ಮಡಿಕೇರಿ ಏ.11 NEWS DESK : ಪೊನ್ನಂಪೇಟೆ ಬ್ಲಾಕ್ ವ್ಯಾಪ್ತಿಯ ಬಾಳೆಲೆ ವಲಯದಲ್ಲಿ ಮೈಸೂರು-ಕೊಡಗು ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಪ್ರಚಾರ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಮಾಜಿ ಎಂ.ಎಲ್.ಸಿ ಅರುಣ್ ಮಾಚ್ಚಯ್ಯ ,ಹಿರಿಯ ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ, ಮಾಜಿ ಎಂ.ಎಲ್.ಸಿ ವೀಣಾ ಅಚ್ಚಯ್ಯ ಹಾಗೂ ಇತರೆ ಮಹಿಳ ಮುಖಂಡರು, ನಾಯಕರು, ಸ್ಥಳೀಯರು ಭಾಗವಹಿಸಿದರು.







