
- ಬೆಂಗಳೂರು ಮೇ 15 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 16 ಬೇಡಿಕೆಗಳ ಬಹಿರಂಗ ಪತ್ರ ಬರೆದಿದ್ದಾರೆ.
- ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು.
- ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು.
- ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು.
- ಎಸ್ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು.
- ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು.
- ಕಾರು ಚಾಲಕ ಕಾರ್ತಿಕ್ನನ್ನು ಕೂಡಲೇ ಬಂಧಿಸಬೇಕು.
- ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು.
- ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ದಾಖಲಿಸಬೇಕು.
- ವಿಡಿಯೋ ಕುರಿತು ಮಾಹಿತಿ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿಲ್ಲದ ಕಾರಣ ಅವರನ್ನು ಸಂಚಿನ ಭಾಗ ಎಂದು ಪರಿಗಣಿಸಬೇಕು.
- ವಿಡಿಯೋ ಹಳೆಯದು ಎಂದು ಎಚ್ಡಿ ರೇವಣ್ಣ ಹೇಳಿದ್ದಾರೆ. ಅಷ್ಟು ವರ್ಷ ನಡೆಯುತ್ತಿರುವ ಲೈಂಗಿಕ ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ಧಮೆ ಹೂಡಬೇಕು.
- ಆರೋಪಿ ದೇಶ ಬಿಟ್ಟು ಹೋಗಲು ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು.
- ಪ್ರಜ್ವಲ್ ರೇವಣ್ಣ ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳಲು ಪಡೆದ ಈ ತಡೆಯಾಜ್ಞೆಯಿಂದ ಜನರ ಹಕ್ಕಿನ ಉಲ್ಲಂಘನೆಯಾಗಿದ್ದು ಜನರ ಹಕ್ಕುಗಳ ಸಂರಕ್ಷಕನಾಗಿರುವ (ಕಸ್ಟೋಡಿಯನ್) ರಾಜ್ಯ ಸರ್ಕಾರವು ಈ ಕುರಿತು ಮೊಕದ್ದಮೆ ದಾಖಲಿಸಬೇಕು.
- ಹೆಚ್ ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಶಿಫಾರಸ್ಸಿನ ಮೇರೆಗೆ ಹಾಸನ ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ನೇಮಕಗೊಂಡಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು.
- ಎಸ್ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ ಡಿ ರೇವಣ್ಣ ಅವರ ವಿಧಾನಸಭೆ ಸದಸ್ಯತ್ವವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು.
- ಈ ಆರೋಪಿಗಳ ನಡೆಯು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಸರ್ಕಾರಿ ಬಂಗ್ಲೆಯನ್ನು ಅಪರಾಧ ಕೃತ್ಯಕ್ಕೆ ಬಳಸಿರುವುದಕ್ಕೆ ಮೊಕದ್ದಮೆ ಹೂಡಬೇಕು.
- ಈ ಕುಟುಂಬಕ್ಕೆ ಒದಗಿಸಲಾಗಿರುವ ಎಲ್ಲ ಸರ್ಕಾರಿ ಸವಲತ್ತುಗಳನ್ನು ಈ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳುಳ್ಳ ಪತ್ರವನ್ನು ಸಾಹಿತಿಗಳು ಬರೆದಿದ್ದಾರೆ.



Breaking News
- *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
- *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
- *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
- *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
- *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
- *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್ ಆಗ್ರಹ : ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
- *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
- *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
- *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
- *ವಿಜಯರತ್ನ ಇಂಟರ್ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*






