
- ಬೆಂಗಳೂರು ಮೇ 15 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 16 ಬೇಡಿಕೆಗಳ ಬಹಿರಂಗ ಪತ್ರ ಬರೆದಿದ್ದಾರೆ.
- ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು.
- ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು.
- ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು.
- ಎಸ್ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು.
- ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು.
- ಕಾರು ಚಾಲಕ ಕಾರ್ತಿಕ್ನನ್ನು ಕೂಡಲೇ ಬಂಧಿಸಬೇಕು.
- ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು.
- ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ದಾಖಲಿಸಬೇಕು.
- ವಿಡಿಯೋ ಕುರಿತು ಮಾಹಿತಿ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿಲ್ಲದ ಕಾರಣ ಅವರನ್ನು ಸಂಚಿನ ಭಾಗ ಎಂದು ಪರಿಗಣಿಸಬೇಕು.
- ವಿಡಿಯೋ ಹಳೆಯದು ಎಂದು ಎಚ್ಡಿ ರೇವಣ್ಣ ಹೇಳಿದ್ದಾರೆ. ಅಷ್ಟು ವರ್ಷ ನಡೆಯುತ್ತಿರುವ ಲೈಂಗಿಕ ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ಧಮೆ ಹೂಡಬೇಕು.
- ಆರೋಪಿ ದೇಶ ಬಿಟ್ಟು ಹೋಗಲು ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು.
- ಪ್ರಜ್ವಲ್ ರೇವಣ್ಣ ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳಲು ಪಡೆದ ಈ ತಡೆಯಾಜ್ಞೆಯಿಂದ ಜನರ ಹಕ್ಕಿನ ಉಲ್ಲಂಘನೆಯಾಗಿದ್ದು ಜನರ ಹಕ್ಕುಗಳ ಸಂರಕ್ಷಕನಾಗಿರುವ (ಕಸ್ಟೋಡಿಯನ್) ರಾಜ್ಯ ಸರ್ಕಾರವು ಈ ಕುರಿತು ಮೊಕದ್ದಮೆ ದಾಖಲಿಸಬೇಕು.
- ಹೆಚ್ ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಶಿಫಾರಸ್ಸಿನ ಮೇರೆಗೆ ಹಾಸನ ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ನೇಮಕಗೊಂಡಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು.
- ಎಸ್ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ ಡಿ ರೇವಣ್ಣ ಅವರ ವಿಧಾನಸಭೆ ಸದಸ್ಯತ್ವವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು.
- ಈ ಆರೋಪಿಗಳ ನಡೆಯು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಸರ್ಕಾರಿ ಬಂಗ್ಲೆಯನ್ನು ಅಪರಾಧ ಕೃತ್ಯಕ್ಕೆ ಬಳಸಿರುವುದಕ್ಕೆ ಮೊಕದ್ದಮೆ ಹೂಡಬೇಕು.
- ಈ ಕುಟುಂಬಕ್ಕೆ ಒದಗಿಸಲಾಗಿರುವ ಎಲ್ಲ ಸರ್ಕಾರಿ ಸವಲತ್ತುಗಳನ್ನು ಈ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳುಳ್ಳ ಪತ್ರವನ್ನು ಸಾಹಿತಿಗಳು ಬರೆದಿದ್ದಾರೆ.



Breaking News
- *ಕೊಡಗು ಕಲಾವಿದರ ಸಂಘದ ಸಾಮಾನ್ಯ ಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ : ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
- *ಪಡಿತರ ಚೀಟಿಗೂ ಜಾತಿ ಪ್ರಮಾಣ ಪತ್ರ ಕೇಳುವ ಸರಕಾರ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*
- *ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ (ನರಮೇಧ) ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
- *ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ ಜಾತಿ ಮತ್ತು ಶಾಶ್ವತ ನಿವಾಸ ಪ್ರಮಾಣ ಪತ್ರ : ರಾಜ್ಯಾದ್ಯಂತ ಒಟ್ಟು 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣ ಪತ್ರ : ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ*
- *ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ನೆರವು*
- *ಐತಿಚಂಡ ರಮೇಶ್ ಉತ್ತಪ್ಪಗೆ “ಯೋಗ ಕೌಸ್ತುಭ” ಪ್ರಶಸ್ತಿ ಪ್ರದಾನ*
- *ಐತಿಚಂಡ ರಮೇಶ್ ಉತ್ತಪ್ಪಗೆ “ಯೋಗ ಕೌಸ್ತುಭ” ಪ್ರಶಸ್ತಿಯ ಗೌರವ**
- *ಯುಕೊದಿಂದ ಪುಣ್ಯಸ್ಮರಣೆ ಕಾರ್ಯಕ್ರಮ : ಪಂದ್ಯಂಡ ಬೆಳ್ಯಪ್ಪ ಅವರ ಬದುಕು ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಲಿ*
- *ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೊಡಗು ಜಿಲ್ಲಾ ಘಟಕದ ಸಾಮಾನ್ಯ ಸಭೆ : ನೂತನ ಪದಾದಿಕಾರಿಗಳ ಪದಗ್ರಹಣ*
- *ಮಡಿಕೇರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ*






