Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಾಪಮಾನ ಅತಿರೇಕ : ವಿಷ ಜಂತು, ವನ್ಯಜೀವಿಗಳ ಬಗ್ಗೆ ಇರಲಿ ಎಚ್ಚರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಾಪಮಾನ ಅತಿರೇಕ : ವಿಷ ಜಂತು, ವನ್ಯಜೀವಿಗಳ ಬಗ್ಗೆ ಇರಲಿ ಎಚ್ಚರ*

ಮೇ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 9 NEWS DESK : ಕಾವೇರಿನಾಡು ಕೊಡಗಿನಲ್ಲಿ ಒಂದೆರಡು ಮಳೆಯಾದರೂ ಕಾದಿರುವ ಭೂಮಿ ತಣ್ಣಗಾಗುತ್ತಿಲ್ಲ. ಅತಿರೇಕದ ತಾಪಮಾನದಿಂದ ಮನುಷ್ಯರು ಮಾತ್ರವಲ್ಲದೆ ವನ್ಯಜೀವಿಗಳು ಕೂಡ ನೀರು, ನೆರಳಿಗಾಗಿ ಪರಿತಪಿಸುತ್ತಿವೆ. ಮನೆಯ ಸುತ್ತಮುತ್ತ ತಂಪು ಪ್ರದೇಶದಲ್ಲಿ ವಿಷ ಜಂತುಗಳು ಆಶ್ರಯ ಪಡೆಯುತ್ತಿರುವುದು ಸಹಜವಾಗಿದ್ದು, ಜನ ಎಚ್ಚರ ವಹಿಸುವುದು ಅಗತ್ಯವಾಗಿದೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದೆ, ಹಿರಿಯರ ಅನುಭವದ ಪ್ರಕಾರ ದಕ್ಷಿಣದ ಕಾಶ್ಮೀರ ಕೊಡಗಿನಲ್ಲಿ ಈ ಬಾರಿಯ ಉಷ್ಣತೆ ದಾಖಲೆಯನ್ನು ಬರೆದಿದೆ. ಅತ್ಯಂತ ಕೂಲ್ ಆಗಿರುತ್ತಿದ್ದ ಕೊಡಗು ಈಗ ಬೇರೆ ಯಾವುದೇ ಜಿಲ್ಲೆಗೆ ಕಡಿಮೆ ಇಲ್ಲ ಎನ್ನುವ ರೀತಿಯಲ್ಲಿ ಕುದಿಯುತ್ತಿದೆ. ನಗರ, ಪಟ್ಟಣದಲ್ಲಿ ಕುಡಿಯುವ ನೀರಿಗೂ ಕೊರತೆ ಎದುರಾಗಿದೆ. ಅರಣ್ಯ ಪ್ರದೇಶದಲ್ಲಿ ಕೆರೆಗಳು ಬತ್ತಿ ಹೋಗಿದೆ. ಮರಗಳು ಒಣಗಿ ನೆರಳೂ ಕೂಡ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು, ನೆರಳು ಇರುವ ಪ್ರದೇಶಗಳೆಡೆಗೆ ವಿಷ ಜಂತುಗಳು ಹಾಗೂ ವನ್ಯಜೀವಿಗಳು ಮುಖ ಮಾಡುತ್ತಿವೆ. ಹೆಚ್ಚಾಗಿ ಹಾವುಗಳು ಮನೆಯಂಗಳ, ಹೂದೋಟ, ಕಾಫಿ ತೋಟ, ತೋಟದ ಮನೆ, ಶೆಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ನೆರಳು ಮತ್ತು ತಂಪಿನ ವಾತಾವರಣ ಇರುವ ಸ್ಥಳಗಳನ್ನು ಇವುಗಳು ಹುಡುಕಿಕೊಂಡು ಬರುತ್ತಿವೆ. ಶೆಖೆ ಎಂದು ರಾತ್ರಿ ವೇಳೆ ಮನೆಯ ಕಿಟಕಿಗಳನ್ನು ತೆರೆದಿಟ್ಟು ಮಲಗುವವರೂ ಇದ್ದಾರೆ. ಈ ರೀತಿ ಮಾಡುವುದು ಸುರಕ್ಷಿತವಲ್ಲ, ಹಾವುಗಳ ಬಗ್ಗೆ ಎಚ್ಚರ ವಹಿಸುವುದು ಅಗತ್ಯ. ತೋಟ ಮತ್ತು ಮನೆಯ ಸುತ್ತಮುತ್ತ ಸೂಕ್ಷ್ಮವಾಗಿ ಗಮನಿಸಿ ಹೆಜ್ಜೆ ಇಡುವುದು ಸೂಕ್ತ. ಹಾವುಗಳು ಕಂಡು ಬಂದರೆ ಯಾವುದೇ ರೀತಿಯಲ್ಲಿ ಹಾನಿ ಮಾಡದೆ ಉರಗ ಪ್ರೇಮಿಗಳಿಗೆ ಕರೆ ಮಾಡಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲು ಕ್ರಮ ಕೈಗೊಳ್ಳುವುದು ಉತ್ತಮ.

ಉಷ್ಣಾಂಶ ಹೆಚ್ಚಾಗುತ್ತಲೇ ಇರುವುದರಿಂದ ಅರಣ್ಯ ಮತ್ತು ತೋಟದ ಸಮೀಪದ ನಿವಾಸಿಗಳು ಹಾವು ಸೇರಿದಂತೆ ವಿಷ ಜಂತುಗಳ ಬಗ್ಗೆ ಎಚ್ಚರ ವಹಿಸುವುದು ಅಗತ್ಯ. ಮತ್ತೊಂದೆಡೆ ಕಾಡಾನೆಗಳು ಕಾಡಿನಲ್ಲಿ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿವೆ. ಈ ಕಾರಣದಿಂದ ತೋಟಗಳೆಡೆಗೆ ಆನೆಗಳು ಬರುತ್ತಿದ್ದು, ಆತಂಕವನ್ನು ಸೃಷ್ಟಿಸುತ್ತಿವೆ. ಹಾಡಹಗಲೇ ನಡು ರಸ್ತೆಯಲ್ಲಿ ಗಜ ಹಿಂಡು ಕಾಣಿಸಿಕೊಳ್ಳುತ್ತಿದೆ. ಮುಂಜಾನೆ ಮತ್ತು ರಾತ್ರಿ ವೇಳೆಯಲ್ಲಿ ಕೂಡ ದಿಢೀರ್ ಆಗಿ ಪ್ರತ್ಯಕ್ಷವಾಗುತ್ತಿವೆ. ವಾಹನಗಳ ಮೇಲೆ ದಾಳಿ ಮಾಡುತ್ತಿವೆ. ಆದ್ದರಿಂದ ಜನ ಕಾಡಾನೆಗಳ ಬಗ್ಗೆಯೂ ಎಚ್ಚರಿಕೆಯಿಂದ ಇರುವುದು ಸೂಕ್ತ. ಅರಣ್ಯ ವ್ಯಾಪ್ತಿಯ ರಸ್ತೆಗಳಲ್ಲಿ ಮತ್ತು ನಿರ್ಜನ ಪ್ರದೇಶಗಳಲ್ಲಿ ರಾತ್ರಿಯ ವೇಳೆಯಲ್ಲಿ ಸಂಚಾರ ಮಾಡದಿರುವುದು ಹಾಗೂ ನಸುಕಿನಲ್ಲಿ ವಾಯು ವಿಹಾರಕ್ಕೆ ಹೋಗದೆ ಇರುವುದು ಒಳಿತು.

ಜಿಲ್ಲೆಯ ಕೆಲವು ಭಾಗಗಳಲ್ಲಿ ಮಂಗಗಳ ಹಾವಳಿಯೂ ಅಧಿಕವಾಗಿದೆ. ಮನೆಯಂಗಳ ಮತ್ತು ಮೇಲ್ಚಾವಣಿಗೆ ಲಗ್ಗೆ ಇಡುತ್ತಿರುವ ಮಂಗಗಳು ಕುಡಿಯುವ ನೀರಿಗಾಗಿ ಹುಡುಕಾಡುತ್ತಿವೆ. ಈ ಸಂದರ್ಭ ತಿನ್ನಬಹುದಾದ ವಸ್ತುಗಳನ್ನು ತಿಂದು ತೇಗುತ್ತಿವೆ, ಒಣಗಲು ಹಾಕಿದ ಬಟ್ಟೆಗಳಿಗೆ ಹಾನಿ ಮಾಡುತ್ತಿವೆ. ತೋಟಗಳಿಗೆ ನುಗ್ಗಿ ಕೃಷಿ ಫಸಲು ಮತ್ತು ಹಣ್ಣುಗಳನ್ನು ತಿನ್ನುತ್ತಿವೆ. ಒಟ್ಟಿನಲ್ಲಿ ಜಿಲ್ಲೆಯ ಜನ ಹಾಗೂ ಕೃಷಿಕ ವರ್ಗ ಅತಿರೇಕದ ಉಷ್ಣಾಂಶದೊಂದಿಗೆ ನೀರು, ಆಹಾರಕ್ಕಾಗಿ ಹವಣಿಸುತ್ತಿರುವ ವನ್ಯಜೀವಿಗಳ ಉಪಟಳವನ್ನು ಕೂಡ ಸಹಿಸಿಕೊಳ್ಳಬೇಕಾಗಿದೆ.

ವರದಿ : ಅಂಚೆಮನೆ ಸುಧಿ  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ…

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.