಿಪೂರ್ಣ ವ್ಯಕ್ತಿಯಾಗಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ. ಅವರೊಬ್ಬರು ಸಜ್ಜನ ಸೇನಾನಿ, ಅವರ ಹೆಸರಿನಲ್ಲಿ ನಡೆಯುತ್ತಿರುವ ಜನರಲ್ ತಿಮ್ಮಯ್ಯ ಶಾಲೆಯು ಮಾದರಿ ಶಿಕ್ಷಣ ಸಂಸ್ಥೆಯಾಗಿ 25 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ವಿಚಾರ ಎಂದರು.
ದೇಶದ ರಕ್ಷಣಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಪ್ರತಿಮ ವೀರಸೇನಾನಿ ಎಂದು ಅಂಕಿಗಳ ಅಂಶಗಳ ಮೂಲಕ ಜನರಲ್ ತಿಮ್ಮಯ್ಯ ಅವರ ಹುಟ್ಟಿದ ದಿನ, ಹೆಸರುಗಳನ್ನು ವಿಭಿನ್ನವಾಗಿ ವಿವರಿಸಿ ವಿದ್ಯಾರ್ಥಿಗಳ ಗಮನ ಸೆಳೆದರು.
ಶಾಲಾ ಆಡಳಿತ ಮಂಡಳಿಯ ಕರೆಸ್ಪಾಂಡೆಂಟ್ ಕನ್ನಂಡ ಕವಿತ ಬೊಳ್ಳಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಲ್ ತಿಮ್ಮಯ್ಯ ಶಾಲೆ ಎಲ್ಲಾ ವಿಷಯದಲ್ಲೂ ಮಾದರಿಯಾಗಿದೆ. ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಕಾಲಕಳೆಯುವ ಮೂಲಕ ಅವರ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು ಮತ್ತು ಶಿಕ್ಷಕರು ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಉತ್ತಮ ವೇದಿಕೆ ಕಲ್ಪಿಸಬೇಕು ಎಂದು ತಿಳಿಸಿದರು.
ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿದರೆ ದೇಶದ ಒಬ್ಬ ಉತ್ತಮ ಪ್ರಜೆಯಾಗಿ ಗುರುತಿಸಿಕೊಳ್ಳುತ್ತಾರೆ. ಶಿಕ್ಷಕರ ಪರಿಶ್ರಮದೊಂದಿಗೆ ವಿದ್ಯಾರ್ಥಿಗಳು ಕೂಡ ಉತ್ತಮ ಫಲಿತಾಂಶ ಗಳಿಸುವ ಮೂಲಕ ಶಾಲೆ ಹಾಗೂ ಪೋಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ಕರೆ ನೀಡಿದರು.
ಪೋಷಕರ ಪರವಾಗಿ ವಿನಿತಾ ಮಾದಪ್ಪ ಮಾತನಾಡಿ, ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಮಂಡುವಂಡ ಪಿ.ಮುತ್ತಪ್ಪ, ಕಾರ್ಯನಿರ್ವಹಾಕರಾದ ಮುಕ್ಕಾಟಿರ ಪೊನ್ನಮ್ಮ ಮೊಣ್ಣಪ್ಪ, ಸದಸ್ಯರಾದ ನಂದಿನೆರವಂಡ ಎಂ.ದಿನೇಶ್, ಕೇಕಡ ಎ.ದೇವಯ್ಯ, ಮಂಡೀರ ಎಂ.ಮುದ್ದಪ್ಪ, ಮೂವೇರ ಕೆ.ಜಯರಾಮ್, ಬೊಪ್ಪಂಡ ಸರಳ ಕರುಂಬಯ್ಯ, ಕಾಂಡೇರ ಲಲ್ಲು ಕುಟ್ಟಪ್ಪ, ಶಿಕ್ಷಣ ತಜ್ಞರಾದ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಚೌರೀರ ಕಾವೇರಿ ಪೂವಯ್ಯ, ಶಾಲೆಯ ಪ್ರಾಂಶುಪಾಲೆ ಕಲ್ಮಾಡಂಡ ಸರಸ್ವತಿ ಸುಬ್ಬಯ್ಯ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕರಾದ ಕೆ.ಶಶಿ, ಟೈನಿ ಚಂಗಪ್ಪ, ಬಿ.ಎ.ಚರಿಷ್ಮಾ ಅವರುಗಳು ಸಭಾ ಕಾರ್ಯಕ್ರಮ ಹಾಗೂ ಶಿಕ್ಷಕ ಭರತ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಕೆ.ಬಿ.ಸೀತಮ್ಮ ಅವರು ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಅವರ ಪರಿಚಯ ಮಾಡಿದರು. ಶಿಕ್ಷಕಿ ವಿನ್ಯಾ ಉತ್ತಪ್ಪ ಅವರು ಕೊಡಂದೇರ ಹರೀಶ್ ಮಾಚಯ್ಯ ಅವರ ಪರಿಚಯ ಮಾಡಿದರು.
ವಿದ್ಯಾರ್ಥಿಗಳು ಹಾಗೂ ಪೋಷಕರು ವೈವಿಧ್ಯಮಯ ನೃತ್ಯ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಪೋಷಕರ ಪ್ರತಿಭಾ ಪ್ರದರ್ಶನಕ್ಕೂ ಅವಕಾಶ ಕಲ್ಪಸಿದ ಶಾಲಾ ಆಡಳಿತ ಮಂಡಳಿ ಮೆಚ್ಚುಗೆಗೆ ಪಾತ್ರವಾಯಿತು.
:: ಮಾ.31 ರಂದು ಸಮಾರೋಪ ಸಮಾರಂಭ ::
ಮಾ.31 ರಂದು 2.30 ಗಂಟೆಗೆ ಕೊಡವ ಸಮಾಜ ಮತ್ತು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಮೇರಿಯಂಡ ನಾಣಯ್ಯ, ಕಾಫಿ ಬೆಳೆಗಾರ ಹಾಗೂ ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ನಡಿಕೇರಿಯಂಡ ಬೋಸ್ ಮಂದಣ್ಣ ಪಾಲ್ಗೊಳ್ಳಲಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ನಾಪೋಕ್ಲು ಅಪಘಾತ : ಚಿಕಿತ್ಸೆ ಫಲಿಸದೆ ಯುವಕ ಸಾವು*
Next Article *ನಿಮ್ಮ ಶೋಕಿ, ನಿಮ್ಮ ಶರವೇಗ ಮನೆಯವರ ಶೋಕಕ್ಕೆ ಕಾರಣವಾಗಬಹುದು, ಯುವಕರೇ ಎಚ್ಚರ…*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.