
- ಬೆಂಗಳೂರು ಮೇ 15 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 16 ಬೇಡಿಕೆಗಳ ಬಹಿರಂಗ ಪತ್ರ ಬರೆದಿದ್ದಾರೆ.
- ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು.
- ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು.
- ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು.
- ಎಸ್ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು.
- ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು.
- ಕಾರು ಚಾಲಕ ಕಾರ್ತಿಕ್ನನ್ನು ಕೂಡಲೇ ಬಂಧಿಸಬೇಕು.
- ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು.
- ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ದಾಖಲಿಸಬೇಕು.
- ವಿಡಿಯೋ ಕುರಿತು ಮಾಹಿತಿ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿಲ್ಲದ ಕಾರಣ ಅವರನ್ನು ಸಂಚಿನ ಭಾಗ ಎಂದು ಪರಿಗಣಿಸಬೇಕು.
- ವಿಡಿಯೋ ಹಳೆಯದು ಎಂದು ಎಚ್ಡಿ ರೇವಣ್ಣ ಹೇಳಿದ್ದಾರೆ. ಅಷ್ಟು ವರ್ಷ ನಡೆಯುತ್ತಿರುವ ಲೈಂಗಿಕ ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ಧಮೆ ಹೂಡಬೇಕು.
- ಆರೋಪಿ ದೇಶ ಬಿಟ್ಟು ಹೋಗಲು ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು.
- ಪ್ರಜ್ವಲ್ ರೇವಣ್ಣ ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳಲು ಪಡೆದ ಈ ತಡೆಯಾಜ್ಞೆಯಿಂದ ಜನರ ಹಕ್ಕಿನ ಉಲ್ಲಂಘನೆಯಾಗಿದ್ದು ಜನರ ಹಕ್ಕುಗಳ ಸಂರಕ್ಷಕನಾಗಿರುವ (ಕಸ್ಟೋಡಿಯನ್) ರಾಜ್ಯ ಸರ್ಕಾರವು ಈ ಕುರಿತು ಮೊಕದ್ದಮೆ ದಾಖಲಿಸಬೇಕು.
- ಹೆಚ್ ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಶಿಫಾರಸ್ಸಿನ ಮೇರೆಗೆ ಹಾಸನ ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ನೇಮಕಗೊಂಡಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು.
- ಎಸ್ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ ಡಿ ರೇವಣ್ಣ ಅವರ ವಿಧಾನಸಭೆ ಸದಸ್ಯತ್ವವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು.
- ಈ ಆರೋಪಿಗಳ ನಡೆಯು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಸರ್ಕಾರಿ ಬಂಗ್ಲೆಯನ್ನು ಅಪರಾಧ ಕೃತ್ಯಕ್ಕೆ ಬಳಸಿರುವುದಕ್ಕೆ ಮೊಕದ್ದಮೆ ಹೂಡಬೇಕು.
- ಈ ಕುಟುಂಬಕ್ಕೆ ಒದಗಿಸಲಾಗಿರುವ ಎಲ್ಲ ಸರ್ಕಾರಿ ಸವಲತ್ತುಗಳನ್ನು ಈ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳುಳ್ಳ ಪತ್ರವನ್ನು ಸಾಹಿತಿಗಳು ಬರೆದಿದ್ದಾರೆ.



Breaking News
- *ಸ್ನೇಹಿತರ ಒಕ್ಕೂಟದಿಂದ ಕೊಡಗು ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ*
- *ಪ್ರವಾಸಿತಾಣ ಮಾಂದಲಪಟ್ಟಿಗೆ 60 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ರಸ್ತೆ*
- *ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ : ಮಕ್ಕಳು ಭವಿಷ್ಯದ ನಿರ್ಮಾತೃಗಳು : ನ್ಯಾಯಾಧೀಶ ಸಿ.ಕೆ.ಬಸವರಾಜ್*
- *ಫಿಪಾ ವಿಶ್ವಕಪ್ ಸಂಭ್ರಮ : ಸುಂಟಿಕೊಪ್ಪದಲ್ಲಿ ಫುಟ್ಬಾಲ್ ಆಟಗಾರರ ಬೃಹತ್ ಪ್ಲೆಕ್ಸ್ ಅಳವಡಿಕೆ*
- *ಐಗೂರಿನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭಿನಂದನಾ ಕಾರ್ಯಕ್ರಮ*
- *ಜೂ.13 ರಂದು “ವಿದ್ಯಾನಿಧಿ” ವಿತರಣಾ ಸಮಾರಂಭ*
- *ಚೆಟ್ಟಳ್ಳಿ ಕಾಫಿ ಉಪ ಸಂಶೋಧನಾ ಕೇಂದ್ರದ ಮುಖ್ಯಸ್ಥರಾಗಿ ಡಾ.ಸಿ.ಬಾಬು ಅಧಿಕಾರ ಸ್ವೀಕಾರ*
- *ವಿಕಾಸ್ ಜನತಾ ಸೇವಾ ಟ್ರಸ್ಟ್ ನ ವ್ಯವಸ್ಥಾಪನಾ ಸಮಿತಿಗೆ ನೂತನ ನಿರ್ದೇಶಕರುಗಳ ನೇಮಕ*
- *ಕುಶಾಲನಗರ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಮುಂಗಾರು ಮೇಳ ಆರಂಭ*
- *ನಿಧನ ಸುದ್ದಿ *






