Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರಗಳ ಗಣತಿ ಆದೇಶ ಹಿಂಪಡೆಯುವವರೆಗೆ ಹೋರಾಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರಗಳ ಗಣತಿ ಆದೇಶ ಹಿಂಪಡೆಯುವವರೆಗೆ ಹೋರಾಟ*

ಮೇ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲೆಯಲ್ಲಿ ಮರಗಳ ಗಣತಿ ಕಾರ್ಯವನ್ನು ಅರಣ್ಯ ಇಲಾಖೆ ಮುಂದುವರೆಸಿದ್ದು, ಕೃಷಿಕ ವರ್ಗಕ್ಕೆ ಮಾರಕವಾಗಿರುವ ಆದೇಶವನ್ನು ಸರಕಾರ ಹಿಂಪಡೆಯುವವರೆಗೆ ವಿವಿಧ ಹಂತಗಳಲ್ಲಿ ಹೋರಾಟವನ್ನು ರೂಪಿಸುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಎಚ್ಚರಿಕೆ ನೀಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು, ತೋಟಗಳಲ್ಲಿರುವ ಮರಗಳ ಗಣತಿ ಕಾರ್ಯ ಜಿಲ್ಲೆಗೆ ಮಾರಕವಾಗಿದೆ. ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಬೆಳೆಗಾರರ ಪರವಾಗಿ ಬಿಜೆಪಿ ಈ ಹಿಂದೆಯೇ ಆಗ್ರಹಿಸಿದ್ದರೂ ಸರಕಾರ ಯಾವುದೇ ಸ್ಪಂದನೆ ನೀಡಿಲ್ಲ. ಆದ್ದರಿಂದ ಮೇ 17 ರಂದು ಮಡಿಕೇರಿಯ ಅರಣ್ಯ ಭವನದ ಎದುರು ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಬೆಳೆಗಾರರು, ಸಾರ್ವಜನಿಕರು ಹಾಗೂ ದೇವಾಲಯ ಸಮಿತಿಗಳ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲೆಯ ಶಾಸಕರು ಮರಗಳ ಗಣತಿ ಕಾರ್ಯ ಮುಂದುವರೆಯುವುದಿಲ್ಲ ಎಂದು ಭರವಸೆ ನೀಡಿದ ಮಾರನೇಯ ದಿನವೇ ಸಂಪಾಜೆ ಮತ್ತು ಚೆಂಬು ಭಾಗದಲ್ಲಿ ಅರಣ್ಯ ಸಿಬ್ಬಂದಿಗಳು ಮರಗಳ ಸರ್ವೆ ನಡೆಸಿದ್ದಾರೆ. ಅಧಿಕಾರಿಗಳು ಶಾಸಕರ ಮಾತಿಗೆ ಗೌರವ ನೀಡುತ್ತಿಲ್ಲವೇ ಅಥವಾ ಸರಕಾರದ ಮಟ್ಟದಲ್ಲಿ ಸಮಸ್ಯೆ ಕುರಿತು ಗಮನ ಸೆಳೆಯುವಲ್ಲಿ ಶಾಸಕರು ವಿಫಲರಾಗಿದ್ದಾರೆಯೇ ಎನ್ನುವುದು ತಿಳಿಯುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಶುಕ್ರವಾರದ ಪ್ರತಿಭಟನೆಯನ್ನು ಕೂಡ ಸರಕಾರ ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ವಿವಿಧ ಹಂತಗಳಲ್ಲಿ ಹೋರಾಟವನ್ನು ರೂಪಿಸಿ ಕೊಡಗು ಬಂದ್ ಗೂ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದರು.
ಅರಣ್ಯ ಪ್ರದೇಶದಲ್ಲಿರುವ ಮರಗಳನ್ನೇ ರಕ್ಷಿಸಿಕೊಳ್ಳಲಾಗದ ಅರಣ್ಯ ಇಲಾಖೆ ವಿನಾಕಾರಣ ಬೆಳೆಗಾರರಿಗೆ ತೊಂದರೆ ನೀಡುತ್ತಿದೆ. ಕೇರಳದ ಗಡಿಭಾಗದ ಅರಣ್ಯ ಪ್ರದೇಶದಿಂದ ಲೆಕ್ಕವಿಲ್ಲದಷ್ಟು ಮರಗಳ ಹನನವಾಗಿದೆ. ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮ ವ್ಯಾಪ್ತಿಯ ನೂರಾರು ಏಕರೆ ಪ್ರದೇಶದಲ್ಲಿ ಮರಗಳ ಹನನವಾಗಿದೆ. ಇದನ್ನೆಲ್ಲ ತಡೆಯಲು ಸಾಧ್ಯವಾಗದ ಅರಣ್ಯ ಅಧಿಕಾರಿಗಳು ತೋಟಗಳಲ್ಲಿರುವ ಮರಗಳ ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ರವಿ ಕಾಳಪ್ಪ ಆರೋಪಿಸಿದರು.
ನೂರಾರು ವರ್ಷಗಳಿಂದ ದೇವಾಲಯಗಳಲ್ಲಿ ಸಾಂಪ್ರದಾಯಿಕವಾಗಿ ಕಾಡು ಪ್ರಾಣಿಗಳ ವಸ್ತುಗಳನ್ನು ಧಾರ್ಮಿಕ ವಿಧಿ ವಿದಾನಗಳಲ್ಲಿ ಬಳಸಿಕೊಂಡು ಬರಲಾಗುತ್ತಿದೆ. ಇದನ್ನು ಸ್ವಾಧೀನ ಪಡಿಸಿಕೊಳ್ಳುವ ಸರಕಾರದ ಪ್ರಸ್ತಾಪಕ್ಕೂ ಪ್ರತಿಭಟನೆಯ ಸಂದರ್ಭ ವಿರೋಧ ವ್ಯಕ್ತಪಡಿಸುವುದಾಗಿ ತಿಳಿಸಿದರು.
ಕಂದಾಯ ಇಲಾಖೆ ಈ ಹಿಂದೆ ಸಿ ಮತ್ತು ಡಿ ಭೂಮಿಯನ್ನು ಮರಗಳನ್ನು ಬೆಳೆಸಲು ಅರಣ್ಯ ಇಲಾಖೆಗೆ ಬಿಟ್ಟುಕೊಟ್ಟಿತ್ತೇ ಹೊರತು ಸಂಪೂರ್ಣ ಹಕ್ಕುದಾರಿಕೆಯನ್ನು ನೀಡಿರಲಿಲ್ಲ. ಕಳೆದ ಅವಧಿಯಲ್ಲಿದ್ದ ಬಿಜೆಪಿ ಸರಕಾರ ಸಿ ಮತ್ತು ಡಿ ಭೂಮಿಯನ್ನು ಕಂದಾಯ ಇಲಾಖೆ ಮರಳಿ ಪಡೆದು ಈ ಭೂಮಿಯಲ್ಲಿ ಜೀವನ ಸಾಗಿಸುತ್ತಿರುವವರಿಗೆ ಹಕ್ಕುಪತ್ರ ನೀಡುವ ಕುರಿತು ನಿಯಮ ರೂಪಿಸಿತ್ತು. ಆದರೆ ಈಗಿನ ಕಾಂಗ್ರೆಸ್ ನೇತೃತ್ವದ ಸರಕಾರ ಸಿ ಮತ್ತು ಡಿ ಭೂಮಿಯನ್ನು ಮರಳಿ ಪಡೆಯುವ ಹಾಗೂ ಅರ್ಹರಿಗೆ ಹಕ್ಕುಪತ್ರ ನೀಡುವ ಯಾವುದೇ ಪ್ರಕ್ರಿಯೆಯನ್ನು ಆರಂಭಿಸಿಲ್ಲವೆಂದು ರವಿ ಕಾಳಪ್ಪ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಪ್ರಧಾನ ಕಾಯದರ್ಶಿ ಮಹೇಶ್ ಜೈನಿ, ಕಾರ್ಯದರ್ಶಿ ನಾಳನ ಕನ್ನಿಕೆ, ವಕ್ತಾರರಾದ ಬಿ.ಕೆ.ಅರುಣ್ ಕುಮಾರ್ ಹಾಗೂ ತಳೂರು ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ…

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.