
- ಬೆಂಗಳೂರು ಮೇ 15 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 16 ಬೇಡಿಕೆಗಳ ಬಹಿರಂಗ ಪತ್ರ ಬರೆದಿದ್ದಾರೆ.
- ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು.
- ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು.
- ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು.
- ಎಸ್ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು.
- ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು.
- ಕಾರು ಚಾಲಕ ಕಾರ್ತಿಕ್ನನ್ನು ಕೂಡಲೇ ಬಂಧಿಸಬೇಕು.
- ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು.
- ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ದಾಖಲಿಸಬೇಕು.
- ವಿಡಿಯೋ ಕುರಿತು ಮಾಹಿತಿ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿಲ್ಲದ ಕಾರಣ ಅವರನ್ನು ಸಂಚಿನ ಭಾಗ ಎಂದು ಪರಿಗಣಿಸಬೇಕು.
- ವಿಡಿಯೋ ಹಳೆಯದು ಎಂದು ಎಚ್ಡಿ ರೇವಣ್ಣ ಹೇಳಿದ್ದಾರೆ. ಅಷ್ಟು ವರ್ಷ ನಡೆಯುತ್ತಿರುವ ಲೈಂಗಿಕ ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ಧಮೆ ಹೂಡಬೇಕು.
- ಆರೋಪಿ ದೇಶ ಬಿಟ್ಟು ಹೋಗಲು ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು.
- ಪ್ರಜ್ವಲ್ ರೇವಣ್ಣ ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳಲು ಪಡೆದ ಈ ತಡೆಯಾಜ್ಞೆಯಿಂದ ಜನರ ಹಕ್ಕಿನ ಉಲ್ಲಂಘನೆಯಾಗಿದ್ದು ಜನರ ಹಕ್ಕುಗಳ ಸಂರಕ್ಷಕನಾಗಿರುವ (ಕಸ್ಟೋಡಿಯನ್) ರಾಜ್ಯ ಸರ್ಕಾರವು ಈ ಕುರಿತು ಮೊಕದ್ದಮೆ ದಾಖಲಿಸಬೇಕು.
- ಹೆಚ್ ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಶಿಫಾರಸ್ಸಿನ ಮೇರೆಗೆ ಹಾಸನ ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ನೇಮಕಗೊಂಡಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು.
- ಎಸ್ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ ಡಿ ರೇವಣ್ಣ ಅವರ ವಿಧಾನಸಭೆ ಸದಸ್ಯತ್ವವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು.
- ಈ ಆರೋಪಿಗಳ ನಡೆಯು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಸರ್ಕಾರಿ ಬಂಗ್ಲೆಯನ್ನು ಅಪರಾಧ ಕೃತ್ಯಕ್ಕೆ ಬಳಸಿರುವುದಕ್ಕೆ ಮೊಕದ್ದಮೆ ಹೂಡಬೇಕು.
- ಈ ಕುಟುಂಬಕ್ಕೆ ಒದಗಿಸಲಾಗಿರುವ ಎಲ್ಲ ಸರ್ಕಾರಿ ಸವಲತ್ತುಗಳನ್ನು ಈ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳುಳ್ಳ ಪತ್ರವನ್ನು ಸಾಹಿತಿಗಳು ಬರೆದಿದ್ದಾರೆ.



Breaking News
- *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
- *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ ಕುಶಾಲನಗರದಲ್ಲಿ ಸನ್ಮಾನ*
- *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
- *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
- *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
- *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
- *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
- *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
- *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
- *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*






